Homeಕರ್ನಾಟಕಬೆಲೆ ಏರಿಕೆ ವಿರುದ್ಧ ಟ್ರೆಂಡ್ ಆದ ’ಏರಿದ ಬೆಲೆ ಉರಿಯದ ಒಲೆ’ ಅಭಿಯಾನ

ಬೆಲೆ ಏರಿಕೆ ವಿರುದ್ಧ ಟ್ರೆಂಡ್ ಆದ ’ಏರಿದ ಬೆಲೆ ಉರಿಯದ ಒಲೆ’ ಅಭಿಯಾನ

- Advertisement -
- Advertisement -

ದೇಶದಲ್ಲಿ ಸತತವಾಗಿ ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ ನಡೆಯುತ್ತಿರುವುದನ್ನು ಖಂಡಿಸಿ ಕರ್ನಾಟಕ ಕ್ರಾಂತಿಕಾರಿ ಪಡೆ ಕರೆ ನೀಡಿದ್ದ ಟ್ವಿಟರ್‌ ಅಭಿಯಾನಕ್ಕೆ ಭಾರಿ ಸ್ಪಂದನೆ ಸಿಕ್ಕಿದ್ದು, #ಏರಿದಬೆಲೆ_ಉರಿಯದಒಲೆ ಟ್ವಿಟರ್‌ನಲ್ಲಿ ನಂಬರ್ ಒನ್ ಟ್ರೆಂಡ್ ಆಗಿದೆ.

ಕರ್ನಾಟಕ ಟ್ರೆಂಡ್ಸ್‌ನಲ್ಲಿ ಮೊದಲ ಸ್ಥಾನದಲ್ಲಿ ಏರಿದಬೆಲೆ_ಉರಿಯದಒಲೆ ಹ್ಯಾಶ್‌ಟ್ಯಾಗ್‌ ಟ್ರೆಂಡ್ ಆಗಿದೆ. ಈ ಬರಹ ಬರೆಯುವ ಹೊತ್ತಿಗೆ ಸುಮಾರು 10 ಸಾವಿರ ಮಂದಿ ಈ ಹ್ಯಾಶ್‌ಟ್ಯಾಗ್ ಬಳಸಿದ್ದಾರೆ. ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕೊರೊನಾ ಸಮಯದಲ್ಲಿ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜನರಿಗೆ ಬೆಲೆ ಏರಿಕೆ ಬರೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಕಿವೆ. ಜನ ವಿರೋಧಿ, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಇವುಗಳ ನೀತಿಯನ್ನು ವಿರೋಧಿಸಿ ಟ್ವಿಟರ್‌ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಕರ್ನಾಟಕ ಕ್ರಾಂತಿಕಾರಿ ಪಡೆ ಕರೆ ನೀಡಿತ್ತು.

ಇದನ್ನೂ ಓದಿ:  ಟ್ವಿಟರ್ ಅಭಿಯಾನದ ಮೂಲಕ ಸಾಮಾಜಿಕ ಹೋರಾಟಗಳಿಗೆ ಜೊತೆಯಾದ ಕರ್ನಾಟಕ ಕ್ರಾಂತಿಕಾರಿ ಪಡೆ!

’ಆತ್ಮ ನಿರ್ಬರ!, ಅಚ್ಚೇ ದಿನ್! ನಯಾ ಭಾರತ್! ಮೇಕ್ ಇನ್ ಇಂಡಿಯಾ!, ಬೇಟೀ ಬಚಾವ್, ಬೇಟೀ ಪಡಾವ್!, ಹೀಗೇ ಒಂದರ ನಂತರ ಒಂದರಂತೆ ಘೋಷಣೆಗಳನ್ನು ಹುಟ್ಟುಹಾಕುತ್ತಾ ಇನ್ನೆಷ್ಟು ದಿನ ಜನರನ್ನು ದಿಕ್ಕು ತಪ್ಪಿಸುತ್ತೀರಿ..? ಮೋಸ ಮಾಡುತ್ತೀರಿ..? ತೆರಿಗೆ ಇಳಿಸಿ! ದರ ಇಳಿಸಿ!’ ಎಂದು ರಾಕಿ ಎಂಬ ಟ್ವಿಟರ್‌ ಖಾತೆ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ನಾಯಕ ಶ್ರೀವತ್ಸ ಟ್ವೀಟ್‌ ಮಾಡಿ, ಕಳೆದ ಒಂದು ವರ್ಷದಲ್ಲಿ ಪೆಟ್ರೋಲ್ 26 ರೂ., ಡೀಸೆಲ್ 25 ರೂ, ಎಲ್‌ಪಿಜಿ ಸಿಲಿಂಡರ್‌ 250 ರೂ, ಅಡುಗೆ ಎಣ್ಣೆ 80 ರೂ, ಬೆಳೆ 50 ರೂ. ಏರಿಕೆಯಾಗಿರುವುದನ್ನು ತಿಳಿಸಿದ್ದಾರೆ. ಜೊತೆಗೆ ಜಿಡಿಪಿ, ಕೆಲಸಗಳು, ಆರ್ಥಿಕತೆ ಕುಸಿತವಾಗಿರುವುದನ್ನು ಟೀಕಿಸಿದ್ದಾರೆ. ಇಷ್ಟೇಲ್ಲದರ ನಡುವೆಯೂ ಮೋದಿಜಿ ಅಚ್ಚೇ ದಿನ ಜಪ ಮಾಡುತ್ತಿದ್ದಾರೆ ಎಂದಿದ್ದಾರೆ.

 

’ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪ್ರಚಾರ ಮತ್ತು ಚುನಾವಣಾ ರಾಜಕೀಯದಿಂದ ಸಮಯ ಸಿಗುತ್ತಿಲ್ಲ. ಹಾಗಾಗಿ ಅದರ ನಾಯಕರಿಗೆ ಬಡಜನರ ಜೀವನದ ವಾಸ್ತವತೆಯ ಅರಿವೇ ಇಲ್ಲ. ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕು ದುಸ್ತರವಾಗಿದೆ. ಆದರೆ, ಸರ್ಕಾರಗಳು ಬೆಲೆ ಏರಿಕೆ ತಡೆಗಟ್ಟುವಲ್ಲಿ ವಿಫಲವಾಗಿವೆ!!” ಎಂದು ಲಾವಣ್ಯ ಬಲ್ಲಾಳ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ನಕಲಿ ಲಸಿಕೆ ಜಾಲದಿಂದ ಮೋಸಹೋದ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ : ಓರ್ವನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಡವರ ಬದುಕು ಮೂರ ಬಟ್ಟೆ ಬಿ ಜೆ ಪಿ ಪಕ್ಷ ನಂಬಿ ಕರ್ನಾಟಕ ಜನತೆ ಊಟ ತಿಂಡಿ ಬಿಟ್ಟೆ ಬಿಟ್ಟೆ

LEAVE A REPLY

Please enter your comment!
Please enter your name here

- Advertisment -

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...