HomeಮುಖಪುಟBCCI ಕಾರ್ಯದರ್ಶಿ 'ಜೇ ಷಾ' ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ?

BCCI ಕಾರ್ಯದರ್ಶಿ ‘ಜೇ ಷಾ’ ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ?

ಸದಾ ವಂಶಾಡಳಿತದ ವಿರುದ್ಧ ಮಾತಾಡುತ್ತಿದ್ದ ಬಿಜೆಪಿ ಹೀಗೆನು ಮಾಡುತ್ತಿದೆ ಎಂದು ಜನ ಪ್ರಶ್ನಿಸಿದ್ದಾರೆ. ಜೇ ಷಾ ಮತ್ತು ಅಮಿತ್‌ ಷಾ ವಿರುದ್ಧದ ಟ್ರೋಲ್ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿದೆ

- Advertisement -
- Advertisement -

ಅಮಿತ್ ಷಾ ಅವರ ಮಗ ಈಗ ಬಿಸಿಸಿಐ ಕಾರ್ಯದರ್ಶಿಯಾಗಿದ್ದಾರೆ. ಆದರೆ ಇದು ಸ್ವಜನಪಕ್ಷಪಾತವಲ್ಲ ಏಕೆಂದರೆ ಅವರ ಉಪನಾಮ ಗಾಂಧಿ ಅಲ್ಲವಲ್ಲ ಎಂದು ಟ್ವಿಟ್ಟರ್‌ನಲ್ಲಿ ಟ್ರೋಲ್‌ ಮಾಡಲಾಗಿದೆ.

ಇಂದು ಬಿಸಿಸಿಐ ಕಾರ್ಯದರ್ಶಿಯಾಗಿ ಅಮಿತ್‌ ಷಾರವರ ಮಗ ಜೇ ಷಾ ಆಯ್ಕೆಯಾಗುತ್ತಲೇ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಸದಾ ವಂಶಾಡಳಿತದ ವಿರುದ್ಧ ಮಾತಾಡುತ್ತಿದ್ದ ಬಿಜೆಪಿ ಹೀಗೆನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಜೇ ಷಾ ಮತ್ತು ಅಮಿತ್‌ ಷಾ ವಿರುದ್ಧದ ಟ್ರೋಲ್ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿದೆ.

ಪ್ರತಿ ಚುನಾವಣಾ ರ್‍ಯಾಲಿಯಲ್ಲಿ ಅಮಿತ್ ಶಾ “ವಂಶಾಡಳಿತ ರಾಜಕೀಯವನ್ನು ನಾಶಮಾಡಲು ನಾವು ಇಲ್ಲಿದ್ದೇವೆ” ಎಂದು ಭಾಷಣ ಬಿಗಿಯುತ್ತಾರೆ. ಚುನಾವಣೆಯ ನಂತರ ಅವರ ಮಗ ’ಜೇ ಷ” ಅವರನ್ನು ಬಿಸಿಸಿಐ ಕಾರ್ಯದರ್ಶಿಯಾಗಿ ನೇಮಿಸುತ್ತದೆ ಎಂದು ನೆಹ್ರು ಹೂ ಅವರು ಟ್ವೀಟ್‌ ಮಾಡಿದ್ದಾರೆ.

ಬಿಎಸ್ಎನ್ಎಲ್- ದಿವಾಳಿ
ಎಂಟಿಎನ್ಎಲ್- ದಿವಾಳಿ
ಪಾರ್ಲೆ-ಜಿ- ದಿವಾಳಿ
ಭಾರತೀಯ ರೈಲ್ವೆ- ದಿವಾಳಿ
ಆರ್‌ಬಿಐ- ದಿವಾಳಿ
ಹಣಕಾಸು ಸಚಿವಾಲಯ- ದಿವಾಳಿ
ಏರ್ ಇಂಡಿಯಾ- ದಿವಾಳಿ
ಭಾರತೀಯ ಆರ್ಥಿಕತೆ- ದಿವಾಳಿ

ಬಿಸಿಸಿಐಗೆ ಮಾತ್ರ ಸ್ವಲ್ಪ ಹಣವಿತ್ತು, ಈಗ “ಗ್ರೇಟ್ ಜೇ ಶಾ” ಕೂಡ ಅಲ್ಲಿಗೆ ಪ್ರವೇಶಿಸಿದ್ದಾರೆ ….. ಈಗ ಬಿಸಿಸಿಐ ಶೀಘ್ರದಲ್ಲೇ ದಿವಾಳಿಯಾಗಲಿದೆ. ಎಂದು ಮಣಿಶಂಕರ್‌ ಅಯ್ಯರ್‌ ಟ್ವೀಟ್‌ ಮಾಡಿದ್ದಾರೆ.

ಮಹಿಳೆಯರನ್ನು ಗೌರವಿಸುತ್ತೇವೆ ಎಂದು ಬಿಜೆಪಿ ಹೇಳುತ್ತದೆ ಮತ್ತು
– ಕುಲ್‌ದೀಪ್‌ ಸೆಂಗಾರ್ ಮತ್ತು ಚಿನ್ಮಯಾನಂದ್ ಅವರನ್ನು ಬೆಂಬಲಿಸುತ್ತದೆ..

ಭಯೋತ್ಪಾದನೆಗೆ ವಿರುದ್ಧವೆಂದು ಬಿಜೆಪಿ ಹೇಳುತ್ತದೆ ಮತ್ತು
-ಪ್ರಗ್ಯಾಳನ್ನು ಸಂಸದಳನ್ನಾಗಿ ಮಾಡುತ್ತದೆ..

ಭ್ರಷ್ಟಾಚಾರದ ವಿರುದ್ಧ ಎಂದು ಬಿಜೆಪಿ ಹೇಳುತ್ತದೆ ಮತ್ತು
-ಯಡಿಯೂರಪ್ಪರವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸುತ್ತದೆ..

ವಂಶಾಡಳಿತದ ವಿರುದ್ಧ ಎಂದು ಬಿಜೆಪಿ ಹೇಳುತ್ತದೆ ಮತ್ತು
-ಜೇ ಷಾ ಅವರನ್ನು ಬಿಸಿಸಿಐ ಕಾರ್ಯದರ್ಶಿ ಮಾಡುತ್ತದೆ..

ಇದು ಭಾರತೀಯ ಕಪಟ ಪಕ್ಷ ಎಂದು ನೆಹ್ರು ಹೂ ರವರು ಇನ್ನೊಂದು ಟ್ವೀಟ್‌ ಮಾಡಿದ್ದಾರೆ.

BCCI ಕಾರ್ಯದರ್ಶಿ ‘ಜೇ ಷಾ’ ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ? ಎಂದು ನೆಟ್ಟಿಗರು ಕಟುಕಿದ್ದಾರೆ…

ಜೇ ಷಾ ಅವರು ಚೆಪಾಕ್ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಫೀಲ್ಡರ್‌ಗಳನ್ನು ಮರೀನಾ ಬೀಚ್ ಮತ್ತು ಮೌಂಟ್ ರಸ್ತೆಯಲ್ಲಿ ಕೆಲವೇ ಕಿ.ಮೀ ದೂರದಲ್ಲಿ ನಿಯೋಜಿಸಲಾಗುತ್ತಿತ್ತು. ಅವರು ಆ ರೀತಿಯ ಶಕ್ತಿಶಾಲಿ ಆಟಗಾರ. ಅವರು ಖಂಡಿತವಾಗಿಯೂ #BCCI ಮುಖ್ಯಸ್ಥರಾಗಲು ಅರ್ಹರು ಎಂಬ ಟ್ರೋಲ್ ಸಹ ಕಂಡುಬಂದಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...