HomeಮುಖಪುಟBCCI ಕಾರ್ಯದರ್ಶಿ 'ಜೇ ಷಾ' ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ?

BCCI ಕಾರ್ಯದರ್ಶಿ ‘ಜೇ ಷಾ’ ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ?

ಸದಾ ವಂಶಾಡಳಿತದ ವಿರುದ್ಧ ಮಾತಾಡುತ್ತಿದ್ದ ಬಿಜೆಪಿ ಹೀಗೆನು ಮಾಡುತ್ತಿದೆ ಎಂದು ಜನ ಪ್ರಶ್ನಿಸಿದ್ದಾರೆ. ಜೇ ಷಾ ಮತ್ತು ಅಮಿತ್‌ ಷಾ ವಿರುದ್ಧದ ಟ್ರೋಲ್ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿದೆ

- Advertisement -
- Advertisement -

ಅಮಿತ್ ಷಾ ಅವರ ಮಗ ಈಗ ಬಿಸಿಸಿಐ ಕಾರ್ಯದರ್ಶಿಯಾಗಿದ್ದಾರೆ. ಆದರೆ ಇದು ಸ್ವಜನಪಕ್ಷಪಾತವಲ್ಲ ಏಕೆಂದರೆ ಅವರ ಉಪನಾಮ ಗಾಂಧಿ ಅಲ್ಲವಲ್ಲ ಎಂದು ಟ್ವಿಟ್ಟರ್‌ನಲ್ಲಿ ಟ್ರೋಲ್‌ ಮಾಡಲಾಗಿದೆ.

ಇಂದು ಬಿಸಿಸಿಐ ಕಾರ್ಯದರ್ಶಿಯಾಗಿ ಅಮಿತ್‌ ಷಾರವರ ಮಗ ಜೇ ಷಾ ಆಯ್ಕೆಯಾಗುತ್ತಲೇ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಸದಾ ವಂಶಾಡಳಿತದ ವಿರುದ್ಧ ಮಾತಾಡುತ್ತಿದ್ದ ಬಿಜೆಪಿ ಹೀಗೆನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಜೇ ಷಾ ಮತ್ತು ಅಮಿತ್‌ ಷಾ ವಿರುದ್ಧದ ಟ್ರೋಲ್ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿದೆ.

ಪ್ರತಿ ಚುನಾವಣಾ ರ್‍ಯಾಲಿಯಲ್ಲಿ ಅಮಿತ್ ಶಾ “ವಂಶಾಡಳಿತ ರಾಜಕೀಯವನ್ನು ನಾಶಮಾಡಲು ನಾವು ಇಲ್ಲಿದ್ದೇವೆ” ಎಂದು ಭಾಷಣ ಬಿಗಿಯುತ್ತಾರೆ. ಚುನಾವಣೆಯ ನಂತರ ಅವರ ಮಗ ’ಜೇ ಷ” ಅವರನ್ನು ಬಿಸಿಸಿಐ ಕಾರ್ಯದರ್ಶಿಯಾಗಿ ನೇಮಿಸುತ್ತದೆ ಎಂದು ನೆಹ್ರು ಹೂ ಅವರು ಟ್ವೀಟ್‌ ಮಾಡಿದ್ದಾರೆ.

ಬಿಎಸ್ಎನ್ಎಲ್- ದಿವಾಳಿ
ಎಂಟಿಎನ್ಎಲ್- ದಿವಾಳಿ
ಪಾರ್ಲೆ-ಜಿ- ದಿವಾಳಿ
ಭಾರತೀಯ ರೈಲ್ವೆ- ದಿವಾಳಿ
ಆರ್‌ಬಿಐ- ದಿವಾಳಿ
ಹಣಕಾಸು ಸಚಿವಾಲಯ- ದಿವಾಳಿ
ಏರ್ ಇಂಡಿಯಾ- ದಿವಾಳಿ
ಭಾರತೀಯ ಆರ್ಥಿಕತೆ- ದಿವಾಳಿ

ಬಿಸಿಸಿಐಗೆ ಮಾತ್ರ ಸ್ವಲ್ಪ ಹಣವಿತ್ತು, ಈಗ “ಗ್ರೇಟ್ ಜೇ ಶಾ” ಕೂಡ ಅಲ್ಲಿಗೆ ಪ್ರವೇಶಿಸಿದ್ದಾರೆ ….. ಈಗ ಬಿಸಿಸಿಐ ಶೀಘ್ರದಲ್ಲೇ ದಿವಾಳಿಯಾಗಲಿದೆ. ಎಂದು ಮಣಿಶಂಕರ್‌ ಅಯ್ಯರ್‌ ಟ್ವೀಟ್‌ ಮಾಡಿದ್ದಾರೆ.

ಮಹಿಳೆಯರನ್ನು ಗೌರವಿಸುತ್ತೇವೆ ಎಂದು ಬಿಜೆಪಿ ಹೇಳುತ್ತದೆ ಮತ್ತು
– ಕುಲ್‌ದೀಪ್‌ ಸೆಂಗಾರ್ ಮತ್ತು ಚಿನ್ಮಯಾನಂದ್ ಅವರನ್ನು ಬೆಂಬಲಿಸುತ್ತದೆ..

ಭಯೋತ್ಪಾದನೆಗೆ ವಿರುದ್ಧವೆಂದು ಬಿಜೆಪಿ ಹೇಳುತ್ತದೆ ಮತ್ತು
-ಪ್ರಗ್ಯಾಳನ್ನು ಸಂಸದಳನ್ನಾಗಿ ಮಾಡುತ್ತದೆ..

ಭ್ರಷ್ಟಾಚಾರದ ವಿರುದ್ಧ ಎಂದು ಬಿಜೆಪಿ ಹೇಳುತ್ತದೆ ಮತ್ತು
-ಯಡಿಯೂರಪ್ಪರವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸುತ್ತದೆ..

ವಂಶಾಡಳಿತದ ವಿರುದ್ಧ ಎಂದು ಬಿಜೆಪಿ ಹೇಳುತ್ತದೆ ಮತ್ತು
-ಜೇ ಷಾ ಅವರನ್ನು ಬಿಸಿಸಿಐ ಕಾರ್ಯದರ್ಶಿ ಮಾಡುತ್ತದೆ..

ಇದು ಭಾರತೀಯ ಕಪಟ ಪಕ್ಷ ಎಂದು ನೆಹ್ರು ಹೂ ರವರು ಇನ್ನೊಂದು ಟ್ವೀಟ್‌ ಮಾಡಿದ್ದಾರೆ.

BCCI ಕಾರ್ಯದರ್ಶಿ ‘ಜೇ ಷಾ’ ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ? ಎಂದು ನೆಟ್ಟಿಗರು ಕಟುಕಿದ್ದಾರೆ…

ಜೇ ಷಾ ಅವರು ಚೆಪಾಕ್ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಫೀಲ್ಡರ್‌ಗಳನ್ನು ಮರೀನಾ ಬೀಚ್ ಮತ್ತು ಮೌಂಟ್ ರಸ್ತೆಯಲ್ಲಿ ಕೆಲವೇ ಕಿ.ಮೀ ದೂರದಲ್ಲಿ ನಿಯೋಜಿಸಲಾಗುತ್ತಿತ್ತು. ಅವರು ಆ ರೀತಿಯ ಶಕ್ತಿಶಾಲಿ ಆಟಗಾರ. ಅವರು ಖಂಡಿತವಾಗಿಯೂ #BCCI ಮುಖ್ಯಸ್ಥರಾಗಲು ಅರ್ಹರು ಎಂಬ ಟ್ರೋಲ್ ಸಹ ಕಂಡುಬಂದಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...