HomeಮುಖಪುಟBCCI ಕಾರ್ಯದರ್ಶಿ 'ಜೇ ಷಾ' ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ?

BCCI ಕಾರ್ಯದರ್ಶಿ ‘ಜೇ ಷಾ’ ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ?

ಸದಾ ವಂಶಾಡಳಿತದ ವಿರುದ್ಧ ಮಾತಾಡುತ್ತಿದ್ದ ಬಿಜೆಪಿ ಹೀಗೆನು ಮಾಡುತ್ತಿದೆ ಎಂದು ಜನ ಪ್ರಶ್ನಿಸಿದ್ದಾರೆ. ಜೇ ಷಾ ಮತ್ತು ಅಮಿತ್‌ ಷಾ ವಿರುದ್ಧದ ಟ್ರೋಲ್ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿದೆ

- Advertisement -
- Advertisement -

ಅಮಿತ್ ಷಾ ಅವರ ಮಗ ಈಗ ಬಿಸಿಸಿಐ ಕಾರ್ಯದರ್ಶಿಯಾಗಿದ್ದಾರೆ. ಆದರೆ ಇದು ಸ್ವಜನಪಕ್ಷಪಾತವಲ್ಲ ಏಕೆಂದರೆ ಅವರ ಉಪನಾಮ ಗಾಂಧಿ ಅಲ್ಲವಲ್ಲ ಎಂದು ಟ್ವಿಟ್ಟರ್‌ನಲ್ಲಿ ಟ್ರೋಲ್‌ ಮಾಡಲಾಗಿದೆ.

ಇಂದು ಬಿಸಿಸಿಐ ಕಾರ್ಯದರ್ಶಿಯಾಗಿ ಅಮಿತ್‌ ಷಾರವರ ಮಗ ಜೇ ಷಾ ಆಯ್ಕೆಯಾಗುತ್ತಲೇ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಸದಾ ವಂಶಾಡಳಿತದ ವಿರುದ್ಧ ಮಾತಾಡುತ್ತಿದ್ದ ಬಿಜೆಪಿ ಹೀಗೆನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಜೇ ಷಾ ಮತ್ತು ಅಮಿತ್‌ ಷಾ ವಿರುದ್ಧದ ಟ್ರೋಲ್ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿದೆ.

ಪ್ರತಿ ಚುನಾವಣಾ ರ್‍ಯಾಲಿಯಲ್ಲಿ ಅಮಿತ್ ಶಾ “ವಂಶಾಡಳಿತ ರಾಜಕೀಯವನ್ನು ನಾಶಮಾಡಲು ನಾವು ಇಲ್ಲಿದ್ದೇವೆ” ಎಂದು ಭಾಷಣ ಬಿಗಿಯುತ್ತಾರೆ. ಚುನಾವಣೆಯ ನಂತರ ಅವರ ಮಗ ’ಜೇ ಷ” ಅವರನ್ನು ಬಿಸಿಸಿಐ ಕಾರ್ಯದರ್ಶಿಯಾಗಿ ನೇಮಿಸುತ್ತದೆ ಎಂದು ನೆಹ್ರು ಹೂ ಅವರು ಟ್ವೀಟ್‌ ಮಾಡಿದ್ದಾರೆ.

ಬಿಎಸ್ಎನ್ಎಲ್- ದಿವಾಳಿ
ಎಂಟಿಎನ್ಎಲ್- ದಿವಾಳಿ
ಪಾರ್ಲೆ-ಜಿ- ದಿವಾಳಿ
ಭಾರತೀಯ ರೈಲ್ವೆ- ದಿವಾಳಿ
ಆರ್‌ಬಿಐ- ದಿವಾಳಿ
ಹಣಕಾಸು ಸಚಿವಾಲಯ- ದಿವಾಳಿ
ಏರ್ ಇಂಡಿಯಾ- ದಿವಾಳಿ
ಭಾರತೀಯ ಆರ್ಥಿಕತೆ- ದಿವಾಳಿ

ಬಿಸಿಸಿಐಗೆ ಮಾತ್ರ ಸ್ವಲ್ಪ ಹಣವಿತ್ತು, ಈಗ “ಗ್ರೇಟ್ ಜೇ ಶಾ” ಕೂಡ ಅಲ್ಲಿಗೆ ಪ್ರವೇಶಿಸಿದ್ದಾರೆ ….. ಈಗ ಬಿಸಿಸಿಐ ಶೀಘ್ರದಲ್ಲೇ ದಿವಾಳಿಯಾಗಲಿದೆ. ಎಂದು ಮಣಿಶಂಕರ್‌ ಅಯ್ಯರ್‌ ಟ್ವೀಟ್‌ ಮಾಡಿದ್ದಾರೆ.

ಮಹಿಳೆಯರನ್ನು ಗೌರವಿಸುತ್ತೇವೆ ಎಂದು ಬಿಜೆಪಿ ಹೇಳುತ್ತದೆ ಮತ್ತು
– ಕುಲ್‌ದೀಪ್‌ ಸೆಂಗಾರ್ ಮತ್ತು ಚಿನ್ಮಯಾನಂದ್ ಅವರನ್ನು ಬೆಂಬಲಿಸುತ್ತದೆ..

ಭಯೋತ್ಪಾದನೆಗೆ ವಿರುದ್ಧವೆಂದು ಬಿಜೆಪಿ ಹೇಳುತ್ತದೆ ಮತ್ತು
-ಪ್ರಗ್ಯಾಳನ್ನು ಸಂಸದಳನ್ನಾಗಿ ಮಾಡುತ್ತದೆ..

ಭ್ರಷ್ಟಾಚಾರದ ವಿರುದ್ಧ ಎಂದು ಬಿಜೆಪಿ ಹೇಳುತ್ತದೆ ಮತ್ತು
-ಯಡಿಯೂರಪ್ಪರವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸುತ್ತದೆ..

ವಂಶಾಡಳಿತದ ವಿರುದ್ಧ ಎಂದು ಬಿಜೆಪಿ ಹೇಳುತ್ತದೆ ಮತ್ತು
-ಜೇ ಷಾ ಅವರನ್ನು ಬಿಸಿಸಿಐ ಕಾರ್ಯದರ್ಶಿ ಮಾಡುತ್ತದೆ..

ಇದು ಭಾರತೀಯ ಕಪಟ ಪಕ್ಷ ಎಂದು ನೆಹ್ರು ಹೂ ರವರು ಇನ್ನೊಂದು ಟ್ವೀಟ್‌ ಮಾಡಿದ್ದಾರೆ.

BCCI ಕಾರ್ಯದರ್ಶಿ ‘ಜೇ ಷಾ’ ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ? ಎಂದು ನೆಟ್ಟಿಗರು ಕಟುಕಿದ್ದಾರೆ…

ಜೇ ಷಾ ಅವರು ಚೆಪಾಕ್ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಫೀಲ್ಡರ್‌ಗಳನ್ನು ಮರೀನಾ ಬೀಚ್ ಮತ್ತು ಮೌಂಟ್ ರಸ್ತೆಯಲ್ಲಿ ಕೆಲವೇ ಕಿ.ಮೀ ದೂರದಲ್ಲಿ ನಿಯೋಜಿಸಲಾಗುತ್ತಿತ್ತು. ಅವರು ಆ ರೀತಿಯ ಶಕ್ತಿಶಾಲಿ ಆಟಗಾರ. ಅವರು ಖಂಡಿತವಾಗಿಯೂ #BCCI ಮುಖ್ಯಸ್ಥರಾಗಲು ಅರ್ಹರು ಎಂಬ ಟ್ರೋಲ್ ಸಹ ಕಂಡುಬಂದಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...