HomeಮುಖಪುಟBCCI ಕಾರ್ಯದರ್ಶಿ 'ಜೇ ಷಾ' ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ?

BCCI ಕಾರ್ಯದರ್ಶಿ ‘ಜೇ ಷಾ’ ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ?

ಸದಾ ವಂಶಾಡಳಿತದ ವಿರುದ್ಧ ಮಾತಾಡುತ್ತಿದ್ದ ಬಿಜೆಪಿ ಹೀಗೆನು ಮಾಡುತ್ತಿದೆ ಎಂದು ಜನ ಪ್ರಶ್ನಿಸಿದ್ದಾರೆ. ಜೇ ಷಾ ಮತ್ತು ಅಮಿತ್‌ ಷಾ ವಿರುದ್ಧದ ಟ್ರೋಲ್ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿದೆ

- Advertisement -
- Advertisement -

ಅಮಿತ್ ಷಾ ಅವರ ಮಗ ಈಗ ಬಿಸಿಸಿಐ ಕಾರ್ಯದರ್ಶಿಯಾಗಿದ್ದಾರೆ. ಆದರೆ ಇದು ಸ್ವಜನಪಕ್ಷಪಾತವಲ್ಲ ಏಕೆಂದರೆ ಅವರ ಉಪನಾಮ ಗಾಂಧಿ ಅಲ್ಲವಲ್ಲ ಎಂದು ಟ್ವಿಟ್ಟರ್‌ನಲ್ಲಿ ಟ್ರೋಲ್‌ ಮಾಡಲಾಗಿದೆ.

ಇಂದು ಬಿಸಿಸಿಐ ಕಾರ್ಯದರ್ಶಿಯಾಗಿ ಅಮಿತ್‌ ಷಾರವರ ಮಗ ಜೇ ಷಾ ಆಯ್ಕೆಯಾಗುತ್ತಲೇ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಸದಾ ವಂಶಾಡಳಿತದ ವಿರುದ್ಧ ಮಾತಾಡುತ್ತಿದ್ದ ಬಿಜೆಪಿ ಹೀಗೆನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಜೇ ಷಾ ಮತ್ತು ಅಮಿತ್‌ ಷಾ ವಿರುದ್ಧದ ಟ್ರೋಲ್ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿದೆ.

ಪ್ರತಿ ಚುನಾವಣಾ ರ್‍ಯಾಲಿಯಲ್ಲಿ ಅಮಿತ್ ಶಾ “ವಂಶಾಡಳಿತ ರಾಜಕೀಯವನ್ನು ನಾಶಮಾಡಲು ನಾವು ಇಲ್ಲಿದ್ದೇವೆ” ಎಂದು ಭಾಷಣ ಬಿಗಿಯುತ್ತಾರೆ. ಚುನಾವಣೆಯ ನಂತರ ಅವರ ಮಗ ’ಜೇ ಷ” ಅವರನ್ನು ಬಿಸಿಸಿಐ ಕಾರ್ಯದರ್ಶಿಯಾಗಿ ನೇಮಿಸುತ್ತದೆ ಎಂದು ನೆಹ್ರು ಹೂ ಅವರು ಟ್ವೀಟ್‌ ಮಾಡಿದ್ದಾರೆ.

ಬಿಎಸ್ಎನ್ಎಲ್- ದಿವಾಳಿ
ಎಂಟಿಎನ್ಎಲ್- ದಿವಾಳಿ
ಪಾರ್ಲೆ-ಜಿ- ದಿವಾಳಿ
ಭಾರತೀಯ ರೈಲ್ವೆ- ದಿವಾಳಿ
ಆರ್‌ಬಿಐ- ದಿವಾಳಿ
ಹಣಕಾಸು ಸಚಿವಾಲಯ- ದಿವಾಳಿ
ಏರ್ ಇಂಡಿಯಾ- ದಿವಾಳಿ
ಭಾರತೀಯ ಆರ್ಥಿಕತೆ- ದಿವಾಳಿ

ಬಿಸಿಸಿಐಗೆ ಮಾತ್ರ ಸ್ವಲ್ಪ ಹಣವಿತ್ತು, ಈಗ “ಗ್ರೇಟ್ ಜೇ ಶಾ” ಕೂಡ ಅಲ್ಲಿಗೆ ಪ್ರವೇಶಿಸಿದ್ದಾರೆ ….. ಈಗ ಬಿಸಿಸಿಐ ಶೀಘ್ರದಲ್ಲೇ ದಿವಾಳಿಯಾಗಲಿದೆ. ಎಂದು ಮಣಿಶಂಕರ್‌ ಅಯ್ಯರ್‌ ಟ್ವೀಟ್‌ ಮಾಡಿದ್ದಾರೆ.

ಮಹಿಳೆಯರನ್ನು ಗೌರವಿಸುತ್ತೇವೆ ಎಂದು ಬಿಜೆಪಿ ಹೇಳುತ್ತದೆ ಮತ್ತು
– ಕುಲ್‌ದೀಪ್‌ ಸೆಂಗಾರ್ ಮತ್ತು ಚಿನ್ಮಯಾನಂದ್ ಅವರನ್ನು ಬೆಂಬಲಿಸುತ್ತದೆ..

ಭಯೋತ್ಪಾದನೆಗೆ ವಿರುದ್ಧವೆಂದು ಬಿಜೆಪಿ ಹೇಳುತ್ತದೆ ಮತ್ತು
-ಪ್ರಗ್ಯಾಳನ್ನು ಸಂಸದಳನ್ನಾಗಿ ಮಾಡುತ್ತದೆ..

ಭ್ರಷ್ಟಾಚಾರದ ವಿರುದ್ಧ ಎಂದು ಬಿಜೆಪಿ ಹೇಳುತ್ತದೆ ಮತ್ತು
-ಯಡಿಯೂರಪ್ಪರವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸುತ್ತದೆ..

ವಂಶಾಡಳಿತದ ವಿರುದ್ಧ ಎಂದು ಬಿಜೆಪಿ ಹೇಳುತ್ತದೆ ಮತ್ತು
-ಜೇ ಷಾ ಅವರನ್ನು ಬಿಸಿಸಿಐ ಕಾರ್ಯದರ್ಶಿ ಮಾಡುತ್ತದೆ..

ಇದು ಭಾರತೀಯ ಕಪಟ ಪಕ್ಷ ಎಂದು ನೆಹ್ರು ಹೂ ರವರು ಇನ್ನೊಂದು ಟ್ವೀಟ್‌ ಮಾಡಿದ್ದಾರೆ.

BCCI ಕಾರ್ಯದರ್ಶಿ ‘ಜೇ ಷಾ’ ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ? ಎಂದು ನೆಟ್ಟಿಗರು ಕಟುಕಿದ್ದಾರೆ…

ಜೇ ಷಾ ಅವರು ಚೆಪಾಕ್ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಫೀಲ್ಡರ್‌ಗಳನ್ನು ಮರೀನಾ ಬೀಚ್ ಮತ್ತು ಮೌಂಟ್ ರಸ್ತೆಯಲ್ಲಿ ಕೆಲವೇ ಕಿ.ಮೀ ದೂರದಲ್ಲಿ ನಿಯೋಜಿಸಲಾಗುತ್ತಿತ್ತು. ಅವರು ಆ ರೀತಿಯ ಶಕ್ತಿಶಾಲಿ ಆಟಗಾರ. ಅವರು ಖಂಡಿತವಾಗಿಯೂ #BCCI ಮುಖ್ಯಸ್ಥರಾಗಲು ಅರ್ಹರು ಎಂಬ ಟ್ರೋಲ್ ಸಹ ಕಂಡುಬಂದಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...