Homeಮುಖಪುಟಸರ್ಕಾರದಿಂದ ಪರಿಹಾರ ಪಡೆಯಲು ಹೆಸರನ್ನು ಖಾನ್/ ಅಹ್ಮದ್ ಎಂದು ಬದಲಿಸಿಕೊಳ್ಳಬೇಕೆ ಎಂದವನಿಗೆ ಧೃವ್ ರಾಠೀ ಕೊಟ್ಟ...

ಸರ್ಕಾರದಿಂದ ಪರಿಹಾರ ಪಡೆಯಲು ಹೆಸರನ್ನು ಖಾನ್/ ಅಹ್ಮದ್ ಎಂದು ಬದಲಿಸಿಕೊಳ್ಳಬೇಕೆ ಎಂದವನಿಗೆ ಧೃವ್ ರಾಠೀ ಕೊಟ್ಟ ಉತ್ತರವೇನು ಗೊತ್ತೆ?

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ರವರು ಎಂ.ಎಂ ಖಾನ್ ಮತ್ತು ತನ್ಜಿಲ್ ಅಹ್ಮದ್ ಎಂಬುವವರ ಕುಟುಂಬಕ್ಕೆ 1 ಕೋಟಿ ಪರಿಹಾರ ಹಣ ನೀಡಿದ್ದಾರೆ. ಆದರೆ ಕಳೆದ ವರ್ಷ ಕೊಲೆಯಾದ ಅಂಕಿತ್ ಸಕ್ಸೇನಾ ಕುಟುಂಬಕ್ಕೆ ಏನು ಸಿಕ್ಕಿಲ್ಲ. ಅರವಿಂದ್ ಕೇಜ್ರಿವಾಲ್ ರವರೇ, ನಿಮ್ಮಿಂದ ಪರಿಹಾರ ಪಡೆಯಲು ಅಂಕಿತ್ ಸಕ್ಸೇನಾರವರ ಕುಟುಂಬ ತಮ್ಮ ಹೆಸರನ್ನು ಖಾನ್ ಅಥವಾ ಅಹ್ಮದ್ ಎಂದು ಬದಲಿಸಿಕೊಳ್ಳಬೇಕೆ? ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಮೇಜರ್ ಸುರೇಂದ್ರ ಪೂನಿಯಾರವರು ಟ್ವಿಟ್ಟರ್ ನಲ್ಲಿ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರಸಿದ್ದ ಜಾಲತಾಣಿಗ ಧೃವ್ ರಾಠೀ ಕೊಟ್ಟ ಉತ್ತರವೇನು ಗೊತ್ತೆ?

ಅಂಕಲ್, ನಿಮಗೆ ಸ್ವಲ್ಪವೂ ನಾಚಿಕೆಯಾಗುವುದಿಲ್ಲವೇ? ಫೇಕ್ ನ್ಯೂಸ್‍ಗಳನ್ನು ಹರಡುವ ಮೂಲಕ ಜನರನ್ನು ಕೋಮುವಾದಿಕರಣಗೊಳಿಸುವುದು ಮತ್ತು ಹಿಂದೂ ಮುಸ್ಲಿಂ ಹೆಸರಿನಲ್ಲಿ ಜನರನ್ನು ಒಡೆಯುವುದು ಮಾತ್ರವೇ ನಿಮ್ಮ ಜೀವನದ ಉದ್ದೇಶವೆಂದು ಕಾಣುತ್ತಿದೆ.

ಈ ಕೆಳಗಿನ ಹೆಸರುಗಳು ಖಾನ್ ಅಥವಾ ಅಹ್ಮದ್ ಎಂದು ಇವೆಯೇ?
ಆನಂದ್ ಕುಮಾರ್ – ಒಂದು ಕೋಟಿ
ಮನರಾಮ್ – ಒಂದು ಕೋಟಿ
ರಾಮ್ ಕಾನ್ವಾರ್ ಮೀನಾ – 50 ಲಕ್ಷ
ವಿನೋದ್ ಕುಮಾರ್ – ಒಂದು ಕೋಟಿ
ನರೋತ್ತಮ್ ದಾಸ್ – ಒಂದು ಕೋಟಿ

ಎಂದು ರಿಪ್ಲೈ ಮಾಡುವ ಮೂಲಕ ಮುಖಕ್ಕೆ ಹೊಡೆದಂತೆ ತಿರುಗೇಟು ನೀಡಿದ್ದಾರೆ. ಅಲ್ಲದೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ರವರು ಜಾತಿ/ಧರ್ಮದ ಬೇಧಭಾವವಿಲ್ಲದೇ ಪರಿಹಾರ ವಿತರಿಸಿರುವ ದಾಖಲೆಯನ್ನು ಅಂಟಿಸಿದ್ದಾರೆ.

ಇದರ ಜೊತೆಗೆ ಅಶೋಕ್ ಅಗರ್ ವಾಲ್ ಎಂಬುವವರು ‘ಈ ಮನುಷ್ಯ “ಮೇಜರ್” ಪದವಿಯನ್ನು ದುರುಪಯೋಗ ಮಾಡಿಕೊಂಡು ಜನರನ್ನು ಕೋಮು ದ್ವೇಷ ಮೂಡಿಸುತ್ತಿದ್ದಾರೆ. ಇಂತಹವರಿಂದ ಆ ಪದವಿಗೆ ಅಗೌರವ ಉಂಟಾಗಲಿದ್ದು ಅದನ್ನು ಹಿಂಪಡೆಯಬೇಕೆಂದು’ ಒತ್ತಾಯಿಸಿದ್ದಾರೆ.

ವಿಕಾಸ್ ಎಂಬುವವರು ಸಹ “ತಮ್ಮ ಕಣ್ಣಿಗೆ ಹಾಕಿಕೊಂಡಿರುವ ಧರ್ಮದ ಕನ್ನಡಕವನ್ನು ತೆಗೆದುನೋಡಿ. ಅರವಿಂದ್ ಕೇಜ್ರಿವಾಲ್‍ರವರ ಸರ್ಕಾರ ಜಾತಿಧರ್ಮದ ಹೊರತಾಗಿ ಎಲ್ಲರಿಗೂ ಸಿಗಬೇಕಾದ ಪರಿಹಾರವನ್ನು ನೀಡಿದೆ ಎಂದು ಡಿಎನ್‍ಎ ಪತ್ರಿಕೆಯ ವರದಿಯನ್ನು ಲಗತ್ತಿಸಿದ್ದಾರೆ. ಅದರಂತೆ ಹುತಾತ್ಮರಾದ 14 ಸೈನಿಕರ/ಪೊಲೀಸರ ಕುಟುಂಬಕ್ಕೂ ತಲಾ ಒಂದು ಕೋಟಿ ರೂಗಳನ್ನು ಪರಿಹಾರವಾಗಿ ದೆಹಲಿಯ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...