Homeಮುಖಪುಟಸರ್ಕಾರದಿಂದ ಪರಿಹಾರ ಪಡೆಯಲು ಹೆಸರನ್ನು ಖಾನ್/ ಅಹ್ಮದ್ ಎಂದು ಬದಲಿಸಿಕೊಳ್ಳಬೇಕೆ ಎಂದವನಿಗೆ ಧೃವ್ ರಾಠೀ ಕೊಟ್ಟ...

ಸರ್ಕಾರದಿಂದ ಪರಿಹಾರ ಪಡೆಯಲು ಹೆಸರನ್ನು ಖಾನ್/ ಅಹ್ಮದ್ ಎಂದು ಬದಲಿಸಿಕೊಳ್ಳಬೇಕೆ ಎಂದವನಿಗೆ ಧೃವ್ ರಾಠೀ ಕೊಟ್ಟ ಉತ್ತರವೇನು ಗೊತ್ತೆ?

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ರವರು ಎಂ.ಎಂ ಖಾನ್ ಮತ್ತು ತನ್ಜಿಲ್ ಅಹ್ಮದ್ ಎಂಬುವವರ ಕುಟುಂಬಕ್ಕೆ 1 ಕೋಟಿ ಪರಿಹಾರ ಹಣ ನೀಡಿದ್ದಾರೆ. ಆದರೆ ಕಳೆದ ವರ್ಷ ಕೊಲೆಯಾದ ಅಂಕಿತ್ ಸಕ್ಸೇನಾ ಕುಟುಂಬಕ್ಕೆ ಏನು ಸಿಕ್ಕಿಲ್ಲ. ಅರವಿಂದ್ ಕೇಜ್ರಿವಾಲ್ ರವರೇ, ನಿಮ್ಮಿಂದ ಪರಿಹಾರ ಪಡೆಯಲು ಅಂಕಿತ್ ಸಕ್ಸೇನಾರವರ ಕುಟುಂಬ ತಮ್ಮ ಹೆಸರನ್ನು ಖಾನ್ ಅಥವಾ ಅಹ್ಮದ್ ಎಂದು ಬದಲಿಸಿಕೊಳ್ಳಬೇಕೆ? ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಮೇಜರ್ ಸುರೇಂದ್ರ ಪೂನಿಯಾರವರು ಟ್ವಿಟ್ಟರ್ ನಲ್ಲಿ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರಸಿದ್ದ ಜಾಲತಾಣಿಗ ಧೃವ್ ರಾಠೀ ಕೊಟ್ಟ ಉತ್ತರವೇನು ಗೊತ್ತೆ?

ಅಂಕಲ್, ನಿಮಗೆ ಸ್ವಲ್ಪವೂ ನಾಚಿಕೆಯಾಗುವುದಿಲ್ಲವೇ? ಫೇಕ್ ನ್ಯೂಸ್‍ಗಳನ್ನು ಹರಡುವ ಮೂಲಕ ಜನರನ್ನು ಕೋಮುವಾದಿಕರಣಗೊಳಿಸುವುದು ಮತ್ತು ಹಿಂದೂ ಮುಸ್ಲಿಂ ಹೆಸರಿನಲ್ಲಿ ಜನರನ್ನು ಒಡೆಯುವುದು ಮಾತ್ರವೇ ನಿಮ್ಮ ಜೀವನದ ಉದ್ದೇಶವೆಂದು ಕಾಣುತ್ತಿದೆ.

ಈ ಕೆಳಗಿನ ಹೆಸರುಗಳು ಖಾನ್ ಅಥವಾ ಅಹ್ಮದ್ ಎಂದು ಇವೆಯೇ?
ಆನಂದ್ ಕುಮಾರ್ – ಒಂದು ಕೋಟಿ
ಮನರಾಮ್ – ಒಂದು ಕೋಟಿ
ರಾಮ್ ಕಾನ್ವಾರ್ ಮೀನಾ – 50 ಲಕ್ಷ
ವಿನೋದ್ ಕುಮಾರ್ – ಒಂದು ಕೋಟಿ
ನರೋತ್ತಮ್ ದಾಸ್ – ಒಂದು ಕೋಟಿ

ಎಂದು ರಿಪ್ಲೈ ಮಾಡುವ ಮೂಲಕ ಮುಖಕ್ಕೆ ಹೊಡೆದಂತೆ ತಿರುಗೇಟು ನೀಡಿದ್ದಾರೆ. ಅಲ್ಲದೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ರವರು ಜಾತಿ/ಧರ್ಮದ ಬೇಧಭಾವವಿಲ್ಲದೇ ಪರಿಹಾರ ವಿತರಿಸಿರುವ ದಾಖಲೆಯನ್ನು ಅಂಟಿಸಿದ್ದಾರೆ.

ಇದರ ಜೊತೆಗೆ ಅಶೋಕ್ ಅಗರ್ ವಾಲ್ ಎಂಬುವವರು ‘ಈ ಮನುಷ್ಯ “ಮೇಜರ್” ಪದವಿಯನ್ನು ದುರುಪಯೋಗ ಮಾಡಿಕೊಂಡು ಜನರನ್ನು ಕೋಮು ದ್ವೇಷ ಮೂಡಿಸುತ್ತಿದ್ದಾರೆ. ಇಂತಹವರಿಂದ ಆ ಪದವಿಗೆ ಅಗೌರವ ಉಂಟಾಗಲಿದ್ದು ಅದನ್ನು ಹಿಂಪಡೆಯಬೇಕೆಂದು’ ಒತ್ತಾಯಿಸಿದ್ದಾರೆ.

ವಿಕಾಸ್ ಎಂಬುವವರು ಸಹ “ತಮ್ಮ ಕಣ್ಣಿಗೆ ಹಾಕಿಕೊಂಡಿರುವ ಧರ್ಮದ ಕನ್ನಡಕವನ್ನು ತೆಗೆದುನೋಡಿ. ಅರವಿಂದ್ ಕೇಜ್ರಿವಾಲ್‍ರವರ ಸರ್ಕಾರ ಜಾತಿಧರ್ಮದ ಹೊರತಾಗಿ ಎಲ್ಲರಿಗೂ ಸಿಗಬೇಕಾದ ಪರಿಹಾರವನ್ನು ನೀಡಿದೆ ಎಂದು ಡಿಎನ್‍ಎ ಪತ್ರಿಕೆಯ ವರದಿಯನ್ನು ಲಗತ್ತಿಸಿದ್ದಾರೆ. ಅದರಂತೆ ಹುತಾತ್ಮರಾದ 14 ಸೈನಿಕರ/ಪೊಲೀಸರ ಕುಟುಂಬಕ್ಕೂ ತಲಾ ಒಂದು ಕೋಟಿ ರೂಗಳನ್ನು ಪರಿಹಾರವಾಗಿ ದೆಹಲಿಯ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...