Homeಕರ್ನಾಟಕಆಪರೇಷನ್ ಕಮಲ ಬಿಜೆಪಿ ಆಟ, ಶೋಭಾ ಕರಂದ್ಲಾಚೆಗೆ ಗಣಿತ ಗೊತ್ತಿಲ್ಲ: ಸಿದ್ದರಾಮಯ್ಯ

ಆಪರೇಷನ್ ಕಮಲ ಬಿಜೆಪಿ ಆಟ, ಶೋಭಾ ಕರಂದ್ಲಾಚೆಗೆ ಗಣಿತ ಗೊತ್ತಿಲ್ಲ: ಸಿದ್ದರಾಮಯ್ಯ

- Advertisement -
- Advertisement -

ಒಂದು ಕಡೆ ಇಬ್ಬರು ಕಾಂಗ್ರೆಸ್ ಶಾಸಕರ ರಾಜಿನಾಮೆ ಹಿನ್ನೆಲೆಯಲ್ಲಿ ಮತ್ತೆ ಆಪರೇಷನ್ ಕಮಲ ಮುನ್ನೆಲೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವೆ ಟ್ವೀಟ್ ಸಮರ ಕೂಡ ನಡೆಯುತ್ತಿದೆ.

ಮೊದಲಿಗೆ ಇಬ್ಬರು ಶಾಸಕರು ರಾಜಿನಾಮೆ ಪ್ರಹಸನ ಶುರುವಾದಗ ಸಿದ್ದರಾಮಯ್ಯನವರು “ ಇತ್ತೀಚಿನ ರಾಜಕೀಯ ನಾಟಕಗಳು ಬಿಜೆಪಿಯವರ ಕೊಳಕು ರಾಜಕೀಯವನ್ನು ತೋರಿಸುತ್ತದೆ. ಅಸೆಂಬ್ಲಿಯಲ್ಲಿ ಬಿಜೆಪಿಗೆ ಜನತೆ ಬಹುಮತ ನೀಡದಿದ್ದರೂ ಸಹ ಅವರು ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಹವಣಿಸುತ್ತಿದ್ದಾರೆ. ನರೇಂದ್ರ ಮೋದಿಯವರಿಗೆ ಸ್ವಲ್ಪವಾದರೂ ಆತ್ಮಗೌರವವಿದ್ದಲ್ಲಿ ಅವರ ಪಕ್ಷದವರು ನಡೆಸುತ್ತಿರುವ ಅಸಾಂವಿಧಾನಿಕ ಕೃತ್ಯವನ್ನು ತಡೆಯಬೇಕು” ಎಂದು ಖಾರವಾಗಿ ಟ್ವೀಟ್ ಮಾಡಿದ್ದರು.

ಇದಕ್ಕೆ ಬಿಜೆಪಿಯ ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಚೆಯವರು ಮರು ಉತ್ತರ ನೀಡಿದ್ದರು. ಅವರು “ಪ್ರೀತಿಯ ಸಿದ್ದರಾಮಯ್ಯನವರೆ, 105>78- (ಬಿಜೆಪಿಯ 105ಕ್ಕಿಂತ ಕಾಂಗ್ರೆಸ್‍ನ 78 ಕಡಿಮೆ). ಆದರೂ ಕಾಂಗ್ರೆಸ್ ಜೆಡಿಎಸ್ ಸೇರಿ ಜನಾಭಿಪ್ರಾಯವನ್ನು ಕಡೆಗಣಿಸಿ ಅನೈತಿಕ ಸರ್ಕಾರ ರಚಿಸಿದ್ದೀರಿ. ಜನ ಬಿಜೆಪಿಗೆ ಬಹುಮತ ಕೊಟ್ಟಿದ್ದಾರೆ. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿನ ಸೋಲಿನಿಂದ ನಿಮ್ಮ ಕಾಮನ್ ಸೆನ್ಸ್ ಅನ್ನು ಕಳೆದುಕೊಂಡಿದ್ದೀರಾ” ಎಂದು ಖಾರವಾಗಿ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯನವರು “ನನ್ನ ತಿಳುವಳಿಕೆ 113>105 (ಬಹುಮತಕ್ಕಿಂತ ಬಿಜೆಪಿ ಕಡಿಮೆ ಇದೆ) ಮತ್ತು 113 ಅನ್ನುವುದು ಕರ್ನಾಟಕ ವಿಧಾನಸಭೆಯಲ್ಲಿ ಯಾರಾದರೂ ಸರ್ಕಾರ ರಚಿಸಲು ಬೇಕಿರುವ ಅತ್ಯಮೂಲ್ಯ ಬಹುಮತವಾಗಿದೆ.

ಹಾಗಾಗಿ “ಏಕೀ ಮಿನಿಟ್” ತೆಗೆದುಕೊಂಡು ರಾಜಕೀಯದ ನಿಮ್ಮ ಸಣ್ಣತನವನ್ನು ಬಿಟ್ಟು ಪ್ರಜಾಪ್ರಭುತ್ವದ ಗಣಿತ ಶಾಸ್ತ್ರವನ್ನು ಕಲಿಯಿರಿ ಎಂದು ಹೇಳಿದ್ದಾರೆ. ಅವರ ಟ್ವೀಟ್‍ನಲ್ಲಿ ಇತ್ತೀಚೆಗೆ ಐಎಂಎ ಹಗರಣ ಕುರಿತು ಸಂಸತ್ತಿನಲ್ಲಿ ಹಿಂದಿಯಲ್ಲಿ ಭಾಷಣ ಮಾಡಲು ಹೋಗಿ ಮುಜುಗರಕ್ಕೊಳಗಾಗಿದ್ದ ಶೋಭಾ ಕರಂದ್ಲಾಚೆಯವರ ಏಕೀ ಮಿನಿಟ್ ಉಲ್ಲೇಖಿಸಿ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಕೋಪಗೊಂಡ ಶೋಭಾ ಕರಂದ್ಲಾಚೆಯವರು ಬಿಜೆಪಿಯ ವಿರುದ್ಧದ ನಿಮ್ಮ ನೀಚ ರಾಜಕಾರನವನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದರು.

ಮುಂದುವರಿದು ನಿಮ್ಮ 105 ಸಂಖ್ಯೆಯೊಂದಿಗೆ ಸರ್ಕಾರ ರಚಿಸಬಹುದೆಂಬ ವಿಶ್ವಾಸ ನಿಮಗಿದ್ದರೆ ರಾಜ್ಯಪಾಲರಿಗೆ ನಿಮ್ಮ ಬಹುಮತವನ್ನು ಸಾಬೀತು ಪಡಿಸಿ ಸರ್ಕಾರ ರಚಿಸಲು ಹಕ್ಕು ಮಂಡಿಸಿ. ಒಂದು ವೇಳೆ ರಾಜ್ಯಪಾಲರು ನಿಮ್ಮ ಹಕ್ಕನ್ನು ಒಪ್ಪಿಕೊಂಡಲ್ಲಿ ನಾವು ಸಂತೋಷದಿಂದ ಸರ್ಕಾರದಿಂದ ನಿರ್ಗಮಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...