Homeಕರ್ನಾಟಕಆಪರೇಷನ್ ಕಮಲ ಬಿಜೆಪಿ ಆಟ, ಶೋಭಾ ಕರಂದ್ಲಾಚೆಗೆ ಗಣಿತ ಗೊತ್ತಿಲ್ಲ: ಸಿದ್ದರಾಮಯ್ಯ

ಆಪರೇಷನ್ ಕಮಲ ಬಿಜೆಪಿ ಆಟ, ಶೋಭಾ ಕರಂದ್ಲಾಚೆಗೆ ಗಣಿತ ಗೊತ್ತಿಲ್ಲ: ಸಿದ್ದರಾಮಯ್ಯ

- Advertisement -
- Advertisement -

ಒಂದು ಕಡೆ ಇಬ್ಬರು ಕಾಂಗ್ರೆಸ್ ಶಾಸಕರ ರಾಜಿನಾಮೆ ಹಿನ್ನೆಲೆಯಲ್ಲಿ ಮತ್ತೆ ಆಪರೇಷನ್ ಕಮಲ ಮುನ್ನೆಲೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವೆ ಟ್ವೀಟ್ ಸಮರ ಕೂಡ ನಡೆಯುತ್ತಿದೆ.

ಮೊದಲಿಗೆ ಇಬ್ಬರು ಶಾಸಕರು ರಾಜಿನಾಮೆ ಪ್ರಹಸನ ಶುರುವಾದಗ ಸಿದ್ದರಾಮಯ್ಯನವರು “ ಇತ್ತೀಚಿನ ರಾಜಕೀಯ ನಾಟಕಗಳು ಬಿಜೆಪಿಯವರ ಕೊಳಕು ರಾಜಕೀಯವನ್ನು ತೋರಿಸುತ್ತದೆ. ಅಸೆಂಬ್ಲಿಯಲ್ಲಿ ಬಿಜೆಪಿಗೆ ಜನತೆ ಬಹುಮತ ನೀಡದಿದ್ದರೂ ಸಹ ಅವರು ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಹವಣಿಸುತ್ತಿದ್ದಾರೆ. ನರೇಂದ್ರ ಮೋದಿಯವರಿಗೆ ಸ್ವಲ್ಪವಾದರೂ ಆತ್ಮಗೌರವವಿದ್ದಲ್ಲಿ ಅವರ ಪಕ್ಷದವರು ನಡೆಸುತ್ತಿರುವ ಅಸಾಂವಿಧಾನಿಕ ಕೃತ್ಯವನ್ನು ತಡೆಯಬೇಕು” ಎಂದು ಖಾರವಾಗಿ ಟ್ವೀಟ್ ಮಾಡಿದ್ದರು.

ಇದಕ್ಕೆ ಬಿಜೆಪಿಯ ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಚೆಯವರು ಮರು ಉತ್ತರ ನೀಡಿದ್ದರು. ಅವರು “ಪ್ರೀತಿಯ ಸಿದ್ದರಾಮಯ್ಯನವರೆ, 105>78- (ಬಿಜೆಪಿಯ 105ಕ್ಕಿಂತ ಕಾಂಗ್ರೆಸ್‍ನ 78 ಕಡಿಮೆ). ಆದರೂ ಕಾಂಗ್ರೆಸ್ ಜೆಡಿಎಸ್ ಸೇರಿ ಜನಾಭಿಪ್ರಾಯವನ್ನು ಕಡೆಗಣಿಸಿ ಅನೈತಿಕ ಸರ್ಕಾರ ರಚಿಸಿದ್ದೀರಿ. ಜನ ಬಿಜೆಪಿಗೆ ಬಹುಮತ ಕೊಟ್ಟಿದ್ದಾರೆ. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿನ ಸೋಲಿನಿಂದ ನಿಮ್ಮ ಕಾಮನ್ ಸೆನ್ಸ್ ಅನ್ನು ಕಳೆದುಕೊಂಡಿದ್ದೀರಾ” ಎಂದು ಖಾರವಾಗಿ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯನವರು “ನನ್ನ ತಿಳುವಳಿಕೆ 113>105 (ಬಹುಮತಕ್ಕಿಂತ ಬಿಜೆಪಿ ಕಡಿಮೆ ಇದೆ) ಮತ್ತು 113 ಅನ್ನುವುದು ಕರ್ನಾಟಕ ವಿಧಾನಸಭೆಯಲ್ಲಿ ಯಾರಾದರೂ ಸರ್ಕಾರ ರಚಿಸಲು ಬೇಕಿರುವ ಅತ್ಯಮೂಲ್ಯ ಬಹುಮತವಾಗಿದೆ.

ಹಾಗಾಗಿ “ಏಕೀ ಮಿನಿಟ್” ತೆಗೆದುಕೊಂಡು ರಾಜಕೀಯದ ನಿಮ್ಮ ಸಣ್ಣತನವನ್ನು ಬಿಟ್ಟು ಪ್ರಜಾಪ್ರಭುತ್ವದ ಗಣಿತ ಶಾಸ್ತ್ರವನ್ನು ಕಲಿಯಿರಿ ಎಂದು ಹೇಳಿದ್ದಾರೆ. ಅವರ ಟ್ವೀಟ್‍ನಲ್ಲಿ ಇತ್ತೀಚೆಗೆ ಐಎಂಎ ಹಗರಣ ಕುರಿತು ಸಂಸತ್ತಿನಲ್ಲಿ ಹಿಂದಿಯಲ್ಲಿ ಭಾಷಣ ಮಾಡಲು ಹೋಗಿ ಮುಜುಗರಕ್ಕೊಳಗಾಗಿದ್ದ ಶೋಭಾ ಕರಂದ್ಲಾಚೆಯವರ ಏಕೀ ಮಿನಿಟ್ ಉಲ್ಲೇಖಿಸಿ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಕೋಪಗೊಂಡ ಶೋಭಾ ಕರಂದ್ಲಾಚೆಯವರು ಬಿಜೆಪಿಯ ವಿರುದ್ಧದ ನಿಮ್ಮ ನೀಚ ರಾಜಕಾರನವನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದರು.

ಮುಂದುವರಿದು ನಿಮ್ಮ 105 ಸಂಖ್ಯೆಯೊಂದಿಗೆ ಸರ್ಕಾರ ರಚಿಸಬಹುದೆಂಬ ವಿಶ್ವಾಸ ನಿಮಗಿದ್ದರೆ ರಾಜ್ಯಪಾಲರಿಗೆ ನಿಮ್ಮ ಬಹುಮತವನ್ನು ಸಾಬೀತು ಪಡಿಸಿ ಸರ್ಕಾರ ರಚಿಸಲು ಹಕ್ಕು ಮಂಡಿಸಿ. ಒಂದು ವೇಳೆ ರಾಜ್ಯಪಾಲರು ನಿಮ್ಮ ಹಕ್ಕನ್ನು ಒಪ್ಪಿಕೊಂಡಲ್ಲಿ ನಾವು ಸಂತೋಷದಿಂದ ಸರ್ಕಾರದಿಂದ ನಿರ್ಗಮಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...