Homeಕರ್ನಾಟಕನುಡಿದಂತೆ ನಡೆಯಿರಿ ಎಂದ ಬಿಜೆಪಿಗೆ ನಿಮ್ಮ ಕುತಂತ್ರ ಬಯಲಾಗುತ್ತಿದೆ ಸ್ವಲ್ಪ ತಡೆಯಿರಿ ಎಂದ ಕಾಂಗ್ರೆಸ್

ನುಡಿದಂತೆ ನಡೆಯಿರಿ ಎಂದ ಬಿಜೆಪಿಗೆ ನಿಮ್ಮ ಕುತಂತ್ರ ಬಯಲಾಗುತ್ತಿದೆ ಸ್ವಲ್ಪ ತಡೆಯಿರಿ ಎಂದ ಕಾಂಗ್ರೆಸ್

ಸದನದ ಹೊರಗೆ ಟ್ವಿಟ್ಟರ್ ನಲ್ಲಿ ಶುರುವಾಯ್ತು ಟ್ವಿಟ್ಟರ್ ಸಮರ

- Advertisement -
- Advertisement -

ಬಿಜೆಪಿ: ನುಡಿದಂತೆ ನಡೆಯಿರಿ…

ಕಾಂಗ್ರೆಸ್: ಆಪರೇಷನ್ ಕಮಲವೆಂಬ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ನಿಮ್ಮ ಕುತಂತ್ರ ಬಯಲಾಗುತ್ತಿದೆ.. ಸ್ವಲ್ಪ ತಡೆಯಿರಿ

ಬಿಜೆಪಿ: ಟ್ವೀಟ್‌ ಮಾಡುವ ಬದಲು ನಿಮ್ಮ ಮುಖ್ಯಮಂತ್ರಿಗಳಿಗೆ ಹಾಗೂ ನಿಮ್ಮ ಶಾಸಕಾಂಗ ಪಕ್ಷದ ನಾಯಕರಿಗೆ ವಿಶ್ವಾಸ ಮತ ಯಾಚಿಸಲು ಹೇಳಿ, ವಚನಭ್ರಷ್ಟರಾಗದಿರಿ.

ಬಿಜೆಪಿ: ಒಂದು ವರ್ಷದಿಂದ ನಿಮ್ಮ ದುರಾಡಳಿತವನ್ನು ತಡೆದುಕೊಂಡು ಸಾಕಾಗಿದೆ ಈಗ ನಿಮ್ಮ ಡ್ರಾಮಾ ಸಾಕು ನಡಿಯಿರಿ.

ಇದಿಷ್ಟು ಸನದದಲ್ಲಿ ನಡೆದಿದ್ದು ಅಲ್ಲ. ಬದಲಿಗೆ ಟ್ಚಟ್ಟರ್ ನಲ್ಲಿ ನಡೆದಿದ್ದು. ಇಂದು ಸದನದಲ್ಲಿ ಕಾವೇರಿದ ಚರ್ಚೆ ನಡೆಯುತ್ತಿದ್ದರೆ ಸ್ಪೀಕರ್ ರವರು ಸದನಾದ ಕಲಾಪವನ್ನು ಮುಂದೂಡಿದ ಸಂದರ್ಭದಲ್ಲಿ ಸದನದ ಹೊರಗೆ ಟ್ವಿಟ್ಟರ್ ನಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆದಿದೆ.

ಸದನದಲ್ಲಿ ಬಿಜೆಪಿಗರಿಗೆ ಮಾತಾಡಲು ಬಾಯಿಯೇ ಬರುತ್ತಿಲ್ಲ. ಕಾಂಗ್ರೆಸ್- ಜೆಡಿಎಸ್ ನವರು ಎಷ್ಟೇ ಟೀಕೆ ಮಾಡಿದರೂ, ಚೇಡಿಸಿದರೂ ಬಿಜೆಪಿ ಪ್ರತ್ಯುತ್ತರ ಕೊಡುವಂತಿಲ್ಲ. ಕಳೆದ ಮೂರು ದಿನಗಳಿಂದ ಬಿಜೆಪಿ ಬಾಯಿ ಬಿಟ್ಟರೆ ತಮಗೆ ಕೆಟ್ಟದ್ದು ಅಂತ ಕುಳಿತಿದ್ದಾರೆ. ಇದರಿಂದ ತಮ್ಮ ಆಕ್ರೋಶ ವ್ಯಕ್ತಪಡಿಸಲು ಉಪಾಯ ಕಂಡುಕೊಂಡಿದ್ದಾರೆ. ಅದೇ ಟ್ವಿಟ್ಟರ್.

ಹೌದು ಟ್ವಿಟ್ಟರ್ ನಲ್ಲಿ ಮೊದಲು ಬಿಜೆಪಿಯೇ ಕಾಂಗ್ರೆಸ್ ಜೆಡಿಎಸ್ ಗೆ ಕೆಣಕಿತು. ನುಡಿದಂತೆ ನಡೆಯಿರಿ.. ಎಂದಷ್ಟೇ ಟ್ವೀಟ್ ಮಾಡಿತು. ಇದಕ್ಕೆ ಮೂರೇ ನಿಮಿಷದಲ್ಲಿ ಕಾಂಗ್ರೆಸ್ ವತಿಯಿಂದ ಆಪರೇಷನ್ ಕಮಲವೆಂಬ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ನಿಮ್ಮ ಕುತಂತ್ರ ಬಯಲಾಗುತ್ತಿದೆ.. ಸ್ವಲ್ಪ ತಡೆಯಿರಿ ಎಂಬ ಪ್ರತಿಕ್ರಿಯೆ ಬಂತು.

ಒಟ್ಟಿನಲ್ಲಿ ಈ ಪಕ್ಷಗಳ ನಡುವಿನ ವೈಮನಸ್ಸು ಎಲ್ಲಾ ಕಡೆ ಪ್ರತಿಬಿಂಬಿಸುತ್ತಿವೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...