Homeಕರ್ನಾಟಕಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯನವರನ್ನು ಕೆಣಕಿ ಸರಿಯಾಗಿ ಗುದ್ದಿಸಿಕೊಂಡ ಸಿ.ಟಿ ರವಿ...

ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯನವರನ್ನು ಕೆಣಕಿ ಸರಿಯಾಗಿ ಗುದ್ದಿಸಿಕೊಂಡ ಸಿ.ಟಿ ರವಿ…

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಬಿಜೆಪಿ ಪ್ರಣಾಳಿಕೆಯಲ್ಲಿ ಸಾವರ್ಕರ್‌ಗೆ ಭಾರತ ರತ್ನ ನೀಡುವುದಾಗಿ ಘೋಷಿಸಿದೆ. ಬ್ರಿಟಿಷರಿಗೆ ಕ್ಷಮಾಪಣಾ ಪತ್ರಬರೆದು, ಸ್ವಾತಂತ್ರ್ಯ ಹೊರಾಟಕ್ಕೆ ದ್ರೋಹ ಬಗೆದ ಹೇಡಿ ಸಾವರ್ಕರ್‌ಗೆ ಭಾರತ ರತ್ನ ನೀಡಬಾರದೆಂದು ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹ “ಗಾಂಧಿ ಕೊಲೆಗೆ ಪ್ರಯತ್ನಿಸಿದ್ದ ಸಾವರ್ಕರ್‌ಗೆ ಭಾರತ ರತ್ನ ನೀಡಬಾರದು” ಎಂದು ಆಗ್ರಹಿಸಿದ್ದರು.

ಇದಕ್ಕೆ ಸಿ.ಟಿ ರವಿಯವರು ಸುಮ್ಮನಿರದೇ ತಿರುಗೇಟು ನೀಡಲು ಹೋಗಿ ಸರಿಯಾಗಿ ಪೆಟ್ಟು ತಿಂದಿದ್ದಾರೆ.

“ಮಹಾತ್ಮ ಗಾಂಧಿಯವರ ಹತ್ಯೆಯಲ್ಲಿ ರಾಷ್ಟ್ರೀಯವಾದಿ ವೀರ್ ಸಾವರ್ಕರ್ ಅವರನ್ನು ಸಂಚುಕೋರ ಎಂದು ಆರೋಪಿಸಿದ್ದೀರಿ. ಮುಖ್ಯಮಂತ್ರಿ ಹುದ್ದೆಯನ್ನು ಕಳೆದುಕೊಂಡ ನಂತರ ನೀವು ಮಾನಸಿಕವಾಗಿ ಅಂಗವಿಕಲರಾಗಿದ್ದೀರಾ? ನಿಮಗೆ ಇತಿಹಾಸದ ಬಗ್ಗೆ ಏನಾದರೂ ಕಲ್ಪನೆ ಇದೆಯೇ? ನೀವು ಸೆಲ್ಯುಲಾರ್ ಜೈಲಿಗೆ ಏಕೆ ಭೇಟಿ ನೀಡಬಾರದು! ನಿಮ್ಮ ಪ್ರವಾಸಕ್ಕೆ ನಾನು ಪ್ರಾಯೋಜಕತ್ವ ನೀಡುತ್ತೇನೆ” ಎಂದು ಸಿ.ಟಿ ರವಿ ಸಿದ್ದರಾಮಯ್ಯನವರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು.

ಇದರಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯನವರು “ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ.
ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತಾಡುತ್ತೇವೆ.” ಎಂದು ತಿರುಗೇಟು ನೀಡಿದ್ದಾರೆ.

ಮುಂದುವರಿದು ಸಿದ್ದರಾಮಯ್ಯನವರು “ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ!” ಎಂದು ಸಿ.ಟಿ ರವಿಯವರು ಮಾಡಿದ ಅಪಘಾತವನ್ನು ಉಲ್ಲೇಖಿಸಿ ಟ್ರೋಲ್ ಮಾಡಿದ್ದಾರೆ.

ಅಲ್ಲಿವರೆಗೂ ಇಂಗ್ಲಿಷ್‌ನಲ್ಲಿ ಟ್ವೀಟ್‌ ಮಾಡುತ್ತಿದ್ದ ಸಿ.ಟಿ ರವಿಯವರು “ಹಿಂದೂ ವಿರೋಧಿ ಹಾಗೂ ಮಹಾ ಕ್ರೂರಿಯಾಗಿದ್ದ ಟಿಪ್ಪು ಜಯಂತಿ ಆಚರಿಸಿ ಅಮಾಯಕರನ್ನು ಕೊಂದವರಿಗೆ ಒಬ್ಬ ದೇಶಭಕ್ತ ಮಹಾತ್ಮ ಗಾಂಧಿಯವರ ಹತ್ಯೆಯ ಆರೋಪಿಯಾಗಿ ಕಾಣುವುದು ಸಹಜ. ತಮ್ಮ ಅಧಿಕಾರ ಅವಧಿಯಲ್ಲಿ ಹಲವು ಅಧಿಕಾರಿಗಳು ಮತ್ತು ಮುಗ್ದರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾಗ ರಾಜ್ಯವನ್ನಾಳುತ್ತಿದ್ದವರು ಏನು ಕುಡಿಯುತ್ತಿದ್ದರೋ?” ಎಂದು ವಿಷಯಾಂತರ ಮಾಡಲು ಪ್ರಯತ್ನಿಸಿದ್ದಾರೆ.

“ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿ ಕೊಲೆ ಮಾಡಿದವರ ಕುರಿತು ನೀವು ಇಷ್ಟೊಂದು ಮಾತನಾಡುತ್ತಿರುವುದು ನೋಡಿದರೆ ಅವರು ನಿಮ್ಮ ಆಪ್ತ ಬಳಗವೇ ಇರಬೇಕು. ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅಂತ ಮಹಾ ಕ್ರೂರಿಗಳ ಇತಿಹಾಸ ಓದುವ ನಡುವೆ ವಿದೇಶದಲ್ಲಿ ಕುಡಿದು ಸತ್ತವರ ಕುರಿತ ಸತ್ಯವನ್ನು ಸಹ ನೀವು ತಿಳಿದು ಮಾತನಾಡುತ್ತೀರಿ ಎಂದು ನಂಬಿದ್ದೇನೆ.” ಎಂತಲೂ ಸಿ.ಟಿ ರವಿಯವರು, ತೀರಿಕೊಂಡಿರುವ ಸಿದ್ದರಾಮಯ್ಯನವರ ಮಗನ ವಿಚಾರವನ್ನು ಮುನ್ನಲೆಗೆ ತಂದಿದ್ದಾರೆ.

ಈ ರೀತಿ ವಿಷಯಾಂತರ ಮಾಡುತ್ತಿರುವ, ಸತ್ತವರ ಬಗ್ಗೆಯು ಕೆಟ್ಟದಾಗಿ ಮಾತನಾಡುತ್ತಿರುವ ಸಿ.ಟಿ ರವಿಗೆ ಸಿದ್ದರಾಮಯ್ಯನವರು ಹೇಗೆ ಜಾಡಿಸುತ್ತಾರೋ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಮಾಲೋಚನಾ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಆಘಾತಕಾರಿ ಜಾತಿ ನಿಂದನೆ-ವರದಿ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಸಮುದಾಯ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...