Homeಕರ್ನಾಟಕಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯನವರನ್ನು ಕೆಣಕಿ ಸರಿಯಾಗಿ ಗುದ್ದಿಸಿಕೊಂಡ ಸಿ.ಟಿ ರವಿ...

ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯನವರನ್ನು ಕೆಣಕಿ ಸರಿಯಾಗಿ ಗುದ್ದಿಸಿಕೊಂಡ ಸಿ.ಟಿ ರವಿ…

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಬಿಜೆಪಿ ಪ್ರಣಾಳಿಕೆಯಲ್ಲಿ ಸಾವರ್ಕರ್‌ಗೆ ಭಾರತ ರತ್ನ ನೀಡುವುದಾಗಿ ಘೋಷಿಸಿದೆ. ಬ್ರಿಟಿಷರಿಗೆ ಕ್ಷಮಾಪಣಾ ಪತ್ರಬರೆದು, ಸ್ವಾತಂತ್ರ್ಯ ಹೊರಾಟಕ್ಕೆ ದ್ರೋಹ ಬಗೆದ ಹೇಡಿ ಸಾವರ್ಕರ್‌ಗೆ ಭಾರತ ರತ್ನ ನೀಡಬಾರದೆಂದು ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹ “ಗಾಂಧಿ ಕೊಲೆಗೆ ಪ್ರಯತ್ನಿಸಿದ್ದ ಸಾವರ್ಕರ್‌ಗೆ ಭಾರತ ರತ್ನ ನೀಡಬಾರದು” ಎಂದು ಆಗ್ರಹಿಸಿದ್ದರು.

ಇದಕ್ಕೆ ಸಿ.ಟಿ ರವಿಯವರು ಸುಮ್ಮನಿರದೇ ತಿರುಗೇಟು ನೀಡಲು ಹೋಗಿ ಸರಿಯಾಗಿ ಪೆಟ್ಟು ತಿಂದಿದ್ದಾರೆ.

“ಮಹಾತ್ಮ ಗಾಂಧಿಯವರ ಹತ್ಯೆಯಲ್ಲಿ ರಾಷ್ಟ್ರೀಯವಾದಿ ವೀರ್ ಸಾವರ್ಕರ್ ಅವರನ್ನು ಸಂಚುಕೋರ ಎಂದು ಆರೋಪಿಸಿದ್ದೀರಿ. ಮುಖ್ಯಮಂತ್ರಿ ಹುದ್ದೆಯನ್ನು ಕಳೆದುಕೊಂಡ ನಂತರ ನೀವು ಮಾನಸಿಕವಾಗಿ ಅಂಗವಿಕಲರಾಗಿದ್ದೀರಾ? ನಿಮಗೆ ಇತಿಹಾಸದ ಬಗ್ಗೆ ಏನಾದರೂ ಕಲ್ಪನೆ ಇದೆಯೇ? ನೀವು ಸೆಲ್ಯುಲಾರ್ ಜೈಲಿಗೆ ಏಕೆ ಭೇಟಿ ನೀಡಬಾರದು! ನಿಮ್ಮ ಪ್ರವಾಸಕ್ಕೆ ನಾನು ಪ್ರಾಯೋಜಕತ್ವ ನೀಡುತ್ತೇನೆ” ಎಂದು ಸಿ.ಟಿ ರವಿ ಸಿದ್ದರಾಮಯ್ಯನವರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು.

ಇದರಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯನವರು “ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ.
ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತಾಡುತ್ತೇವೆ.” ಎಂದು ತಿರುಗೇಟು ನೀಡಿದ್ದಾರೆ.

ಮುಂದುವರಿದು ಸಿದ್ದರಾಮಯ್ಯನವರು “ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ!” ಎಂದು ಸಿ.ಟಿ ರವಿಯವರು ಮಾಡಿದ ಅಪಘಾತವನ್ನು ಉಲ್ಲೇಖಿಸಿ ಟ್ರೋಲ್ ಮಾಡಿದ್ದಾರೆ.

ಅಲ್ಲಿವರೆಗೂ ಇಂಗ್ಲಿಷ್‌ನಲ್ಲಿ ಟ್ವೀಟ್‌ ಮಾಡುತ್ತಿದ್ದ ಸಿ.ಟಿ ರವಿಯವರು “ಹಿಂದೂ ವಿರೋಧಿ ಹಾಗೂ ಮಹಾ ಕ್ರೂರಿಯಾಗಿದ್ದ ಟಿಪ್ಪು ಜಯಂತಿ ಆಚರಿಸಿ ಅಮಾಯಕರನ್ನು ಕೊಂದವರಿಗೆ ಒಬ್ಬ ದೇಶಭಕ್ತ ಮಹಾತ್ಮ ಗಾಂಧಿಯವರ ಹತ್ಯೆಯ ಆರೋಪಿಯಾಗಿ ಕಾಣುವುದು ಸಹಜ. ತಮ್ಮ ಅಧಿಕಾರ ಅವಧಿಯಲ್ಲಿ ಹಲವು ಅಧಿಕಾರಿಗಳು ಮತ್ತು ಮುಗ್ದರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾಗ ರಾಜ್ಯವನ್ನಾಳುತ್ತಿದ್ದವರು ಏನು ಕುಡಿಯುತ್ತಿದ್ದರೋ?” ಎಂದು ವಿಷಯಾಂತರ ಮಾಡಲು ಪ್ರಯತ್ನಿಸಿದ್ದಾರೆ.

“ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿ ಕೊಲೆ ಮಾಡಿದವರ ಕುರಿತು ನೀವು ಇಷ್ಟೊಂದು ಮಾತನಾಡುತ್ತಿರುವುದು ನೋಡಿದರೆ ಅವರು ನಿಮ್ಮ ಆಪ್ತ ಬಳಗವೇ ಇರಬೇಕು. ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅಂತ ಮಹಾ ಕ್ರೂರಿಗಳ ಇತಿಹಾಸ ಓದುವ ನಡುವೆ ವಿದೇಶದಲ್ಲಿ ಕುಡಿದು ಸತ್ತವರ ಕುರಿತ ಸತ್ಯವನ್ನು ಸಹ ನೀವು ತಿಳಿದು ಮಾತನಾಡುತ್ತೀರಿ ಎಂದು ನಂಬಿದ್ದೇನೆ.” ಎಂತಲೂ ಸಿ.ಟಿ ರವಿಯವರು, ತೀರಿಕೊಂಡಿರುವ ಸಿದ್ದರಾಮಯ್ಯನವರ ಮಗನ ವಿಚಾರವನ್ನು ಮುನ್ನಲೆಗೆ ತಂದಿದ್ದಾರೆ.

ಈ ರೀತಿ ವಿಷಯಾಂತರ ಮಾಡುತ್ತಿರುವ, ಸತ್ತವರ ಬಗ್ಗೆಯು ಕೆಟ್ಟದಾಗಿ ಮಾತನಾಡುತ್ತಿರುವ ಸಿ.ಟಿ ರವಿಗೆ ಸಿದ್ದರಾಮಯ್ಯನವರು ಹೇಗೆ ಜಾಡಿಸುತ್ತಾರೋ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...