Homeಕರ್ನಾಟಕಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ - ಸದಾನಂದಗೌಡ - ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ – ಸದಾನಂದಗೌಡ – ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

- Advertisement -
- Advertisement -

ಉಪಚುನಾವಣೆಯ ರಂಗು ಏರುತ್ತಿದ್ದಂತೆಯೇ ರಾಜಕಾರಾಣಿಗಳ ನಡುವಿನ ಆರೋಪ ಪ್ರತ್ಯಾರೋಪಗಳು ಗರಿಗೆದರಿವೆ. ಟ್ವಿಟ್ಟರ್‌ ಅದಕ್ಕೊಂದು ವೇದಿಕೆಯಾಗಿ ಬಳಕೆಯಾಗುತ್ತಿದ್ದು ಪರಸ್ಪರ ಕೆಸೆರೆರಚಾಟಕ್ಕೆ ಸಾಕ್ಷಿಯಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಡಿ.ವಿ ಸದಾನಂದಗೌಡರ ನಡುವೆ ಇಂದು ಆರಂಭವಾದ ಟ್ವೀಟ್‌ ಸಮರಕ್ಕೆ ಸಚಿವ ಬಿ.ಶ್ರೀರಾಮುಲು ಸಾಥ್‌ ನೀಡಿದ್ದಾರೆ. ಹಾಗಾದರೆ ಯಾರು ಏನು ಹೇಳಿದರೂ ಬನ್ನಿ ನೋಡೋಣ.

ಇದನ್ನೂ ಓದಿ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ: ಶಿವಸೇನೆ ಶಾಸಕರ ಒಕ್ಕೊರಲ ಒತ್ತಾಯ

ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ, ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಭರವಸೆ ನೀಡಿದ ಹಾಗಿದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ? ಎಂದು ಟ್ವೀಟ್‌ ಮಾಡುವ ಮೂಲಕ ಸಿದ್ದರಾಮಯ್ಯ ಕಣಕ್ಕೆ ಆಹ್ವಾನ ನೀಡಿದ್ದಾರೆ.

ನನ್ನ ಮಾನಸಿಕ ಸ್ಥಿತಿ ಬಗ್ಗೆ ಬಡಬಡಿಸುತ್ತಿರುವ ಡಿ.ವಿ ಸದಾನಂದಗೌಡರ ಬಗ್ಗೆ ಅನುಕಂಪ ಇದೆ. ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಗೌಡರು ಈಗ ಪಕ್ಷದಲ್ಲಿ ‘ಗೊಬ್ಬರ’ವಾಗಿ ಹೋಗಿದ್ದಾರೆ. ಈ ಹತಾಶೆ ಅವರಿಂದ ಇಂತಹ ಹೇಳಿಕೆಗಳನ್ನು ಹೊರಡಿಸುತ್ತಿದೆ ಎಂದು ಸಹ ಡಿವಿಎಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು?

ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು ಕುವೆಂಪು ನಾನು ಗೊಬ್ಬರ ಹೌದು ಸ್ವಪಕ್ಷೀಯರ ರಕ್ತ ಹೀರಿದ PFI ನ ಸಮರ್ಥಕ ನೀವಲ್ಲವೇ? ಎಂದು ಡಿ.ವಿ ಸದಾನಂದಗೌಡರು ತಿರುಗೇಟು ನೀಡಿದ್ದಾರೆ.

ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು? ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು – ಕುವೆಂಪು ಎಂಬ ಪದ್ಯವನ್ನೇ ಅವರು ಓದಿಬಿಟ್ಟಿದ್ದಾರೆ.

ನಾವು ತಿನ್ನುವ ಅನ್ನ ಗೊಬ್ಬರದಿಂದಲೇ.. ಗೊಬ್ಬರವನ್ನು ಹೀಯಾಳಿಸುವ ಮೂಲಕ ರೈತರನ್ನು ಕೇವಲವಾಗಿ ಕಂಡಿದ್ದೀರಿ. ಪ್ರಚಾರಕ್ಕಾಗಿ ದಿನಕ್ಕೊಂದು ಹೇಳಿಕೆ ನೀಡುವುದು ಸಮತೋಲನವಿಲ್ಲದ ತಮ್ಮ ಮನಸ್ಥಿತಿಯನ್ನು ತೋರಿಸುತ್ತದೆ ಎಂದೂ ಡಿವಿಎಸ್‌ ದೂರಿದ್ದಾರೆ.

ಏಕಾಂಗಿಯಾಗಿ ಹೋಗಿರುವ ಡಿ.ವಿ ಸದಾನಂದಗೌಡರವರನ್ನು ಬಿಜೆಪಿಯಲ್ಲಿ ಯಾರೂ ಗಂಭೀರವಾಗಿ ಸ್ವೀಕರಿಸುತ್ತಿಲ್ಲ. ಇದಕ್ಕಾಗಿ ಅವರು ತಮ್ಮ ಜೋಕುಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆ ನೀಡುತ್ತಾ ಇರುತ್ತಾರೆ ಎಂದು ಸಿದ್ದರಾಮಯ್ಯ ಪ್ರತಿ ಉತ್ತರ ನೀಡಿದ್ದಾರೆ.

ಮಾನ್ಯ ಸಿದ್ದರಾಮಯ್ಯನವರೇ, ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳುವುದರಲ್ಲಿ, ನಂಬಿಸಿ ಕತ್ತು ಕೊಯ್ಯುವುದರಲ್ಲಿ, ತಾನು ಬೆಳೆಯಲು ಇನ್ನೊಬ್ಬನನ್ನು ನಾಶ ಮಾಡುವುದರಲ್ಲಿ ನಿಮ್ಮಂತೆ ನಾನು ಬುದ್ಧಿವಂತನಲ್ಲ. ಇನ್ನೊಬ್ಬರಿಗೆ ಅನ್ಯಾಯ ಮಾಡುವುದೇ ಬುದ್ಧಿವಂತಿಕೆ ಎನ್ನುವ ನಿಮಗೆ ನಾನು ಪೆದ್ದನಂತೆ ಕಾಣುವುದು ಸಹಜ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್‌ ಮಾಡಿದ್ದಾರೆ.

ಮುಂದುವರಿದು ಸಿದ್ದರಾಮಯ್ಯನವರೇ, ಮೋದಿ ಮತ್ತು ಅಮಿತ್‌ ಶಾ ಹೆಸರು ಎಳೆತಂದು ದೊಡ್ಡವರಾಗುವ ಯೋಚನೆ ಬೇಡ. ಹಸೀ ಸುಳ್ಳು ಬಿಟ್ಟು ಸತ್ಯ ಹೇಳಿ. ಆಗದಿದ್ದರೆ ಸತ್ಯಕ್ಕೆ ಸಮೀಪವಾದರೂ ಮಾತನಾಡಿ. ಆಗ ಯಾರೂ ನಿಮ್ಮ ಮೇಲೆ ಮುಗಿಬೀಳುವುದಿಲ್ಲ. ಮುಗಿಬೀಳುತ್ತಾರೆ ಎಂಬ ಭಯವನ್ನು ನೀವು ಬಿಡಿ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...