Homeಕರ್ನಾಟಕಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ - ಸದಾನಂದಗೌಡ - ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ – ಸದಾನಂದಗೌಡ – ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

- Advertisement -
- Advertisement -

ಉಪಚುನಾವಣೆಯ ರಂಗು ಏರುತ್ತಿದ್ದಂತೆಯೇ ರಾಜಕಾರಾಣಿಗಳ ನಡುವಿನ ಆರೋಪ ಪ್ರತ್ಯಾರೋಪಗಳು ಗರಿಗೆದರಿವೆ. ಟ್ವಿಟ್ಟರ್‌ ಅದಕ್ಕೊಂದು ವೇದಿಕೆಯಾಗಿ ಬಳಕೆಯಾಗುತ್ತಿದ್ದು ಪರಸ್ಪರ ಕೆಸೆರೆರಚಾಟಕ್ಕೆ ಸಾಕ್ಷಿಯಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಡಿ.ವಿ ಸದಾನಂದಗೌಡರ ನಡುವೆ ಇಂದು ಆರಂಭವಾದ ಟ್ವೀಟ್‌ ಸಮರಕ್ಕೆ ಸಚಿವ ಬಿ.ಶ್ರೀರಾಮುಲು ಸಾಥ್‌ ನೀಡಿದ್ದಾರೆ. ಹಾಗಾದರೆ ಯಾರು ಏನು ಹೇಳಿದರೂ ಬನ್ನಿ ನೋಡೋಣ.

ಇದನ್ನೂ ಓದಿ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ: ಶಿವಸೇನೆ ಶಾಸಕರ ಒಕ್ಕೊರಲ ಒತ್ತಾಯ

ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ, ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಭರವಸೆ ನೀಡಿದ ಹಾಗಿದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ? ಎಂದು ಟ್ವೀಟ್‌ ಮಾಡುವ ಮೂಲಕ ಸಿದ್ದರಾಮಯ್ಯ ಕಣಕ್ಕೆ ಆಹ್ವಾನ ನೀಡಿದ್ದಾರೆ.

ನನ್ನ ಮಾನಸಿಕ ಸ್ಥಿತಿ ಬಗ್ಗೆ ಬಡಬಡಿಸುತ್ತಿರುವ ಡಿ.ವಿ ಸದಾನಂದಗೌಡರ ಬಗ್ಗೆ ಅನುಕಂಪ ಇದೆ. ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಗೌಡರು ಈಗ ಪಕ್ಷದಲ್ಲಿ ‘ಗೊಬ್ಬರ’ವಾಗಿ ಹೋಗಿದ್ದಾರೆ. ಈ ಹತಾಶೆ ಅವರಿಂದ ಇಂತಹ ಹೇಳಿಕೆಗಳನ್ನು ಹೊರಡಿಸುತ್ತಿದೆ ಎಂದು ಸಹ ಡಿವಿಎಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು?

ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು ಕುವೆಂಪು ನಾನು ಗೊಬ್ಬರ ಹೌದು ಸ್ವಪಕ್ಷೀಯರ ರಕ್ತ ಹೀರಿದ PFI ನ ಸಮರ್ಥಕ ನೀವಲ್ಲವೇ? ಎಂದು ಡಿ.ವಿ ಸದಾನಂದಗೌಡರು ತಿರುಗೇಟು ನೀಡಿದ್ದಾರೆ.

ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು? ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು – ಕುವೆಂಪು ಎಂಬ ಪದ್ಯವನ್ನೇ ಅವರು ಓದಿಬಿಟ್ಟಿದ್ದಾರೆ.

ನಾವು ತಿನ್ನುವ ಅನ್ನ ಗೊಬ್ಬರದಿಂದಲೇ.. ಗೊಬ್ಬರವನ್ನು ಹೀಯಾಳಿಸುವ ಮೂಲಕ ರೈತರನ್ನು ಕೇವಲವಾಗಿ ಕಂಡಿದ್ದೀರಿ. ಪ್ರಚಾರಕ್ಕಾಗಿ ದಿನಕ್ಕೊಂದು ಹೇಳಿಕೆ ನೀಡುವುದು ಸಮತೋಲನವಿಲ್ಲದ ತಮ್ಮ ಮನಸ್ಥಿತಿಯನ್ನು ತೋರಿಸುತ್ತದೆ ಎಂದೂ ಡಿವಿಎಸ್‌ ದೂರಿದ್ದಾರೆ.

ಏಕಾಂಗಿಯಾಗಿ ಹೋಗಿರುವ ಡಿ.ವಿ ಸದಾನಂದಗೌಡರವರನ್ನು ಬಿಜೆಪಿಯಲ್ಲಿ ಯಾರೂ ಗಂಭೀರವಾಗಿ ಸ್ವೀಕರಿಸುತ್ತಿಲ್ಲ. ಇದಕ್ಕಾಗಿ ಅವರು ತಮ್ಮ ಜೋಕುಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆ ನೀಡುತ್ತಾ ಇರುತ್ತಾರೆ ಎಂದು ಸಿದ್ದರಾಮಯ್ಯ ಪ್ರತಿ ಉತ್ತರ ನೀಡಿದ್ದಾರೆ.

ಮಾನ್ಯ ಸಿದ್ದರಾಮಯ್ಯನವರೇ, ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳುವುದರಲ್ಲಿ, ನಂಬಿಸಿ ಕತ್ತು ಕೊಯ್ಯುವುದರಲ್ಲಿ, ತಾನು ಬೆಳೆಯಲು ಇನ್ನೊಬ್ಬನನ್ನು ನಾಶ ಮಾಡುವುದರಲ್ಲಿ ನಿಮ್ಮಂತೆ ನಾನು ಬುದ್ಧಿವಂತನಲ್ಲ. ಇನ್ನೊಬ್ಬರಿಗೆ ಅನ್ಯಾಯ ಮಾಡುವುದೇ ಬುದ್ಧಿವಂತಿಕೆ ಎನ್ನುವ ನಿಮಗೆ ನಾನು ಪೆದ್ದನಂತೆ ಕಾಣುವುದು ಸಹಜ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್‌ ಮಾಡಿದ್ದಾರೆ.

ಮುಂದುವರಿದು ಸಿದ್ದರಾಮಯ್ಯನವರೇ, ಮೋದಿ ಮತ್ತು ಅಮಿತ್‌ ಶಾ ಹೆಸರು ಎಳೆತಂದು ದೊಡ್ಡವರಾಗುವ ಯೋಚನೆ ಬೇಡ. ಹಸೀ ಸುಳ್ಳು ಬಿಟ್ಟು ಸತ್ಯ ಹೇಳಿ. ಆಗದಿದ್ದರೆ ಸತ್ಯಕ್ಕೆ ಸಮೀಪವಾದರೂ ಮಾತನಾಡಿ. ಆಗ ಯಾರೂ ನಿಮ್ಮ ಮೇಲೆ ಮುಗಿಬೀಳುವುದಿಲ್ಲ. ಮುಗಿಬೀಳುತ್ತಾರೆ ಎಂಬ ಭಯವನ್ನು ನೀವು ಬಿಡಿ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...