Homeಕರ್ನಾಟಕಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ - ಸದಾನಂದಗೌಡ - ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ – ಸದಾನಂದಗೌಡ – ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

- Advertisement -
- Advertisement -

ಉಪಚುನಾವಣೆಯ ರಂಗು ಏರುತ್ತಿದ್ದಂತೆಯೇ ರಾಜಕಾರಾಣಿಗಳ ನಡುವಿನ ಆರೋಪ ಪ್ರತ್ಯಾರೋಪಗಳು ಗರಿಗೆದರಿವೆ. ಟ್ವಿಟ್ಟರ್‌ ಅದಕ್ಕೊಂದು ವೇದಿಕೆಯಾಗಿ ಬಳಕೆಯಾಗುತ್ತಿದ್ದು ಪರಸ್ಪರ ಕೆಸೆರೆರಚಾಟಕ್ಕೆ ಸಾಕ್ಷಿಯಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಡಿ.ವಿ ಸದಾನಂದಗೌಡರ ನಡುವೆ ಇಂದು ಆರಂಭವಾದ ಟ್ವೀಟ್‌ ಸಮರಕ್ಕೆ ಸಚಿವ ಬಿ.ಶ್ರೀರಾಮುಲು ಸಾಥ್‌ ನೀಡಿದ್ದಾರೆ. ಹಾಗಾದರೆ ಯಾರು ಏನು ಹೇಳಿದರೂ ಬನ್ನಿ ನೋಡೋಣ.

ಇದನ್ನೂ ಓದಿ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ: ಶಿವಸೇನೆ ಶಾಸಕರ ಒಕ್ಕೊರಲ ಒತ್ತಾಯ

ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ, ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಭರವಸೆ ನೀಡಿದ ಹಾಗಿದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ? ಎಂದು ಟ್ವೀಟ್‌ ಮಾಡುವ ಮೂಲಕ ಸಿದ್ದರಾಮಯ್ಯ ಕಣಕ್ಕೆ ಆಹ್ವಾನ ನೀಡಿದ್ದಾರೆ.

ನನ್ನ ಮಾನಸಿಕ ಸ್ಥಿತಿ ಬಗ್ಗೆ ಬಡಬಡಿಸುತ್ತಿರುವ ಡಿ.ವಿ ಸದಾನಂದಗೌಡರ ಬಗ್ಗೆ ಅನುಕಂಪ ಇದೆ. ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಗೌಡರು ಈಗ ಪಕ್ಷದಲ್ಲಿ ‘ಗೊಬ್ಬರ’ವಾಗಿ ಹೋಗಿದ್ದಾರೆ. ಈ ಹತಾಶೆ ಅವರಿಂದ ಇಂತಹ ಹೇಳಿಕೆಗಳನ್ನು ಹೊರಡಿಸುತ್ತಿದೆ ಎಂದು ಸಹ ಡಿವಿಎಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು?

ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು ಕುವೆಂಪು ನಾನು ಗೊಬ್ಬರ ಹೌದು ಸ್ವಪಕ್ಷೀಯರ ರಕ್ತ ಹೀರಿದ PFI ನ ಸಮರ್ಥಕ ನೀವಲ್ಲವೇ? ಎಂದು ಡಿ.ವಿ ಸದಾನಂದಗೌಡರು ತಿರುಗೇಟು ನೀಡಿದ್ದಾರೆ.

ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು? ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು – ಕುವೆಂಪು ಎಂಬ ಪದ್ಯವನ್ನೇ ಅವರು ಓದಿಬಿಟ್ಟಿದ್ದಾರೆ.

ನಾವು ತಿನ್ನುವ ಅನ್ನ ಗೊಬ್ಬರದಿಂದಲೇ.. ಗೊಬ್ಬರವನ್ನು ಹೀಯಾಳಿಸುವ ಮೂಲಕ ರೈತರನ್ನು ಕೇವಲವಾಗಿ ಕಂಡಿದ್ದೀರಿ. ಪ್ರಚಾರಕ್ಕಾಗಿ ದಿನಕ್ಕೊಂದು ಹೇಳಿಕೆ ನೀಡುವುದು ಸಮತೋಲನವಿಲ್ಲದ ತಮ್ಮ ಮನಸ್ಥಿತಿಯನ್ನು ತೋರಿಸುತ್ತದೆ ಎಂದೂ ಡಿವಿಎಸ್‌ ದೂರಿದ್ದಾರೆ.

ಏಕಾಂಗಿಯಾಗಿ ಹೋಗಿರುವ ಡಿ.ವಿ ಸದಾನಂದಗೌಡರವರನ್ನು ಬಿಜೆಪಿಯಲ್ಲಿ ಯಾರೂ ಗಂಭೀರವಾಗಿ ಸ್ವೀಕರಿಸುತ್ತಿಲ್ಲ. ಇದಕ್ಕಾಗಿ ಅವರು ತಮ್ಮ ಜೋಕುಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆ ನೀಡುತ್ತಾ ಇರುತ್ತಾರೆ ಎಂದು ಸಿದ್ದರಾಮಯ್ಯ ಪ್ರತಿ ಉತ್ತರ ನೀಡಿದ್ದಾರೆ.

ಮಾನ್ಯ ಸಿದ್ದರಾಮಯ್ಯನವರೇ, ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳುವುದರಲ್ಲಿ, ನಂಬಿಸಿ ಕತ್ತು ಕೊಯ್ಯುವುದರಲ್ಲಿ, ತಾನು ಬೆಳೆಯಲು ಇನ್ನೊಬ್ಬನನ್ನು ನಾಶ ಮಾಡುವುದರಲ್ಲಿ ನಿಮ್ಮಂತೆ ನಾನು ಬುದ್ಧಿವಂತನಲ್ಲ. ಇನ್ನೊಬ್ಬರಿಗೆ ಅನ್ಯಾಯ ಮಾಡುವುದೇ ಬುದ್ಧಿವಂತಿಕೆ ಎನ್ನುವ ನಿಮಗೆ ನಾನು ಪೆದ್ದನಂತೆ ಕಾಣುವುದು ಸಹಜ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್‌ ಮಾಡಿದ್ದಾರೆ.

ಮುಂದುವರಿದು ಸಿದ್ದರಾಮಯ್ಯನವರೇ, ಮೋದಿ ಮತ್ತು ಅಮಿತ್‌ ಶಾ ಹೆಸರು ಎಳೆತಂದು ದೊಡ್ಡವರಾಗುವ ಯೋಚನೆ ಬೇಡ. ಹಸೀ ಸುಳ್ಳು ಬಿಟ್ಟು ಸತ್ಯ ಹೇಳಿ. ಆಗದಿದ್ದರೆ ಸತ್ಯಕ್ಕೆ ಸಮೀಪವಾದರೂ ಮಾತನಾಡಿ. ಆಗ ಯಾರೂ ನಿಮ್ಮ ಮೇಲೆ ಮುಗಿಬೀಳುವುದಿಲ್ಲ. ಮುಗಿಬೀಳುತ್ತಾರೆ ಎಂಬ ಭಯವನ್ನು ನೀವು ಬಿಡಿ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...