Homeಕರ್ನಾಟಕಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ - ಸದಾನಂದಗೌಡ - ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ – ಸದಾನಂದಗೌಡ – ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

- Advertisement -
- Advertisement -

ಉಪಚುನಾವಣೆಯ ರಂಗು ಏರುತ್ತಿದ್ದಂತೆಯೇ ರಾಜಕಾರಾಣಿಗಳ ನಡುವಿನ ಆರೋಪ ಪ್ರತ್ಯಾರೋಪಗಳು ಗರಿಗೆದರಿವೆ. ಟ್ವಿಟ್ಟರ್‌ ಅದಕ್ಕೊಂದು ವೇದಿಕೆಯಾಗಿ ಬಳಕೆಯಾಗುತ್ತಿದ್ದು ಪರಸ್ಪರ ಕೆಸೆರೆರಚಾಟಕ್ಕೆ ಸಾಕ್ಷಿಯಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಡಿ.ವಿ ಸದಾನಂದಗೌಡರ ನಡುವೆ ಇಂದು ಆರಂಭವಾದ ಟ್ವೀಟ್‌ ಸಮರಕ್ಕೆ ಸಚಿವ ಬಿ.ಶ್ರೀರಾಮುಲು ಸಾಥ್‌ ನೀಡಿದ್ದಾರೆ. ಹಾಗಾದರೆ ಯಾರು ಏನು ಹೇಳಿದರೂ ಬನ್ನಿ ನೋಡೋಣ.

ಇದನ್ನೂ ಓದಿ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ: ಶಿವಸೇನೆ ಶಾಸಕರ ಒಕ್ಕೊರಲ ಒತ್ತಾಯ

ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ, ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಭರವಸೆ ನೀಡಿದ ಹಾಗಿದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ? ಎಂದು ಟ್ವೀಟ್‌ ಮಾಡುವ ಮೂಲಕ ಸಿದ್ದರಾಮಯ್ಯ ಕಣಕ್ಕೆ ಆಹ್ವಾನ ನೀಡಿದ್ದಾರೆ.

ನನ್ನ ಮಾನಸಿಕ ಸ್ಥಿತಿ ಬಗ್ಗೆ ಬಡಬಡಿಸುತ್ತಿರುವ ಡಿ.ವಿ ಸದಾನಂದಗೌಡರ ಬಗ್ಗೆ ಅನುಕಂಪ ಇದೆ. ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಗೌಡರು ಈಗ ಪಕ್ಷದಲ್ಲಿ ‘ಗೊಬ್ಬರ’ವಾಗಿ ಹೋಗಿದ್ದಾರೆ. ಈ ಹತಾಶೆ ಅವರಿಂದ ಇಂತಹ ಹೇಳಿಕೆಗಳನ್ನು ಹೊರಡಿಸುತ್ತಿದೆ ಎಂದು ಸಹ ಡಿವಿಎಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು?

ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು ಕುವೆಂಪು ನಾನು ಗೊಬ್ಬರ ಹೌದು ಸ್ವಪಕ್ಷೀಯರ ರಕ್ತ ಹೀರಿದ PFI ನ ಸಮರ್ಥಕ ನೀವಲ್ಲವೇ? ಎಂದು ಡಿ.ವಿ ಸದಾನಂದಗೌಡರು ತಿರುಗೇಟು ನೀಡಿದ್ದಾರೆ.

ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು? ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು – ಕುವೆಂಪು ಎಂಬ ಪದ್ಯವನ್ನೇ ಅವರು ಓದಿಬಿಟ್ಟಿದ್ದಾರೆ.

ನಾವು ತಿನ್ನುವ ಅನ್ನ ಗೊಬ್ಬರದಿಂದಲೇ.. ಗೊಬ್ಬರವನ್ನು ಹೀಯಾಳಿಸುವ ಮೂಲಕ ರೈತರನ್ನು ಕೇವಲವಾಗಿ ಕಂಡಿದ್ದೀರಿ. ಪ್ರಚಾರಕ್ಕಾಗಿ ದಿನಕ್ಕೊಂದು ಹೇಳಿಕೆ ನೀಡುವುದು ಸಮತೋಲನವಿಲ್ಲದ ತಮ್ಮ ಮನಸ್ಥಿತಿಯನ್ನು ತೋರಿಸುತ್ತದೆ ಎಂದೂ ಡಿವಿಎಸ್‌ ದೂರಿದ್ದಾರೆ.

ಏಕಾಂಗಿಯಾಗಿ ಹೋಗಿರುವ ಡಿ.ವಿ ಸದಾನಂದಗೌಡರವರನ್ನು ಬಿಜೆಪಿಯಲ್ಲಿ ಯಾರೂ ಗಂಭೀರವಾಗಿ ಸ್ವೀಕರಿಸುತ್ತಿಲ್ಲ. ಇದಕ್ಕಾಗಿ ಅವರು ತಮ್ಮ ಜೋಕುಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆ ನೀಡುತ್ತಾ ಇರುತ್ತಾರೆ ಎಂದು ಸಿದ್ದರಾಮಯ್ಯ ಪ್ರತಿ ಉತ್ತರ ನೀಡಿದ್ದಾರೆ.

ಮಾನ್ಯ ಸಿದ್ದರಾಮಯ್ಯನವರೇ, ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳುವುದರಲ್ಲಿ, ನಂಬಿಸಿ ಕತ್ತು ಕೊಯ್ಯುವುದರಲ್ಲಿ, ತಾನು ಬೆಳೆಯಲು ಇನ್ನೊಬ್ಬನನ್ನು ನಾಶ ಮಾಡುವುದರಲ್ಲಿ ನಿಮ್ಮಂತೆ ನಾನು ಬುದ್ಧಿವಂತನಲ್ಲ. ಇನ್ನೊಬ್ಬರಿಗೆ ಅನ್ಯಾಯ ಮಾಡುವುದೇ ಬುದ್ಧಿವಂತಿಕೆ ಎನ್ನುವ ನಿಮಗೆ ನಾನು ಪೆದ್ದನಂತೆ ಕಾಣುವುದು ಸಹಜ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್‌ ಮಾಡಿದ್ದಾರೆ.

ಮುಂದುವರಿದು ಸಿದ್ದರಾಮಯ್ಯನವರೇ, ಮೋದಿ ಮತ್ತು ಅಮಿತ್‌ ಶಾ ಹೆಸರು ಎಳೆತಂದು ದೊಡ್ಡವರಾಗುವ ಯೋಚನೆ ಬೇಡ. ಹಸೀ ಸುಳ್ಳು ಬಿಟ್ಟು ಸತ್ಯ ಹೇಳಿ. ಆಗದಿದ್ದರೆ ಸತ್ಯಕ್ಕೆ ಸಮೀಪವಾದರೂ ಮಾತನಾಡಿ. ಆಗ ಯಾರೂ ನಿಮ್ಮ ಮೇಲೆ ಮುಗಿಬೀಳುವುದಿಲ್ಲ. ಮುಗಿಬೀಳುತ್ತಾರೆ ಎಂಬ ಭಯವನ್ನು ನೀವು ಬಿಡಿ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...