Homeಕರ್ನಾಟಕಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ - ಸದಾನಂದಗೌಡ - ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ – ಸದಾನಂದಗೌಡ – ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

- Advertisement -
- Advertisement -

ಉಪಚುನಾವಣೆಯ ರಂಗು ಏರುತ್ತಿದ್ದಂತೆಯೇ ರಾಜಕಾರಾಣಿಗಳ ನಡುವಿನ ಆರೋಪ ಪ್ರತ್ಯಾರೋಪಗಳು ಗರಿಗೆದರಿವೆ. ಟ್ವಿಟ್ಟರ್‌ ಅದಕ್ಕೊಂದು ವೇದಿಕೆಯಾಗಿ ಬಳಕೆಯಾಗುತ್ತಿದ್ದು ಪರಸ್ಪರ ಕೆಸೆರೆರಚಾಟಕ್ಕೆ ಸಾಕ್ಷಿಯಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಡಿ.ವಿ ಸದಾನಂದಗೌಡರ ನಡುವೆ ಇಂದು ಆರಂಭವಾದ ಟ್ವೀಟ್‌ ಸಮರಕ್ಕೆ ಸಚಿವ ಬಿ.ಶ್ರೀರಾಮುಲು ಸಾಥ್‌ ನೀಡಿದ್ದಾರೆ. ಹಾಗಾದರೆ ಯಾರು ಏನು ಹೇಳಿದರೂ ಬನ್ನಿ ನೋಡೋಣ.

ಇದನ್ನೂ ಓದಿ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ: ಶಿವಸೇನೆ ಶಾಸಕರ ಒಕ್ಕೊರಲ ಒತ್ತಾಯ

ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ ಮೇಲೆಯೇ ಮುಗಿಬೀಳುತ್ತಿರುವುದು ನೋಡಿದರೆ, ನನ್ನನ್ನು ಅತಿಹೆಚ್ಚು ಟೀಕಿಸಿದವರಿಗೆ ಏನೋ ಬಹುಮಾನ ಕೊಡ್ತೇವೆ ಎಂದು ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಭರವಸೆ ನೀಡಿದ ಹಾಗಿದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ? ಎಂದು ಟ್ವೀಟ್‌ ಮಾಡುವ ಮೂಲಕ ಸಿದ್ದರಾಮಯ್ಯ ಕಣಕ್ಕೆ ಆಹ್ವಾನ ನೀಡಿದ್ದಾರೆ.

ನನ್ನ ಮಾನಸಿಕ ಸ್ಥಿತಿ ಬಗ್ಗೆ ಬಡಬಡಿಸುತ್ತಿರುವ ಡಿ.ವಿ ಸದಾನಂದಗೌಡರ ಬಗ್ಗೆ ಅನುಕಂಪ ಇದೆ. ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೆ, ಕಾನೂನು, ಅಂಕಿ ಅಂಶ ಹೀಗೆ ಎಲ್ಲ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಗೌಡರು ಈಗ ಪಕ್ಷದಲ್ಲಿ ‘ಗೊಬ್ಬರ’ವಾಗಿ ಹೋಗಿದ್ದಾರೆ. ಈ ಹತಾಶೆ ಅವರಿಂದ ಇಂತಹ ಹೇಳಿಕೆಗಳನ್ನು ಹೊರಡಿಸುತ್ತಿದೆ ಎಂದು ಸಹ ಡಿವಿಎಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು?

ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು ಕುವೆಂಪು ನಾನು ಗೊಬ್ಬರ ಹೌದು ಸ್ವಪಕ್ಷೀಯರ ರಕ್ತ ಹೀರಿದ PFI ನ ಸಮರ್ಥಕ ನೀವಲ್ಲವೇ? ಎಂದು ಡಿ.ವಿ ಸದಾನಂದಗೌಡರು ತಿರುಗೇಟು ನೀಡಿದ್ದಾರೆ.

ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು? ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು – ಕುವೆಂಪು ಎಂಬ ಪದ್ಯವನ್ನೇ ಅವರು ಓದಿಬಿಟ್ಟಿದ್ದಾರೆ.

ನಾವು ತಿನ್ನುವ ಅನ್ನ ಗೊಬ್ಬರದಿಂದಲೇ.. ಗೊಬ್ಬರವನ್ನು ಹೀಯಾಳಿಸುವ ಮೂಲಕ ರೈತರನ್ನು ಕೇವಲವಾಗಿ ಕಂಡಿದ್ದೀರಿ. ಪ್ರಚಾರಕ್ಕಾಗಿ ದಿನಕ್ಕೊಂದು ಹೇಳಿಕೆ ನೀಡುವುದು ಸಮತೋಲನವಿಲ್ಲದ ತಮ್ಮ ಮನಸ್ಥಿತಿಯನ್ನು ತೋರಿಸುತ್ತದೆ ಎಂದೂ ಡಿವಿಎಸ್‌ ದೂರಿದ್ದಾರೆ.

ಏಕಾಂಗಿಯಾಗಿ ಹೋಗಿರುವ ಡಿ.ವಿ ಸದಾನಂದಗೌಡರವರನ್ನು ಬಿಜೆಪಿಯಲ್ಲಿ ಯಾರೂ ಗಂಭೀರವಾಗಿ ಸ್ವೀಕರಿಸುತ್ತಿಲ್ಲ. ಇದಕ್ಕಾಗಿ ಅವರು ತಮ್ಮ ಜೋಕುಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆ ನೀಡುತ್ತಾ ಇರುತ್ತಾರೆ ಎಂದು ಸಿದ್ದರಾಮಯ್ಯ ಪ್ರತಿ ಉತ್ತರ ನೀಡಿದ್ದಾರೆ.

ಮಾನ್ಯ ಸಿದ್ದರಾಮಯ್ಯನವರೇ, ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳುವುದರಲ್ಲಿ, ನಂಬಿಸಿ ಕತ್ತು ಕೊಯ್ಯುವುದರಲ್ಲಿ, ತಾನು ಬೆಳೆಯಲು ಇನ್ನೊಬ್ಬನನ್ನು ನಾಶ ಮಾಡುವುದರಲ್ಲಿ ನಿಮ್ಮಂತೆ ನಾನು ಬುದ್ಧಿವಂತನಲ್ಲ. ಇನ್ನೊಬ್ಬರಿಗೆ ಅನ್ಯಾಯ ಮಾಡುವುದೇ ಬುದ್ಧಿವಂತಿಕೆ ಎನ್ನುವ ನಿಮಗೆ ನಾನು ಪೆದ್ದನಂತೆ ಕಾಣುವುದು ಸಹಜ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್‌ ಮಾಡಿದ್ದಾರೆ.

ಮುಂದುವರಿದು ಸಿದ್ದರಾಮಯ್ಯನವರೇ, ಮೋದಿ ಮತ್ತು ಅಮಿತ್‌ ಶಾ ಹೆಸರು ಎಳೆತಂದು ದೊಡ್ಡವರಾಗುವ ಯೋಚನೆ ಬೇಡ. ಹಸೀ ಸುಳ್ಳು ಬಿಟ್ಟು ಸತ್ಯ ಹೇಳಿ. ಆಗದಿದ್ದರೆ ಸತ್ಯಕ್ಕೆ ಸಮೀಪವಾದರೂ ಮಾತನಾಡಿ. ಆಗ ಯಾರೂ ನಿಮ್ಮ ಮೇಲೆ ಮುಗಿಬೀಳುವುದಿಲ್ಲ. ಮುಗಿಬೀಳುತ್ತಾರೆ ಎಂಬ ಭಯವನ್ನು ನೀವು ಬಿಡಿ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...