Homeಮುಖಪುಟಲೋಕಸಭೆಯಲ್ಲಿ ಮಣಿಪುರಕ್ಕೆ ಸಂಬಂಧಿಸಿದ ಎರಡು ಮಸೂದೆಗಳು ಚರ್ಚೆಯಿಲ್ಲದೆ ಅಂಗೀಕಾರ

ಲೋಕಸಭೆಯಲ್ಲಿ ಮಣಿಪುರಕ್ಕೆ ಸಂಬಂಧಿಸಿದ ಎರಡು ಮಸೂದೆಗಳು ಚರ್ಚೆಯಿಲ್ಲದೆ ಅಂಗೀಕಾರ

- Advertisement -
- Advertisement -

ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಮಣಿಪುರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2025, ಮತ್ತು ಮಣಿಪುರ ವಿನಿಯೋಗ (ಸಂಖ್ಯೆ 2) ಮಸೂದೆ, 2025 ಚರ್ಚೆಯಿಲ್ಲದೆ ಧ್ವನಿ ಮತದ ಮೂಲಕ ಅಂಗೀಕಾರಗೊಂಡಿವೆ. ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಕುರಿತು ಪ್ರತಿಪಕ್ಷಗಳ ಪ್ರತಿಭಟನೆಗಳ ನಡುವೆಯೂ ಈ ಎರಡೂ ಮಸೂದೆಗಳನ್ನು ಅಂಗೀಕರಿಸಲಾಯಿತು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜಿಎಸ್‌ಟಿ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು, ಇದು “ಸಾಂವಿಧಾನಿಕ ಅವಶ್ಯಕತೆ” ಎಂದು ಬಣ್ಣಿಸಿದ್ದಾರೆ. ಜಿಎಸ್‌ಟಿ ಕೌನ್ಸಿಲ್ ಈಗಾಗಲೇ ಅನುಮೋದಿಸಿರುವ ನಿರ್ಧಾರಗಳನ್ನು ಜಾರಿಗೆ ತರಲು ಈ ಮಸೂದೆ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಈ ಮಸೂದೆಯು ಮಣಿಪುರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಸುಗ್ರೀವಾಜ್ಞೆ, 2025 ರ ಬದಲಿಗೆ ಬಂದಿದೆ.

ಸಚಿವೆ ಸೀತಾರಾಮನ್ ಅವರು, “ಈ ಮಸೂದೆ ಈಗ ಅಂಗೀಕಾರವಾಗದಿದ್ದರೆ, ರಾಜ್ಯವು ಕೌನ್ಸಿಲ್ ಅನುಮೋದಿಸಿದ ತಿದ್ದುಪಡಿಗಳನ್ನು ಜಾರಿಗೆ ತರಲು ಕಷ್ಟಪಡುತ್ತದೆ. ಇದರಿಂದ ಕೆಲವು ವಸ್ತುಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವಿಲ್ಲದೆ ರಾಜ್ಯದ ಆದಾಯದ ಮೇಲೆ ಪರಿಣಾಮ ಬೀರುತ್ತದೆ,” ಎಂದು ವಿವರಿಸಿದರು.

ಈ ತಿದ್ದುಪಡಿಯು, ಇತರ ಬದಲಾವಣೆಗಳ ಜೊತೆಗೆ, ಮಾನವ ಬಳಕೆಗೆ ಉದ್ದೇಶಿಸಿರುವ ಆಲ್ಕೊಹಾಲ್ ತಯಾರಿಸಲು ಬಳಸುವ ‘ಅಂಡೆನೇಚರ್ಡ್ ಎಕ್ಸ್ಟ್ರಾ ನ್ಯೂಟ್ರಲ್ ಆಲ್ಕೋಹಾಲ್ (ENA) ಅಥವಾ ರೆಕ್ಟಿಫೈಡ್ ಸ್ಪಿರಿಟ್’ ಮೇಲೆ ರಾಜ್ಯ ತೆರಿಗೆ ವಿಧಿಸಲು ಮಣಿಪುರಕ್ಕೆ ಅಧಿಕಾರ ನೀಡುತ್ತದೆ. 2023ರಲ್ಲಿ ಜಿಎಸ್‌ಟಿ ಕೌನ್ಸಿಲ್‌ನ ಶಿಫಾರಸಿನಂತೆ ENA ಅನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಲಾಗಿದೆ.

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವ ಕಾರಣ, ಸಚಿವೆ ಸೀತಾರಾಮನ್ ಅವರು, “ಜಿಎಸ್‌ಟಿ ಕೌನ್ಸಿಲ್‌ನ ನಿರ್ಧಾರದ ನಂತರ ಎಲ್ಲಾ ರಾಜ್ಯಗಳು ತಮ್ಮ ರಾಜ್ಯ ಕಾಯಿದೆಗಳನ್ನು ಬದಲಾಯಿಸಿದ್ದವು. ಆದರೆ ಮಣಿಪುರದಲ್ಲಿ ಗಲಭೆಗಳ ಕಾರಣದಿಂದ ರಾಜ್ಯ ವಿಧಾನಸಭೆಯ ಮೂಲಕ ಇದನ್ನು ಮಾಡಲಾಗಲಿಲ್ಲ. ಆದ್ದರಿಂದ ಸುಗ್ರೀವಾಜ್ಞೆಯನ್ನು ತರಲಾಗಿತ್ತು, ಅದು ಅವಧಿ ಮುಗಿದ ನಂತರ ಮತ್ತೊಂದು ಸುಗ್ರೀವಾಜ್ಞೆಯನ್ನು ತರಲಾಯಿತು. ನಂತರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬಂದಿತು. ಆ ಸುಗ್ರೀವಾಜ್ಞೆಯು ಕಾನೂನಾಗಿ ಪರಿವರ್ತನೆಯಾಗಬೇಕಿದೆ. ಆದ್ದರಿಂದ ನಾವು ರಾಜ್ಯ ಕಾಯಿದೆಯನ್ನು ತಿದ್ದುಪಡಿ ಮಾಡುತ್ತಿದ್ದೇವೆ, ಇದು ಸಂವಿಧಾನದ ಅವಶ್ಯಕತೆ,” ಎಂದು ಸ್ಪಷ್ಟಪಡಿಸಿದರು.

ಲೋಕಸಭೆಯು 2025-26 ರ ಆರ್ಥಿಕ ವರ್ಷಕ್ಕಾಗಿ ರಾಜ್ಯದ ಬಲವರ್ಧಿತ ನಿಧಿಯಿಂದ ಖರ್ಚುಗಳನ್ನು ಅನುಮೋದಿಸುವ ವಿನಿಯೋಗ ಮಸೂದೆಯನ್ನೂ ಸಹ ಅಂಗೀಕರಿಸಿದೆ. ಈ ವೇಳೆ ಸಚಿವೆ ಸೀತಾರಾಮನ್ ಅವರು ಮಣಿಪುರಕ್ಕೆ ಹೆಚ್ಚುವರಿಯಾಗಿ 2,898 ಕೋಟಿ ರೂಪಾಯಿಗಳ ಬಜೆಟ್ ಹಂಚಿಕೆಯನ್ನು ಘೋಷಿಸಿದ್ದಾರೆ. ಇದರಲ್ಲಿ, ಬಂಡವಾಳ ವೆಚ್ಚಕ್ಕಾಗಿ 1,667 ಕೋಟಿ ರೂಪಾಯಿ, ಶಿಬಿರ ನಿವಾಸಿಗಳ ಪುನರ್ವಸತಿಗಾಗಿ 523 ಕೋಟಿ ರೂಪಾಯಿ ಮತ್ತು ಭದ್ರತಾ ವ್ಯವಸ್ಥೆಗಳನ್ನು ಬಲಪಡಿಸಲು 542 ಕೋಟಿ ರೂಪಾಯಿ ಸೇರಿವೆ.

ಈ ಎರಡೂ ಮಸೂದೆಗಳು ಅಂಗೀಕಾರಗೊಂಡ ನಂತರ ಸದನವನ್ನು ದಿನಕ್ಕೆ ಮುಂದೂಡಲಾಯಿತು.

ಆಂಧ್ರಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ಆರೋಪಿಗೆ ಜಗನ್ ಮೋಹನ್ ರೆಡ್ಡಿ ಪಕ್ಷದ ನಾಯಕನ ಜೊತೆ ನಂಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...