Homeನಿಜವೋ ಸುಳ್ಳೋಬಿರಿಯಾನಿಯ ಸುಳ್ಳು ಕಥೆಗಳು

ಬಿರಿಯಾನಿಯ ಸುಳ್ಳು ಕಥೆಗಳು

- Advertisement -
- Advertisement -

ಎರಡು ಬಿರಿಯಾನಿ ಕಥೆಗಳು ಸುದ್ದಿಯಲ್ಲಿವೆ. ಅದರಲ್ಲಿ ಒಂದು ಕಥೆಯು ಮತ್ತೆ ಮತ್ತೆ ಕೇಳಿ ಬರುತ್ತಿದ್ದು, ಎರಡು ದಿನಗಳ ಹಿಂದೆ ಸ್ವತಃ ಬಿಜೆಪಿ ಅಧ್ಯಕ್ಷ ಅಮಿತ್‍ಷಾ ಮತ್ತು ಉ.ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚುನಾವಣಾ ರ್ಯಾಲಿಗಳಲ್ಲಿ ಪ್ರಸ್ತಾಪಿಸಿದ್ದಾರೆ. ಅದರ ಕುರಿತು ‘ದಿ ಕ್ವಿಂಟ್’ ವೆಬ್ ಪತ್ರಿಕೆಯು ವಿವರವಾದ ‘ಫ್ಯಾಕ್ಟ್ ಚೆಕ್’ ಮಾಡಿ ಸತ್ಯ ಸಂಗತಿ ತಿಳಿಸಿದ್ದಾರೆ. ಅದನ್ನು ಕೆಳಗೆ ನೀಡಲಾಗಿದೆ.

ಇನ್ನೊಂದು ಬಿರಿಯಾನಿ ಕಥೆ, ನರೇಂದ್ರ ಮೋದಿಯವರು ಆಹ್ವಾನವೇ ಇಲ್ಲದೇ ನವಾಜ್ ಷರೀಫ್ ಮನೆ ಮದುವೆಗೆ ಹೋಗಿ ಬಿರಿಯಾನಿ ತಿಂದರೆಂಬುದು. ಅದರ ಫ್ಯಾಕ್ಟ್ ಚೆಕ್ ನಾವು ಮಾಡಿದ್ದೇವೆ. ಅದನ್ನು ನಂತರ ತಿಳಿಸುತ್ತೇವೆ.

ಕ್ವಿಂಟ್‍ನ ವೆಬ್‍ಕೂಫ್‍ನಲ್ಲಿ ಬಂದದ್ದು.

ಷಾ ಮತ್ತು ಯೋಗಿ ಹೇಳುತ್ತಿರುವ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸಲಾಯಿತು’ ಎಂಬುದು ಒಂದು ಸುಳ್ಳಿನ ಮೇಲೆ ಆಧರಿಸಿದ ಸುಳ್ಳು

ಮಾರ್ಚ್ 26ರಂದು ಉ.ಪ್ರದೇಶದ ಮೊರಾದಾಬಾದ್‍ನಲ್ಲಿ ಬಹಿರಂಗಸಭೆಯನ್ನುದ್ದೇಶಿಸಿ ಮಾತಾಡಿದ ಬಿಜೆಪಿಯ ಅಧ್ಯಕ್ಷ ಕಾಂಗ್ರೆಸ್ & ಇತರ ವಿರೋಧ ಪಕ್ಷಗಳ ಮೇಲೆ ವಾಗ್ದಾಳಿ ಮಾಡುತ್ತಾ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುವ ಕಾಲ ಹೋಯಿತು, ಈಗೇನಿದ್ದರೂ ಭಯೋತ್ಪಾದಕರ ಮೇಲೆ ದಾಳಿ ನಡೆಸುವ ಮೋದಿಯ ಕಾಲ’ ಎಂದು ಗುಡುಗಿದರು.

ಇದರ ಮೂಲ ಎಲ್ಲಿದೆ?

ವಾಸ್ತವದಲ್ಲಿ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುವ’ ಕಥೆ ಶುರುವಾಗುವುದು ಆಗಸ್ಟ್ 2009ರಲ್ಲಿ. 26/11 ಮುಂಬೈ ದಾಳಿಯ ಪ್ರಮುಖ ಆರೋಪಿ ಅಜ್ಮಲ್ ಕಸಬ್‍ನ ವಿಚಾರಣೆ ನಡೆಯುತ್ತಿದ್ದಾಗ, ಪಿಟಿಐ ನ್ಯೂಸ್ ಏಜೆನ್ಸಿಯಿಂದ ಒಂದು ವರದಿ ಬಂದಿತು. ಆ ವರದಿಯನ್ನು ಇಂಡಿಯಾ ಟುಡೇ ಸೇರಿದಂತೆ ಹಲವರು ತಮ್ಮಲ್ಲೂ ಹಾಕಿಕೊಂಡರು. ಅದರಲ್ಲಿ ಕಸಬ್ ತನಗೆ ಮಟನ್ ಬಿರಿಯಾನಿ, ಬಾಸ್ಮತಿ ಅನ್ನ ಬೇಕೆಂದು ಕೇಳಿದನೆಂತಲೂ, ಅದನ್ನು ಪೂರೈಸಲಾಯಿತೆಂತಲೂ ಹೇಳಲಾಗಿತ್ತು. ಈ ಮಾತನ್ನು ಹೇಳಿದವರು, ಆ ಕೇಸಿನ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಂ. ಆ ವಿಚಾರಣೆಯ ನಂತರ ಆತ ತಪ್ಪಿತಸ್ಥೆನೆಂದು ಸಾಬೀತಾಯಿತು. ಮತ್ತು ಕೋರ್ಟ್ ಆದೇಶದಂತೆ ಗಲ್ಲಿಗೇರಿಸಲಾಯಿತು.

ಅಲ್ಲಿಂದ ಶುರುವಾಯಿತು ಬಿರಿಯಾನಿ ಕಥೆ

ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಬಿರಿಯಾನಿಯ ಕಥೆಯನ್ನು ಹಲವು ಸಾರಿ ಹೇಳಿದ್ದಾರೆ. ಮಾರ್ಚ್ 26ರಂದು ಗೋರಖ್‍ಪುರದಲ್ಲಿ ಇನ್ನು ಹೇಳಿದ್ದಾರೆ, ಸಹ್ರಾನ್‍ಪುರದಲ್ಲಿ ಮಾರ್ಚ್ 24ರಂದು ನಡೆದ ರ್ಯಾಲಿಯಲ್ಲೂ ಇದೇ ಮಾತನ್ನು ಹೇಳಿದ್ದಾರೆ. ‘ಕಾಂಗ್ರೆಸ್ ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುತ್ತಿತ್ತು, ಮೋದಿ ಸರ್ಕಾರ ಬುಲೆಟ್, ಬಾಂಬುಗಳನ್ನು ತಿನ್ನಿಸಿದೆ’.

ನವೆಂಬರ್ 2018ರಲ್ಲೂ ರಾಜಸ್ತಾನದ ಮಕ್ರಾನಾದಲ್ಲಿ ನಡೆದ ಸಭೆಯಲ್ಲೂ ಇದೇ ಮಾತನ್ನು ಹೇಳಿದ್ದಾರೆ. ಆಗಸ್ಟ್ 2012ರಲ್ಲಿ ಬಿಜೆಪಿ ನಾಯಕ ಮುಕ್ತಾರ್ ನಕ್ವಿ ಸಹಾ ಇದೇ ಮಾತನ್ನು ಹೇಳಿ, ‘ಬಿರಿಯಾನಿ ತಿನ್ನಿಸಿದ್ದು ಸಾಕು, ಬೇಗನೇ ಗಲ್ಲಿಗೇರಿಸಬೇಕು’ ಎಂದಿದ್ದರು.

ವಾಸ್ತವವೇನು?

ಮಾರ್ಚ್ 2015ರಲ್ಲಿ ಉಜ್ವಲ್ ನಿಕಮ್ ಅವರು ವರದಿಗಾರರಿಗೆ (ಟೈಮ್ಸ್ ಆಫ್ ಇಂಡಿಯಾದಲ್ಲಿ ವಿವರವಾಗಿ ಪ್ರಕಟಗೊಂಡಿದೆ) ಹೇಳಿದ ಮಾತು ಏನಿತ್ತು ನೋಡೋಣ. ‘ಕಸಬ್‍ನ ಪರವಾಗಿ ಒಂದು ಭಾವನಾತ್ಮಕ ಅಲೆ ಏಳುತ್ತಿದೆಯೆಂದು ನನಗೆ ಅನ್ನಿಸಿತು. ರಕ್ಷಾಬಂಧನದ ದಿನ ಆತನ ಕಣ್ಣುಗಳಲ್ಲಿ ನೀರಿತ್ತು ಎಂದೆಲ್ಲಾ ಪತ್ರಕರ್ತರು ಬರೆಯುತ್ತಿದ್ದರು. ಆಗ ನಾನು ಆತ ಬಿರಿಯಾನಿ ಕೇಳಿದನೆಂದೂ, ಅದನ್ನು ಒದಗಿಸಲಾಗಿದೆಯೆಂದೂ ಒಂದು ಸುಳ್ಳನ್ನು ಹರಿಯಬಿಟ್ಟೆ. ಅವತ್ತು ಅದರ ಅಗತ್ಯವಿತ್ತೆಂದು ನನಗನ್ನಿಸಿತು’

ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ‘ಅವರಿಗೆ ಬಿರಿಯಾನಿಯೇಕೆ ಉಣ್ಣಿಸಬೇಕು?’ ಎಂಬ ಟೈಟಲ್ ಜೊತೆಗೆ ಬಂದ ವರದಿಯು ಸಾರ್ವಜನಿಕ ವಲಯದಲ್ಲಿ ಸಿಟ್ಟೆಬ್ಬಿಸುತ್ತು. ಉಜ್ವಲ್ ನಿಕಂರ ಈ ಹೇಳಿಕೆಯ ಕುರಿತು ಮಹಾರಾಷ್ಟ್ರ ಸರ್ಕಾರವು ಸ್ಪಷ್ಟೀಕರಣ ಕೇಳಿತ್ತೆಂದು ಹೇಳಲಾಗುತ್ತಿದೆ. ಇದೊಂದು ಸುಳ್ಳು ಕಥೆಯಾಗಿತ್ತು.

ಇನ್ನು ಎರಡನೇ ಸುಳ್ಳು ಬಿರಿಯಾನಿ ಕಥೆ.

ಪ್ರಧಾನಿ ನರೇಂದ್ರ ಮೋದಿಯವರು ಇದ್ದಕ್ಕಿದ್ದಂತೆ ನವಾಜ್ ಷರೀಫ್‍ರ ಹುಟ್ಟು ಹಬ್ಬದ ದಿನ ಲಾಹೋರಿನ ಅವರ ಮನೆಗೆ ಭೇಟಿ ಕೊಟ್ಟಾಗ ಬಿರಿಯಾನಿ ತಿಂದುಬಂದರೆಂಬುದು. ಇದೂ ಸುಳ್ಳು. ನರೇಂದ್ರ ಮೋದಿಯವರು ಸಸ್ಯಾಹಾರಿಯಾಗಿದ್ದು, ಅವರು ಬಿರಿಯಾನಿ ತಿಂದಿಲ್ಲ. ಅಂದು ನವಾಜ್ ಷರೀಫ್‍ರ ಮನೆಯಲ್ಲಿ ಮೋದಿಯವರಿಗೆ ಅವರ ಇಷ್ಟದ ಸಾಗ್, ದಾಲ್ ಅನ್ನು ಬಡಿಸಲಾಗಿತ್ತು. ಷರೀಫ್‍ರ ಮನೆಗೆ ಅಂದು ಮೋದಿಯವರ ಜೊತೆಗೆ ಬಂದಿದ್ದ 11 ಜನರಿಗೆ ಅಲ್ಲಿ ಈ ತಿನಿಸನ್ನು ಶುದ್ಧ ತುಪ್ಪದಿಂದ ಮಾಡಿ ಬಡಿಸಲಾಯಿತೆಂದು ಅವರ ಮನೆ ಜಾತಿ-ಉಮ್ರ್‍ನ ಮೂಲಗಳು ಹೇಳಿದ್ದನ್ನು ಪಿಟಿಐ ವರದಿ ಮಾಡಿತ್ತು.

https://food.ndtv.com/food-drinks/pm-modis-favourite-dish-served-at-pakistani-pm-nawaz-sharifs-home-1259189http://

ಮೋದಿಯವರು ನವಾಜ್ ಷರೀಫ್‍ರ ಮನೆಗೆ ಹೋಗಿದ್ದು ನಿಜ, ಅಲ್ಲಿ ಅವರಿಗಿಷ್ಟವಾದ ತಿಂಡಿಯನ್ನು ಮಾಡುವಷ್ಟು ಪೂರ್ವನಿರ್ಧಾರಿತವಾಗಿ ಆ ಭೇಟಿ ಇದ್ದಿತ್ತು. ಆದರೆ ಬಿರಿಯಾನಿ ತಿನ್ನಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...