Homeನಿಜವೋ ಸುಳ್ಳೋಬಿರಿಯಾನಿಯ ಸುಳ್ಳು ಕಥೆಗಳು

ಬಿರಿಯಾನಿಯ ಸುಳ್ಳು ಕಥೆಗಳು

- Advertisement -
- Advertisement -

ಎರಡು ಬಿರಿಯಾನಿ ಕಥೆಗಳು ಸುದ್ದಿಯಲ್ಲಿವೆ. ಅದರಲ್ಲಿ ಒಂದು ಕಥೆಯು ಮತ್ತೆ ಮತ್ತೆ ಕೇಳಿ ಬರುತ್ತಿದ್ದು, ಎರಡು ದಿನಗಳ ಹಿಂದೆ ಸ್ವತಃ ಬಿಜೆಪಿ ಅಧ್ಯಕ್ಷ ಅಮಿತ್‍ಷಾ ಮತ್ತು ಉ.ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚುನಾವಣಾ ರ್ಯಾಲಿಗಳಲ್ಲಿ ಪ್ರಸ್ತಾಪಿಸಿದ್ದಾರೆ. ಅದರ ಕುರಿತು ‘ದಿ ಕ್ವಿಂಟ್’ ವೆಬ್ ಪತ್ರಿಕೆಯು ವಿವರವಾದ ‘ಫ್ಯಾಕ್ಟ್ ಚೆಕ್’ ಮಾಡಿ ಸತ್ಯ ಸಂಗತಿ ತಿಳಿಸಿದ್ದಾರೆ. ಅದನ್ನು ಕೆಳಗೆ ನೀಡಲಾಗಿದೆ.

ಇನ್ನೊಂದು ಬಿರಿಯಾನಿ ಕಥೆ, ನರೇಂದ್ರ ಮೋದಿಯವರು ಆಹ್ವಾನವೇ ಇಲ್ಲದೇ ನವಾಜ್ ಷರೀಫ್ ಮನೆ ಮದುವೆಗೆ ಹೋಗಿ ಬಿರಿಯಾನಿ ತಿಂದರೆಂಬುದು. ಅದರ ಫ್ಯಾಕ್ಟ್ ಚೆಕ್ ನಾವು ಮಾಡಿದ್ದೇವೆ. ಅದನ್ನು ನಂತರ ತಿಳಿಸುತ್ತೇವೆ.

ಕ್ವಿಂಟ್‍ನ ವೆಬ್‍ಕೂಫ್‍ನಲ್ಲಿ ಬಂದದ್ದು.

ಷಾ ಮತ್ತು ಯೋಗಿ ಹೇಳುತ್ತಿರುವ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸಲಾಯಿತು’ ಎಂಬುದು ಒಂದು ಸುಳ್ಳಿನ ಮೇಲೆ ಆಧರಿಸಿದ ಸುಳ್ಳು

ಮಾರ್ಚ್ 26ರಂದು ಉ.ಪ್ರದೇಶದ ಮೊರಾದಾಬಾದ್‍ನಲ್ಲಿ ಬಹಿರಂಗಸಭೆಯನ್ನುದ್ದೇಶಿಸಿ ಮಾತಾಡಿದ ಬಿಜೆಪಿಯ ಅಧ್ಯಕ್ಷ ಕಾಂಗ್ರೆಸ್ & ಇತರ ವಿರೋಧ ಪಕ್ಷಗಳ ಮೇಲೆ ವಾಗ್ದಾಳಿ ಮಾಡುತ್ತಾ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುವ ಕಾಲ ಹೋಯಿತು, ಈಗೇನಿದ್ದರೂ ಭಯೋತ್ಪಾದಕರ ಮೇಲೆ ದಾಳಿ ನಡೆಸುವ ಮೋದಿಯ ಕಾಲ’ ಎಂದು ಗುಡುಗಿದರು.

ಇದರ ಮೂಲ ಎಲ್ಲಿದೆ?

ವಾಸ್ತವದಲ್ಲಿ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುವ’ ಕಥೆ ಶುರುವಾಗುವುದು ಆಗಸ್ಟ್ 2009ರಲ್ಲಿ. 26/11 ಮುಂಬೈ ದಾಳಿಯ ಪ್ರಮುಖ ಆರೋಪಿ ಅಜ್ಮಲ್ ಕಸಬ್‍ನ ವಿಚಾರಣೆ ನಡೆಯುತ್ತಿದ್ದಾಗ, ಪಿಟಿಐ ನ್ಯೂಸ್ ಏಜೆನ್ಸಿಯಿಂದ ಒಂದು ವರದಿ ಬಂದಿತು. ಆ ವರದಿಯನ್ನು ಇಂಡಿಯಾ ಟುಡೇ ಸೇರಿದಂತೆ ಹಲವರು ತಮ್ಮಲ್ಲೂ ಹಾಕಿಕೊಂಡರು. ಅದರಲ್ಲಿ ಕಸಬ್ ತನಗೆ ಮಟನ್ ಬಿರಿಯಾನಿ, ಬಾಸ್ಮತಿ ಅನ್ನ ಬೇಕೆಂದು ಕೇಳಿದನೆಂತಲೂ, ಅದನ್ನು ಪೂರೈಸಲಾಯಿತೆಂತಲೂ ಹೇಳಲಾಗಿತ್ತು. ಈ ಮಾತನ್ನು ಹೇಳಿದವರು, ಆ ಕೇಸಿನ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಂ. ಆ ವಿಚಾರಣೆಯ ನಂತರ ಆತ ತಪ್ಪಿತಸ್ಥೆನೆಂದು ಸಾಬೀತಾಯಿತು. ಮತ್ತು ಕೋರ್ಟ್ ಆದೇಶದಂತೆ ಗಲ್ಲಿಗೇರಿಸಲಾಯಿತು.

ಅಲ್ಲಿಂದ ಶುರುವಾಯಿತು ಬಿರಿಯಾನಿ ಕಥೆ

ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಬಿರಿಯಾನಿಯ ಕಥೆಯನ್ನು ಹಲವು ಸಾರಿ ಹೇಳಿದ್ದಾರೆ. ಮಾರ್ಚ್ 26ರಂದು ಗೋರಖ್‍ಪುರದಲ್ಲಿ ಇನ್ನು ಹೇಳಿದ್ದಾರೆ, ಸಹ್ರಾನ್‍ಪುರದಲ್ಲಿ ಮಾರ್ಚ್ 24ರಂದು ನಡೆದ ರ್ಯಾಲಿಯಲ್ಲೂ ಇದೇ ಮಾತನ್ನು ಹೇಳಿದ್ದಾರೆ. ‘ಕಾಂಗ್ರೆಸ್ ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುತ್ತಿತ್ತು, ಮೋದಿ ಸರ್ಕಾರ ಬುಲೆಟ್, ಬಾಂಬುಗಳನ್ನು ತಿನ್ನಿಸಿದೆ’.

ನವೆಂಬರ್ 2018ರಲ್ಲೂ ರಾಜಸ್ತಾನದ ಮಕ್ರಾನಾದಲ್ಲಿ ನಡೆದ ಸಭೆಯಲ್ಲೂ ಇದೇ ಮಾತನ್ನು ಹೇಳಿದ್ದಾರೆ. ಆಗಸ್ಟ್ 2012ರಲ್ಲಿ ಬಿಜೆಪಿ ನಾಯಕ ಮುಕ್ತಾರ್ ನಕ್ವಿ ಸಹಾ ಇದೇ ಮಾತನ್ನು ಹೇಳಿ, ‘ಬಿರಿಯಾನಿ ತಿನ್ನಿಸಿದ್ದು ಸಾಕು, ಬೇಗನೇ ಗಲ್ಲಿಗೇರಿಸಬೇಕು’ ಎಂದಿದ್ದರು.

ವಾಸ್ತವವೇನು?

ಮಾರ್ಚ್ 2015ರಲ್ಲಿ ಉಜ್ವಲ್ ನಿಕಮ್ ಅವರು ವರದಿಗಾರರಿಗೆ (ಟೈಮ್ಸ್ ಆಫ್ ಇಂಡಿಯಾದಲ್ಲಿ ವಿವರವಾಗಿ ಪ್ರಕಟಗೊಂಡಿದೆ) ಹೇಳಿದ ಮಾತು ಏನಿತ್ತು ನೋಡೋಣ. ‘ಕಸಬ್‍ನ ಪರವಾಗಿ ಒಂದು ಭಾವನಾತ್ಮಕ ಅಲೆ ಏಳುತ್ತಿದೆಯೆಂದು ನನಗೆ ಅನ್ನಿಸಿತು. ರಕ್ಷಾಬಂಧನದ ದಿನ ಆತನ ಕಣ್ಣುಗಳಲ್ಲಿ ನೀರಿತ್ತು ಎಂದೆಲ್ಲಾ ಪತ್ರಕರ್ತರು ಬರೆಯುತ್ತಿದ್ದರು. ಆಗ ನಾನು ಆತ ಬಿರಿಯಾನಿ ಕೇಳಿದನೆಂದೂ, ಅದನ್ನು ಒದಗಿಸಲಾಗಿದೆಯೆಂದೂ ಒಂದು ಸುಳ್ಳನ್ನು ಹರಿಯಬಿಟ್ಟೆ. ಅವತ್ತು ಅದರ ಅಗತ್ಯವಿತ್ತೆಂದು ನನಗನ್ನಿಸಿತು’

ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ‘ಅವರಿಗೆ ಬಿರಿಯಾನಿಯೇಕೆ ಉಣ್ಣಿಸಬೇಕು?’ ಎಂಬ ಟೈಟಲ್ ಜೊತೆಗೆ ಬಂದ ವರದಿಯು ಸಾರ್ವಜನಿಕ ವಲಯದಲ್ಲಿ ಸಿಟ್ಟೆಬ್ಬಿಸುತ್ತು. ಉಜ್ವಲ್ ನಿಕಂರ ಈ ಹೇಳಿಕೆಯ ಕುರಿತು ಮಹಾರಾಷ್ಟ್ರ ಸರ್ಕಾರವು ಸ್ಪಷ್ಟೀಕರಣ ಕೇಳಿತ್ತೆಂದು ಹೇಳಲಾಗುತ್ತಿದೆ. ಇದೊಂದು ಸುಳ್ಳು ಕಥೆಯಾಗಿತ್ತು.

ಇನ್ನು ಎರಡನೇ ಸುಳ್ಳು ಬಿರಿಯಾನಿ ಕಥೆ.

ಪ್ರಧಾನಿ ನರೇಂದ್ರ ಮೋದಿಯವರು ಇದ್ದಕ್ಕಿದ್ದಂತೆ ನವಾಜ್ ಷರೀಫ್‍ರ ಹುಟ್ಟು ಹಬ್ಬದ ದಿನ ಲಾಹೋರಿನ ಅವರ ಮನೆಗೆ ಭೇಟಿ ಕೊಟ್ಟಾಗ ಬಿರಿಯಾನಿ ತಿಂದುಬಂದರೆಂಬುದು. ಇದೂ ಸುಳ್ಳು. ನರೇಂದ್ರ ಮೋದಿಯವರು ಸಸ್ಯಾಹಾರಿಯಾಗಿದ್ದು, ಅವರು ಬಿರಿಯಾನಿ ತಿಂದಿಲ್ಲ. ಅಂದು ನವಾಜ್ ಷರೀಫ್‍ರ ಮನೆಯಲ್ಲಿ ಮೋದಿಯವರಿಗೆ ಅವರ ಇಷ್ಟದ ಸಾಗ್, ದಾಲ್ ಅನ್ನು ಬಡಿಸಲಾಗಿತ್ತು. ಷರೀಫ್‍ರ ಮನೆಗೆ ಅಂದು ಮೋದಿಯವರ ಜೊತೆಗೆ ಬಂದಿದ್ದ 11 ಜನರಿಗೆ ಅಲ್ಲಿ ಈ ತಿನಿಸನ್ನು ಶುದ್ಧ ತುಪ್ಪದಿಂದ ಮಾಡಿ ಬಡಿಸಲಾಯಿತೆಂದು ಅವರ ಮನೆ ಜಾತಿ-ಉಮ್ರ್‍ನ ಮೂಲಗಳು ಹೇಳಿದ್ದನ್ನು ಪಿಟಿಐ ವರದಿ ಮಾಡಿತ್ತು.

https://food.ndtv.com/food-drinks/pm-modis-favourite-dish-served-at-pakistani-pm-nawaz-sharifs-home-1259189http://

ಮೋದಿಯವರು ನವಾಜ್ ಷರೀಫ್‍ರ ಮನೆಗೆ ಹೋಗಿದ್ದು ನಿಜ, ಅಲ್ಲಿ ಅವರಿಗಿಷ್ಟವಾದ ತಿಂಡಿಯನ್ನು ಮಾಡುವಷ್ಟು ಪೂರ್ವನಿರ್ಧಾರಿತವಾಗಿ ಆ ಭೇಟಿ ಇದ್ದಿತ್ತು. ಆದರೆ ಬಿರಿಯಾನಿ ತಿನ್ನಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...