Homeನಿಜವೋ ಸುಳ್ಳೋಬಿರಿಯಾನಿಯ ಸುಳ್ಳು ಕಥೆಗಳು

ಬಿರಿಯಾನಿಯ ಸುಳ್ಳು ಕಥೆಗಳು

- Advertisement -
- Advertisement -

ಎರಡು ಬಿರಿಯಾನಿ ಕಥೆಗಳು ಸುದ್ದಿಯಲ್ಲಿವೆ. ಅದರಲ್ಲಿ ಒಂದು ಕಥೆಯು ಮತ್ತೆ ಮತ್ತೆ ಕೇಳಿ ಬರುತ್ತಿದ್ದು, ಎರಡು ದಿನಗಳ ಹಿಂದೆ ಸ್ವತಃ ಬಿಜೆಪಿ ಅಧ್ಯಕ್ಷ ಅಮಿತ್‍ಷಾ ಮತ್ತು ಉ.ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚುನಾವಣಾ ರ್ಯಾಲಿಗಳಲ್ಲಿ ಪ್ರಸ್ತಾಪಿಸಿದ್ದಾರೆ. ಅದರ ಕುರಿತು ‘ದಿ ಕ್ವಿಂಟ್’ ವೆಬ್ ಪತ್ರಿಕೆಯು ವಿವರವಾದ ‘ಫ್ಯಾಕ್ಟ್ ಚೆಕ್’ ಮಾಡಿ ಸತ್ಯ ಸಂಗತಿ ತಿಳಿಸಿದ್ದಾರೆ. ಅದನ್ನು ಕೆಳಗೆ ನೀಡಲಾಗಿದೆ.

ಇನ್ನೊಂದು ಬಿರಿಯಾನಿ ಕಥೆ, ನರೇಂದ್ರ ಮೋದಿಯವರು ಆಹ್ವಾನವೇ ಇಲ್ಲದೇ ನವಾಜ್ ಷರೀಫ್ ಮನೆ ಮದುವೆಗೆ ಹೋಗಿ ಬಿರಿಯಾನಿ ತಿಂದರೆಂಬುದು. ಅದರ ಫ್ಯಾಕ್ಟ್ ಚೆಕ್ ನಾವು ಮಾಡಿದ್ದೇವೆ. ಅದನ್ನು ನಂತರ ತಿಳಿಸುತ್ತೇವೆ.

ಕ್ವಿಂಟ್‍ನ ವೆಬ್‍ಕೂಫ್‍ನಲ್ಲಿ ಬಂದದ್ದು.

ಷಾ ಮತ್ತು ಯೋಗಿ ಹೇಳುತ್ತಿರುವ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸಲಾಯಿತು’ ಎಂಬುದು ಒಂದು ಸುಳ್ಳಿನ ಮೇಲೆ ಆಧರಿಸಿದ ಸುಳ್ಳು

ಮಾರ್ಚ್ 26ರಂದು ಉ.ಪ್ರದೇಶದ ಮೊರಾದಾಬಾದ್‍ನಲ್ಲಿ ಬಹಿರಂಗಸಭೆಯನ್ನುದ್ದೇಶಿಸಿ ಮಾತಾಡಿದ ಬಿಜೆಪಿಯ ಅಧ್ಯಕ್ಷ ಕಾಂಗ್ರೆಸ್ & ಇತರ ವಿರೋಧ ಪಕ್ಷಗಳ ಮೇಲೆ ವಾಗ್ದಾಳಿ ಮಾಡುತ್ತಾ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುವ ಕಾಲ ಹೋಯಿತು, ಈಗೇನಿದ್ದರೂ ಭಯೋತ್ಪಾದಕರ ಮೇಲೆ ದಾಳಿ ನಡೆಸುವ ಮೋದಿಯ ಕಾಲ’ ಎಂದು ಗುಡುಗಿದರು.

ಇದರ ಮೂಲ ಎಲ್ಲಿದೆ?

ವಾಸ್ತವದಲ್ಲಿ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುವ’ ಕಥೆ ಶುರುವಾಗುವುದು ಆಗಸ್ಟ್ 2009ರಲ್ಲಿ. 26/11 ಮುಂಬೈ ದಾಳಿಯ ಪ್ರಮುಖ ಆರೋಪಿ ಅಜ್ಮಲ್ ಕಸಬ್‍ನ ವಿಚಾರಣೆ ನಡೆಯುತ್ತಿದ್ದಾಗ, ಪಿಟಿಐ ನ್ಯೂಸ್ ಏಜೆನ್ಸಿಯಿಂದ ಒಂದು ವರದಿ ಬಂದಿತು. ಆ ವರದಿಯನ್ನು ಇಂಡಿಯಾ ಟುಡೇ ಸೇರಿದಂತೆ ಹಲವರು ತಮ್ಮಲ್ಲೂ ಹಾಕಿಕೊಂಡರು. ಅದರಲ್ಲಿ ಕಸಬ್ ತನಗೆ ಮಟನ್ ಬಿರಿಯಾನಿ, ಬಾಸ್ಮತಿ ಅನ್ನ ಬೇಕೆಂದು ಕೇಳಿದನೆಂತಲೂ, ಅದನ್ನು ಪೂರೈಸಲಾಯಿತೆಂತಲೂ ಹೇಳಲಾಗಿತ್ತು. ಈ ಮಾತನ್ನು ಹೇಳಿದವರು, ಆ ಕೇಸಿನ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಂ. ಆ ವಿಚಾರಣೆಯ ನಂತರ ಆತ ತಪ್ಪಿತಸ್ಥೆನೆಂದು ಸಾಬೀತಾಯಿತು. ಮತ್ತು ಕೋರ್ಟ್ ಆದೇಶದಂತೆ ಗಲ್ಲಿಗೇರಿಸಲಾಯಿತು.

ಅಲ್ಲಿಂದ ಶುರುವಾಯಿತು ಬಿರಿಯಾನಿ ಕಥೆ

ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಬಿರಿಯಾನಿಯ ಕಥೆಯನ್ನು ಹಲವು ಸಾರಿ ಹೇಳಿದ್ದಾರೆ. ಮಾರ್ಚ್ 26ರಂದು ಗೋರಖ್‍ಪುರದಲ್ಲಿ ಇನ್ನು ಹೇಳಿದ್ದಾರೆ, ಸಹ್ರಾನ್‍ಪುರದಲ್ಲಿ ಮಾರ್ಚ್ 24ರಂದು ನಡೆದ ರ್ಯಾಲಿಯಲ್ಲೂ ಇದೇ ಮಾತನ್ನು ಹೇಳಿದ್ದಾರೆ. ‘ಕಾಂಗ್ರೆಸ್ ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುತ್ತಿತ್ತು, ಮೋದಿ ಸರ್ಕಾರ ಬುಲೆಟ್, ಬಾಂಬುಗಳನ್ನು ತಿನ್ನಿಸಿದೆ’.

ನವೆಂಬರ್ 2018ರಲ್ಲೂ ರಾಜಸ್ತಾನದ ಮಕ್ರಾನಾದಲ್ಲಿ ನಡೆದ ಸಭೆಯಲ್ಲೂ ಇದೇ ಮಾತನ್ನು ಹೇಳಿದ್ದಾರೆ. ಆಗಸ್ಟ್ 2012ರಲ್ಲಿ ಬಿಜೆಪಿ ನಾಯಕ ಮುಕ್ತಾರ್ ನಕ್ವಿ ಸಹಾ ಇದೇ ಮಾತನ್ನು ಹೇಳಿ, ‘ಬಿರಿಯಾನಿ ತಿನ್ನಿಸಿದ್ದು ಸಾಕು, ಬೇಗನೇ ಗಲ್ಲಿಗೇರಿಸಬೇಕು’ ಎಂದಿದ್ದರು.

ವಾಸ್ತವವೇನು?

ಮಾರ್ಚ್ 2015ರಲ್ಲಿ ಉಜ್ವಲ್ ನಿಕಮ್ ಅವರು ವರದಿಗಾರರಿಗೆ (ಟೈಮ್ಸ್ ಆಫ್ ಇಂಡಿಯಾದಲ್ಲಿ ವಿವರವಾಗಿ ಪ್ರಕಟಗೊಂಡಿದೆ) ಹೇಳಿದ ಮಾತು ಏನಿತ್ತು ನೋಡೋಣ. ‘ಕಸಬ್‍ನ ಪರವಾಗಿ ಒಂದು ಭಾವನಾತ್ಮಕ ಅಲೆ ಏಳುತ್ತಿದೆಯೆಂದು ನನಗೆ ಅನ್ನಿಸಿತು. ರಕ್ಷಾಬಂಧನದ ದಿನ ಆತನ ಕಣ್ಣುಗಳಲ್ಲಿ ನೀರಿತ್ತು ಎಂದೆಲ್ಲಾ ಪತ್ರಕರ್ತರು ಬರೆಯುತ್ತಿದ್ದರು. ಆಗ ನಾನು ಆತ ಬಿರಿಯಾನಿ ಕೇಳಿದನೆಂದೂ, ಅದನ್ನು ಒದಗಿಸಲಾಗಿದೆಯೆಂದೂ ಒಂದು ಸುಳ್ಳನ್ನು ಹರಿಯಬಿಟ್ಟೆ. ಅವತ್ತು ಅದರ ಅಗತ್ಯವಿತ್ತೆಂದು ನನಗನ್ನಿಸಿತು’

ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ‘ಅವರಿಗೆ ಬಿರಿಯಾನಿಯೇಕೆ ಉಣ್ಣಿಸಬೇಕು?’ ಎಂಬ ಟೈಟಲ್ ಜೊತೆಗೆ ಬಂದ ವರದಿಯು ಸಾರ್ವಜನಿಕ ವಲಯದಲ್ಲಿ ಸಿಟ್ಟೆಬ್ಬಿಸುತ್ತು. ಉಜ್ವಲ್ ನಿಕಂರ ಈ ಹೇಳಿಕೆಯ ಕುರಿತು ಮಹಾರಾಷ್ಟ್ರ ಸರ್ಕಾರವು ಸ್ಪಷ್ಟೀಕರಣ ಕೇಳಿತ್ತೆಂದು ಹೇಳಲಾಗುತ್ತಿದೆ. ಇದೊಂದು ಸುಳ್ಳು ಕಥೆಯಾಗಿತ್ತು.

ಇನ್ನು ಎರಡನೇ ಸುಳ್ಳು ಬಿರಿಯಾನಿ ಕಥೆ.

ಪ್ರಧಾನಿ ನರೇಂದ್ರ ಮೋದಿಯವರು ಇದ್ದಕ್ಕಿದ್ದಂತೆ ನವಾಜ್ ಷರೀಫ್‍ರ ಹುಟ್ಟು ಹಬ್ಬದ ದಿನ ಲಾಹೋರಿನ ಅವರ ಮನೆಗೆ ಭೇಟಿ ಕೊಟ್ಟಾಗ ಬಿರಿಯಾನಿ ತಿಂದುಬಂದರೆಂಬುದು. ಇದೂ ಸುಳ್ಳು. ನರೇಂದ್ರ ಮೋದಿಯವರು ಸಸ್ಯಾಹಾರಿಯಾಗಿದ್ದು, ಅವರು ಬಿರಿಯಾನಿ ತಿಂದಿಲ್ಲ. ಅಂದು ನವಾಜ್ ಷರೀಫ್‍ರ ಮನೆಯಲ್ಲಿ ಮೋದಿಯವರಿಗೆ ಅವರ ಇಷ್ಟದ ಸಾಗ್, ದಾಲ್ ಅನ್ನು ಬಡಿಸಲಾಗಿತ್ತು. ಷರೀಫ್‍ರ ಮನೆಗೆ ಅಂದು ಮೋದಿಯವರ ಜೊತೆಗೆ ಬಂದಿದ್ದ 11 ಜನರಿಗೆ ಅಲ್ಲಿ ಈ ತಿನಿಸನ್ನು ಶುದ್ಧ ತುಪ್ಪದಿಂದ ಮಾಡಿ ಬಡಿಸಲಾಯಿತೆಂದು ಅವರ ಮನೆ ಜಾತಿ-ಉಮ್ರ್‍ನ ಮೂಲಗಳು ಹೇಳಿದ್ದನ್ನು ಪಿಟಿಐ ವರದಿ ಮಾಡಿತ್ತು.

https://food.ndtv.com/food-drinks/pm-modis-favourite-dish-served-at-pakistani-pm-nawaz-sharifs-home-1259189http://

ಮೋದಿಯವರು ನವಾಜ್ ಷರೀಫ್‍ರ ಮನೆಗೆ ಹೋಗಿದ್ದು ನಿಜ, ಅಲ್ಲಿ ಅವರಿಗಿಷ್ಟವಾದ ತಿಂಡಿಯನ್ನು ಮಾಡುವಷ್ಟು ಪೂರ್ವನಿರ್ಧಾರಿತವಾಗಿ ಆ ಭೇಟಿ ಇದ್ದಿತ್ತು. ಆದರೆ ಬಿರಿಯಾನಿ ತಿನ್ನಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...