Homeನಿಜವೋ ಸುಳ್ಳೋಬಿರಿಯಾನಿಯ ಸುಳ್ಳು ಕಥೆಗಳು

ಬಿರಿಯಾನಿಯ ಸುಳ್ಳು ಕಥೆಗಳು

- Advertisement -
- Advertisement -

ಎರಡು ಬಿರಿಯಾನಿ ಕಥೆಗಳು ಸುದ್ದಿಯಲ್ಲಿವೆ. ಅದರಲ್ಲಿ ಒಂದು ಕಥೆಯು ಮತ್ತೆ ಮತ್ತೆ ಕೇಳಿ ಬರುತ್ತಿದ್ದು, ಎರಡು ದಿನಗಳ ಹಿಂದೆ ಸ್ವತಃ ಬಿಜೆಪಿ ಅಧ್ಯಕ್ಷ ಅಮಿತ್‍ಷಾ ಮತ್ತು ಉ.ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚುನಾವಣಾ ರ್ಯಾಲಿಗಳಲ್ಲಿ ಪ್ರಸ್ತಾಪಿಸಿದ್ದಾರೆ. ಅದರ ಕುರಿತು ‘ದಿ ಕ್ವಿಂಟ್’ ವೆಬ್ ಪತ್ರಿಕೆಯು ವಿವರವಾದ ‘ಫ್ಯಾಕ್ಟ್ ಚೆಕ್’ ಮಾಡಿ ಸತ್ಯ ಸಂಗತಿ ತಿಳಿಸಿದ್ದಾರೆ. ಅದನ್ನು ಕೆಳಗೆ ನೀಡಲಾಗಿದೆ.

ಇನ್ನೊಂದು ಬಿರಿಯಾನಿ ಕಥೆ, ನರೇಂದ್ರ ಮೋದಿಯವರು ಆಹ್ವಾನವೇ ಇಲ್ಲದೇ ನವಾಜ್ ಷರೀಫ್ ಮನೆ ಮದುವೆಗೆ ಹೋಗಿ ಬಿರಿಯಾನಿ ತಿಂದರೆಂಬುದು. ಅದರ ಫ್ಯಾಕ್ಟ್ ಚೆಕ್ ನಾವು ಮಾಡಿದ್ದೇವೆ. ಅದನ್ನು ನಂತರ ತಿಳಿಸುತ್ತೇವೆ.

ಕ್ವಿಂಟ್‍ನ ವೆಬ್‍ಕೂಫ್‍ನಲ್ಲಿ ಬಂದದ್ದು.

ಷಾ ಮತ್ತು ಯೋಗಿ ಹೇಳುತ್ತಿರುವ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸಲಾಯಿತು’ ಎಂಬುದು ಒಂದು ಸುಳ್ಳಿನ ಮೇಲೆ ಆಧರಿಸಿದ ಸುಳ್ಳು

ಮಾರ್ಚ್ 26ರಂದು ಉ.ಪ್ರದೇಶದ ಮೊರಾದಾಬಾದ್‍ನಲ್ಲಿ ಬಹಿರಂಗಸಭೆಯನ್ನುದ್ದೇಶಿಸಿ ಮಾತಾಡಿದ ಬಿಜೆಪಿಯ ಅಧ್ಯಕ್ಷ ಕಾಂಗ್ರೆಸ್ & ಇತರ ವಿರೋಧ ಪಕ್ಷಗಳ ಮೇಲೆ ವಾಗ್ದಾಳಿ ಮಾಡುತ್ತಾ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುವ ಕಾಲ ಹೋಯಿತು, ಈಗೇನಿದ್ದರೂ ಭಯೋತ್ಪಾದಕರ ಮೇಲೆ ದಾಳಿ ನಡೆಸುವ ಮೋದಿಯ ಕಾಲ’ ಎಂದು ಗುಡುಗಿದರು.

ಇದರ ಮೂಲ ಎಲ್ಲಿದೆ?

ವಾಸ್ತವದಲ್ಲಿ ‘ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುವ’ ಕಥೆ ಶುರುವಾಗುವುದು ಆಗಸ್ಟ್ 2009ರಲ್ಲಿ. 26/11 ಮುಂಬೈ ದಾಳಿಯ ಪ್ರಮುಖ ಆರೋಪಿ ಅಜ್ಮಲ್ ಕಸಬ್‍ನ ವಿಚಾರಣೆ ನಡೆಯುತ್ತಿದ್ದಾಗ, ಪಿಟಿಐ ನ್ಯೂಸ್ ಏಜೆನ್ಸಿಯಿಂದ ಒಂದು ವರದಿ ಬಂದಿತು. ಆ ವರದಿಯನ್ನು ಇಂಡಿಯಾ ಟುಡೇ ಸೇರಿದಂತೆ ಹಲವರು ತಮ್ಮಲ್ಲೂ ಹಾಕಿಕೊಂಡರು. ಅದರಲ್ಲಿ ಕಸಬ್ ತನಗೆ ಮಟನ್ ಬಿರಿಯಾನಿ, ಬಾಸ್ಮತಿ ಅನ್ನ ಬೇಕೆಂದು ಕೇಳಿದನೆಂತಲೂ, ಅದನ್ನು ಪೂರೈಸಲಾಯಿತೆಂತಲೂ ಹೇಳಲಾಗಿತ್ತು. ಈ ಮಾತನ್ನು ಹೇಳಿದವರು, ಆ ಕೇಸಿನ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಂ. ಆ ವಿಚಾರಣೆಯ ನಂತರ ಆತ ತಪ್ಪಿತಸ್ಥೆನೆಂದು ಸಾಬೀತಾಯಿತು. ಮತ್ತು ಕೋರ್ಟ್ ಆದೇಶದಂತೆ ಗಲ್ಲಿಗೇರಿಸಲಾಯಿತು.

ಅಲ್ಲಿಂದ ಶುರುವಾಯಿತು ಬಿರಿಯಾನಿ ಕಥೆ

ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಬಿರಿಯಾನಿಯ ಕಥೆಯನ್ನು ಹಲವು ಸಾರಿ ಹೇಳಿದ್ದಾರೆ. ಮಾರ್ಚ್ 26ರಂದು ಗೋರಖ್‍ಪುರದಲ್ಲಿ ಇನ್ನು ಹೇಳಿದ್ದಾರೆ, ಸಹ್ರಾನ್‍ಪುರದಲ್ಲಿ ಮಾರ್ಚ್ 24ರಂದು ನಡೆದ ರ್ಯಾಲಿಯಲ್ಲೂ ಇದೇ ಮಾತನ್ನು ಹೇಳಿದ್ದಾರೆ. ‘ಕಾಂಗ್ರೆಸ್ ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುತ್ತಿತ್ತು, ಮೋದಿ ಸರ್ಕಾರ ಬುಲೆಟ್, ಬಾಂಬುಗಳನ್ನು ತಿನ್ನಿಸಿದೆ’.

ನವೆಂಬರ್ 2018ರಲ್ಲೂ ರಾಜಸ್ತಾನದ ಮಕ್ರಾನಾದಲ್ಲಿ ನಡೆದ ಸಭೆಯಲ್ಲೂ ಇದೇ ಮಾತನ್ನು ಹೇಳಿದ್ದಾರೆ. ಆಗಸ್ಟ್ 2012ರಲ್ಲಿ ಬಿಜೆಪಿ ನಾಯಕ ಮುಕ್ತಾರ್ ನಕ್ವಿ ಸಹಾ ಇದೇ ಮಾತನ್ನು ಹೇಳಿ, ‘ಬಿರಿಯಾನಿ ತಿನ್ನಿಸಿದ್ದು ಸಾಕು, ಬೇಗನೇ ಗಲ್ಲಿಗೇರಿಸಬೇಕು’ ಎಂದಿದ್ದರು.

ವಾಸ್ತವವೇನು?

ಮಾರ್ಚ್ 2015ರಲ್ಲಿ ಉಜ್ವಲ್ ನಿಕಮ್ ಅವರು ವರದಿಗಾರರಿಗೆ (ಟೈಮ್ಸ್ ಆಫ್ ಇಂಡಿಯಾದಲ್ಲಿ ವಿವರವಾಗಿ ಪ್ರಕಟಗೊಂಡಿದೆ) ಹೇಳಿದ ಮಾತು ಏನಿತ್ತು ನೋಡೋಣ. ‘ಕಸಬ್‍ನ ಪರವಾಗಿ ಒಂದು ಭಾವನಾತ್ಮಕ ಅಲೆ ಏಳುತ್ತಿದೆಯೆಂದು ನನಗೆ ಅನ್ನಿಸಿತು. ರಕ್ಷಾಬಂಧನದ ದಿನ ಆತನ ಕಣ್ಣುಗಳಲ್ಲಿ ನೀರಿತ್ತು ಎಂದೆಲ್ಲಾ ಪತ್ರಕರ್ತರು ಬರೆಯುತ್ತಿದ್ದರು. ಆಗ ನಾನು ಆತ ಬಿರಿಯಾನಿ ಕೇಳಿದನೆಂದೂ, ಅದನ್ನು ಒದಗಿಸಲಾಗಿದೆಯೆಂದೂ ಒಂದು ಸುಳ್ಳನ್ನು ಹರಿಯಬಿಟ್ಟೆ. ಅವತ್ತು ಅದರ ಅಗತ್ಯವಿತ್ತೆಂದು ನನಗನ್ನಿಸಿತು’

ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ‘ಅವರಿಗೆ ಬಿರಿಯಾನಿಯೇಕೆ ಉಣ್ಣಿಸಬೇಕು?’ ಎಂಬ ಟೈಟಲ್ ಜೊತೆಗೆ ಬಂದ ವರದಿಯು ಸಾರ್ವಜನಿಕ ವಲಯದಲ್ಲಿ ಸಿಟ್ಟೆಬ್ಬಿಸುತ್ತು. ಉಜ್ವಲ್ ನಿಕಂರ ಈ ಹೇಳಿಕೆಯ ಕುರಿತು ಮಹಾರಾಷ್ಟ್ರ ಸರ್ಕಾರವು ಸ್ಪಷ್ಟೀಕರಣ ಕೇಳಿತ್ತೆಂದು ಹೇಳಲಾಗುತ್ತಿದೆ. ಇದೊಂದು ಸುಳ್ಳು ಕಥೆಯಾಗಿತ್ತು.

ಇನ್ನು ಎರಡನೇ ಸುಳ್ಳು ಬಿರಿಯಾನಿ ಕಥೆ.

ಪ್ರಧಾನಿ ನರೇಂದ್ರ ಮೋದಿಯವರು ಇದ್ದಕ್ಕಿದ್ದಂತೆ ನವಾಜ್ ಷರೀಫ್‍ರ ಹುಟ್ಟು ಹಬ್ಬದ ದಿನ ಲಾಹೋರಿನ ಅವರ ಮನೆಗೆ ಭೇಟಿ ಕೊಟ್ಟಾಗ ಬಿರಿಯಾನಿ ತಿಂದುಬಂದರೆಂಬುದು. ಇದೂ ಸುಳ್ಳು. ನರೇಂದ್ರ ಮೋದಿಯವರು ಸಸ್ಯಾಹಾರಿಯಾಗಿದ್ದು, ಅವರು ಬಿರಿಯಾನಿ ತಿಂದಿಲ್ಲ. ಅಂದು ನವಾಜ್ ಷರೀಫ್‍ರ ಮನೆಯಲ್ಲಿ ಮೋದಿಯವರಿಗೆ ಅವರ ಇಷ್ಟದ ಸಾಗ್, ದಾಲ್ ಅನ್ನು ಬಡಿಸಲಾಗಿತ್ತು. ಷರೀಫ್‍ರ ಮನೆಗೆ ಅಂದು ಮೋದಿಯವರ ಜೊತೆಗೆ ಬಂದಿದ್ದ 11 ಜನರಿಗೆ ಅಲ್ಲಿ ಈ ತಿನಿಸನ್ನು ಶುದ್ಧ ತುಪ್ಪದಿಂದ ಮಾಡಿ ಬಡಿಸಲಾಯಿತೆಂದು ಅವರ ಮನೆ ಜಾತಿ-ಉಮ್ರ್‍ನ ಮೂಲಗಳು ಹೇಳಿದ್ದನ್ನು ಪಿಟಿಐ ವರದಿ ಮಾಡಿತ್ತು.

https://food.ndtv.com/food-drinks/pm-modis-favourite-dish-served-at-pakistani-pm-nawaz-sharifs-home-1259189http://

ಮೋದಿಯವರು ನವಾಜ್ ಷರೀಫ್‍ರ ಮನೆಗೆ ಹೋಗಿದ್ದು ನಿಜ, ಅಲ್ಲಿ ಅವರಿಗಿಷ್ಟವಾದ ತಿಂಡಿಯನ್ನು ಮಾಡುವಷ್ಟು ಪೂರ್ವನಿರ್ಧಾರಿತವಾಗಿ ಆ ಭೇಟಿ ಇದ್ದಿತ್ತು. ಆದರೆ ಬಿರಿಯಾನಿ ತಿನ್ನಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...