Homeಮುಖಪುಟಮತಗಟ್ಟೆಗೆ ನುಗ್ಗಿ ನಕಲಿ ಮತದಾನ, ನೇರ ಪ್ರಸಾರ: ಇಬ್ಬರು ಬಿಜೆಪಿಗರ ಬಂಧನ

ಮತಗಟ್ಟೆಗೆ ನುಗ್ಗಿ ನಕಲಿ ಮತದಾನ, ನೇರ ಪ್ರಸಾರ: ಇಬ್ಬರು ಬಿಜೆಪಿಗರ ಬಂಧನ

- Advertisement -
- Advertisement -

ಗುಜರಾತ್‌ನ ದಾಹೋದ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹಿಸಾಗರ್ ಜಿಲ್ಲೆಯಲ್ಲಿ ಮತಗಟ್ಟೆಗೆ ನುಗ್ಗಿ ನಕಲಿ ಮತದಾನ ಮಾಡಿದಲ್ಲದೆ, ತಮ್ಮ ಕೃತ್ಯವನ್ನು ಸಾಮಾಜಿಕ ಮಾಧ್ಯಮದಲ್ಲಿ ನೇರ ಪ್ರಸಾರ ಮಾಡಿದ ಆರೋಪದ ಮೇಲೆ ಇಬ್ಬರನ್ನು ಬುಧವಾರ ಬಂಧಿಸಲಾಗಿದೆ.

ಬಂಧಿತ ಇಬ್ಬರು ಬಿಜೆಪಿ ಸದಸ್ಯರಾಗಿದ್ದಾರೆ. ನೇರ ಪ್ರಸಾರದ ವಿಡಿಯೋ ವೈರಲ್ ಆಗಿದ ಬಳಿಕ ಕಾಂಗ್ರೆಸ್ ಅಭ್ಯರ್ಥಿ ತಕ್ಷಣ ಈ ವಿಷಯವನ್ನು ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದರು.

ಆರೋಪಿಗಳಲ್ಲಿ ಒಬ್ಬನಾದ ವಿಜಯ್ ಭಭೋರ್‌ ಎಂಬಾತನ ಫೇಸ್‌ಬುಕ್ ಖಾತೆಯಿಂದ ನೇರ ಪ್ರಸಾರ ಮಾಡಲಾಗಿತ್ತು. ವಿಡಿಯೋದಲ್ಲಿ, ಭಭೋರ್ ಮಹಿಸಾಗರ್ ಜಿಲ್ಲೆಯ ಪ್ರಥಮಪುರದ ಮತಗಟ್ಟೆಯೊಂದಕ್ಕೆ ತೆರಳಿ ಇವಿಎಂ ಹಿಡಿದು ಎಳೆದಾಡಿರುವುದು ಮತ್ತು ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿದ್ದನ್ನು ನೋಡಬಹುದು. ಈ ಪ್ರದೇಶದಲ್ಲಿ ನನ್ನದೇ ಕಾರುಬಾರು ಎಂಬಂತೆ ಆರೋಪಿ ಇವಿಎಂ ಹಿಡಿದು ಡ್ಯಾನ್ಸ್‌ ಮಾಡಿದ್ದಾನೆ.

ಇಂಡಿಯನ್ ಎಕ್ಸ್ ಪ್ರೆಸ್ ವರದಿಯ ಪ್ರಕಾರ, ವೈರಲ್ ಆಗಿರುವ 10 ನಿಮಿಷದ ವಿಡಿಯೋದಲ್ಲಿ ಆರೋಪಿ ಭಭೋರ್‌ ಮತಗಟ್ಟೆಗೆ ತೆರಳಿ ” ನಮಗೆ 10 ನಿಮಿಷ ಕೊಡಿ. ಬೆಳಿಗ್ಗೆಯಿಂದ ಮತದಾನ ನಡೆಯುತ್ತಿದೆ. ಇದು ಈ ರೀತಿ ನಡೆಯಬಾರದು. ಬಿಜೆಪಿ ಮಾತ್ರ ನಡೆಸಬೇಕು. ಈ ಮತ ಯಂತ್ರ ನನ್ನ ಅಪ್ಪನಿಗೆ ಸೇರಿದ್ದು” ಎಂದು ಹೇಳಿದ್ದಾನೆ.

ಬಿಜೆಪಿ ಪರ ಮತ ಚಲಾಯಿಸುವಂತೆ ಆರೋಪಿ ಇತತರನ್ನು ಪ್ರೋತ್ಸಾಹಿಸಿದ್ದು ವಿಡಿಯೋದಲ್ಲಿ ಇದೆ ಎಂದು ವರದಿ ಹೇಳಿದೆ. ದಾಹೋದ್ ಕ್ಷೇತ್ರದಿಂದ ಬಿಜೆಪಿ ಮತ್ತೊಮ್ಮೆ ಹಾಲಿ ಸಂಸದ ಜಸ್ವಂತ್‌ಸಿನ್ಹ ಭಭೋರ್ ಅವರನ್ನು ಕಣಕ್ಕಿಳಿಸಿದೆ.
ಬಂಧಿತ ವಿಜಯ್ ಭಭೋರ್‌ ಜಸ್ವಂತಸಿಂಹ ಭಭೋರ್‌ನ ಮಗ ಎಂದು ಪ್ರತಿಪಕ್ಷ ಮುಖಂಡರು ಹೇಳಿದ್ದಾರೆ.

ಜನ ಪ್ರತಿನಿಧಿಗಳ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಹಿಸಾಗರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯದೀಪ್‌ಸಿನ್ಹ್ ಜಡೇಜಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಪ್ರಥಮಪುರ ಮತಗಟ್ಟೆಯಲ್ಲಿ ನಕಲಿ ಮತದಾನ ಮಾಡಿದ ಇಬ್ಬರು ಆರೋಪಿಗಳಾದ ವಿಜಯ್ ಭಭೋರ್ ಮತ್ತು ಮನೋಜ್ ಮಗನ್ ಅವರನ್ನು ಬಂಧಿಸಿದ್ದೇವೆ. ಇಬ್ಬರು ಬಿಜೆಪಿ ಸದಸ್ಯರಾಗಿದ್ದು, ಆರೋಪಿ ವಿಜಯ್ ಭಭೋರ್‌ನ ತಂದೆ ರಮೇಶ್ ಭಾಭೋರ್ ಸಂತ್ರಂಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾಗಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 171 ಮತ್ತು 188ರ ಅಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ” ಜಡೇಜಾ ಹೇಳಿದ್ದಾರೆ.

ಇದನ್ನೂ ಓದಿ : ಅಂಬಾನಿ, ಅದಾನಿಯಿಂದ ಟೆಂಪೋದಲ್ಲಿ ಹಣ ಬಂದಿರುವುದು ನಿಮ್ಮ ಸ್ವಂತ ಅನುಭವನಾ? ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...