Homeಮುಖಪುಟಇಂದು ನೋಯ್ಡಾದಲ್ಲಿ ನೆಲಕ್ಕುರುಳಲಿವೆ 103 ಮೀ. ಎತ್ತರದ ಕಟ್ಟಡಗಳು: ಏನೆಲ್ಲ ಸಿದ್ಧತೆ ನಡೆದಿದೆ?

ಇಂದು ನೋಯ್ಡಾದಲ್ಲಿ ನೆಲಕ್ಕುರುಳಲಿವೆ 103 ಮೀ. ಎತ್ತರದ ಕಟ್ಟಡಗಳು: ಏನೆಲ್ಲ ಸಿದ್ಧತೆ ನಡೆದಿದೆ?

- Advertisement -
- Advertisement -

ಇಂದು ಮಧ್ಯಾಹ್ನ 2.30ಕ್ಕೆ ನೋಯ್ಡಾದಲ್ಲಿ ಬೃಹತ್‌ ಕಟ್ಟಡಗಳನ್ನು ನೆಲಸಮ ಮಾಡಲಾಗುತ್ತಿದೆ. ಸೆಕ್ಟರ್ 93Aನಲ್ಲಿರುವ ಎರಡು ಬೃಹತ್ ಕಟ್ಟಡಗಳು ನಿಯಮಗಳಿಗೆ ವಿರುದ್ಧವಾಗಿ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ನೆಲಸಮ ಮಾಡಲಾಗುತ್ತಿದೆ.

ಈ ಕಟ್ಟಡದ ವಿಶೇಷವೇನು? ನೆಲಸಮಕ್ಕೆ ಏನೆಲ್ಲ ಸಿದ್ಧತೆ ನಡೆದಿದೆ

40 ಮಹಡಿ: ಪ್ರತಿ ಕಟ್ಟಡದಲ್ಲಿ ನಲವತ್ತು ಮಹಡಿಗಳನ್ನು ನಿರ್ಮಿಸಲು ಯೋಜಿಸಲಾಗಿತ್ತು. ನ್ಯಾಯಾಲಯವು ಕಟ್ಟಡ ನಿರ್ಮಾಣವನ್ನು ಸ್ಥಗಿತಗೊಳಿಸಿದ್ದರಿಂದ ಕೆಲವು ಮಹಡಿ ನಿರ್ಮಿಸಲು ಸಾಧ್ಯವಾಗಿಲ್ಲ. ಈ ಟವರ್‌ಗಳಲ್ಲಿ ಈಗ 32 ಮಹಡಿಗಳಿವೆ. 900+ ಫ್ಲಾಟ್‌ಗಳನ್ನು ನಿರ್ಮಿಸಲು ಯೋಜಿಸಲಾಗಿತ್ತು. ಅದರಲ್ಲಿ ಮೂರನೇ ಎರಡರಷ್ಟು ಬುಕ್ ಆಗಿವೆ ಅಥವಾ ಮಾರಾಟ ಮಾಡಲಾಗಿದೆ. ಬಡ್ಡಿ ಸಮೇತ ಮರುಪಾವತಿ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

103 ಮೀಟರ್‌ಗಳು: ಈ ಕಟ್ಟಡಗಳು 103 ಮೀಟರ್‌ ಎತ್ತರವಿವೆ. ಮೂರು ವರ್ಷಗಳ ಹಿಂದೆ ಜೋಹಾನ್ಸ್‌ಬರ್ಗ್‌ನಲ್ಲಿ ಬ್ಯಾಂಕ್ ಕಟ್ಟಡವನ್ನು ಕೆಡವಲಾಗಿತ್ತು. ಅದು 108 ಮೀಟರ್ ಇತ್ತು. ಕೇರಳದಲ್ಲಿ ಕೆಳಗುರುಳಿಸಲಾದ 68 ಮೀಟರ್‌ ಎತ್ತರದ ಕಟ್ಟಡವು ಭಾರತದ ಮಟ್ಟಿಗೆ ನೆಲಸಮವಾದ ಎತ್ತರದ ಕಟ್ಟಡವಾಗಿತ್ತು. 2020ರಲ್ಲಿ ಕೇರಳದಲ್ಲಿ ಕೆಡವಲಾಗಿತ್ತು. ಅದೇ ವರ್ಷ ಅಬುಧಾಬಿಯಲ್ಲಿ 168 ಮೀಟರ್ ಎತ್ತರದ ಕಟ್ಟಡವನ್ನು ನೆಲಸಮಗೊಳಿಸಿದ್ದು ವಿಶ್ವದಾಖಲೆಗೆ ಸೇರಿತ್ತು.

8 ಮೀಟರ್: ಈಗ ನೆಲಸಮಗೊಳಿಸಲಾಗುವ ಎರಡು ಕಟ್ಟಡಗಳ ಪಕ್ಕದಲ್ಲಿ ಕೆಲವು ಅಪಾರ್ಟ್‌ಮೆಂಟ್‌ಗಳು ಸುಮಾರು ಎಂಟು ಮೀಟರ್‌ ಅಂತರದಲ್ಲಿವೆ. 9-12 ಮೀಟರ್‌ಗಳ ಒಳಗೆ ಹಲವಾರು ಅಪಾರ್ಟ್‌ಮೆಂಟ್‌ಗಳಿವೆ. ಧೂಳು ನುಗ್ಗುವುದನ್ನು ಕಡಿಮೆ ಮಾಡಲು ಅಕ್ಕಪಕ್ಕದ ಕಟ್ಟಡಗಳನ್ನು ವಿಶೇಷ ಬಟ್ಟೆಯಿಂದ ಮುಚ್ಚಲಾಗುತ್ತದೆ.

7,000 ಸ್ಟೋಟಕಗಳು: ಪಿಲ್ಲರ್‌ಗಳ ಸುಮಾರು 7,000 ರಂಧ್ರಗಳಲ್ಲಿ ಸ್ಫೋಟಕಗಳನ್ನು ಅಳವಡಿಸಲಾಗಿದೆ. ಈ ರಂಧ್ರಗಳು ತಲಾ ಎರಡು ಮೀಟರ್ ಅಂತರದಲ್ಲಿವೆ. ಸ್ಪೋಟಿಸಿದಾಗ ಗೋಪುರಗಳು ನೇರವಾಗಿ ಕೆಳಗೆ ಬೇಳುವಂತೆ ಯೋಜನೆ ರೂಪಿಸಲಾಗಿದೆ. ಇದನ್ನು ‘ಜಲಪಾತ ತಂತ್ರ’ ಎಂದು ಕರೆಯಲಾಗಿದೆ.

9 ಸೆಕೆಂಡುಗಳು: 9 ಸೆಕೆಂಡ್‌ಗಳಲ್ಲಿ ಕಟ್ಟಡ ನೆಲಕ್ಕುರಲಿದೆ ಎಂದು ಪ್ರಾಜೆಕ್ಟ್ ಎಂಜಿನಿಯರ್ ಹೇಳುತ್ತಾರೆ. ಎಂಜಿನಿಯರ್‌‌, ಬ್ಲಾಸ್ಟರ್‌ನ ಪಕ್ಕದಲ್ಲಿ ಇರುತ್ತಾರೆ. ನೋಯ್ಡಾ ಆಡಳಿತ ವರ್ಗ, ಜೊತೆಗೆ ಆಫ್ರಿಕಾದ ಮೂವರು ತಜ್ಞರು ಮತ್ತು ಇತರ ಕೆಲವು ಸರ್ಕಾರಿ ಅಧಿಕಾರಿಗಳು (ಒಟ್ಟಾರೆಯಾಗಿ 10 ಜನರಿಗಿಂತ ಹೆಚ್ಚಿಲ್ಲ) ಕನಿಷ್ಠ 100 ಮೀಟರ್ ದೂರದಲ್ಲಿ ನಿಲ್ಲುತ್ತಾರೆ. ಅರ್ಧಗಂಟೆ ಕಾಲ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇ ಸಂಚಾರವನ್ನು ಈ ಭಾಗದಲ್ಲಿ ಸ್ಥಗಿತಗೊಳಿಸಲಾಗುತ್ತಿದೆ.

12 ನಿಮಿಷಗಳು:  ಕಟ್ಟಡ ಉರುಳಿಸಿದ ಬಳಿಕ ಧೂಳು ಕಡಿಮೆಯಾಗಲು ಸುಮಾರು 12 ನಿಮಿಷಗಳ ಕಾಲ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಗಾಳಿಯ ಏರಿಳಿತದ ಮೇಲೆ ಧೂಳಿನ ಉದುಗುವಿಕೆ ನಿರ್ಧಾರವಾಗುವ ಸಾಧ್ಯತೆಯೂ ಇದೆ.

ಪ್ರತಿ ಸೆಕೆಂಡಿಗೆ 30 ಮಿಮೀ: ಸ್ಫೋಟದ ನಂತರ ಕಂಪನಗಳು 30 ಮೀಟರ್‌ಗಳವರೆಗೆ ಸಂಭವಿಸಬಹುದು. ಆದರೆ ಕೆಲವೇ ಸೆಕೆಂಡ್‌ ಇರಬಹುದು. ಸರಳವಾಗಿ ಹೇಳುವುದಾದರೆ, ಇದು ರಿಕ್ಟರ್ ಮಾಪಕದಲ್ಲಿ 0.4ರ ಭೂಕಂಪಕ್ಕೆ ಸಮಾನವಾಗಿದೆ.

7,000: ಸುಮಾರು 150 ಸಾಕುಪ್ರಾಣಿಗಳು ಮತ್ತು 2,500 ವಾಹನಗಳೊಂದಿಗೆ ಪಕ್ಕದ ಪ್ರದೇಶಗಳ 7000 ನಿವಾಸಿಗಳು ಡೆಮಾಲಿಷನ್ ದಿನದಂದು ಬೆಳಿಗ್ಗೆ 7 ಗಂಟೆಗೆ ಹೊರಹೋಗಬೇಕು ಎಂದು ಸೂಚನೆ ನೀಡಲಾಗಿದೆ. ಗ್ಯಾಸ್‌ ಮತ್ತು ವಿದ್ಯುತ್ ಪೂರೈಕೆಯನ್ನು ಸಂಜೆ 4 ಗಂಟೆಯವರೆಗೆ ಸ್ಥಗಿತಗೊಳಿಸಲಾಗಿದೆ. ಇಲ್ಲಿನ ನಿವಾಸಿಗಳಿಗೆ 5.30ರ ಬಳಿಕ ಹಿಂತಿರುಗಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿರಿ: ಪ್ಲೇಸ್ಟೋರ್‌ನಿಂದ 2 ಸಾವಿರ ಸಾಲ ನೀಡುವ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದ ಗೂಗಲ್‌!

9 ವರ್ಷಗಳು: ಸೂಪರ್‌ಟೆಕ್ ಎಮರಾಲ್ಡ್ ಕೋರ್ಟ್ ಸೊಸೈಟಿಯ ನಿವಾಸಿಗಳು, ಈ ಕಟ್ಟಡಗಳ ನಿರ್ಮಾಣದ ವಿರುದ್ಧ 2012ರಲ್ಲಿ ನ್ಯಾಯಾಲಯಕ್ಕೆ ಮೊರೆಹೋದರು. ಆಗಸ್ಟ್ 2021ರಲ್ಲಿ ಅಂತಿಮ ತೀರ್ಪು ಬಂದಿತು. ಅಲಹಾಬಾದ್ ಹೈಕೋರ್ಟ್ 2014ರಲ್ಲಿ ಕಟ್ಟಡ ಕೆಡವಲು ಆದೇಶ ನೀಡಿತ್ತು. ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಕಳೆದ ಆಗಸ್ಟ್‌ನಲ್ಲಿ ಕಟ್ಟಡಗಳನ್ನು ಕೆಡವಲು ನ್ಯಾಯಾಲಯ ಮೂರು ತಿಂಗಳ ಕಾಲಾವಕಾಶ ನೀಡಿತ್ತು. ಆದರೆ ತಾಂತ್ರಿಕ ತೊಂದರೆಗಳಿಂದಾಗಿ ಒಂದು ವರ್ಷ ತೆಗೆದುಕೊಂಡಿತು.

100 ಕೋಟಿ ರೂ.: ಇಡೀ ನೆಲಸಮಕ್ಕೆ ನೂರು ಕೋಟಿ ರೂ. ವಿಮೆ ಮಾಡಲಾಗಿದೆ. ಪಕ್ಕದ ಕಟ್ಟಡಗಳಿಗೆ ಹಾನಿಯಾದರೆ ವೆಚ್ಚವನ್ನು ಭರಿಸಬೇಕು, ಒಂದು ವೇಳೆ ವಸ್ತುಗಳು ಪಕ್ಕಕ್ಕೆ ಸಿಡಿದರೆ ನಷ್ಟವನ್ನು ತುಂಬಿಕೊಡಬೇಕು. ನೆಲಸಮ ಯೋಜನೆಗೆ ₹ 20 ಕೋಟಿಗಿಂತ ಹೆಚ್ಚು ವೆಚ್ಚವಾಗಬಹುದು. ಆದರೆ ಕಟ್ಟಡವನ್ನು ಕೆಡವುತ್ತಿರುವುದರಿಂದ ಸುಮಾರು 50 ರೂ. ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...