Homeಮುಖಪುಟಇಂದು ನೋಯ್ಡಾದಲ್ಲಿ ನೆಲಕ್ಕುರುಳಲಿವೆ 103 ಮೀ. ಎತ್ತರದ ಕಟ್ಟಡಗಳು: ಏನೆಲ್ಲ ಸಿದ್ಧತೆ ನಡೆದಿದೆ?

ಇಂದು ನೋಯ್ಡಾದಲ್ಲಿ ನೆಲಕ್ಕುರುಳಲಿವೆ 103 ಮೀ. ಎತ್ತರದ ಕಟ್ಟಡಗಳು: ಏನೆಲ್ಲ ಸಿದ್ಧತೆ ನಡೆದಿದೆ?

- Advertisement -
- Advertisement -

ಇಂದು ಮಧ್ಯಾಹ್ನ 2.30ಕ್ಕೆ ನೋಯ್ಡಾದಲ್ಲಿ ಬೃಹತ್‌ ಕಟ್ಟಡಗಳನ್ನು ನೆಲಸಮ ಮಾಡಲಾಗುತ್ತಿದೆ. ಸೆಕ್ಟರ್ 93Aನಲ್ಲಿರುವ ಎರಡು ಬೃಹತ್ ಕಟ್ಟಡಗಳು ನಿಯಮಗಳಿಗೆ ವಿರುದ್ಧವಾಗಿ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ನೆಲಸಮ ಮಾಡಲಾಗುತ್ತಿದೆ.

ಈ ಕಟ್ಟಡದ ವಿಶೇಷವೇನು? ನೆಲಸಮಕ್ಕೆ ಏನೆಲ್ಲ ಸಿದ್ಧತೆ ನಡೆದಿದೆ

40 ಮಹಡಿ: ಪ್ರತಿ ಕಟ್ಟಡದಲ್ಲಿ ನಲವತ್ತು ಮಹಡಿಗಳನ್ನು ನಿರ್ಮಿಸಲು ಯೋಜಿಸಲಾಗಿತ್ತು. ನ್ಯಾಯಾಲಯವು ಕಟ್ಟಡ ನಿರ್ಮಾಣವನ್ನು ಸ್ಥಗಿತಗೊಳಿಸಿದ್ದರಿಂದ ಕೆಲವು ಮಹಡಿ ನಿರ್ಮಿಸಲು ಸಾಧ್ಯವಾಗಿಲ್ಲ. ಈ ಟವರ್‌ಗಳಲ್ಲಿ ಈಗ 32 ಮಹಡಿಗಳಿವೆ. 900+ ಫ್ಲಾಟ್‌ಗಳನ್ನು ನಿರ್ಮಿಸಲು ಯೋಜಿಸಲಾಗಿತ್ತು. ಅದರಲ್ಲಿ ಮೂರನೇ ಎರಡರಷ್ಟು ಬುಕ್ ಆಗಿವೆ ಅಥವಾ ಮಾರಾಟ ಮಾಡಲಾಗಿದೆ. ಬಡ್ಡಿ ಸಮೇತ ಮರುಪಾವತಿ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

103 ಮೀಟರ್‌ಗಳು: ಈ ಕಟ್ಟಡಗಳು 103 ಮೀಟರ್‌ ಎತ್ತರವಿವೆ. ಮೂರು ವರ್ಷಗಳ ಹಿಂದೆ ಜೋಹಾನ್ಸ್‌ಬರ್ಗ್‌ನಲ್ಲಿ ಬ್ಯಾಂಕ್ ಕಟ್ಟಡವನ್ನು ಕೆಡವಲಾಗಿತ್ತು. ಅದು 108 ಮೀಟರ್ ಇತ್ತು. ಕೇರಳದಲ್ಲಿ ಕೆಳಗುರುಳಿಸಲಾದ 68 ಮೀಟರ್‌ ಎತ್ತರದ ಕಟ್ಟಡವು ಭಾರತದ ಮಟ್ಟಿಗೆ ನೆಲಸಮವಾದ ಎತ್ತರದ ಕಟ್ಟಡವಾಗಿತ್ತು. 2020ರಲ್ಲಿ ಕೇರಳದಲ್ಲಿ ಕೆಡವಲಾಗಿತ್ತು. ಅದೇ ವರ್ಷ ಅಬುಧಾಬಿಯಲ್ಲಿ 168 ಮೀಟರ್ ಎತ್ತರದ ಕಟ್ಟಡವನ್ನು ನೆಲಸಮಗೊಳಿಸಿದ್ದು ವಿಶ್ವದಾಖಲೆಗೆ ಸೇರಿತ್ತು.

8 ಮೀಟರ್: ಈಗ ನೆಲಸಮಗೊಳಿಸಲಾಗುವ ಎರಡು ಕಟ್ಟಡಗಳ ಪಕ್ಕದಲ್ಲಿ ಕೆಲವು ಅಪಾರ್ಟ್‌ಮೆಂಟ್‌ಗಳು ಸುಮಾರು ಎಂಟು ಮೀಟರ್‌ ಅಂತರದಲ್ಲಿವೆ. 9-12 ಮೀಟರ್‌ಗಳ ಒಳಗೆ ಹಲವಾರು ಅಪಾರ್ಟ್‌ಮೆಂಟ್‌ಗಳಿವೆ. ಧೂಳು ನುಗ್ಗುವುದನ್ನು ಕಡಿಮೆ ಮಾಡಲು ಅಕ್ಕಪಕ್ಕದ ಕಟ್ಟಡಗಳನ್ನು ವಿಶೇಷ ಬಟ್ಟೆಯಿಂದ ಮುಚ್ಚಲಾಗುತ್ತದೆ.

7,000 ಸ್ಟೋಟಕಗಳು: ಪಿಲ್ಲರ್‌ಗಳ ಸುಮಾರು 7,000 ರಂಧ್ರಗಳಲ್ಲಿ ಸ್ಫೋಟಕಗಳನ್ನು ಅಳವಡಿಸಲಾಗಿದೆ. ಈ ರಂಧ್ರಗಳು ತಲಾ ಎರಡು ಮೀಟರ್ ಅಂತರದಲ್ಲಿವೆ. ಸ್ಪೋಟಿಸಿದಾಗ ಗೋಪುರಗಳು ನೇರವಾಗಿ ಕೆಳಗೆ ಬೇಳುವಂತೆ ಯೋಜನೆ ರೂಪಿಸಲಾಗಿದೆ. ಇದನ್ನು ‘ಜಲಪಾತ ತಂತ್ರ’ ಎಂದು ಕರೆಯಲಾಗಿದೆ.

9 ಸೆಕೆಂಡುಗಳು: 9 ಸೆಕೆಂಡ್‌ಗಳಲ್ಲಿ ಕಟ್ಟಡ ನೆಲಕ್ಕುರಲಿದೆ ಎಂದು ಪ್ರಾಜೆಕ್ಟ್ ಎಂಜಿನಿಯರ್ ಹೇಳುತ್ತಾರೆ. ಎಂಜಿನಿಯರ್‌‌, ಬ್ಲಾಸ್ಟರ್‌ನ ಪಕ್ಕದಲ್ಲಿ ಇರುತ್ತಾರೆ. ನೋಯ್ಡಾ ಆಡಳಿತ ವರ್ಗ, ಜೊತೆಗೆ ಆಫ್ರಿಕಾದ ಮೂವರು ತಜ್ಞರು ಮತ್ತು ಇತರ ಕೆಲವು ಸರ್ಕಾರಿ ಅಧಿಕಾರಿಗಳು (ಒಟ್ಟಾರೆಯಾಗಿ 10 ಜನರಿಗಿಂತ ಹೆಚ್ಚಿಲ್ಲ) ಕನಿಷ್ಠ 100 ಮೀಟರ್ ದೂರದಲ್ಲಿ ನಿಲ್ಲುತ್ತಾರೆ. ಅರ್ಧಗಂಟೆ ಕಾಲ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇ ಸಂಚಾರವನ್ನು ಈ ಭಾಗದಲ್ಲಿ ಸ್ಥಗಿತಗೊಳಿಸಲಾಗುತ್ತಿದೆ.

12 ನಿಮಿಷಗಳು:  ಕಟ್ಟಡ ಉರುಳಿಸಿದ ಬಳಿಕ ಧೂಳು ಕಡಿಮೆಯಾಗಲು ಸುಮಾರು 12 ನಿಮಿಷಗಳ ಕಾಲ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಗಾಳಿಯ ಏರಿಳಿತದ ಮೇಲೆ ಧೂಳಿನ ಉದುಗುವಿಕೆ ನಿರ್ಧಾರವಾಗುವ ಸಾಧ್ಯತೆಯೂ ಇದೆ.

ಪ್ರತಿ ಸೆಕೆಂಡಿಗೆ 30 ಮಿಮೀ: ಸ್ಫೋಟದ ನಂತರ ಕಂಪನಗಳು 30 ಮೀಟರ್‌ಗಳವರೆಗೆ ಸಂಭವಿಸಬಹುದು. ಆದರೆ ಕೆಲವೇ ಸೆಕೆಂಡ್‌ ಇರಬಹುದು. ಸರಳವಾಗಿ ಹೇಳುವುದಾದರೆ, ಇದು ರಿಕ್ಟರ್ ಮಾಪಕದಲ್ಲಿ 0.4ರ ಭೂಕಂಪಕ್ಕೆ ಸಮಾನವಾಗಿದೆ.

7,000: ಸುಮಾರು 150 ಸಾಕುಪ್ರಾಣಿಗಳು ಮತ್ತು 2,500 ವಾಹನಗಳೊಂದಿಗೆ ಪಕ್ಕದ ಪ್ರದೇಶಗಳ 7000 ನಿವಾಸಿಗಳು ಡೆಮಾಲಿಷನ್ ದಿನದಂದು ಬೆಳಿಗ್ಗೆ 7 ಗಂಟೆಗೆ ಹೊರಹೋಗಬೇಕು ಎಂದು ಸೂಚನೆ ನೀಡಲಾಗಿದೆ. ಗ್ಯಾಸ್‌ ಮತ್ತು ವಿದ್ಯುತ್ ಪೂರೈಕೆಯನ್ನು ಸಂಜೆ 4 ಗಂಟೆಯವರೆಗೆ ಸ್ಥಗಿತಗೊಳಿಸಲಾಗಿದೆ. ಇಲ್ಲಿನ ನಿವಾಸಿಗಳಿಗೆ 5.30ರ ಬಳಿಕ ಹಿಂತಿರುಗಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿರಿ: ಪ್ಲೇಸ್ಟೋರ್‌ನಿಂದ 2 ಸಾವಿರ ಸಾಲ ನೀಡುವ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದ ಗೂಗಲ್‌!

9 ವರ್ಷಗಳು: ಸೂಪರ್‌ಟೆಕ್ ಎಮರಾಲ್ಡ್ ಕೋರ್ಟ್ ಸೊಸೈಟಿಯ ನಿವಾಸಿಗಳು, ಈ ಕಟ್ಟಡಗಳ ನಿರ್ಮಾಣದ ವಿರುದ್ಧ 2012ರಲ್ಲಿ ನ್ಯಾಯಾಲಯಕ್ಕೆ ಮೊರೆಹೋದರು. ಆಗಸ್ಟ್ 2021ರಲ್ಲಿ ಅಂತಿಮ ತೀರ್ಪು ಬಂದಿತು. ಅಲಹಾಬಾದ್ ಹೈಕೋರ್ಟ್ 2014ರಲ್ಲಿ ಕಟ್ಟಡ ಕೆಡವಲು ಆದೇಶ ನೀಡಿತ್ತು. ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಕಳೆದ ಆಗಸ್ಟ್‌ನಲ್ಲಿ ಕಟ್ಟಡಗಳನ್ನು ಕೆಡವಲು ನ್ಯಾಯಾಲಯ ಮೂರು ತಿಂಗಳ ಕಾಲಾವಕಾಶ ನೀಡಿತ್ತು. ಆದರೆ ತಾಂತ್ರಿಕ ತೊಂದರೆಗಳಿಂದಾಗಿ ಒಂದು ವರ್ಷ ತೆಗೆದುಕೊಂಡಿತು.

100 ಕೋಟಿ ರೂ.: ಇಡೀ ನೆಲಸಮಕ್ಕೆ ನೂರು ಕೋಟಿ ರೂ. ವಿಮೆ ಮಾಡಲಾಗಿದೆ. ಪಕ್ಕದ ಕಟ್ಟಡಗಳಿಗೆ ಹಾನಿಯಾದರೆ ವೆಚ್ಚವನ್ನು ಭರಿಸಬೇಕು, ಒಂದು ವೇಳೆ ವಸ್ತುಗಳು ಪಕ್ಕಕ್ಕೆ ಸಿಡಿದರೆ ನಷ್ಟವನ್ನು ತುಂಬಿಕೊಡಬೇಕು. ನೆಲಸಮ ಯೋಜನೆಗೆ ₹ 20 ಕೋಟಿಗಿಂತ ಹೆಚ್ಚು ವೆಚ್ಚವಾಗಬಹುದು. ಆದರೆ ಕಟ್ಟಡವನ್ನು ಕೆಡವುತ್ತಿರುವುದರಿಂದ ಸುಮಾರು 50 ರೂ. ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...