Homeಮುಖಪುಟಇಂದು ನೋಯ್ಡಾದಲ್ಲಿ ನೆಲಕ್ಕುರುಳಲಿವೆ 103 ಮೀ. ಎತ್ತರದ ಕಟ್ಟಡಗಳು: ಏನೆಲ್ಲ ಸಿದ್ಧತೆ ನಡೆದಿದೆ?

ಇಂದು ನೋಯ್ಡಾದಲ್ಲಿ ನೆಲಕ್ಕುರುಳಲಿವೆ 103 ಮೀ. ಎತ್ತರದ ಕಟ್ಟಡಗಳು: ಏನೆಲ್ಲ ಸಿದ್ಧತೆ ನಡೆದಿದೆ?

- Advertisement -
- Advertisement -

ಇಂದು ಮಧ್ಯಾಹ್ನ 2.30ಕ್ಕೆ ನೋಯ್ಡಾದಲ್ಲಿ ಬೃಹತ್‌ ಕಟ್ಟಡಗಳನ್ನು ನೆಲಸಮ ಮಾಡಲಾಗುತ್ತಿದೆ. ಸೆಕ್ಟರ್ 93Aನಲ್ಲಿರುವ ಎರಡು ಬೃಹತ್ ಕಟ್ಟಡಗಳು ನಿಯಮಗಳಿಗೆ ವಿರುದ್ಧವಾಗಿ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ನೆಲಸಮ ಮಾಡಲಾಗುತ್ತಿದೆ.

ಈ ಕಟ್ಟಡದ ವಿಶೇಷವೇನು? ನೆಲಸಮಕ್ಕೆ ಏನೆಲ್ಲ ಸಿದ್ಧತೆ ನಡೆದಿದೆ

40 ಮಹಡಿ: ಪ್ರತಿ ಕಟ್ಟಡದಲ್ಲಿ ನಲವತ್ತು ಮಹಡಿಗಳನ್ನು ನಿರ್ಮಿಸಲು ಯೋಜಿಸಲಾಗಿತ್ತು. ನ್ಯಾಯಾಲಯವು ಕಟ್ಟಡ ನಿರ್ಮಾಣವನ್ನು ಸ್ಥಗಿತಗೊಳಿಸಿದ್ದರಿಂದ ಕೆಲವು ಮಹಡಿ ನಿರ್ಮಿಸಲು ಸಾಧ್ಯವಾಗಿಲ್ಲ. ಈ ಟವರ್‌ಗಳಲ್ಲಿ ಈಗ 32 ಮಹಡಿಗಳಿವೆ. 900+ ಫ್ಲಾಟ್‌ಗಳನ್ನು ನಿರ್ಮಿಸಲು ಯೋಜಿಸಲಾಗಿತ್ತು. ಅದರಲ್ಲಿ ಮೂರನೇ ಎರಡರಷ್ಟು ಬುಕ್ ಆಗಿವೆ ಅಥವಾ ಮಾರಾಟ ಮಾಡಲಾಗಿದೆ. ಬಡ್ಡಿ ಸಮೇತ ಮರುಪಾವತಿ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

103 ಮೀಟರ್‌ಗಳು: ಈ ಕಟ್ಟಡಗಳು 103 ಮೀಟರ್‌ ಎತ್ತರವಿವೆ. ಮೂರು ವರ್ಷಗಳ ಹಿಂದೆ ಜೋಹಾನ್ಸ್‌ಬರ್ಗ್‌ನಲ್ಲಿ ಬ್ಯಾಂಕ್ ಕಟ್ಟಡವನ್ನು ಕೆಡವಲಾಗಿತ್ತು. ಅದು 108 ಮೀಟರ್ ಇತ್ತು. ಕೇರಳದಲ್ಲಿ ಕೆಳಗುರುಳಿಸಲಾದ 68 ಮೀಟರ್‌ ಎತ್ತರದ ಕಟ್ಟಡವು ಭಾರತದ ಮಟ್ಟಿಗೆ ನೆಲಸಮವಾದ ಎತ್ತರದ ಕಟ್ಟಡವಾಗಿತ್ತು. 2020ರಲ್ಲಿ ಕೇರಳದಲ್ಲಿ ಕೆಡವಲಾಗಿತ್ತು. ಅದೇ ವರ್ಷ ಅಬುಧಾಬಿಯಲ್ಲಿ 168 ಮೀಟರ್ ಎತ್ತರದ ಕಟ್ಟಡವನ್ನು ನೆಲಸಮಗೊಳಿಸಿದ್ದು ವಿಶ್ವದಾಖಲೆಗೆ ಸೇರಿತ್ತು.

8 ಮೀಟರ್: ಈಗ ನೆಲಸಮಗೊಳಿಸಲಾಗುವ ಎರಡು ಕಟ್ಟಡಗಳ ಪಕ್ಕದಲ್ಲಿ ಕೆಲವು ಅಪಾರ್ಟ್‌ಮೆಂಟ್‌ಗಳು ಸುಮಾರು ಎಂಟು ಮೀಟರ್‌ ಅಂತರದಲ್ಲಿವೆ. 9-12 ಮೀಟರ್‌ಗಳ ಒಳಗೆ ಹಲವಾರು ಅಪಾರ್ಟ್‌ಮೆಂಟ್‌ಗಳಿವೆ. ಧೂಳು ನುಗ್ಗುವುದನ್ನು ಕಡಿಮೆ ಮಾಡಲು ಅಕ್ಕಪಕ್ಕದ ಕಟ್ಟಡಗಳನ್ನು ವಿಶೇಷ ಬಟ್ಟೆಯಿಂದ ಮುಚ್ಚಲಾಗುತ್ತದೆ.

7,000 ಸ್ಟೋಟಕಗಳು: ಪಿಲ್ಲರ್‌ಗಳ ಸುಮಾರು 7,000 ರಂಧ್ರಗಳಲ್ಲಿ ಸ್ಫೋಟಕಗಳನ್ನು ಅಳವಡಿಸಲಾಗಿದೆ. ಈ ರಂಧ್ರಗಳು ತಲಾ ಎರಡು ಮೀಟರ್ ಅಂತರದಲ್ಲಿವೆ. ಸ್ಪೋಟಿಸಿದಾಗ ಗೋಪುರಗಳು ನೇರವಾಗಿ ಕೆಳಗೆ ಬೇಳುವಂತೆ ಯೋಜನೆ ರೂಪಿಸಲಾಗಿದೆ. ಇದನ್ನು ‘ಜಲಪಾತ ತಂತ್ರ’ ಎಂದು ಕರೆಯಲಾಗಿದೆ.

9 ಸೆಕೆಂಡುಗಳು: 9 ಸೆಕೆಂಡ್‌ಗಳಲ್ಲಿ ಕಟ್ಟಡ ನೆಲಕ್ಕುರಲಿದೆ ಎಂದು ಪ್ರಾಜೆಕ್ಟ್ ಎಂಜಿನಿಯರ್ ಹೇಳುತ್ತಾರೆ. ಎಂಜಿನಿಯರ್‌‌, ಬ್ಲಾಸ್ಟರ್‌ನ ಪಕ್ಕದಲ್ಲಿ ಇರುತ್ತಾರೆ. ನೋಯ್ಡಾ ಆಡಳಿತ ವರ್ಗ, ಜೊತೆಗೆ ಆಫ್ರಿಕಾದ ಮೂವರು ತಜ್ಞರು ಮತ್ತು ಇತರ ಕೆಲವು ಸರ್ಕಾರಿ ಅಧಿಕಾರಿಗಳು (ಒಟ್ಟಾರೆಯಾಗಿ 10 ಜನರಿಗಿಂತ ಹೆಚ್ಚಿಲ್ಲ) ಕನಿಷ್ಠ 100 ಮೀಟರ್ ದೂರದಲ್ಲಿ ನಿಲ್ಲುತ್ತಾರೆ. ಅರ್ಧಗಂಟೆ ಕಾಲ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇ ಸಂಚಾರವನ್ನು ಈ ಭಾಗದಲ್ಲಿ ಸ್ಥಗಿತಗೊಳಿಸಲಾಗುತ್ತಿದೆ.

12 ನಿಮಿಷಗಳು:  ಕಟ್ಟಡ ಉರುಳಿಸಿದ ಬಳಿಕ ಧೂಳು ಕಡಿಮೆಯಾಗಲು ಸುಮಾರು 12 ನಿಮಿಷಗಳ ಕಾಲ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಗಾಳಿಯ ಏರಿಳಿತದ ಮೇಲೆ ಧೂಳಿನ ಉದುಗುವಿಕೆ ನಿರ್ಧಾರವಾಗುವ ಸಾಧ್ಯತೆಯೂ ಇದೆ.

ಪ್ರತಿ ಸೆಕೆಂಡಿಗೆ 30 ಮಿಮೀ: ಸ್ಫೋಟದ ನಂತರ ಕಂಪನಗಳು 30 ಮೀಟರ್‌ಗಳವರೆಗೆ ಸಂಭವಿಸಬಹುದು. ಆದರೆ ಕೆಲವೇ ಸೆಕೆಂಡ್‌ ಇರಬಹುದು. ಸರಳವಾಗಿ ಹೇಳುವುದಾದರೆ, ಇದು ರಿಕ್ಟರ್ ಮಾಪಕದಲ್ಲಿ 0.4ರ ಭೂಕಂಪಕ್ಕೆ ಸಮಾನವಾಗಿದೆ.

7,000: ಸುಮಾರು 150 ಸಾಕುಪ್ರಾಣಿಗಳು ಮತ್ತು 2,500 ವಾಹನಗಳೊಂದಿಗೆ ಪಕ್ಕದ ಪ್ರದೇಶಗಳ 7000 ನಿವಾಸಿಗಳು ಡೆಮಾಲಿಷನ್ ದಿನದಂದು ಬೆಳಿಗ್ಗೆ 7 ಗಂಟೆಗೆ ಹೊರಹೋಗಬೇಕು ಎಂದು ಸೂಚನೆ ನೀಡಲಾಗಿದೆ. ಗ್ಯಾಸ್‌ ಮತ್ತು ವಿದ್ಯುತ್ ಪೂರೈಕೆಯನ್ನು ಸಂಜೆ 4 ಗಂಟೆಯವರೆಗೆ ಸ್ಥಗಿತಗೊಳಿಸಲಾಗಿದೆ. ಇಲ್ಲಿನ ನಿವಾಸಿಗಳಿಗೆ 5.30ರ ಬಳಿಕ ಹಿಂತಿರುಗಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿರಿ: ಪ್ಲೇಸ್ಟೋರ್‌ನಿಂದ 2 ಸಾವಿರ ಸಾಲ ನೀಡುವ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದ ಗೂಗಲ್‌!

9 ವರ್ಷಗಳು: ಸೂಪರ್‌ಟೆಕ್ ಎಮರಾಲ್ಡ್ ಕೋರ್ಟ್ ಸೊಸೈಟಿಯ ನಿವಾಸಿಗಳು, ಈ ಕಟ್ಟಡಗಳ ನಿರ್ಮಾಣದ ವಿರುದ್ಧ 2012ರಲ್ಲಿ ನ್ಯಾಯಾಲಯಕ್ಕೆ ಮೊರೆಹೋದರು. ಆಗಸ್ಟ್ 2021ರಲ್ಲಿ ಅಂತಿಮ ತೀರ್ಪು ಬಂದಿತು. ಅಲಹಾಬಾದ್ ಹೈಕೋರ್ಟ್ 2014ರಲ್ಲಿ ಕಟ್ಟಡ ಕೆಡವಲು ಆದೇಶ ನೀಡಿತ್ತು. ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಕಳೆದ ಆಗಸ್ಟ್‌ನಲ್ಲಿ ಕಟ್ಟಡಗಳನ್ನು ಕೆಡವಲು ನ್ಯಾಯಾಲಯ ಮೂರು ತಿಂಗಳ ಕಾಲಾವಕಾಶ ನೀಡಿತ್ತು. ಆದರೆ ತಾಂತ್ರಿಕ ತೊಂದರೆಗಳಿಂದಾಗಿ ಒಂದು ವರ್ಷ ತೆಗೆದುಕೊಂಡಿತು.

100 ಕೋಟಿ ರೂ.: ಇಡೀ ನೆಲಸಮಕ್ಕೆ ನೂರು ಕೋಟಿ ರೂ. ವಿಮೆ ಮಾಡಲಾಗಿದೆ. ಪಕ್ಕದ ಕಟ್ಟಡಗಳಿಗೆ ಹಾನಿಯಾದರೆ ವೆಚ್ಚವನ್ನು ಭರಿಸಬೇಕು, ಒಂದು ವೇಳೆ ವಸ್ತುಗಳು ಪಕ್ಕಕ್ಕೆ ಸಿಡಿದರೆ ನಷ್ಟವನ್ನು ತುಂಬಿಕೊಡಬೇಕು. ನೆಲಸಮ ಯೋಜನೆಗೆ ₹ 20 ಕೋಟಿಗಿಂತ ಹೆಚ್ಚು ವೆಚ್ಚವಾಗಬಹುದು. ಆದರೆ ಕಟ್ಟಡವನ್ನು ಕೆಡವುತ್ತಿರುವುದರಿಂದ ಸುಮಾರು 50 ರೂ. ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...