Homeಮುಖಪುಟಇಂದು ನೋಯ್ಡಾದಲ್ಲಿ ನೆಲಕ್ಕುರುಳಲಿವೆ 103 ಮೀ. ಎತ್ತರದ ಕಟ್ಟಡಗಳು: ಏನೆಲ್ಲ ಸಿದ್ಧತೆ ನಡೆದಿದೆ?

ಇಂದು ನೋಯ್ಡಾದಲ್ಲಿ ನೆಲಕ್ಕುರುಳಲಿವೆ 103 ಮೀ. ಎತ್ತರದ ಕಟ್ಟಡಗಳು: ಏನೆಲ್ಲ ಸಿದ್ಧತೆ ನಡೆದಿದೆ?

- Advertisement -
- Advertisement -

ಇಂದು ಮಧ್ಯಾಹ್ನ 2.30ಕ್ಕೆ ನೋಯ್ಡಾದಲ್ಲಿ ಬೃಹತ್‌ ಕಟ್ಟಡಗಳನ್ನು ನೆಲಸಮ ಮಾಡಲಾಗುತ್ತಿದೆ. ಸೆಕ್ಟರ್ 93Aನಲ್ಲಿರುವ ಎರಡು ಬೃಹತ್ ಕಟ್ಟಡಗಳು ನಿಯಮಗಳಿಗೆ ವಿರುದ್ಧವಾಗಿ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ನೆಲಸಮ ಮಾಡಲಾಗುತ್ತಿದೆ.

ಈ ಕಟ್ಟಡದ ವಿಶೇಷವೇನು? ನೆಲಸಮಕ್ಕೆ ಏನೆಲ್ಲ ಸಿದ್ಧತೆ ನಡೆದಿದೆ

40 ಮಹಡಿ: ಪ್ರತಿ ಕಟ್ಟಡದಲ್ಲಿ ನಲವತ್ತು ಮಹಡಿಗಳನ್ನು ನಿರ್ಮಿಸಲು ಯೋಜಿಸಲಾಗಿತ್ತು. ನ್ಯಾಯಾಲಯವು ಕಟ್ಟಡ ನಿರ್ಮಾಣವನ್ನು ಸ್ಥಗಿತಗೊಳಿಸಿದ್ದರಿಂದ ಕೆಲವು ಮಹಡಿ ನಿರ್ಮಿಸಲು ಸಾಧ್ಯವಾಗಿಲ್ಲ. ಈ ಟವರ್‌ಗಳಲ್ಲಿ ಈಗ 32 ಮಹಡಿಗಳಿವೆ. 900+ ಫ್ಲಾಟ್‌ಗಳನ್ನು ನಿರ್ಮಿಸಲು ಯೋಜಿಸಲಾಗಿತ್ತು. ಅದರಲ್ಲಿ ಮೂರನೇ ಎರಡರಷ್ಟು ಬುಕ್ ಆಗಿವೆ ಅಥವಾ ಮಾರಾಟ ಮಾಡಲಾಗಿದೆ. ಬಡ್ಡಿ ಸಮೇತ ಮರುಪಾವತಿ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

103 ಮೀಟರ್‌ಗಳು: ಈ ಕಟ್ಟಡಗಳು 103 ಮೀಟರ್‌ ಎತ್ತರವಿವೆ. ಮೂರು ವರ್ಷಗಳ ಹಿಂದೆ ಜೋಹಾನ್ಸ್‌ಬರ್ಗ್‌ನಲ್ಲಿ ಬ್ಯಾಂಕ್ ಕಟ್ಟಡವನ್ನು ಕೆಡವಲಾಗಿತ್ತು. ಅದು 108 ಮೀಟರ್ ಇತ್ತು. ಕೇರಳದಲ್ಲಿ ಕೆಳಗುರುಳಿಸಲಾದ 68 ಮೀಟರ್‌ ಎತ್ತರದ ಕಟ್ಟಡವು ಭಾರತದ ಮಟ್ಟಿಗೆ ನೆಲಸಮವಾದ ಎತ್ತರದ ಕಟ್ಟಡವಾಗಿತ್ತು. 2020ರಲ್ಲಿ ಕೇರಳದಲ್ಲಿ ಕೆಡವಲಾಗಿತ್ತು. ಅದೇ ವರ್ಷ ಅಬುಧಾಬಿಯಲ್ಲಿ 168 ಮೀಟರ್ ಎತ್ತರದ ಕಟ್ಟಡವನ್ನು ನೆಲಸಮಗೊಳಿಸಿದ್ದು ವಿಶ್ವದಾಖಲೆಗೆ ಸೇರಿತ್ತು.

8 ಮೀಟರ್: ಈಗ ನೆಲಸಮಗೊಳಿಸಲಾಗುವ ಎರಡು ಕಟ್ಟಡಗಳ ಪಕ್ಕದಲ್ಲಿ ಕೆಲವು ಅಪಾರ್ಟ್‌ಮೆಂಟ್‌ಗಳು ಸುಮಾರು ಎಂಟು ಮೀಟರ್‌ ಅಂತರದಲ್ಲಿವೆ. 9-12 ಮೀಟರ್‌ಗಳ ಒಳಗೆ ಹಲವಾರು ಅಪಾರ್ಟ್‌ಮೆಂಟ್‌ಗಳಿವೆ. ಧೂಳು ನುಗ್ಗುವುದನ್ನು ಕಡಿಮೆ ಮಾಡಲು ಅಕ್ಕಪಕ್ಕದ ಕಟ್ಟಡಗಳನ್ನು ವಿಶೇಷ ಬಟ್ಟೆಯಿಂದ ಮುಚ್ಚಲಾಗುತ್ತದೆ.

7,000 ಸ್ಟೋಟಕಗಳು: ಪಿಲ್ಲರ್‌ಗಳ ಸುಮಾರು 7,000 ರಂಧ್ರಗಳಲ್ಲಿ ಸ್ಫೋಟಕಗಳನ್ನು ಅಳವಡಿಸಲಾಗಿದೆ. ಈ ರಂಧ್ರಗಳು ತಲಾ ಎರಡು ಮೀಟರ್ ಅಂತರದಲ್ಲಿವೆ. ಸ್ಪೋಟಿಸಿದಾಗ ಗೋಪುರಗಳು ನೇರವಾಗಿ ಕೆಳಗೆ ಬೇಳುವಂತೆ ಯೋಜನೆ ರೂಪಿಸಲಾಗಿದೆ. ಇದನ್ನು ‘ಜಲಪಾತ ತಂತ್ರ’ ಎಂದು ಕರೆಯಲಾಗಿದೆ.

9 ಸೆಕೆಂಡುಗಳು: 9 ಸೆಕೆಂಡ್‌ಗಳಲ್ಲಿ ಕಟ್ಟಡ ನೆಲಕ್ಕುರಲಿದೆ ಎಂದು ಪ್ರಾಜೆಕ್ಟ್ ಎಂಜಿನಿಯರ್ ಹೇಳುತ್ತಾರೆ. ಎಂಜಿನಿಯರ್‌‌, ಬ್ಲಾಸ್ಟರ್‌ನ ಪಕ್ಕದಲ್ಲಿ ಇರುತ್ತಾರೆ. ನೋಯ್ಡಾ ಆಡಳಿತ ವರ್ಗ, ಜೊತೆಗೆ ಆಫ್ರಿಕಾದ ಮೂವರು ತಜ್ಞರು ಮತ್ತು ಇತರ ಕೆಲವು ಸರ್ಕಾರಿ ಅಧಿಕಾರಿಗಳು (ಒಟ್ಟಾರೆಯಾಗಿ 10 ಜನರಿಗಿಂತ ಹೆಚ್ಚಿಲ್ಲ) ಕನಿಷ್ಠ 100 ಮೀಟರ್ ದೂರದಲ್ಲಿ ನಿಲ್ಲುತ್ತಾರೆ. ಅರ್ಧಗಂಟೆ ಕಾಲ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇ ಸಂಚಾರವನ್ನು ಈ ಭಾಗದಲ್ಲಿ ಸ್ಥಗಿತಗೊಳಿಸಲಾಗುತ್ತಿದೆ.

12 ನಿಮಿಷಗಳು:  ಕಟ್ಟಡ ಉರುಳಿಸಿದ ಬಳಿಕ ಧೂಳು ಕಡಿಮೆಯಾಗಲು ಸುಮಾರು 12 ನಿಮಿಷಗಳ ಕಾಲ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಗಾಳಿಯ ಏರಿಳಿತದ ಮೇಲೆ ಧೂಳಿನ ಉದುಗುವಿಕೆ ನಿರ್ಧಾರವಾಗುವ ಸಾಧ್ಯತೆಯೂ ಇದೆ.

ಪ್ರತಿ ಸೆಕೆಂಡಿಗೆ 30 ಮಿಮೀ: ಸ್ಫೋಟದ ನಂತರ ಕಂಪನಗಳು 30 ಮೀಟರ್‌ಗಳವರೆಗೆ ಸಂಭವಿಸಬಹುದು. ಆದರೆ ಕೆಲವೇ ಸೆಕೆಂಡ್‌ ಇರಬಹುದು. ಸರಳವಾಗಿ ಹೇಳುವುದಾದರೆ, ಇದು ರಿಕ್ಟರ್ ಮಾಪಕದಲ್ಲಿ 0.4ರ ಭೂಕಂಪಕ್ಕೆ ಸಮಾನವಾಗಿದೆ.

7,000: ಸುಮಾರು 150 ಸಾಕುಪ್ರಾಣಿಗಳು ಮತ್ತು 2,500 ವಾಹನಗಳೊಂದಿಗೆ ಪಕ್ಕದ ಪ್ರದೇಶಗಳ 7000 ನಿವಾಸಿಗಳು ಡೆಮಾಲಿಷನ್ ದಿನದಂದು ಬೆಳಿಗ್ಗೆ 7 ಗಂಟೆಗೆ ಹೊರಹೋಗಬೇಕು ಎಂದು ಸೂಚನೆ ನೀಡಲಾಗಿದೆ. ಗ್ಯಾಸ್‌ ಮತ್ತು ವಿದ್ಯುತ್ ಪೂರೈಕೆಯನ್ನು ಸಂಜೆ 4 ಗಂಟೆಯವರೆಗೆ ಸ್ಥಗಿತಗೊಳಿಸಲಾಗಿದೆ. ಇಲ್ಲಿನ ನಿವಾಸಿಗಳಿಗೆ 5.30ರ ಬಳಿಕ ಹಿಂತಿರುಗಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿರಿ: ಪ್ಲೇಸ್ಟೋರ್‌ನಿಂದ 2 ಸಾವಿರ ಸಾಲ ನೀಡುವ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದ ಗೂಗಲ್‌!

9 ವರ್ಷಗಳು: ಸೂಪರ್‌ಟೆಕ್ ಎಮರಾಲ್ಡ್ ಕೋರ್ಟ್ ಸೊಸೈಟಿಯ ನಿವಾಸಿಗಳು, ಈ ಕಟ್ಟಡಗಳ ನಿರ್ಮಾಣದ ವಿರುದ್ಧ 2012ರಲ್ಲಿ ನ್ಯಾಯಾಲಯಕ್ಕೆ ಮೊರೆಹೋದರು. ಆಗಸ್ಟ್ 2021ರಲ್ಲಿ ಅಂತಿಮ ತೀರ್ಪು ಬಂದಿತು. ಅಲಹಾಬಾದ್ ಹೈಕೋರ್ಟ್ 2014ರಲ್ಲಿ ಕಟ್ಟಡ ಕೆಡವಲು ಆದೇಶ ನೀಡಿತ್ತು. ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಕಳೆದ ಆಗಸ್ಟ್‌ನಲ್ಲಿ ಕಟ್ಟಡಗಳನ್ನು ಕೆಡವಲು ನ್ಯಾಯಾಲಯ ಮೂರು ತಿಂಗಳ ಕಾಲಾವಕಾಶ ನೀಡಿತ್ತು. ಆದರೆ ತಾಂತ್ರಿಕ ತೊಂದರೆಗಳಿಂದಾಗಿ ಒಂದು ವರ್ಷ ತೆಗೆದುಕೊಂಡಿತು.

100 ಕೋಟಿ ರೂ.: ಇಡೀ ನೆಲಸಮಕ್ಕೆ ನೂರು ಕೋಟಿ ರೂ. ವಿಮೆ ಮಾಡಲಾಗಿದೆ. ಪಕ್ಕದ ಕಟ್ಟಡಗಳಿಗೆ ಹಾನಿಯಾದರೆ ವೆಚ್ಚವನ್ನು ಭರಿಸಬೇಕು, ಒಂದು ವೇಳೆ ವಸ್ತುಗಳು ಪಕ್ಕಕ್ಕೆ ಸಿಡಿದರೆ ನಷ್ಟವನ್ನು ತುಂಬಿಕೊಡಬೇಕು. ನೆಲಸಮ ಯೋಜನೆಗೆ ₹ 20 ಕೋಟಿಗಿಂತ ಹೆಚ್ಚು ವೆಚ್ಚವಾಗಬಹುದು. ಆದರೆ ಕಟ್ಟಡವನ್ನು ಕೆಡವುತ್ತಿರುವುದರಿಂದ ಸುಮಾರು 50 ರೂ. ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...