Homeಮುಖಪುಟಇಂದು ನೋಯ್ಡಾದಲ್ಲಿ ನೆಲಕ್ಕುರುಳಲಿವೆ 103 ಮೀ. ಎತ್ತರದ ಕಟ್ಟಡಗಳು: ಏನೆಲ್ಲ ಸಿದ್ಧತೆ ನಡೆದಿದೆ?

ಇಂದು ನೋಯ್ಡಾದಲ್ಲಿ ನೆಲಕ್ಕುರುಳಲಿವೆ 103 ಮೀ. ಎತ್ತರದ ಕಟ್ಟಡಗಳು: ಏನೆಲ್ಲ ಸಿದ್ಧತೆ ನಡೆದಿದೆ?

- Advertisement -
- Advertisement -

ಇಂದು ಮಧ್ಯಾಹ್ನ 2.30ಕ್ಕೆ ನೋಯ್ಡಾದಲ್ಲಿ ಬೃಹತ್‌ ಕಟ್ಟಡಗಳನ್ನು ನೆಲಸಮ ಮಾಡಲಾಗುತ್ತಿದೆ. ಸೆಕ್ಟರ್ 93Aನಲ್ಲಿರುವ ಎರಡು ಬೃಹತ್ ಕಟ್ಟಡಗಳು ನಿಯಮಗಳಿಗೆ ವಿರುದ್ಧವಾಗಿ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ನೆಲಸಮ ಮಾಡಲಾಗುತ್ತಿದೆ.

ಈ ಕಟ್ಟಡದ ವಿಶೇಷವೇನು? ನೆಲಸಮಕ್ಕೆ ಏನೆಲ್ಲ ಸಿದ್ಧತೆ ನಡೆದಿದೆ

40 ಮಹಡಿ: ಪ್ರತಿ ಕಟ್ಟಡದಲ್ಲಿ ನಲವತ್ತು ಮಹಡಿಗಳನ್ನು ನಿರ್ಮಿಸಲು ಯೋಜಿಸಲಾಗಿತ್ತು. ನ್ಯಾಯಾಲಯವು ಕಟ್ಟಡ ನಿರ್ಮಾಣವನ್ನು ಸ್ಥಗಿತಗೊಳಿಸಿದ್ದರಿಂದ ಕೆಲವು ಮಹಡಿ ನಿರ್ಮಿಸಲು ಸಾಧ್ಯವಾಗಿಲ್ಲ. ಈ ಟವರ್‌ಗಳಲ್ಲಿ ಈಗ 32 ಮಹಡಿಗಳಿವೆ. 900+ ಫ್ಲಾಟ್‌ಗಳನ್ನು ನಿರ್ಮಿಸಲು ಯೋಜಿಸಲಾಗಿತ್ತು. ಅದರಲ್ಲಿ ಮೂರನೇ ಎರಡರಷ್ಟು ಬುಕ್ ಆಗಿವೆ ಅಥವಾ ಮಾರಾಟ ಮಾಡಲಾಗಿದೆ. ಬಡ್ಡಿ ಸಮೇತ ಮರುಪಾವತಿ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

103 ಮೀಟರ್‌ಗಳು: ಈ ಕಟ್ಟಡಗಳು 103 ಮೀಟರ್‌ ಎತ್ತರವಿವೆ. ಮೂರು ವರ್ಷಗಳ ಹಿಂದೆ ಜೋಹಾನ್ಸ್‌ಬರ್ಗ್‌ನಲ್ಲಿ ಬ್ಯಾಂಕ್ ಕಟ್ಟಡವನ್ನು ಕೆಡವಲಾಗಿತ್ತು. ಅದು 108 ಮೀಟರ್ ಇತ್ತು. ಕೇರಳದಲ್ಲಿ ಕೆಳಗುರುಳಿಸಲಾದ 68 ಮೀಟರ್‌ ಎತ್ತರದ ಕಟ್ಟಡವು ಭಾರತದ ಮಟ್ಟಿಗೆ ನೆಲಸಮವಾದ ಎತ್ತರದ ಕಟ್ಟಡವಾಗಿತ್ತು. 2020ರಲ್ಲಿ ಕೇರಳದಲ್ಲಿ ಕೆಡವಲಾಗಿತ್ತು. ಅದೇ ವರ್ಷ ಅಬುಧಾಬಿಯಲ್ಲಿ 168 ಮೀಟರ್ ಎತ್ತರದ ಕಟ್ಟಡವನ್ನು ನೆಲಸಮಗೊಳಿಸಿದ್ದು ವಿಶ್ವದಾಖಲೆಗೆ ಸೇರಿತ್ತು.

8 ಮೀಟರ್: ಈಗ ನೆಲಸಮಗೊಳಿಸಲಾಗುವ ಎರಡು ಕಟ್ಟಡಗಳ ಪಕ್ಕದಲ್ಲಿ ಕೆಲವು ಅಪಾರ್ಟ್‌ಮೆಂಟ್‌ಗಳು ಸುಮಾರು ಎಂಟು ಮೀಟರ್‌ ಅಂತರದಲ್ಲಿವೆ. 9-12 ಮೀಟರ್‌ಗಳ ಒಳಗೆ ಹಲವಾರು ಅಪಾರ್ಟ್‌ಮೆಂಟ್‌ಗಳಿವೆ. ಧೂಳು ನುಗ್ಗುವುದನ್ನು ಕಡಿಮೆ ಮಾಡಲು ಅಕ್ಕಪಕ್ಕದ ಕಟ್ಟಡಗಳನ್ನು ವಿಶೇಷ ಬಟ್ಟೆಯಿಂದ ಮುಚ್ಚಲಾಗುತ್ತದೆ.

7,000 ಸ್ಟೋಟಕಗಳು: ಪಿಲ್ಲರ್‌ಗಳ ಸುಮಾರು 7,000 ರಂಧ್ರಗಳಲ್ಲಿ ಸ್ಫೋಟಕಗಳನ್ನು ಅಳವಡಿಸಲಾಗಿದೆ. ಈ ರಂಧ್ರಗಳು ತಲಾ ಎರಡು ಮೀಟರ್ ಅಂತರದಲ್ಲಿವೆ. ಸ್ಪೋಟಿಸಿದಾಗ ಗೋಪುರಗಳು ನೇರವಾಗಿ ಕೆಳಗೆ ಬೇಳುವಂತೆ ಯೋಜನೆ ರೂಪಿಸಲಾಗಿದೆ. ಇದನ್ನು ‘ಜಲಪಾತ ತಂತ್ರ’ ಎಂದು ಕರೆಯಲಾಗಿದೆ.

9 ಸೆಕೆಂಡುಗಳು: 9 ಸೆಕೆಂಡ್‌ಗಳಲ್ಲಿ ಕಟ್ಟಡ ನೆಲಕ್ಕುರಲಿದೆ ಎಂದು ಪ್ರಾಜೆಕ್ಟ್ ಎಂಜಿನಿಯರ್ ಹೇಳುತ್ತಾರೆ. ಎಂಜಿನಿಯರ್‌‌, ಬ್ಲಾಸ್ಟರ್‌ನ ಪಕ್ಕದಲ್ಲಿ ಇರುತ್ತಾರೆ. ನೋಯ್ಡಾ ಆಡಳಿತ ವರ್ಗ, ಜೊತೆಗೆ ಆಫ್ರಿಕಾದ ಮೂವರು ತಜ್ಞರು ಮತ್ತು ಇತರ ಕೆಲವು ಸರ್ಕಾರಿ ಅಧಿಕಾರಿಗಳು (ಒಟ್ಟಾರೆಯಾಗಿ 10 ಜನರಿಗಿಂತ ಹೆಚ್ಚಿಲ್ಲ) ಕನಿಷ್ಠ 100 ಮೀಟರ್ ದೂರದಲ್ಲಿ ನಿಲ್ಲುತ್ತಾರೆ. ಅರ್ಧಗಂಟೆ ಕಾಲ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇ ಸಂಚಾರವನ್ನು ಈ ಭಾಗದಲ್ಲಿ ಸ್ಥಗಿತಗೊಳಿಸಲಾಗುತ್ತಿದೆ.

12 ನಿಮಿಷಗಳು:  ಕಟ್ಟಡ ಉರುಳಿಸಿದ ಬಳಿಕ ಧೂಳು ಕಡಿಮೆಯಾಗಲು ಸುಮಾರು 12 ನಿಮಿಷಗಳ ಕಾಲ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಗಾಳಿಯ ಏರಿಳಿತದ ಮೇಲೆ ಧೂಳಿನ ಉದುಗುವಿಕೆ ನಿರ್ಧಾರವಾಗುವ ಸಾಧ್ಯತೆಯೂ ಇದೆ.

ಪ್ರತಿ ಸೆಕೆಂಡಿಗೆ 30 ಮಿಮೀ: ಸ್ಫೋಟದ ನಂತರ ಕಂಪನಗಳು 30 ಮೀಟರ್‌ಗಳವರೆಗೆ ಸಂಭವಿಸಬಹುದು. ಆದರೆ ಕೆಲವೇ ಸೆಕೆಂಡ್‌ ಇರಬಹುದು. ಸರಳವಾಗಿ ಹೇಳುವುದಾದರೆ, ಇದು ರಿಕ್ಟರ್ ಮಾಪಕದಲ್ಲಿ 0.4ರ ಭೂಕಂಪಕ್ಕೆ ಸಮಾನವಾಗಿದೆ.

7,000: ಸುಮಾರು 150 ಸಾಕುಪ್ರಾಣಿಗಳು ಮತ್ತು 2,500 ವಾಹನಗಳೊಂದಿಗೆ ಪಕ್ಕದ ಪ್ರದೇಶಗಳ 7000 ನಿವಾಸಿಗಳು ಡೆಮಾಲಿಷನ್ ದಿನದಂದು ಬೆಳಿಗ್ಗೆ 7 ಗಂಟೆಗೆ ಹೊರಹೋಗಬೇಕು ಎಂದು ಸೂಚನೆ ನೀಡಲಾಗಿದೆ. ಗ್ಯಾಸ್‌ ಮತ್ತು ವಿದ್ಯುತ್ ಪೂರೈಕೆಯನ್ನು ಸಂಜೆ 4 ಗಂಟೆಯವರೆಗೆ ಸ್ಥಗಿತಗೊಳಿಸಲಾಗಿದೆ. ಇಲ್ಲಿನ ನಿವಾಸಿಗಳಿಗೆ 5.30ರ ಬಳಿಕ ಹಿಂತಿರುಗಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿರಿ: ಪ್ಲೇಸ್ಟೋರ್‌ನಿಂದ 2 ಸಾವಿರ ಸಾಲ ನೀಡುವ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದ ಗೂಗಲ್‌!

9 ವರ್ಷಗಳು: ಸೂಪರ್‌ಟೆಕ್ ಎಮರಾಲ್ಡ್ ಕೋರ್ಟ್ ಸೊಸೈಟಿಯ ನಿವಾಸಿಗಳು, ಈ ಕಟ್ಟಡಗಳ ನಿರ್ಮಾಣದ ವಿರುದ್ಧ 2012ರಲ್ಲಿ ನ್ಯಾಯಾಲಯಕ್ಕೆ ಮೊರೆಹೋದರು. ಆಗಸ್ಟ್ 2021ರಲ್ಲಿ ಅಂತಿಮ ತೀರ್ಪು ಬಂದಿತು. ಅಲಹಾಬಾದ್ ಹೈಕೋರ್ಟ್ 2014ರಲ್ಲಿ ಕಟ್ಟಡ ಕೆಡವಲು ಆದೇಶ ನೀಡಿತ್ತು. ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಕಳೆದ ಆಗಸ್ಟ್‌ನಲ್ಲಿ ಕಟ್ಟಡಗಳನ್ನು ಕೆಡವಲು ನ್ಯಾಯಾಲಯ ಮೂರು ತಿಂಗಳ ಕಾಲಾವಕಾಶ ನೀಡಿತ್ತು. ಆದರೆ ತಾಂತ್ರಿಕ ತೊಂದರೆಗಳಿಂದಾಗಿ ಒಂದು ವರ್ಷ ತೆಗೆದುಕೊಂಡಿತು.

100 ಕೋಟಿ ರೂ.: ಇಡೀ ನೆಲಸಮಕ್ಕೆ ನೂರು ಕೋಟಿ ರೂ. ವಿಮೆ ಮಾಡಲಾಗಿದೆ. ಪಕ್ಕದ ಕಟ್ಟಡಗಳಿಗೆ ಹಾನಿಯಾದರೆ ವೆಚ್ಚವನ್ನು ಭರಿಸಬೇಕು, ಒಂದು ವೇಳೆ ವಸ್ತುಗಳು ಪಕ್ಕಕ್ಕೆ ಸಿಡಿದರೆ ನಷ್ಟವನ್ನು ತುಂಬಿಕೊಡಬೇಕು. ನೆಲಸಮ ಯೋಜನೆಗೆ ₹ 20 ಕೋಟಿಗಿಂತ ಹೆಚ್ಚು ವೆಚ್ಚವಾಗಬಹುದು. ಆದರೆ ಕಟ್ಟಡವನ್ನು ಕೆಡವುತ್ತಿರುವುದರಿಂದ ಸುಮಾರು 50 ರೂ. ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...