Homeಕರ್ನಾಟಕಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

ಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

- Advertisement -
| ಮುತ್ತುರಾಜ್ |
ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಮ್ಮಗಳೆರಡು ತಿನ್ನಲು ಆಹಾರವಿಲ್ಲದೇ ಮಣ್ಣು ತಿಂದ ಪರಿಣಾಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ. ಈ ಮಕ್ಕಳ ಪೋಷಕರಿಬ್ಬರೂ ಸಹ ಕುಡುಕರಾಗಿದ್ದ ಕಾರಣಕ್ಕಾಗಿ ಗಮನಹರಿಸದೇ ಹೋದದ್ದರಿಂದ ಈ ದುರ್ಘಟನೆ ನಡೆದು ಹೋಗಿದೆ ಹೇಳಲಾಗುತ್ತಿದೆ. ಇದರ ಕುರಿತು ಬಹಳಷ್ಟು ಜನರು ಕಂಬನಿ ಮಿಡಿದಿದ್ದು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ರೀತಿಯ ಘಟನೆಗಳು ನಡೆದಾಗ ಸಹಜವಾಗಿಯೇ ಬಹುತೇಕ ಮಂದಿ ಮರುಗುತ್ತಾರೆ. ಆದರೆ ದುರಂತದ ಸಂಗತಿಯೆಂದರೆ ಈ ರೀತಿಯ ದುರ್ಘಟನೆಗಳು ಪ್ರತಿನಿತ್ಯವೂ ನಡೆಯುತ್ತಲೇ ಇವೆ.
ಕಳೆದ ವರ್ಷ ಜುಲೈನಲ್ಲಿ ದೆಹಲಿಯಲ್ಲಿ ಇದೇ ರೀತಿ ಹಸಿವಿನಿಂದ ಬಳಲಿ ಮೂವರು ಮಕ್ಕಳು ಅಸುನೀಗಿದ್ದರು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಕಳೆದ ಹಲವು ದಿನಗಳಿಂದ ಮಕ್ಕಳು ಏನನ್ನು ತಿಂದಿಲ್ಲದ ಕಾರಣಕ್ಕೆ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದರು. ವಿಚಾರಣೆಗಾಗಿ ಆ ಮಕ್ಕಳ ತಾಯಿಯನ್ನು ಪೋಲಿಸರು ಪ್ರಶ್ನಿಸಿದರೆ ಆಕೆ ಹೇಳಿದ್ದು ‘ಮೊದಲು ನನಗೆ ಊಟ ಕೊಡಿ’ ಎಂದು.. ಆ ಮಕ್ಕಳ ತಂದೆ ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ದೆಹಲಿಗೆ ಬಂದಿದ್ದು ಯಾವುದೇ ಉದ್ಯೋಗ ಸಿಗದೇ ಕೊನೆಗೆ ರಿಕ್ಷಾಗಾಡಿ ತಳ್ಳಲು ಸೇರಿದ್ದರು. ಅಲ್ಲಿಯೂ ಸ್ಥಳೀಯ ರೌಡಿಗಳು ಆತನ ಗಾಡಿಯನ್ನು ವಶಪಡಿಸಿಕೊಂಡು ಕಿರುಕುಳ ಕೊಟ್ಟ ಕಾರಣದಿಂದ ಆತ ದಿಕ್ಕುತೋಚದೆ ಅಲೆಯುತ್ತಿದ್ದನು.. ಈ ಘಟನೆಗೆ ಯಾರು ಹೊಣೆ?
ಈಗ ಚಿಕ್ಕಬಳ್ಳಾಪುರದ ಕಂದಮ್ಮಗಳ ವಿಚಾರಕ್ಕೆ ಬರುವುದಾದರೆ ಇವರ ಪೋಷಕರು ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ವಲಸೆ ಹೋಗಿದ್ದರು. ತಮ್ಮ 5 ಮಕ್ಕಳ ಜೊತೆಗೆ ತನ್ನ ತಂಗಿಯ ಮಗಳನ್ನು ಸಾಕಿಕೊಂಡಿದ್ದ ನಾಗಮಣಿ ಮತ್ತು ಗಿರೀಶ್ ಇಬ್ಬರು ತೀವ್ರ ಮದ್ಯಪಾನ ವ್ಯಸನಿಗಳಾಗಿದ್ದರು. ಇವರು ದಿನ ಕುಡಿದು ಕೆಲಸ ಅರಸಿ ಹೋಗುತ್ತಿದ್ದರಿಂದ ಮಕ್ಕಳ ಊಟದ ಬಗ್ಗೆ ಯೋಚಿಸಿಲ್ಲ. ಇದರಿಂದ ಕಂಗೆಟ್ಟ ಮಕ್ಕಳು ವಿಧಿಯಿಲ್ಲದೇ ಎರಡು ಮೂರು ದಿನ ಮಣ್ಣು ತಿಂದ ಕಾರಣ ಸಾವನಪ್ಪಿವೆ. ಆರು ತಿಂಗಳ ಹಿಂದೆಯು ಸಹ ಇವರ ಸಂತೋಷ್ ಎಂಬ ಮಗುವು ಸಹ ಹಸಿವಿನಿಂದಲೇ ಸಾವನ್ನಪ್ಪಿತ್ತು ಎಂದು ತಿಳಿದು ಬಂದಿದೆ. ಆ ಕುಟುಂಬದ ಇನ್ನುಳಿದ ಮೂರು ಮಕ್ಕಳನ್ನು ಜಿಲ್ಲಾಡಳಿತದ ವತಿಯಿಂದ ಸ್ಥಳೀಯ ಅಂಗನವಾಡಿಗೆ ಸೇರಿಸಲಾಗಿದೆಯಂತೆ.
ಈ ಘಟನೆಯನ್ನು ನೆನೆಸಿಕೊಂಡರೆ ಮೈ ಜುಂ ಎನ್ನುತ್ತದೆ. ಈಗ ಈ ಘಟನೆಗೆ ಯಾರನ್ನು ಹೊಣೆ ಮಾಡೋಣ? ಈ ರೀತಿಯ ಘಟನೆಗಳು ನಮ್ಮನ್ನು ಅಲ್ಲಾಡಿಸುತ್ತವೆ. ಆದರೆ ಭಾರತದಲ್ಲಿ ದಿನವೊಂದಕ್ಕೆ 3000 ಮಕ್ಕಳು ಅಪೌಷ್ಟಿಕತೆಯಿಂದ ಸಾವನಪ್ಪುತ್ತಿದ್ದಾರೆ. ಹಸಿವಿನಿಂದ ಸಾಯುವುದಕ್ಕೂ, ಅಪೌಷ್ಟಿಕತೆಯಿಂದ ಸಾಯುವುದಕ್ಕೂ ಏನಾದರೂ ವ್ಯತ್ಯಾಸವಿದೆಯೇ? ನಮ್ಮ ಕುತಂತ್ರಿ ಸರ್ಕಾರಗಳು ಅಪೌಷ್ಟಿಕತೆಯಿಂದ ಸಾವು ಎಂದು ಹೇಳುತ್ತವೆಯೇ ಹೊರತು ಹಸಿವಿನಿಂದ ಸಾವು ಎನ್ನುವುದಿಲ್ಲ.
ಈ ದೇಶದಲ್ಲಿ 1000ಕ್ಕೆ 34 ಮಕ್ಕಳು ತಾಯಿಯ ಅಪೌಷ್ಠಿಕತೆಯ ಕಾರಣದಿಂದ ಗರ್ಭದಲ್ಲೇ ಅಸುನೀಗುತ್ತಿವೆ. ಈ ಅಪೌಷ್ಠಿಕತೆಯಿಂದ 9ಲಕ್ಷಕ್ಕೂ ಹೆಚ್ಚು ಮಕ್ಕಳು 5 ವರ್ಷ ತುಂಬುವ ಮೊದಲೇ ಮರಣಹೊಂದಿವೆ. ಈಗಲೂ ಭಾರತದಲ್ಲಿ ಸುಮಾರು 19 ಕೋಟಿ ಜನರು ಹಸಿವಿನಿಂದ ಜೀವನ ದೂಡುತ್ತಿದ್ದಾರೆ ಎಂದು ಅಂಕಿಅಂಶಗಳು ಹೇಳುತ್ತಿವೆ. ಇದರ ಬಗ್ಗೆ ಯಾರು ಯೋಚಿಸಬೇಕು? ಇವರ ಕುರಿತು ಆಳುವ ಸರ್ಕಾರಗಳ ಕ್ರಮವೇನು? ಅದೆಷ್ಟೋ ಸಾವಿರ ಟನ್‍ಗಳಷ್ಟು ಆಹಾರ ಗೋದಾಮುಗಳಲ್ಲಿ ಕೊಳೆಯುತ್ತಿದೆ ಎಂದು ವರದಿಗಳು ಹೇಳುತ್ತಿವೆ, ಈ ವಿರೋಧಾಭಾಸಕ್ಕೆ ಏನು ಮಾಡೋಣ?
ಈಗ ನಮ್ಮ ಪಾತ್ರಕ್ಕೆ ಬರೋಣ. ಆಹಾರ ಎಂಬ ಮೂಲಭೂತ ಅಗತ್ಯದ ಹಕ್ಕಿನ ಕುರಿತು ನಾವೆಷ್ಟು ಚರ್ಚಿಸಿದ್ದೇವೆ? ಇದಕ್ಕೆ ಹೊಂದಿಕೊಂಡಿರುವ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ವಿಚಾರಕ್ಕಾಗಿ ಎಷ್ಟು ಹೋರಾಡಿದ್ದೇವೆ? ಜನರ ನೈಜ ಸಮಸ್ಯೆಗಳನ್ನು ಮರೆಮಾಚಿ ಜಾತಿ, ಧರ್ಮ, ಸೈನ್ಯ ಇತ್ಯಾದಿ ಭಾವನಾತ್ಮಕ ವಿಚಾರಗಳಿಗೆ ಎಳೆಯುವ ಕಪಟ ಸರ್ಕಾರಗಳ ಜಾಲದಲ್ಲಿಯೇ ನಾವಿದ್ದೇವೆಯೇ? ಈ ದೇಶದ 73% ಸಂಪತ್ತನ್ನು ಕೇವಲ 1% ಬಂಡವಾಳಶಾಹಿ ಶ್ರೀಮಂತರು ಲೂಟಿ ಹೊಡೆಯುತ್ತಿರುವಾಗ ನಾವು ದನಿ ಎತ್ತಿದ್ದೇವೆಯೇ? ಓಟು ಹಾಕುವ ಮುನ್ನ ಬಡಜನರ ಪರ ಈ ನೀತಿ ತನ್ನಿ ಎಂದು ರಾಜಕಾರಣಿಗಳಿಗೆ ಒತ್ತಡ ತಂದಿದ್ದೇವೆಯೇ?
ಅದೆಲ್ಲಾ ಹೋಗಲಿ ಕೇರಳದಲ್ಲಿ ಮಧು ಎಂಬಾತ ಹಸಿವು ತಾಳಲಾರದೇ 2 ಕೆ.ಜಿ ಅಕ್ಕಿ ಕದ್ದ ಎಂಬ ಕಾರಣಕ್ಕೆ ಆತನನ್ನು ಹೊಡೆದು ಸಾಯಿಸಿಯೇಬಿಟ್ಟರು. ಊಟ ಡೆಲಿವರಿ ಮಾಡುವ ಹುಡುಗನೊಬ್ಬ ಸ್ವಲ್ಪ ಆಹಾರ ತಿಂದಿದ್ದಕ್ಕೆ ಪ್ರಪಂಚವೇ ಮುಳುಗಿ ಹೋಯಿತು ಎಂಬು ಬೊಬ್ಬಿರದಲ್ಲ? ಆತನನ್ನ ಹೇಗೆ ನಡೆಸಿಕೊಂಡಿತು ನಮ್ಮ ಸಮಾಜ? ಇದೆಲ್ಲವನ್ನು ಎಷ್ಟು ಜನ ಪ್ರಶ್ನಿಸಿದ್ದೇವೆ?
ಇಲ್ಲದಿದ್ದಲ್ಲಿ ಈ ಮಕ್ಕಳ ಸಾವಿಗೆ ಮರುಗಲು ನಮಗೆ ಅರ್ಹತೆ ಇದೆಯೇ? ಎಲ್ಲಿಯವರೆಗೂ ಆಳುವ ವರ್ಗಗಳ ಜನಪರವಾಗಿ ಕೆಲಸ ಮಾಡುವಂತೆ ನಾವು ಒತ್ತಾಯಿಸುವುದಿಲ್ಲವೋ ಅಲ್ಲಿಯವರೆಗೆ ಚಿಕ್ಕಬಳ್ಳಾಪುರದಿಂದ ದೆಹಲಿಯವರೆಗೂ ಈ ಸಾವುಗಳು ನಡೆಯುತ್ತಲೇ ಇರುತ್ತವೆ. ನಾವು ಒಂದಷ್ಟು ಕಂಬನಿ ಸುರಿಸಿ ನಂತರ ನಾರ್ಮಲ್ ಆಗಿ ಇದ್ದುಬಿಡುತ್ತೇವೆ. ಇನ್ನು ಮುಂದೆ ತುಂಬಾ ನಾರ್ಮಲ್ ಆಗಿರುವುದು ಬೇಡ; ಏಕೆಂದರೆ ಈ ದೇಶ ನಾರ್ಮಲ್ ಆಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...