Homeಕರ್ನಾಟಕಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

ಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

- Advertisement -
| ಮುತ್ತುರಾಜ್ |
ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಮ್ಮಗಳೆರಡು ತಿನ್ನಲು ಆಹಾರವಿಲ್ಲದೇ ಮಣ್ಣು ತಿಂದ ಪರಿಣಾಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ. ಈ ಮಕ್ಕಳ ಪೋಷಕರಿಬ್ಬರೂ ಸಹ ಕುಡುಕರಾಗಿದ್ದ ಕಾರಣಕ್ಕಾಗಿ ಗಮನಹರಿಸದೇ ಹೋದದ್ದರಿಂದ ಈ ದುರ್ಘಟನೆ ನಡೆದು ಹೋಗಿದೆ ಹೇಳಲಾಗುತ್ತಿದೆ. ಇದರ ಕುರಿತು ಬಹಳಷ್ಟು ಜನರು ಕಂಬನಿ ಮಿಡಿದಿದ್ದು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ರೀತಿಯ ಘಟನೆಗಳು ನಡೆದಾಗ ಸಹಜವಾಗಿಯೇ ಬಹುತೇಕ ಮಂದಿ ಮರುಗುತ್ತಾರೆ. ಆದರೆ ದುರಂತದ ಸಂಗತಿಯೆಂದರೆ ಈ ರೀತಿಯ ದುರ್ಘಟನೆಗಳು ಪ್ರತಿನಿತ್ಯವೂ ನಡೆಯುತ್ತಲೇ ಇವೆ.
ಕಳೆದ ವರ್ಷ ಜುಲೈನಲ್ಲಿ ದೆಹಲಿಯಲ್ಲಿ ಇದೇ ರೀತಿ ಹಸಿವಿನಿಂದ ಬಳಲಿ ಮೂವರು ಮಕ್ಕಳು ಅಸುನೀಗಿದ್ದರು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಕಳೆದ ಹಲವು ದಿನಗಳಿಂದ ಮಕ್ಕಳು ಏನನ್ನು ತಿಂದಿಲ್ಲದ ಕಾರಣಕ್ಕೆ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದರು. ವಿಚಾರಣೆಗಾಗಿ ಆ ಮಕ್ಕಳ ತಾಯಿಯನ್ನು ಪೋಲಿಸರು ಪ್ರಶ್ನಿಸಿದರೆ ಆಕೆ ಹೇಳಿದ್ದು ‘ಮೊದಲು ನನಗೆ ಊಟ ಕೊಡಿ’ ಎಂದು.. ಆ ಮಕ್ಕಳ ತಂದೆ ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ದೆಹಲಿಗೆ ಬಂದಿದ್ದು ಯಾವುದೇ ಉದ್ಯೋಗ ಸಿಗದೇ ಕೊನೆಗೆ ರಿಕ್ಷಾಗಾಡಿ ತಳ್ಳಲು ಸೇರಿದ್ದರು. ಅಲ್ಲಿಯೂ ಸ್ಥಳೀಯ ರೌಡಿಗಳು ಆತನ ಗಾಡಿಯನ್ನು ವಶಪಡಿಸಿಕೊಂಡು ಕಿರುಕುಳ ಕೊಟ್ಟ ಕಾರಣದಿಂದ ಆತ ದಿಕ್ಕುತೋಚದೆ ಅಲೆಯುತ್ತಿದ್ದನು.. ಈ ಘಟನೆಗೆ ಯಾರು ಹೊಣೆ?
ಈಗ ಚಿಕ್ಕಬಳ್ಳಾಪುರದ ಕಂದಮ್ಮಗಳ ವಿಚಾರಕ್ಕೆ ಬರುವುದಾದರೆ ಇವರ ಪೋಷಕರು ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ವಲಸೆ ಹೋಗಿದ್ದರು. ತಮ್ಮ 5 ಮಕ್ಕಳ ಜೊತೆಗೆ ತನ್ನ ತಂಗಿಯ ಮಗಳನ್ನು ಸಾಕಿಕೊಂಡಿದ್ದ ನಾಗಮಣಿ ಮತ್ತು ಗಿರೀಶ್ ಇಬ್ಬರು ತೀವ್ರ ಮದ್ಯಪಾನ ವ್ಯಸನಿಗಳಾಗಿದ್ದರು. ಇವರು ದಿನ ಕುಡಿದು ಕೆಲಸ ಅರಸಿ ಹೋಗುತ್ತಿದ್ದರಿಂದ ಮಕ್ಕಳ ಊಟದ ಬಗ್ಗೆ ಯೋಚಿಸಿಲ್ಲ. ಇದರಿಂದ ಕಂಗೆಟ್ಟ ಮಕ್ಕಳು ವಿಧಿಯಿಲ್ಲದೇ ಎರಡು ಮೂರು ದಿನ ಮಣ್ಣು ತಿಂದ ಕಾರಣ ಸಾವನಪ್ಪಿವೆ. ಆರು ತಿಂಗಳ ಹಿಂದೆಯು ಸಹ ಇವರ ಸಂತೋಷ್ ಎಂಬ ಮಗುವು ಸಹ ಹಸಿವಿನಿಂದಲೇ ಸಾವನ್ನಪ್ಪಿತ್ತು ಎಂದು ತಿಳಿದು ಬಂದಿದೆ. ಆ ಕುಟುಂಬದ ಇನ್ನುಳಿದ ಮೂರು ಮಕ್ಕಳನ್ನು ಜಿಲ್ಲಾಡಳಿತದ ವತಿಯಿಂದ ಸ್ಥಳೀಯ ಅಂಗನವಾಡಿಗೆ ಸೇರಿಸಲಾಗಿದೆಯಂತೆ.
ಈ ಘಟನೆಯನ್ನು ನೆನೆಸಿಕೊಂಡರೆ ಮೈ ಜುಂ ಎನ್ನುತ್ತದೆ. ಈಗ ಈ ಘಟನೆಗೆ ಯಾರನ್ನು ಹೊಣೆ ಮಾಡೋಣ? ಈ ರೀತಿಯ ಘಟನೆಗಳು ನಮ್ಮನ್ನು ಅಲ್ಲಾಡಿಸುತ್ತವೆ. ಆದರೆ ಭಾರತದಲ್ಲಿ ದಿನವೊಂದಕ್ಕೆ 3000 ಮಕ್ಕಳು ಅಪೌಷ್ಟಿಕತೆಯಿಂದ ಸಾವನಪ್ಪುತ್ತಿದ್ದಾರೆ. ಹಸಿವಿನಿಂದ ಸಾಯುವುದಕ್ಕೂ, ಅಪೌಷ್ಟಿಕತೆಯಿಂದ ಸಾಯುವುದಕ್ಕೂ ಏನಾದರೂ ವ್ಯತ್ಯಾಸವಿದೆಯೇ? ನಮ್ಮ ಕುತಂತ್ರಿ ಸರ್ಕಾರಗಳು ಅಪೌಷ್ಟಿಕತೆಯಿಂದ ಸಾವು ಎಂದು ಹೇಳುತ್ತವೆಯೇ ಹೊರತು ಹಸಿವಿನಿಂದ ಸಾವು ಎನ್ನುವುದಿಲ್ಲ.
ಈ ದೇಶದಲ್ಲಿ 1000ಕ್ಕೆ 34 ಮಕ್ಕಳು ತಾಯಿಯ ಅಪೌಷ್ಠಿಕತೆಯ ಕಾರಣದಿಂದ ಗರ್ಭದಲ್ಲೇ ಅಸುನೀಗುತ್ತಿವೆ. ಈ ಅಪೌಷ್ಠಿಕತೆಯಿಂದ 9ಲಕ್ಷಕ್ಕೂ ಹೆಚ್ಚು ಮಕ್ಕಳು 5 ವರ್ಷ ತುಂಬುವ ಮೊದಲೇ ಮರಣಹೊಂದಿವೆ. ಈಗಲೂ ಭಾರತದಲ್ಲಿ ಸುಮಾರು 19 ಕೋಟಿ ಜನರು ಹಸಿವಿನಿಂದ ಜೀವನ ದೂಡುತ್ತಿದ್ದಾರೆ ಎಂದು ಅಂಕಿಅಂಶಗಳು ಹೇಳುತ್ತಿವೆ. ಇದರ ಬಗ್ಗೆ ಯಾರು ಯೋಚಿಸಬೇಕು? ಇವರ ಕುರಿತು ಆಳುವ ಸರ್ಕಾರಗಳ ಕ್ರಮವೇನು? ಅದೆಷ್ಟೋ ಸಾವಿರ ಟನ್‍ಗಳಷ್ಟು ಆಹಾರ ಗೋದಾಮುಗಳಲ್ಲಿ ಕೊಳೆಯುತ್ತಿದೆ ಎಂದು ವರದಿಗಳು ಹೇಳುತ್ತಿವೆ, ಈ ವಿರೋಧಾಭಾಸಕ್ಕೆ ಏನು ಮಾಡೋಣ?
ಈಗ ನಮ್ಮ ಪಾತ್ರಕ್ಕೆ ಬರೋಣ. ಆಹಾರ ಎಂಬ ಮೂಲಭೂತ ಅಗತ್ಯದ ಹಕ್ಕಿನ ಕುರಿತು ನಾವೆಷ್ಟು ಚರ್ಚಿಸಿದ್ದೇವೆ? ಇದಕ್ಕೆ ಹೊಂದಿಕೊಂಡಿರುವ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ವಿಚಾರಕ್ಕಾಗಿ ಎಷ್ಟು ಹೋರಾಡಿದ್ದೇವೆ? ಜನರ ನೈಜ ಸಮಸ್ಯೆಗಳನ್ನು ಮರೆಮಾಚಿ ಜಾತಿ, ಧರ್ಮ, ಸೈನ್ಯ ಇತ್ಯಾದಿ ಭಾವನಾತ್ಮಕ ವಿಚಾರಗಳಿಗೆ ಎಳೆಯುವ ಕಪಟ ಸರ್ಕಾರಗಳ ಜಾಲದಲ್ಲಿಯೇ ನಾವಿದ್ದೇವೆಯೇ? ಈ ದೇಶದ 73% ಸಂಪತ್ತನ್ನು ಕೇವಲ 1% ಬಂಡವಾಳಶಾಹಿ ಶ್ರೀಮಂತರು ಲೂಟಿ ಹೊಡೆಯುತ್ತಿರುವಾಗ ನಾವು ದನಿ ಎತ್ತಿದ್ದೇವೆಯೇ? ಓಟು ಹಾಕುವ ಮುನ್ನ ಬಡಜನರ ಪರ ಈ ನೀತಿ ತನ್ನಿ ಎಂದು ರಾಜಕಾರಣಿಗಳಿಗೆ ಒತ್ತಡ ತಂದಿದ್ದೇವೆಯೇ?
ಅದೆಲ್ಲಾ ಹೋಗಲಿ ಕೇರಳದಲ್ಲಿ ಮಧು ಎಂಬಾತ ಹಸಿವು ತಾಳಲಾರದೇ 2 ಕೆ.ಜಿ ಅಕ್ಕಿ ಕದ್ದ ಎಂಬ ಕಾರಣಕ್ಕೆ ಆತನನ್ನು ಹೊಡೆದು ಸಾಯಿಸಿಯೇಬಿಟ್ಟರು. ಊಟ ಡೆಲಿವರಿ ಮಾಡುವ ಹುಡುಗನೊಬ್ಬ ಸ್ವಲ್ಪ ಆಹಾರ ತಿಂದಿದ್ದಕ್ಕೆ ಪ್ರಪಂಚವೇ ಮುಳುಗಿ ಹೋಯಿತು ಎಂಬು ಬೊಬ್ಬಿರದಲ್ಲ? ಆತನನ್ನ ಹೇಗೆ ನಡೆಸಿಕೊಂಡಿತು ನಮ್ಮ ಸಮಾಜ? ಇದೆಲ್ಲವನ್ನು ಎಷ್ಟು ಜನ ಪ್ರಶ್ನಿಸಿದ್ದೇವೆ?
ಇಲ್ಲದಿದ್ದಲ್ಲಿ ಈ ಮಕ್ಕಳ ಸಾವಿಗೆ ಮರುಗಲು ನಮಗೆ ಅರ್ಹತೆ ಇದೆಯೇ? ಎಲ್ಲಿಯವರೆಗೂ ಆಳುವ ವರ್ಗಗಳ ಜನಪರವಾಗಿ ಕೆಲಸ ಮಾಡುವಂತೆ ನಾವು ಒತ್ತಾಯಿಸುವುದಿಲ್ಲವೋ ಅಲ್ಲಿಯವರೆಗೆ ಚಿಕ್ಕಬಳ್ಳಾಪುರದಿಂದ ದೆಹಲಿಯವರೆಗೂ ಈ ಸಾವುಗಳು ನಡೆಯುತ್ತಲೇ ಇರುತ್ತವೆ. ನಾವು ಒಂದಷ್ಟು ಕಂಬನಿ ಸುರಿಸಿ ನಂತರ ನಾರ್ಮಲ್ ಆಗಿ ಇದ್ದುಬಿಡುತ್ತೇವೆ. ಇನ್ನು ಮುಂದೆ ತುಂಬಾ ನಾರ್ಮಲ್ ಆಗಿರುವುದು ಬೇಡ; ಏಕೆಂದರೆ ಈ ದೇಶ ನಾರ್ಮಲ್ ಆಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...