Homeಕರ್ನಾಟಕಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

ಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

- Advertisement -
| ಮುತ್ತುರಾಜ್ |
ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಮ್ಮಗಳೆರಡು ತಿನ್ನಲು ಆಹಾರವಿಲ್ಲದೇ ಮಣ್ಣು ತಿಂದ ಪರಿಣಾಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ. ಈ ಮಕ್ಕಳ ಪೋಷಕರಿಬ್ಬರೂ ಸಹ ಕುಡುಕರಾಗಿದ್ದ ಕಾರಣಕ್ಕಾಗಿ ಗಮನಹರಿಸದೇ ಹೋದದ್ದರಿಂದ ಈ ದುರ್ಘಟನೆ ನಡೆದು ಹೋಗಿದೆ ಹೇಳಲಾಗುತ್ತಿದೆ. ಇದರ ಕುರಿತು ಬಹಳಷ್ಟು ಜನರು ಕಂಬನಿ ಮಿಡಿದಿದ್ದು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ರೀತಿಯ ಘಟನೆಗಳು ನಡೆದಾಗ ಸಹಜವಾಗಿಯೇ ಬಹುತೇಕ ಮಂದಿ ಮರುಗುತ್ತಾರೆ. ಆದರೆ ದುರಂತದ ಸಂಗತಿಯೆಂದರೆ ಈ ರೀತಿಯ ದುರ್ಘಟನೆಗಳು ಪ್ರತಿನಿತ್ಯವೂ ನಡೆಯುತ್ತಲೇ ಇವೆ.
ಕಳೆದ ವರ್ಷ ಜುಲೈನಲ್ಲಿ ದೆಹಲಿಯಲ್ಲಿ ಇದೇ ರೀತಿ ಹಸಿವಿನಿಂದ ಬಳಲಿ ಮೂವರು ಮಕ್ಕಳು ಅಸುನೀಗಿದ್ದರು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಕಳೆದ ಹಲವು ದಿನಗಳಿಂದ ಮಕ್ಕಳು ಏನನ್ನು ತಿಂದಿಲ್ಲದ ಕಾರಣಕ್ಕೆ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದರು. ವಿಚಾರಣೆಗಾಗಿ ಆ ಮಕ್ಕಳ ತಾಯಿಯನ್ನು ಪೋಲಿಸರು ಪ್ರಶ್ನಿಸಿದರೆ ಆಕೆ ಹೇಳಿದ್ದು ‘ಮೊದಲು ನನಗೆ ಊಟ ಕೊಡಿ’ ಎಂದು.. ಆ ಮಕ್ಕಳ ತಂದೆ ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ದೆಹಲಿಗೆ ಬಂದಿದ್ದು ಯಾವುದೇ ಉದ್ಯೋಗ ಸಿಗದೇ ಕೊನೆಗೆ ರಿಕ್ಷಾಗಾಡಿ ತಳ್ಳಲು ಸೇರಿದ್ದರು. ಅಲ್ಲಿಯೂ ಸ್ಥಳೀಯ ರೌಡಿಗಳು ಆತನ ಗಾಡಿಯನ್ನು ವಶಪಡಿಸಿಕೊಂಡು ಕಿರುಕುಳ ಕೊಟ್ಟ ಕಾರಣದಿಂದ ಆತ ದಿಕ್ಕುತೋಚದೆ ಅಲೆಯುತ್ತಿದ್ದನು.. ಈ ಘಟನೆಗೆ ಯಾರು ಹೊಣೆ?
ಈಗ ಚಿಕ್ಕಬಳ್ಳಾಪುರದ ಕಂದಮ್ಮಗಳ ವಿಚಾರಕ್ಕೆ ಬರುವುದಾದರೆ ಇವರ ಪೋಷಕರು ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ವಲಸೆ ಹೋಗಿದ್ದರು. ತಮ್ಮ 5 ಮಕ್ಕಳ ಜೊತೆಗೆ ತನ್ನ ತಂಗಿಯ ಮಗಳನ್ನು ಸಾಕಿಕೊಂಡಿದ್ದ ನಾಗಮಣಿ ಮತ್ತು ಗಿರೀಶ್ ಇಬ್ಬರು ತೀವ್ರ ಮದ್ಯಪಾನ ವ್ಯಸನಿಗಳಾಗಿದ್ದರು. ಇವರು ದಿನ ಕುಡಿದು ಕೆಲಸ ಅರಸಿ ಹೋಗುತ್ತಿದ್ದರಿಂದ ಮಕ್ಕಳ ಊಟದ ಬಗ್ಗೆ ಯೋಚಿಸಿಲ್ಲ. ಇದರಿಂದ ಕಂಗೆಟ್ಟ ಮಕ್ಕಳು ವಿಧಿಯಿಲ್ಲದೇ ಎರಡು ಮೂರು ದಿನ ಮಣ್ಣು ತಿಂದ ಕಾರಣ ಸಾವನಪ್ಪಿವೆ. ಆರು ತಿಂಗಳ ಹಿಂದೆಯು ಸಹ ಇವರ ಸಂತೋಷ್ ಎಂಬ ಮಗುವು ಸಹ ಹಸಿವಿನಿಂದಲೇ ಸಾವನ್ನಪ್ಪಿತ್ತು ಎಂದು ತಿಳಿದು ಬಂದಿದೆ. ಆ ಕುಟುಂಬದ ಇನ್ನುಳಿದ ಮೂರು ಮಕ್ಕಳನ್ನು ಜಿಲ್ಲಾಡಳಿತದ ವತಿಯಿಂದ ಸ್ಥಳೀಯ ಅಂಗನವಾಡಿಗೆ ಸೇರಿಸಲಾಗಿದೆಯಂತೆ.
ಈ ಘಟನೆಯನ್ನು ನೆನೆಸಿಕೊಂಡರೆ ಮೈ ಜುಂ ಎನ್ನುತ್ತದೆ. ಈಗ ಈ ಘಟನೆಗೆ ಯಾರನ್ನು ಹೊಣೆ ಮಾಡೋಣ? ಈ ರೀತಿಯ ಘಟನೆಗಳು ನಮ್ಮನ್ನು ಅಲ್ಲಾಡಿಸುತ್ತವೆ. ಆದರೆ ಭಾರತದಲ್ಲಿ ದಿನವೊಂದಕ್ಕೆ 3000 ಮಕ್ಕಳು ಅಪೌಷ್ಟಿಕತೆಯಿಂದ ಸಾವನಪ್ಪುತ್ತಿದ್ದಾರೆ. ಹಸಿವಿನಿಂದ ಸಾಯುವುದಕ್ಕೂ, ಅಪೌಷ್ಟಿಕತೆಯಿಂದ ಸಾಯುವುದಕ್ಕೂ ಏನಾದರೂ ವ್ಯತ್ಯಾಸವಿದೆಯೇ? ನಮ್ಮ ಕುತಂತ್ರಿ ಸರ್ಕಾರಗಳು ಅಪೌಷ್ಟಿಕತೆಯಿಂದ ಸಾವು ಎಂದು ಹೇಳುತ್ತವೆಯೇ ಹೊರತು ಹಸಿವಿನಿಂದ ಸಾವು ಎನ್ನುವುದಿಲ್ಲ.
ಈ ದೇಶದಲ್ಲಿ 1000ಕ್ಕೆ 34 ಮಕ್ಕಳು ತಾಯಿಯ ಅಪೌಷ್ಠಿಕತೆಯ ಕಾರಣದಿಂದ ಗರ್ಭದಲ್ಲೇ ಅಸುನೀಗುತ್ತಿವೆ. ಈ ಅಪೌಷ್ಠಿಕತೆಯಿಂದ 9ಲಕ್ಷಕ್ಕೂ ಹೆಚ್ಚು ಮಕ್ಕಳು 5 ವರ್ಷ ತುಂಬುವ ಮೊದಲೇ ಮರಣಹೊಂದಿವೆ. ಈಗಲೂ ಭಾರತದಲ್ಲಿ ಸುಮಾರು 19 ಕೋಟಿ ಜನರು ಹಸಿವಿನಿಂದ ಜೀವನ ದೂಡುತ್ತಿದ್ದಾರೆ ಎಂದು ಅಂಕಿಅಂಶಗಳು ಹೇಳುತ್ತಿವೆ. ಇದರ ಬಗ್ಗೆ ಯಾರು ಯೋಚಿಸಬೇಕು? ಇವರ ಕುರಿತು ಆಳುವ ಸರ್ಕಾರಗಳ ಕ್ರಮವೇನು? ಅದೆಷ್ಟೋ ಸಾವಿರ ಟನ್‍ಗಳಷ್ಟು ಆಹಾರ ಗೋದಾಮುಗಳಲ್ಲಿ ಕೊಳೆಯುತ್ತಿದೆ ಎಂದು ವರದಿಗಳು ಹೇಳುತ್ತಿವೆ, ಈ ವಿರೋಧಾಭಾಸಕ್ಕೆ ಏನು ಮಾಡೋಣ?
ಈಗ ನಮ್ಮ ಪಾತ್ರಕ್ಕೆ ಬರೋಣ. ಆಹಾರ ಎಂಬ ಮೂಲಭೂತ ಅಗತ್ಯದ ಹಕ್ಕಿನ ಕುರಿತು ನಾವೆಷ್ಟು ಚರ್ಚಿಸಿದ್ದೇವೆ? ಇದಕ್ಕೆ ಹೊಂದಿಕೊಂಡಿರುವ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ವಿಚಾರಕ್ಕಾಗಿ ಎಷ್ಟು ಹೋರಾಡಿದ್ದೇವೆ? ಜನರ ನೈಜ ಸಮಸ್ಯೆಗಳನ್ನು ಮರೆಮಾಚಿ ಜಾತಿ, ಧರ್ಮ, ಸೈನ್ಯ ಇತ್ಯಾದಿ ಭಾವನಾತ್ಮಕ ವಿಚಾರಗಳಿಗೆ ಎಳೆಯುವ ಕಪಟ ಸರ್ಕಾರಗಳ ಜಾಲದಲ್ಲಿಯೇ ನಾವಿದ್ದೇವೆಯೇ? ಈ ದೇಶದ 73% ಸಂಪತ್ತನ್ನು ಕೇವಲ 1% ಬಂಡವಾಳಶಾಹಿ ಶ್ರೀಮಂತರು ಲೂಟಿ ಹೊಡೆಯುತ್ತಿರುವಾಗ ನಾವು ದನಿ ಎತ್ತಿದ್ದೇವೆಯೇ? ಓಟು ಹಾಕುವ ಮುನ್ನ ಬಡಜನರ ಪರ ಈ ನೀತಿ ತನ್ನಿ ಎಂದು ರಾಜಕಾರಣಿಗಳಿಗೆ ಒತ್ತಡ ತಂದಿದ್ದೇವೆಯೇ?
ಅದೆಲ್ಲಾ ಹೋಗಲಿ ಕೇರಳದಲ್ಲಿ ಮಧು ಎಂಬಾತ ಹಸಿವು ತಾಳಲಾರದೇ 2 ಕೆ.ಜಿ ಅಕ್ಕಿ ಕದ್ದ ಎಂಬ ಕಾರಣಕ್ಕೆ ಆತನನ್ನು ಹೊಡೆದು ಸಾಯಿಸಿಯೇಬಿಟ್ಟರು. ಊಟ ಡೆಲಿವರಿ ಮಾಡುವ ಹುಡುಗನೊಬ್ಬ ಸ್ವಲ್ಪ ಆಹಾರ ತಿಂದಿದ್ದಕ್ಕೆ ಪ್ರಪಂಚವೇ ಮುಳುಗಿ ಹೋಯಿತು ಎಂಬು ಬೊಬ್ಬಿರದಲ್ಲ? ಆತನನ್ನ ಹೇಗೆ ನಡೆಸಿಕೊಂಡಿತು ನಮ್ಮ ಸಮಾಜ? ಇದೆಲ್ಲವನ್ನು ಎಷ್ಟು ಜನ ಪ್ರಶ್ನಿಸಿದ್ದೇವೆ?
ಇಲ್ಲದಿದ್ದಲ್ಲಿ ಈ ಮಕ್ಕಳ ಸಾವಿಗೆ ಮರುಗಲು ನಮಗೆ ಅರ್ಹತೆ ಇದೆಯೇ? ಎಲ್ಲಿಯವರೆಗೂ ಆಳುವ ವರ್ಗಗಳ ಜನಪರವಾಗಿ ಕೆಲಸ ಮಾಡುವಂತೆ ನಾವು ಒತ್ತಾಯಿಸುವುದಿಲ್ಲವೋ ಅಲ್ಲಿಯವರೆಗೆ ಚಿಕ್ಕಬಳ್ಳಾಪುರದಿಂದ ದೆಹಲಿಯವರೆಗೂ ಈ ಸಾವುಗಳು ನಡೆಯುತ್ತಲೇ ಇರುತ್ತವೆ. ನಾವು ಒಂದಷ್ಟು ಕಂಬನಿ ಸುರಿಸಿ ನಂತರ ನಾರ್ಮಲ್ ಆಗಿ ಇದ್ದುಬಿಡುತ್ತೇವೆ. ಇನ್ನು ಮುಂದೆ ತುಂಬಾ ನಾರ್ಮಲ್ ಆಗಿರುವುದು ಬೇಡ; ಏಕೆಂದರೆ ಈ ದೇಶ ನಾರ್ಮಲ್ ಆಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....