Homeಕರ್ನಾಟಕಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

ಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

- Advertisement -
| ಮುತ್ತುರಾಜ್ |
ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಮ್ಮಗಳೆರಡು ತಿನ್ನಲು ಆಹಾರವಿಲ್ಲದೇ ಮಣ್ಣು ತಿಂದ ಪರಿಣಾಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ. ಈ ಮಕ್ಕಳ ಪೋಷಕರಿಬ್ಬರೂ ಸಹ ಕುಡುಕರಾಗಿದ್ದ ಕಾರಣಕ್ಕಾಗಿ ಗಮನಹರಿಸದೇ ಹೋದದ್ದರಿಂದ ಈ ದುರ್ಘಟನೆ ನಡೆದು ಹೋಗಿದೆ ಹೇಳಲಾಗುತ್ತಿದೆ. ಇದರ ಕುರಿತು ಬಹಳಷ್ಟು ಜನರು ಕಂಬನಿ ಮಿಡಿದಿದ್ದು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ರೀತಿಯ ಘಟನೆಗಳು ನಡೆದಾಗ ಸಹಜವಾಗಿಯೇ ಬಹುತೇಕ ಮಂದಿ ಮರುಗುತ್ತಾರೆ. ಆದರೆ ದುರಂತದ ಸಂಗತಿಯೆಂದರೆ ಈ ರೀತಿಯ ದುರ್ಘಟನೆಗಳು ಪ್ರತಿನಿತ್ಯವೂ ನಡೆಯುತ್ತಲೇ ಇವೆ.
ಕಳೆದ ವರ್ಷ ಜುಲೈನಲ್ಲಿ ದೆಹಲಿಯಲ್ಲಿ ಇದೇ ರೀತಿ ಹಸಿವಿನಿಂದ ಬಳಲಿ ಮೂವರು ಮಕ್ಕಳು ಅಸುನೀಗಿದ್ದರು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಕಳೆದ ಹಲವು ದಿನಗಳಿಂದ ಮಕ್ಕಳು ಏನನ್ನು ತಿಂದಿಲ್ಲದ ಕಾರಣಕ್ಕೆ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದರು. ವಿಚಾರಣೆಗಾಗಿ ಆ ಮಕ್ಕಳ ತಾಯಿಯನ್ನು ಪೋಲಿಸರು ಪ್ರಶ್ನಿಸಿದರೆ ಆಕೆ ಹೇಳಿದ್ದು ‘ಮೊದಲು ನನಗೆ ಊಟ ಕೊಡಿ’ ಎಂದು.. ಆ ಮಕ್ಕಳ ತಂದೆ ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ದೆಹಲಿಗೆ ಬಂದಿದ್ದು ಯಾವುದೇ ಉದ್ಯೋಗ ಸಿಗದೇ ಕೊನೆಗೆ ರಿಕ್ಷಾಗಾಡಿ ತಳ್ಳಲು ಸೇರಿದ್ದರು. ಅಲ್ಲಿಯೂ ಸ್ಥಳೀಯ ರೌಡಿಗಳು ಆತನ ಗಾಡಿಯನ್ನು ವಶಪಡಿಸಿಕೊಂಡು ಕಿರುಕುಳ ಕೊಟ್ಟ ಕಾರಣದಿಂದ ಆತ ದಿಕ್ಕುತೋಚದೆ ಅಲೆಯುತ್ತಿದ್ದನು.. ಈ ಘಟನೆಗೆ ಯಾರು ಹೊಣೆ?
ಈಗ ಚಿಕ್ಕಬಳ್ಳಾಪುರದ ಕಂದಮ್ಮಗಳ ವಿಚಾರಕ್ಕೆ ಬರುವುದಾದರೆ ಇವರ ಪೋಷಕರು ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ವಲಸೆ ಹೋಗಿದ್ದರು. ತಮ್ಮ 5 ಮಕ್ಕಳ ಜೊತೆಗೆ ತನ್ನ ತಂಗಿಯ ಮಗಳನ್ನು ಸಾಕಿಕೊಂಡಿದ್ದ ನಾಗಮಣಿ ಮತ್ತು ಗಿರೀಶ್ ಇಬ್ಬರು ತೀವ್ರ ಮದ್ಯಪಾನ ವ್ಯಸನಿಗಳಾಗಿದ್ದರು. ಇವರು ದಿನ ಕುಡಿದು ಕೆಲಸ ಅರಸಿ ಹೋಗುತ್ತಿದ್ದರಿಂದ ಮಕ್ಕಳ ಊಟದ ಬಗ್ಗೆ ಯೋಚಿಸಿಲ್ಲ. ಇದರಿಂದ ಕಂಗೆಟ್ಟ ಮಕ್ಕಳು ವಿಧಿಯಿಲ್ಲದೇ ಎರಡು ಮೂರು ದಿನ ಮಣ್ಣು ತಿಂದ ಕಾರಣ ಸಾವನಪ್ಪಿವೆ. ಆರು ತಿಂಗಳ ಹಿಂದೆಯು ಸಹ ಇವರ ಸಂತೋಷ್ ಎಂಬ ಮಗುವು ಸಹ ಹಸಿವಿನಿಂದಲೇ ಸಾವನ್ನಪ್ಪಿತ್ತು ಎಂದು ತಿಳಿದು ಬಂದಿದೆ. ಆ ಕುಟುಂಬದ ಇನ್ನುಳಿದ ಮೂರು ಮಕ್ಕಳನ್ನು ಜಿಲ್ಲಾಡಳಿತದ ವತಿಯಿಂದ ಸ್ಥಳೀಯ ಅಂಗನವಾಡಿಗೆ ಸೇರಿಸಲಾಗಿದೆಯಂತೆ.
ಈ ಘಟನೆಯನ್ನು ನೆನೆಸಿಕೊಂಡರೆ ಮೈ ಜುಂ ಎನ್ನುತ್ತದೆ. ಈಗ ಈ ಘಟನೆಗೆ ಯಾರನ್ನು ಹೊಣೆ ಮಾಡೋಣ? ಈ ರೀತಿಯ ಘಟನೆಗಳು ನಮ್ಮನ್ನು ಅಲ್ಲಾಡಿಸುತ್ತವೆ. ಆದರೆ ಭಾರತದಲ್ಲಿ ದಿನವೊಂದಕ್ಕೆ 3000 ಮಕ್ಕಳು ಅಪೌಷ್ಟಿಕತೆಯಿಂದ ಸಾವನಪ್ಪುತ್ತಿದ್ದಾರೆ. ಹಸಿವಿನಿಂದ ಸಾಯುವುದಕ್ಕೂ, ಅಪೌಷ್ಟಿಕತೆಯಿಂದ ಸಾಯುವುದಕ್ಕೂ ಏನಾದರೂ ವ್ಯತ್ಯಾಸವಿದೆಯೇ? ನಮ್ಮ ಕುತಂತ್ರಿ ಸರ್ಕಾರಗಳು ಅಪೌಷ್ಟಿಕತೆಯಿಂದ ಸಾವು ಎಂದು ಹೇಳುತ್ತವೆಯೇ ಹೊರತು ಹಸಿವಿನಿಂದ ಸಾವು ಎನ್ನುವುದಿಲ್ಲ.
ಈ ದೇಶದಲ್ಲಿ 1000ಕ್ಕೆ 34 ಮಕ್ಕಳು ತಾಯಿಯ ಅಪೌಷ್ಠಿಕತೆಯ ಕಾರಣದಿಂದ ಗರ್ಭದಲ್ಲೇ ಅಸುನೀಗುತ್ತಿವೆ. ಈ ಅಪೌಷ್ಠಿಕತೆಯಿಂದ 9ಲಕ್ಷಕ್ಕೂ ಹೆಚ್ಚು ಮಕ್ಕಳು 5 ವರ್ಷ ತುಂಬುವ ಮೊದಲೇ ಮರಣಹೊಂದಿವೆ. ಈಗಲೂ ಭಾರತದಲ್ಲಿ ಸುಮಾರು 19 ಕೋಟಿ ಜನರು ಹಸಿವಿನಿಂದ ಜೀವನ ದೂಡುತ್ತಿದ್ದಾರೆ ಎಂದು ಅಂಕಿಅಂಶಗಳು ಹೇಳುತ್ತಿವೆ. ಇದರ ಬಗ್ಗೆ ಯಾರು ಯೋಚಿಸಬೇಕು? ಇವರ ಕುರಿತು ಆಳುವ ಸರ್ಕಾರಗಳ ಕ್ರಮವೇನು? ಅದೆಷ್ಟೋ ಸಾವಿರ ಟನ್‍ಗಳಷ್ಟು ಆಹಾರ ಗೋದಾಮುಗಳಲ್ಲಿ ಕೊಳೆಯುತ್ತಿದೆ ಎಂದು ವರದಿಗಳು ಹೇಳುತ್ತಿವೆ, ಈ ವಿರೋಧಾಭಾಸಕ್ಕೆ ಏನು ಮಾಡೋಣ?
ಈಗ ನಮ್ಮ ಪಾತ್ರಕ್ಕೆ ಬರೋಣ. ಆಹಾರ ಎಂಬ ಮೂಲಭೂತ ಅಗತ್ಯದ ಹಕ್ಕಿನ ಕುರಿತು ನಾವೆಷ್ಟು ಚರ್ಚಿಸಿದ್ದೇವೆ? ಇದಕ್ಕೆ ಹೊಂದಿಕೊಂಡಿರುವ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ವಿಚಾರಕ್ಕಾಗಿ ಎಷ್ಟು ಹೋರಾಡಿದ್ದೇವೆ? ಜನರ ನೈಜ ಸಮಸ್ಯೆಗಳನ್ನು ಮರೆಮಾಚಿ ಜಾತಿ, ಧರ್ಮ, ಸೈನ್ಯ ಇತ್ಯಾದಿ ಭಾವನಾತ್ಮಕ ವಿಚಾರಗಳಿಗೆ ಎಳೆಯುವ ಕಪಟ ಸರ್ಕಾರಗಳ ಜಾಲದಲ್ಲಿಯೇ ನಾವಿದ್ದೇವೆಯೇ? ಈ ದೇಶದ 73% ಸಂಪತ್ತನ್ನು ಕೇವಲ 1% ಬಂಡವಾಳಶಾಹಿ ಶ್ರೀಮಂತರು ಲೂಟಿ ಹೊಡೆಯುತ್ತಿರುವಾಗ ನಾವು ದನಿ ಎತ್ತಿದ್ದೇವೆಯೇ? ಓಟು ಹಾಕುವ ಮುನ್ನ ಬಡಜನರ ಪರ ಈ ನೀತಿ ತನ್ನಿ ಎಂದು ರಾಜಕಾರಣಿಗಳಿಗೆ ಒತ್ತಡ ತಂದಿದ್ದೇವೆಯೇ?
ಅದೆಲ್ಲಾ ಹೋಗಲಿ ಕೇರಳದಲ್ಲಿ ಮಧು ಎಂಬಾತ ಹಸಿವು ತಾಳಲಾರದೇ 2 ಕೆ.ಜಿ ಅಕ್ಕಿ ಕದ್ದ ಎಂಬ ಕಾರಣಕ್ಕೆ ಆತನನ್ನು ಹೊಡೆದು ಸಾಯಿಸಿಯೇಬಿಟ್ಟರು. ಊಟ ಡೆಲಿವರಿ ಮಾಡುವ ಹುಡುಗನೊಬ್ಬ ಸ್ವಲ್ಪ ಆಹಾರ ತಿಂದಿದ್ದಕ್ಕೆ ಪ್ರಪಂಚವೇ ಮುಳುಗಿ ಹೋಯಿತು ಎಂಬು ಬೊಬ್ಬಿರದಲ್ಲ? ಆತನನ್ನ ಹೇಗೆ ನಡೆಸಿಕೊಂಡಿತು ನಮ್ಮ ಸಮಾಜ? ಇದೆಲ್ಲವನ್ನು ಎಷ್ಟು ಜನ ಪ್ರಶ್ನಿಸಿದ್ದೇವೆ?
ಇಲ್ಲದಿದ್ದಲ್ಲಿ ಈ ಮಕ್ಕಳ ಸಾವಿಗೆ ಮರುಗಲು ನಮಗೆ ಅರ್ಹತೆ ಇದೆಯೇ? ಎಲ್ಲಿಯವರೆಗೂ ಆಳುವ ವರ್ಗಗಳ ಜನಪರವಾಗಿ ಕೆಲಸ ಮಾಡುವಂತೆ ನಾವು ಒತ್ತಾಯಿಸುವುದಿಲ್ಲವೋ ಅಲ್ಲಿಯವರೆಗೆ ಚಿಕ್ಕಬಳ್ಳಾಪುರದಿಂದ ದೆಹಲಿಯವರೆಗೂ ಈ ಸಾವುಗಳು ನಡೆಯುತ್ತಲೇ ಇರುತ್ತವೆ. ನಾವು ಒಂದಷ್ಟು ಕಂಬನಿ ಸುರಿಸಿ ನಂತರ ನಾರ್ಮಲ್ ಆಗಿ ಇದ್ದುಬಿಡುತ್ತೇವೆ. ಇನ್ನು ಮುಂದೆ ತುಂಬಾ ನಾರ್ಮಲ್ ಆಗಿರುವುದು ಬೇಡ; ಏಕೆಂದರೆ ಈ ದೇಶ ನಾರ್ಮಲ್ ಆಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...