Homeಕರ್ನಾಟಕಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

ಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

- Advertisement -
| ಮುತ್ತುರಾಜ್ |
ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಮ್ಮಗಳೆರಡು ತಿನ್ನಲು ಆಹಾರವಿಲ್ಲದೇ ಮಣ್ಣು ತಿಂದ ಪರಿಣಾಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ. ಈ ಮಕ್ಕಳ ಪೋಷಕರಿಬ್ಬರೂ ಸಹ ಕುಡುಕರಾಗಿದ್ದ ಕಾರಣಕ್ಕಾಗಿ ಗಮನಹರಿಸದೇ ಹೋದದ್ದರಿಂದ ಈ ದುರ್ಘಟನೆ ನಡೆದು ಹೋಗಿದೆ ಹೇಳಲಾಗುತ್ತಿದೆ. ಇದರ ಕುರಿತು ಬಹಳಷ್ಟು ಜನರು ಕಂಬನಿ ಮಿಡಿದಿದ್ದು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ರೀತಿಯ ಘಟನೆಗಳು ನಡೆದಾಗ ಸಹಜವಾಗಿಯೇ ಬಹುತೇಕ ಮಂದಿ ಮರುಗುತ್ತಾರೆ. ಆದರೆ ದುರಂತದ ಸಂಗತಿಯೆಂದರೆ ಈ ರೀತಿಯ ದುರ್ಘಟನೆಗಳು ಪ್ರತಿನಿತ್ಯವೂ ನಡೆಯುತ್ತಲೇ ಇವೆ.
ಕಳೆದ ವರ್ಷ ಜುಲೈನಲ್ಲಿ ದೆಹಲಿಯಲ್ಲಿ ಇದೇ ರೀತಿ ಹಸಿವಿನಿಂದ ಬಳಲಿ ಮೂವರು ಮಕ್ಕಳು ಅಸುನೀಗಿದ್ದರು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಕಳೆದ ಹಲವು ದಿನಗಳಿಂದ ಮಕ್ಕಳು ಏನನ್ನು ತಿಂದಿಲ್ಲದ ಕಾರಣಕ್ಕೆ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದರು. ವಿಚಾರಣೆಗಾಗಿ ಆ ಮಕ್ಕಳ ತಾಯಿಯನ್ನು ಪೋಲಿಸರು ಪ್ರಶ್ನಿಸಿದರೆ ಆಕೆ ಹೇಳಿದ್ದು ‘ಮೊದಲು ನನಗೆ ಊಟ ಕೊಡಿ’ ಎಂದು.. ಆ ಮಕ್ಕಳ ತಂದೆ ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ದೆಹಲಿಗೆ ಬಂದಿದ್ದು ಯಾವುದೇ ಉದ್ಯೋಗ ಸಿಗದೇ ಕೊನೆಗೆ ರಿಕ್ಷಾಗಾಡಿ ತಳ್ಳಲು ಸೇರಿದ್ದರು. ಅಲ್ಲಿಯೂ ಸ್ಥಳೀಯ ರೌಡಿಗಳು ಆತನ ಗಾಡಿಯನ್ನು ವಶಪಡಿಸಿಕೊಂಡು ಕಿರುಕುಳ ಕೊಟ್ಟ ಕಾರಣದಿಂದ ಆತ ದಿಕ್ಕುತೋಚದೆ ಅಲೆಯುತ್ತಿದ್ದನು.. ಈ ಘಟನೆಗೆ ಯಾರು ಹೊಣೆ?
ಈಗ ಚಿಕ್ಕಬಳ್ಳಾಪುರದ ಕಂದಮ್ಮಗಳ ವಿಚಾರಕ್ಕೆ ಬರುವುದಾದರೆ ಇವರ ಪೋಷಕರು ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ವಲಸೆ ಹೋಗಿದ್ದರು. ತಮ್ಮ 5 ಮಕ್ಕಳ ಜೊತೆಗೆ ತನ್ನ ತಂಗಿಯ ಮಗಳನ್ನು ಸಾಕಿಕೊಂಡಿದ್ದ ನಾಗಮಣಿ ಮತ್ತು ಗಿರೀಶ್ ಇಬ್ಬರು ತೀವ್ರ ಮದ್ಯಪಾನ ವ್ಯಸನಿಗಳಾಗಿದ್ದರು. ಇವರು ದಿನ ಕುಡಿದು ಕೆಲಸ ಅರಸಿ ಹೋಗುತ್ತಿದ್ದರಿಂದ ಮಕ್ಕಳ ಊಟದ ಬಗ್ಗೆ ಯೋಚಿಸಿಲ್ಲ. ಇದರಿಂದ ಕಂಗೆಟ್ಟ ಮಕ್ಕಳು ವಿಧಿಯಿಲ್ಲದೇ ಎರಡು ಮೂರು ದಿನ ಮಣ್ಣು ತಿಂದ ಕಾರಣ ಸಾವನಪ್ಪಿವೆ. ಆರು ತಿಂಗಳ ಹಿಂದೆಯು ಸಹ ಇವರ ಸಂತೋಷ್ ಎಂಬ ಮಗುವು ಸಹ ಹಸಿವಿನಿಂದಲೇ ಸಾವನ್ನಪ್ಪಿತ್ತು ಎಂದು ತಿಳಿದು ಬಂದಿದೆ. ಆ ಕುಟುಂಬದ ಇನ್ನುಳಿದ ಮೂರು ಮಕ್ಕಳನ್ನು ಜಿಲ್ಲಾಡಳಿತದ ವತಿಯಿಂದ ಸ್ಥಳೀಯ ಅಂಗನವಾಡಿಗೆ ಸೇರಿಸಲಾಗಿದೆಯಂತೆ.
ಈ ಘಟನೆಯನ್ನು ನೆನೆಸಿಕೊಂಡರೆ ಮೈ ಜುಂ ಎನ್ನುತ್ತದೆ. ಈಗ ಈ ಘಟನೆಗೆ ಯಾರನ್ನು ಹೊಣೆ ಮಾಡೋಣ? ಈ ರೀತಿಯ ಘಟನೆಗಳು ನಮ್ಮನ್ನು ಅಲ್ಲಾಡಿಸುತ್ತವೆ. ಆದರೆ ಭಾರತದಲ್ಲಿ ದಿನವೊಂದಕ್ಕೆ 3000 ಮಕ್ಕಳು ಅಪೌಷ್ಟಿಕತೆಯಿಂದ ಸಾವನಪ್ಪುತ್ತಿದ್ದಾರೆ. ಹಸಿವಿನಿಂದ ಸಾಯುವುದಕ್ಕೂ, ಅಪೌಷ್ಟಿಕತೆಯಿಂದ ಸಾಯುವುದಕ್ಕೂ ಏನಾದರೂ ವ್ಯತ್ಯಾಸವಿದೆಯೇ? ನಮ್ಮ ಕುತಂತ್ರಿ ಸರ್ಕಾರಗಳು ಅಪೌಷ್ಟಿಕತೆಯಿಂದ ಸಾವು ಎಂದು ಹೇಳುತ್ತವೆಯೇ ಹೊರತು ಹಸಿವಿನಿಂದ ಸಾವು ಎನ್ನುವುದಿಲ್ಲ.
ಈ ದೇಶದಲ್ಲಿ 1000ಕ್ಕೆ 34 ಮಕ್ಕಳು ತಾಯಿಯ ಅಪೌಷ್ಠಿಕತೆಯ ಕಾರಣದಿಂದ ಗರ್ಭದಲ್ಲೇ ಅಸುನೀಗುತ್ತಿವೆ. ಈ ಅಪೌಷ್ಠಿಕತೆಯಿಂದ 9ಲಕ್ಷಕ್ಕೂ ಹೆಚ್ಚು ಮಕ್ಕಳು 5 ವರ್ಷ ತುಂಬುವ ಮೊದಲೇ ಮರಣಹೊಂದಿವೆ. ಈಗಲೂ ಭಾರತದಲ್ಲಿ ಸುಮಾರು 19 ಕೋಟಿ ಜನರು ಹಸಿವಿನಿಂದ ಜೀವನ ದೂಡುತ್ತಿದ್ದಾರೆ ಎಂದು ಅಂಕಿಅಂಶಗಳು ಹೇಳುತ್ತಿವೆ. ಇದರ ಬಗ್ಗೆ ಯಾರು ಯೋಚಿಸಬೇಕು? ಇವರ ಕುರಿತು ಆಳುವ ಸರ್ಕಾರಗಳ ಕ್ರಮವೇನು? ಅದೆಷ್ಟೋ ಸಾವಿರ ಟನ್‍ಗಳಷ್ಟು ಆಹಾರ ಗೋದಾಮುಗಳಲ್ಲಿ ಕೊಳೆಯುತ್ತಿದೆ ಎಂದು ವರದಿಗಳು ಹೇಳುತ್ತಿವೆ, ಈ ವಿರೋಧಾಭಾಸಕ್ಕೆ ಏನು ಮಾಡೋಣ?
ಈಗ ನಮ್ಮ ಪಾತ್ರಕ್ಕೆ ಬರೋಣ. ಆಹಾರ ಎಂಬ ಮೂಲಭೂತ ಅಗತ್ಯದ ಹಕ್ಕಿನ ಕುರಿತು ನಾವೆಷ್ಟು ಚರ್ಚಿಸಿದ್ದೇವೆ? ಇದಕ್ಕೆ ಹೊಂದಿಕೊಂಡಿರುವ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ವಿಚಾರಕ್ಕಾಗಿ ಎಷ್ಟು ಹೋರಾಡಿದ್ದೇವೆ? ಜನರ ನೈಜ ಸಮಸ್ಯೆಗಳನ್ನು ಮರೆಮಾಚಿ ಜಾತಿ, ಧರ್ಮ, ಸೈನ್ಯ ಇತ್ಯಾದಿ ಭಾವನಾತ್ಮಕ ವಿಚಾರಗಳಿಗೆ ಎಳೆಯುವ ಕಪಟ ಸರ್ಕಾರಗಳ ಜಾಲದಲ್ಲಿಯೇ ನಾವಿದ್ದೇವೆಯೇ? ಈ ದೇಶದ 73% ಸಂಪತ್ತನ್ನು ಕೇವಲ 1% ಬಂಡವಾಳಶಾಹಿ ಶ್ರೀಮಂತರು ಲೂಟಿ ಹೊಡೆಯುತ್ತಿರುವಾಗ ನಾವು ದನಿ ಎತ್ತಿದ್ದೇವೆಯೇ? ಓಟು ಹಾಕುವ ಮುನ್ನ ಬಡಜನರ ಪರ ಈ ನೀತಿ ತನ್ನಿ ಎಂದು ರಾಜಕಾರಣಿಗಳಿಗೆ ಒತ್ತಡ ತಂದಿದ್ದೇವೆಯೇ?
ಅದೆಲ್ಲಾ ಹೋಗಲಿ ಕೇರಳದಲ್ಲಿ ಮಧು ಎಂಬಾತ ಹಸಿವು ತಾಳಲಾರದೇ 2 ಕೆ.ಜಿ ಅಕ್ಕಿ ಕದ್ದ ಎಂಬ ಕಾರಣಕ್ಕೆ ಆತನನ್ನು ಹೊಡೆದು ಸಾಯಿಸಿಯೇಬಿಟ್ಟರು. ಊಟ ಡೆಲಿವರಿ ಮಾಡುವ ಹುಡುಗನೊಬ್ಬ ಸ್ವಲ್ಪ ಆಹಾರ ತಿಂದಿದ್ದಕ್ಕೆ ಪ್ರಪಂಚವೇ ಮುಳುಗಿ ಹೋಯಿತು ಎಂಬು ಬೊಬ್ಬಿರದಲ್ಲ? ಆತನನ್ನ ಹೇಗೆ ನಡೆಸಿಕೊಂಡಿತು ನಮ್ಮ ಸಮಾಜ? ಇದೆಲ್ಲವನ್ನು ಎಷ್ಟು ಜನ ಪ್ರಶ್ನಿಸಿದ್ದೇವೆ?
ಇಲ್ಲದಿದ್ದಲ್ಲಿ ಈ ಮಕ್ಕಳ ಸಾವಿಗೆ ಮರುಗಲು ನಮಗೆ ಅರ್ಹತೆ ಇದೆಯೇ? ಎಲ್ಲಿಯವರೆಗೂ ಆಳುವ ವರ್ಗಗಳ ಜನಪರವಾಗಿ ಕೆಲಸ ಮಾಡುವಂತೆ ನಾವು ಒತ್ತಾಯಿಸುವುದಿಲ್ಲವೋ ಅಲ್ಲಿಯವರೆಗೆ ಚಿಕ್ಕಬಳ್ಳಾಪುರದಿಂದ ದೆಹಲಿಯವರೆಗೂ ಈ ಸಾವುಗಳು ನಡೆಯುತ್ತಲೇ ಇರುತ್ತವೆ. ನಾವು ಒಂದಷ್ಟು ಕಂಬನಿ ಸುರಿಸಿ ನಂತರ ನಾರ್ಮಲ್ ಆಗಿ ಇದ್ದುಬಿಡುತ್ತೇವೆ. ಇನ್ನು ಮುಂದೆ ತುಂಬಾ ನಾರ್ಮಲ್ ಆಗಿರುವುದು ಬೇಡ; ಏಕೆಂದರೆ ಈ ದೇಶ ನಾರ್ಮಲ್ ಆಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...