Homeಕರ್ನಾಟಕಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

ಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

- Advertisement -
| ಮುತ್ತುರಾಜ್ |
ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಮ್ಮಗಳೆರಡು ತಿನ್ನಲು ಆಹಾರವಿಲ್ಲದೇ ಮಣ್ಣು ತಿಂದ ಪರಿಣಾಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ. ಈ ಮಕ್ಕಳ ಪೋಷಕರಿಬ್ಬರೂ ಸಹ ಕುಡುಕರಾಗಿದ್ದ ಕಾರಣಕ್ಕಾಗಿ ಗಮನಹರಿಸದೇ ಹೋದದ್ದರಿಂದ ಈ ದುರ್ಘಟನೆ ನಡೆದು ಹೋಗಿದೆ ಹೇಳಲಾಗುತ್ತಿದೆ. ಇದರ ಕುರಿತು ಬಹಳಷ್ಟು ಜನರು ಕಂಬನಿ ಮಿಡಿದಿದ್ದು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ರೀತಿಯ ಘಟನೆಗಳು ನಡೆದಾಗ ಸಹಜವಾಗಿಯೇ ಬಹುತೇಕ ಮಂದಿ ಮರುಗುತ್ತಾರೆ. ಆದರೆ ದುರಂತದ ಸಂಗತಿಯೆಂದರೆ ಈ ರೀತಿಯ ದುರ್ಘಟನೆಗಳು ಪ್ರತಿನಿತ್ಯವೂ ನಡೆಯುತ್ತಲೇ ಇವೆ.
ಕಳೆದ ವರ್ಷ ಜುಲೈನಲ್ಲಿ ದೆಹಲಿಯಲ್ಲಿ ಇದೇ ರೀತಿ ಹಸಿವಿನಿಂದ ಬಳಲಿ ಮೂವರು ಮಕ್ಕಳು ಅಸುನೀಗಿದ್ದರು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಕಳೆದ ಹಲವು ದಿನಗಳಿಂದ ಮಕ್ಕಳು ಏನನ್ನು ತಿಂದಿಲ್ಲದ ಕಾರಣಕ್ಕೆ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದರು. ವಿಚಾರಣೆಗಾಗಿ ಆ ಮಕ್ಕಳ ತಾಯಿಯನ್ನು ಪೋಲಿಸರು ಪ್ರಶ್ನಿಸಿದರೆ ಆಕೆ ಹೇಳಿದ್ದು ‘ಮೊದಲು ನನಗೆ ಊಟ ಕೊಡಿ’ ಎಂದು.. ಆ ಮಕ್ಕಳ ತಂದೆ ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ದೆಹಲಿಗೆ ಬಂದಿದ್ದು ಯಾವುದೇ ಉದ್ಯೋಗ ಸಿಗದೇ ಕೊನೆಗೆ ರಿಕ್ಷಾಗಾಡಿ ತಳ್ಳಲು ಸೇರಿದ್ದರು. ಅಲ್ಲಿಯೂ ಸ್ಥಳೀಯ ರೌಡಿಗಳು ಆತನ ಗಾಡಿಯನ್ನು ವಶಪಡಿಸಿಕೊಂಡು ಕಿರುಕುಳ ಕೊಟ್ಟ ಕಾರಣದಿಂದ ಆತ ದಿಕ್ಕುತೋಚದೆ ಅಲೆಯುತ್ತಿದ್ದನು.. ಈ ಘಟನೆಗೆ ಯಾರು ಹೊಣೆ?
ಈಗ ಚಿಕ್ಕಬಳ್ಳಾಪುರದ ಕಂದಮ್ಮಗಳ ವಿಚಾರಕ್ಕೆ ಬರುವುದಾದರೆ ಇವರ ಪೋಷಕರು ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ವಲಸೆ ಹೋಗಿದ್ದರು. ತಮ್ಮ 5 ಮಕ್ಕಳ ಜೊತೆಗೆ ತನ್ನ ತಂಗಿಯ ಮಗಳನ್ನು ಸಾಕಿಕೊಂಡಿದ್ದ ನಾಗಮಣಿ ಮತ್ತು ಗಿರೀಶ್ ಇಬ್ಬರು ತೀವ್ರ ಮದ್ಯಪಾನ ವ್ಯಸನಿಗಳಾಗಿದ್ದರು. ಇವರು ದಿನ ಕುಡಿದು ಕೆಲಸ ಅರಸಿ ಹೋಗುತ್ತಿದ್ದರಿಂದ ಮಕ್ಕಳ ಊಟದ ಬಗ್ಗೆ ಯೋಚಿಸಿಲ್ಲ. ಇದರಿಂದ ಕಂಗೆಟ್ಟ ಮಕ್ಕಳು ವಿಧಿಯಿಲ್ಲದೇ ಎರಡು ಮೂರು ದಿನ ಮಣ್ಣು ತಿಂದ ಕಾರಣ ಸಾವನಪ್ಪಿವೆ. ಆರು ತಿಂಗಳ ಹಿಂದೆಯು ಸಹ ಇವರ ಸಂತೋಷ್ ಎಂಬ ಮಗುವು ಸಹ ಹಸಿವಿನಿಂದಲೇ ಸಾವನ್ನಪ್ಪಿತ್ತು ಎಂದು ತಿಳಿದು ಬಂದಿದೆ. ಆ ಕುಟುಂಬದ ಇನ್ನುಳಿದ ಮೂರು ಮಕ್ಕಳನ್ನು ಜಿಲ್ಲಾಡಳಿತದ ವತಿಯಿಂದ ಸ್ಥಳೀಯ ಅಂಗನವಾಡಿಗೆ ಸೇರಿಸಲಾಗಿದೆಯಂತೆ.
ಈ ಘಟನೆಯನ್ನು ನೆನೆಸಿಕೊಂಡರೆ ಮೈ ಜುಂ ಎನ್ನುತ್ತದೆ. ಈಗ ಈ ಘಟನೆಗೆ ಯಾರನ್ನು ಹೊಣೆ ಮಾಡೋಣ? ಈ ರೀತಿಯ ಘಟನೆಗಳು ನಮ್ಮನ್ನು ಅಲ್ಲಾಡಿಸುತ್ತವೆ. ಆದರೆ ಭಾರತದಲ್ಲಿ ದಿನವೊಂದಕ್ಕೆ 3000 ಮಕ್ಕಳು ಅಪೌಷ್ಟಿಕತೆಯಿಂದ ಸಾವನಪ್ಪುತ್ತಿದ್ದಾರೆ. ಹಸಿವಿನಿಂದ ಸಾಯುವುದಕ್ಕೂ, ಅಪೌಷ್ಟಿಕತೆಯಿಂದ ಸಾಯುವುದಕ್ಕೂ ಏನಾದರೂ ವ್ಯತ್ಯಾಸವಿದೆಯೇ? ನಮ್ಮ ಕುತಂತ್ರಿ ಸರ್ಕಾರಗಳು ಅಪೌಷ್ಟಿಕತೆಯಿಂದ ಸಾವು ಎಂದು ಹೇಳುತ್ತವೆಯೇ ಹೊರತು ಹಸಿವಿನಿಂದ ಸಾವು ಎನ್ನುವುದಿಲ್ಲ.
ಈ ದೇಶದಲ್ಲಿ 1000ಕ್ಕೆ 34 ಮಕ್ಕಳು ತಾಯಿಯ ಅಪೌಷ್ಠಿಕತೆಯ ಕಾರಣದಿಂದ ಗರ್ಭದಲ್ಲೇ ಅಸುನೀಗುತ್ತಿವೆ. ಈ ಅಪೌಷ್ಠಿಕತೆಯಿಂದ 9ಲಕ್ಷಕ್ಕೂ ಹೆಚ್ಚು ಮಕ್ಕಳು 5 ವರ್ಷ ತುಂಬುವ ಮೊದಲೇ ಮರಣಹೊಂದಿವೆ. ಈಗಲೂ ಭಾರತದಲ್ಲಿ ಸುಮಾರು 19 ಕೋಟಿ ಜನರು ಹಸಿವಿನಿಂದ ಜೀವನ ದೂಡುತ್ತಿದ್ದಾರೆ ಎಂದು ಅಂಕಿಅಂಶಗಳು ಹೇಳುತ್ತಿವೆ. ಇದರ ಬಗ್ಗೆ ಯಾರು ಯೋಚಿಸಬೇಕು? ಇವರ ಕುರಿತು ಆಳುವ ಸರ್ಕಾರಗಳ ಕ್ರಮವೇನು? ಅದೆಷ್ಟೋ ಸಾವಿರ ಟನ್‍ಗಳಷ್ಟು ಆಹಾರ ಗೋದಾಮುಗಳಲ್ಲಿ ಕೊಳೆಯುತ್ತಿದೆ ಎಂದು ವರದಿಗಳು ಹೇಳುತ್ತಿವೆ, ಈ ವಿರೋಧಾಭಾಸಕ್ಕೆ ಏನು ಮಾಡೋಣ?
ಈಗ ನಮ್ಮ ಪಾತ್ರಕ್ಕೆ ಬರೋಣ. ಆಹಾರ ಎಂಬ ಮೂಲಭೂತ ಅಗತ್ಯದ ಹಕ್ಕಿನ ಕುರಿತು ನಾವೆಷ್ಟು ಚರ್ಚಿಸಿದ್ದೇವೆ? ಇದಕ್ಕೆ ಹೊಂದಿಕೊಂಡಿರುವ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ವಿಚಾರಕ್ಕಾಗಿ ಎಷ್ಟು ಹೋರಾಡಿದ್ದೇವೆ? ಜನರ ನೈಜ ಸಮಸ್ಯೆಗಳನ್ನು ಮರೆಮಾಚಿ ಜಾತಿ, ಧರ್ಮ, ಸೈನ್ಯ ಇತ್ಯಾದಿ ಭಾವನಾತ್ಮಕ ವಿಚಾರಗಳಿಗೆ ಎಳೆಯುವ ಕಪಟ ಸರ್ಕಾರಗಳ ಜಾಲದಲ್ಲಿಯೇ ನಾವಿದ್ದೇವೆಯೇ? ಈ ದೇಶದ 73% ಸಂಪತ್ತನ್ನು ಕೇವಲ 1% ಬಂಡವಾಳಶಾಹಿ ಶ್ರೀಮಂತರು ಲೂಟಿ ಹೊಡೆಯುತ್ತಿರುವಾಗ ನಾವು ದನಿ ಎತ್ತಿದ್ದೇವೆಯೇ? ಓಟು ಹಾಕುವ ಮುನ್ನ ಬಡಜನರ ಪರ ಈ ನೀತಿ ತನ್ನಿ ಎಂದು ರಾಜಕಾರಣಿಗಳಿಗೆ ಒತ್ತಡ ತಂದಿದ್ದೇವೆಯೇ?
ಅದೆಲ್ಲಾ ಹೋಗಲಿ ಕೇರಳದಲ್ಲಿ ಮಧು ಎಂಬಾತ ಹಸಿವು ತಾಳಲಾರದೇ 2 ಕೆ.ಜಿ ಅಕ್ಕಿ ಕದ್ದ ಎಂಬ ಕಾರಣಕ್ಕೆ ಆತನನ್ನು ಹೊಡೆದು ಸಾಯಿಸಿಯೇಬಿಟ್ಟರು. ಊಟ ಡೆಲಿವರಿ ಮಾಡುವ ಹುಡುಗನೊಬ್ಬ ಸ್ವಲ್ಪ ಆಹಾರ ತಿಂದಿದ್ದಕ್ಕೆ ಪ್ರಪಂಚವೇ ಮುಳುಗಿ ಹೋಯಿತು ಎಂಬು ಬೊಬ್ಬಿರದಲ್ಲ? ಆತನನ್ನ ಹೇಗೆ ನಡೆಸಿಕೊಂಡಿತು ನಮ್ಮ ಸಮಾಜ? ಇದೆಲ್ಲವನ್ನು ಎಷ್ಟು ಜನ ಪ್ರಶ್ನಿಸಿದ್ದೇವೆ?
ಇಲ್ಲದಿದ್ದಲ್ಲಿ ಈ ಮಕ್ಕಳ ಸಾವಿಗೆ ಮರುಗಲು ನಮಗೆ ಅರ್ಹತೆ ಇದೆಯೇ? ಎಲ್ಲಿಯವರೆಗೂ ಆಳುವ ವರ್ಗಗಳ ಜನಪರವಾಗಿ ಕೆಲಸ ಮಾಡುವಂತೆ ನಾವು ಒತ್ತಾಯಿಸುವುದಿಲ್ಲವೋ ಅಲ್ಲಿಯವರೆಗೆ ಚಿಕ್ಕಬಳ್ಳಾಪುರದಿಂದ ದೆಹಲಿಯವರೆಗೂ ಈ ಸಾವುಗಳು ನಡೆಯುತ್ತಲೇ ಇರುತ್ತವೆ. ನಾವು ಒಂದಷ್ಟು ಕಂಬನಿ ಸುರಿಸಿ ನಂತರ ನಾರ್ಮಲ್ ಆಗಿ ಇದ್ದುಬಿಡುತ್ತೇವೆ. ಇನ್ನು ಮುಂದೆ ತುಂಬಾ ನಾರ್ಮಲ್ ಆಗಿರುವುದು ಬೇಡ; ಏಕೆಂದರೆ ಈ ದೇಶ ನಾರ್ಮಲ್ ಆಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...