Homeಕರ್ನಾಟಕಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

ಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

- Advertisement -
| ಮುತ್ತುರಾಜ್ |
ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಮ್ಮಗಳೆರಡು ತಿನ್ನಲು ಆಹಾರವಿಲ್ಲದೇ ಮಣ್ಣು ತಿಂದ ಪರಿಣಾಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ. ಈ ಮಕ್ಕಳ ಪೋಷಕರಿಬ್ಬರೂ ಸಹ ಕುಡುಕರಾಗಿದ್ದ ಕಾರಣಕ್ಕಾಗಿ ಗಮನಹರಿಸದೇ ಹೋದದ್ದರಿಂದ ಈ ದುರ್ಘಟನೆ ನಡೆದು ಹೋಗಿದೆ ಹೇಳಲಾಗುತ್ತಿದೆ. ಇದರ ಕುರಿತು ಬಹಳಷ್ಟು ಜನರು ಕಂಬನಿ ಮಿಡಿದಿದ್ದು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ರೀತಿಯ ಘಟನೆಗಳು ನಡೆದಾಗ ಸಹಜವಾಗಿಯೇ ಬಹುತೇಕ ಮಂದಿ ಮರುಗುತ್ತಾರೆ. ಆದರೆ ದುರಂತದ ಸಂಗತಿಯೆಂದರೆ ಈ ರೀತಿಯ ದುರ್ಘಟನೆಗಳು ಪ್ರತಿನಿತ್ಯವೂ ನಡೆಯುತ್ತಲೇ ಇವೆ.
ಕಳೆದ ವರ್ಷ ಜುಲೈನಲ್ಲಿ ದೆಹಲಿಯಲ್ಲಿ ಇದೇ ರೀತಿ ಹಸಿವಿನಿಂದ ಬಳಲಿ ಮೂವರು ಮಕ್ಕಳು ಅಸುನೀಗಿದ್ದರು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಕಳೆದ ಹಲವು ದಿನಗಳಿಂದ ಮಕ್ಕಳು ಏನನ್ನು ತಿಂದಿಲ್ಲದ ಕಾರಣಕ್ಕೆ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದರು. ವಿಚಾರಣೆಗಾಗಿ ಆ ಮಕ್ಕಳ ತಾಯಿಯನ್ನು ಪೋಲಿಸರು ಪ್ರಶ್ನಿಸಿದರೆ ಆಕೆ ಹೇಳಿದ್ದು ‘ಮೊದಲು ನನಗೆ ಊಟ ಕೊಡಿ’ ಎಂದು.. ಆ ಮಕ್ಕಳ ತಂದೆ ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ದೆಹಲಿಗೆ ಬಂದಿದ್ದು ಯಾವುದೇ ಉದ್ಯೋಗ ಸಿಗದೇ ಕೊನೆಗೆ ರಿಕ್ಷಾಗಾಡಿ ತಳ್ಳಲು ಸೇರಿದ್ದರು. ಅಲ್ಲಿಯೂ ಸ್ಥಳೀಯ ರೌಡಿಗಳು ಆತನ ಗಾಡಿಯನ್ನು ವಶಪಡಿಸಿಕೊಂಡು ಕಿರುಕುಳ ಕೊಟ್ಟ ಕಾರಣದಿಂದ ಆತ ದಿಕ್ಕುತೋಚದೆ ಅಲೆಯುತ್ತಿದ್ದನು.. ಈ ಘಟನೆಗೆ ಯಾರು ಹೊಣೆ?
ಈಗ ಚಿಕ್ಕಬಳ್ಳಾಪುರದ ಕಂದಮ್ಮಗಳ ವಿಚಾರಕ್ಕೆ ಬರುವುದಾದರೆ ಇವರ ಪೋಷಕರು ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ವಲಸೆ ಹೋಗಿದ್ದರು. ತಮ್ಮ 5 ಮಕ್ಕಳ ಜೊತೆಗೆ ತನ್ನ ತಂಗಿಯ ಮಗಳನ್ನು ಸಾಕಿಕೊಂಡಿದ್ದ ನಾಗಮಣಿ ಮತ್ತು ಗಿರೀಶ್ ಇಬ್ಬರು ತೀವ್ರ ಮದ್ಯಪಾನ ವ್ಯಸನಿಗಳಾಗಿದ್ದರು. ಇವರು ದಿನ ಕುಡಿದು ಕೆಲಸ ಅರಸಿ ಹೋಗುತ್ತಿದ್ದರಿಂದ ಮಕ್ಕಳ ಊಟದ ಬಗ್ಗೆ ಯೋಚಿಸಿಲ್ಲ. ಇದರಿಂದ ಕಂಗೆಟ್ಟ ಮಕ್ಕಳು ವಿಧಿಯಿಲ್ಲದೇ ಎರಡು ಮೂರು ದಿನ ಮಣ್ಣು ತಿಂದ ಕಾರಣ ಸಾವನಪ್ಪಿವೆ. ಆರು ತಿಂಗಳ ಹಿಂದೆಯು ಸಹ ಇವರ ಸಂತೋಷ್ ಎಂಬ ಮಗುವು ಸಹ ಹಸಿವಿನಿಂದಲೇ ಸಾವನ್ನಪ್ಪಿತ್ತು ಎಂದು ತಿಳಿದು ಬಂದಿದೆ. ಆ ಕುಟುಂಬದ ಇನ್ನುಳಿದ ಮೂರು ಮಕ್ಕಳನ್ನು ಜಿಲ್ಲಾಡಳಿತದ ವತಿಯಿಂದ ಸ್ಥಳೀಯ ಅಂಗನವಾಡಿಗೆ ಸೇರಿಸಲಾಗಿದೆಯಂತೆ.
ಈ ಘಟನೆಯನ್ನು ನೆನೆಸಿಕೊಂಡರೆ ಮೈ ಜುಂ ಎನ್ನುತ್ತದೆ. ಈಗ ಈ ಘಟನೆಗೆ ಯಾರನ್ನು ಹೊಣೆ ಮಾಡೋಣ? ಈ ರೀತಿಯ ಘಟನೆಗಳು ನಮ್ಮನ್ನು ಅಲ್ಲಾಡಿಸುತ್ತವೆ. ಆದರೆ ಭಾರತದಲ್ಲಿ ದಿನವೊಂದಕ್ಕೆ 3000 ಮಕ್ಕಳು ಅಪೌಷ್ಟಿಕತೆಯಿಂದ ಸಾವನಪ್ಪುತ್ತಿದ್ದಾರೆ. ಹಸಿವಿನಿಂದ ಸಾಯುವುದಕ್ಕೂ, ಅಪೌಷ್ಟಿಕತೆಯಿಂದ ಸಾಯುವುದಕ್ಕೂ ಏನಾದರೂ ವ್ಯತ್ಯಾಸವಿದೆಯೇ? ನಮ್ಮ ಕುತಂತ್ರಿ ಸರ್ಕಾರಗಳು ಅಪೌಷ್ಟಿಕತೆಯಿಂದ ಸಾವು ಎಂದು ಹೇಳುತ್ತವೆಯೇ ಹೊರತು ಹಸಿವಿನಿಂದ ಸಾವು ಎನ್ನುವುದಿಲ್ಲ.
ಈ ದೇಶದಲ್ಲಿ 1000ಕ್ಕೆ 34 ಮಕ್ಕಳು ತಾಯಿಯ ಅಪೌಷ್ಠಿಕತೆಯ ಕಾರಣದಿಂದ ಗರ್ಭದಲ್ಲೇ ಅಸುನೀಗುತ್ತಿವೆ. ಈ ಅಪೌಷ್ಠಿಕತೆಯಿಂದ 9ಲಕ್ಷಕ್ಕೂ ಹೆಚ್ಚು ಮಕ್ಕಳು 5 ವರ್ಷ ತುಂಬುವ ಮೊದಲೇ ಮರಣಹೊಂದಿವೆ. ಈಗಲೂ ಭಾರತದಲ್ಲಿ ಸುಮಾರು 19 ಕೋಟಿ ಜನರು ಹಸಿವಿನಿಂದ ಜೀವನ ದೂಡುತ್ತಿದ್ದಾರೆ ಎಂದು ಅಂಕಿಅಂಶಗಳು ಹೇಳುತ್ತಿವೆ. ಇದರ ಬಗ್ಗೆ ಯಾರು ಯೋಚಿಸಬೇಕು? ಇವರ ಕುರಿತು ಆಳುವ ಸರ್ಕಾರಗಳ ಕ್ರಮವೇನು? ಅದೆಷ್ಟೋ ಸಾವಿರ ಟನ್‍ಗಳಷ್ಟು ಆಹಾರ ಗೋದಾಮುಗಳಲ್ಲಿ ಕೊಳೆಯುತ್ತಿದೆ ಎಂದು ವರದಿಗಳು ಹೇಳುತ್ತಿವೆ, ಈ ವಿರೋಧಾಭಾಸಕ್ಕೆ ಏನು ಮಾಡೋಣ?
ಈಗ ನಮ್ಮ ಪಾತ್ರಕ್ಕೆ ಬರೋಣ. ಆಹಾರ ಎಂಬ ಮೂಲಭೂತ ಅಗತ್ಯದ ಹಕ್ಕಿನ ಕುರಿತು ನಾವೆಷ್ಟು ಚರ್ಚಿಸಿದ್ದೇವೆ? ಇದಕ್ಕೆ ಹೊಂದಿಕೊಂಡಿರುವ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ವಿಚಾರಕ್ಕಾಗಿ ಎಷ್ಟು ಹೋರಾಡಿದ್ದೇವೆ? ಜನರ ನೈಜ ಸಮಸ್ಯೆಗಳನ್ನು ಮರೆಮಾಚಿ ಜಾತಿ, ಧರ್ಮ, ಸೈನ್ಯ ಇತ್ಯಾದಿ ಭಾವನಾತ್ಮಕ ವಿಚಾರಗಳಿಗೆ ಎಳೆಯುವ ಕಪಟ ಸರ್ಕಾರಗಳ ಜಾಲದಲ್ಲಿಯೇ ನಾವಿದ್ದೇವೆಯೇ? ಈ ದೇಶದ 73% ಸಂಪತ್ತನ್ನು ಕೇವಲ 1% ಬಂಡವಾಳಶಾಹಿ ಶ್ರೀಮಂತರು ಲೂಟಿ ಹೊಡೆಯುತ್ತಿರುವಾಗ ನಾವು ದನಿ ಎತ್ತಿದ್ದೇವೆಯೇ? ಓಟು ಹಾಕುವ ಮುನ್ನ ಬಡಜನರ ಪರ ಈ ನೀತಿ ತನ್ನಿ ಎಂದು ರಾಜಕಾರಣಿಗಳಿಗೆ ಒತ್ತಡ ತಂದಿದ್ದೇವೆಯೇ?
ಅದೆಲ್ಲಾ ಹೋಗಲಿ ಕೇರಳದಲ್ಲಿ ಮಧು ಎಂಬಾತ ಹಸಿವು ತಾಳಲಾರದೇ 2 ಕೆ.ಜಿ ಅಕ್ಕಿ ಕದ್ದ ಎಂಬ ಕಾರಣಕ್ಕೆ ಆತನನ್ನು ಹೊಡೆದು ಸಾಯಿಸಿಯೇಬಿಟ್ಟರು. ಊಟ ಡೆಲಿವರಿ ಮಾಡುವ ಹುಡುಗನೊಬ್ಬ ಸ್ವಲ್ಪ ಆಹಾರ ತಿಂದಿದ್ದಕ್ಕೆ ಪ್ರಪಂಚವೇ ಮುಳುಗಿ ಹೋಯಿತು ಎಂಬು ಬೊಬ್ಬಿರದಲ್ಲ? ಆತನನ್ನ ಹೇಗೆ ನಡೆಸಿಕೊಂಡಿತು ನಮ್ಮ ಸಮಾಜ? ಇದೆಲ್ಲವನ್ನು ಎಷ್ಟು ಜನ ಪ್ರಶ್ನಿಸಿದ್ದೇವೆ?
ಇಲ್ಲದಿದ್ದಲ್ಲಿ ಈ ಮಕ್ಕಳ ಸಾವಿಗೆ ಮರುಗಲು ನಮಗೆ ಅರ್ಹತೆ ಇದೆಯೇ? ಎಲ್ಲಿಯವರೆಗೂ ಆಳುವ ವರ್ಗಗಳ ಜನಪರವಾಗಿ ಕೆಲಸ ಮಾಡುವಂತೆ ನಾವು ಒತ್ತಾಯಿಸುವುದಿಲ್ಲವೋ ಅಲ್ಲಿಯವರೆಗೆ ಚಿಕ್ಕಬಳ್ಳಾಪುರದಿಂದ ದೆಹಲಿಯವರೆಗೂ ಈ ಸಾವುಗಳು ನಡೆಯುತ್ತಲೇ ಇರುತ್ತವೆ. ನಾವು ಒಂದಷ್ಟು ಕಂಬನಿ ಸುರಿಸಿ ನಂತರ ನಾರ್ಮಲ್ ಆಗಿ ಇದ್ದುಬಿಡುತ್ತೇವೆ. ಇನ್ನು ಮುಂದೆ ತುಂಬಾ ನಾರ್ಮಲ್ ಆಗಿರುವುದು ಬೇಡ; ಏಕೆಂದರೆ ಈ ದೇಶ ನಾರ್ಮಲ್ ಆಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...