Homeಕರ್ನಾಟಕಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

ಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

- Advertisement -
| ಮುತ್ತುರಾಜ್ |
ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಮ್ಮಗಳೆರಡು ತಿನ್ನಲು ಆಹಾರವಿಲ್ಲದೇ ಮಣ್ಣು ತಿಂದ ಪರಿಣಾಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ. ಈ ಮಕ್ಕಳ ಪೋಷಕರಿಬ್ಬರೂ ಸಹ ಕುಡುಕರಾಗಿದ್ದ ಕಾರಣಕ್ಕಾಗಿ ಗಮನಹರಿಸದೇ ಹೋದದ್ದರಿಂದ ಈ ದುರ್ಘಟನೆ ನಡೆದು ಹೋಗಿದೆ ಹೇಳಲಾಗುತ್ತಿದೆ. ಇದರ ಕುರಿತು ಬಹಳಷ್ಟು ಜನರು ಕಂಬನಿ ಮಿಡಿದಿದ್ದು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ರೀತಿಯ ಘಟನೆಗಳು ನಡೆದಾಗ ಸಹಜವಾಗಿಯೇ ಬಹುತೇಕ ಮಂದಿ ಮರುಗುತ್ತಾರೆ. ಆದರೆ ದುರಂತದ ಸಂಗತಿಯೆಂದರೆ ಈ ರೀತಿಯ ದುರ್ಘಟನೆಗಳು ಪ್ರತಿನಿತ್ಯವೂ ನಡೆಯುತ್ತಲೇ ಇವೆ.
ಕಳೆದ ವರ್ಷ ಜುಲೈನಲ್ಲಿ ದೆಹಲಿಯಲ್ಲಿ ಇದೇ ರೀತಿ ಹಸಿವಿನಿಂದ ಬಳಲಿ ಮೂವರು ಮಕ್ಕಳು ಅಸುನೀಗಿದ್ದರು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಕಳೆದ ಹಲವು ದಿನಗಳಿಂದ ಮಕ್ಕಳು ಏನನ್ನು ತಿಂದಿಲ್ಲದ ಕಾರಣಕ್ಕೆ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದರು. ವಿಚಾರಣೆಗಾಗಿ ಆ ಮಕ್ಕಳ ತಾಯಿಯನ್ನು ಪೋಲಿಸರು ಪ್ರಶ್ನಿಸಿದರೆ ಆಕೆ ಹೇಳಿದ್ದು ‘ಮೊದಲು ನನಗೆ ಊಟ ಕೊಡಿ’ ಎಂದು.. ಆ ಮಕ್ಕಳ ತಂದೆ ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ದೆಹಲಿಗೆ ಬಂದಿದ್ದು ಯಾವುದೇ ಉದ್ಯೋಗ ಸಿಗದೇ ಕೊನೆಗೆ ರಿಕ್ಷಾಗಾಡಿ ತಳ್ಳಲು ಸೇರಿದ್ದರು. ಅಲ್ಲಿಯೂ ಸ್ಥಳೀಯ ರೌಡಿಗಳು ಆತನ ಗಾಡಿಯನ್ನು ವಶಪಡಿಸಿಕೊಂಡು ಕಿರುಕುಳ ಕೊಟ್ಟ ಕಾರಣದಿಂದ ಆತ ದಿಕ್ಕುತೋಚದೆ ಅಲೆಯುತ್ತಿದ್ದನು.. ಈ ಘಟನೆಗೆ ಯಾರು ಹೊಣೆ?
ಈಗ ಚಿಕ್ಕಬಳ್ಳಾಪುರದ ಕಂದಮ್ಮಗಳ ವಿಚಾರಕ್ಕೆ ಬರುವುದಾದರೆ ಇವರ ಪೋಷಕರು ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ವಲಸೆ ಹೋಗಿದ್ದರು. ತಮ್ಮ 5 ಮಕ್ಕಳ ಜೊತೆಗೆ ತನ್ನ ತಂಗಿಯ ಮಗಳನ್ನು ಸಾಕಿಕೊಂಡಿದ್ದ ನಾಗಮಣಿ ಮತ್ತು ಗಿರೀಶ್ ಇಬ್ಬರು ತೀವ್ರ ಮದ್ಯಪಾನ ವ್ಯಸನಿಗಳಾಗಿದ್ದರು. ಇವರು ದಿನ ಕುಡಿದು ಕೆಲಸ ಅರಸಿ ಹೋಗುತ್ತಿದ್ದರಿಂದ ಮಕ್ಕಳ ಊಟದ ಬಗ್ಗೆ ಯೋಚಿಸಿಲ್ಲ. ಇದರಿಂದ ಕಂಗೆಟ್ಟ ಮಕ್ಕಳು ವಿಧಿಯಿಲ್ಲದೇ ಎರಡು ಮೂರು ದಿನ ಮಣ್ಣು ತಿಂದ ಕಾರಣ ಸಾವನಪ್ಪಿವೆ. ಆರು ತಿಂಗಳ ಹಿಂದೆಯು ಸಹ ಇವರ ಸಂತೋಷ್ ಎಂಬ ಮಗುವು ಸಹ ಹಸಿವಿನಿಂದಲೇ ಸಾವನ್ನಪ್ಪಿತ್ತು ಎಂದು ತಿಳಿದು ಬಂದಿದೆ. ಆ ಕುಟುಂಬದ ಇನ್ನುಳಿದ ಮೂರು ಮಕ್ಕಳನ್ನು ಜಿಲ್ಲಾಡಳಿತದ ವತಿಯಿಂದ ಸ್ಥಳೀಯ ಅಂಗನವಾಡಿಗೆ ಸೇರಿಸಲಾಗಿದೆಯಂತೆ.
ಈ ಘಟನೆಯನ್ನು ನೆನೆಸಿಕೊಂಡರೆ ಮೈ ಜುಂ ಎನ್ನುತ್ತದೆ. ಈಗ ಈ ಘಟನೆಗೆ ಯಾರನ್ನು ಹೊಣೆ ಮಾಡೋಣ? ಈ ರೀತಿಯ ಘಟನೆಗಳು ನಮ್ಮನ್ನು ಅಲ್ಲಾಡಿಸುತ್ತವೆ. ಆದರೆ ಭಾರತದಲ್ಲಿ ದಿನವೊಂದಕ್ಕೆ 3000 ಮಕ್ಕಳು ಅಪೌಷ್ಟಿಕತೆಯಿಂದ ಸಾವನಪ್ಪುತ್ತಿದ್ದಾರೆ. ಹಸಿವಿನಿಂದ ಸಾಯುವುದಕ್ಕೂ, ಅಪೌಷ್ಟಿಕತೆಯಿಂದ ಸಾಯುವುದಕ್ಕೂ ಏನಾದರೂ ವ್ಯತ್ಯಾಸವಿದೆಯೇ? ನಮ್ಮ ಕುತಂತ್ರಿ ಸರ್ಕಾರಗಳು ಅಪೌಷ್ಟಿಕತೆಯಿಂದ ಸಾವು ಎಂದು ಹೇಳುತ್ತವೆಯೇ ಹೊರತು ಹಸಿವಿನಿಂದ ಸಾವು ಎನ್ನುವುದಿಲ್ಲ.
ಈ ದೇಶದಲ್ಲಿ 1000ಕ್ಕೆ 34 ಮಕ್ಕಳು ತಾಯಿಯ ಅಪೌಷ್ಠಿಕತೆಯ ಕಾರಣದಿಂದ ಗರ್ಭದಲ್ಲೇ ಅಸುನೀಗುತ್ತಿವೆ. ಈ ಅಪೌಷ್ಠಿಕತೆಯಿಂದ 9ಲಕ್ಷಕ್ಕೂ ಹೆಚ್ಚು ಮಕ್ಕಳು 5 ವರ್ಷ ತುಂಬುವ ಮೊದಲೇ ಮರಣಹೊಂದಿವೆ. ಈಗಲೂ ಭಾರತದಲ್ಲಿ ಸುಮಾರು 19 ಕೋಟಿ ಜನರು ಹಸಿವಿನಿಂದ ಜೀವನ ದೂಡುತ್ತಿದ್ದಾರೆ ಎಂದು ಅಂಕಿಅಂಶಗಳು ಹೇಳುತ್ತಿವೆ. ಇದರ ಬಗ್ಗೆ ಯಾರು ಯೋಚಿಸಬೇಕು? ಇವರ ಕುರಿತು ಆಳುವ ಸರ್ಕಾರಗಳ ಕ್ರಮವೇನು? ಅದೆಷ್ಟೋ ಸಾವಿರ ಟನ್‍ಗಳಷ್ಟು ಆಹಾರ ಗೋದಾಮುಗಳಲ್ಲಿ ಕೊಳೆಯುತ್ತಿದೆ ಎಂದು ವರದಿಗಳು ಹೇಳುತ್ತಿವೆ, ಈ ವಿರೋಧಾಭಾಸಕ್ಕೆ ಏನು ಮಾಡೋಣ?
ಈಗ ನಮ್ಮ ಪಾತ್ರಕ್ಕೆ ಬರೋಣ. ಆಹಾರ ಎಂಬ ಮೂಲಭೂತ ಅಗತ್ಯದ ಹಕ್ಕಿನ ಕುರಿತು ನಾವೆಷ್ಟು ಚರ್ಚಿಸಿದ್ದೇವೆ? ಇದಕ್ಕೆ ಹೊಂದಿಕೊಂಡಿರುವ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ವಿಚಾರಕ್ಕಾಗಿ ಎಷ್ಟು ಹೋರಾಡಿದ್ದೇವೆ? ಜನರ ನೈಜ ಸಮಸ್ಯೆಗಳನ್ನು ಮರೆಮಾಚಿ ಜಾತಿ, ಧರ್ಮ, ಸೈನ್ಯ ಇತ್ಯಾದಿ ಭಾವನಾತ್ಮಕ ವಿಚಾರಗಳಿಗೆ ಎಳೆಯುವ ಕಪಟ ಸರ್ಕಾರಗಳ ಜಾಲದಲ್ಲಿಯೇ ನಾವಿದ್ದೇವೆಯೇ? ಈ ದೇಶದ 73% ಸಂಪತ್ತನ್ನು ಕೇವಲ 1% ಬಂಡವಾಳಶಾಹಿ ಶ್ರೀಮಂತರು ಲೂಟಿ ಹೊಡೆಯುತ್ತಿರುವಾಗ ನಾವು ದನಿ ಎತ್ತಿದ್ದೇವೆಯೇ? ಓಟು ಹಾಕುವ ಮುನ್ನ ಬಡಜನರ ಪರ ಈ ನೀತಿ ತನ್ನಿ ಎಂದು ರಾಜಕಾರಣಿಗಳಿಗೆ ಒತ್ತಡ ತಂದಿದ್ದೇವೆಯೇ?
ಅದೆಲ್ಲಾ ಹೋಗಲಿ ಕೇರಳದಲ್ಲಿ ಮಧು ಎಂಬಾತ ಹಸಿವು ತಾಳಲಾರದೇ 2 ಕೆ.ಜಿ ಅಕ್ಕಿ ಕದ್ದ ಎಂಬ ಕಾರಣಕ್ಕೆ ಆತನನ್ನು ಹೊಡೆದು ಸಾಯಿಸಿಯೇಬಿಟ್ಟರು. ಊಟ ಡೆಲಿವರಿ ಮಾಡುವ ಹುಡುಗನೊಬ್ಬ ಸ್ವಲ್ಪ ಆಹಾರ ತಿಂದಿದ್ದಕ್ಕೆ ಪ್ರಪಂಚವೇ ಮುಳುಗಿ ಹೋಯಿತು ಎಂಬು ಬೊಬ್ಬಿರದಲ್ಲ? ಆತನನ್ನ ಹೇಗೆ ನಡೆಸಿಕೊಂಡಿತು ನಮ್ಮ ಸಮಾಜ? ಇದೆಲ್ಲವನ್ನು ಎಷ್ಟು ಜನ ಪ್ರಶ್ನಿಸಿದ್ದೇವೆ?
ಇಲ್ಲದಿದ್ದಲ್ಲಿ ಈ ಮಕ್ಕಳ ಸಾವಿಗೆ ಮರುಗಲು ನಮಗೆ ಅರ್ಹತೆ ಇದೆಯೇ? ಎಲ್ಲಿಯವರೆಗೂ ಆಳುವ ವರ್ಗಗಳ ಜನಪರವಾಗಿ ಕೆಲಸ ಮಾಡುವಂತೆ ನಾವು ಒತ್ತಾಯಿಸುವುದಿಲ್ಲವೋ ಅಲ್ಲಿಯವರೆಗೆ ಚಿಕ್ಕಬಳ್ಳಾಪುರದಿಂದ ದೆಹಲಿಯವರೆಗೂ ಈ ಸಾವುಗಳು ನಡೆಯುತ್ತಲೇ ಇರುತ್ತವೆ. ನಾವು ಒಂದಷ್ಟು ಕಂಬನಿ ಸುರಿಸಿ ನಂತರ ನಾರ್ಮಲ್ ಆಗಿ ಇದ್ದುಬಿಡುತ್ತೇವೆ. ಇನ್ನು ಮುಂದೆ ತುಂಬಾ ನಾರ್ಮಲ್ ಆಗಿರುವುದು ಬೇಡ; ಏಕೆಂದರೆ ಈ ದೇಶ ನಾರ್ಮಲ್ ಆಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...