Homeದಲಿತ್ ಫೈಲ್ಸ್ಒಡಿಶಾ| ಇಬ್ಬರು ದಲಿತರ ತಲೆ ಬೋಳಿಸಿ, ಚರಂಡಿ ನೀರು ಕುಡಿಸಿ ದೌರ್ಜನ್ಯ

ಒಡಿಶಾ| ಇಬ್ಬರು ದಲಿತರ ತಲೆ ಬೋಳಿಸಿ, ಚರಂಡಿ ನೀರು ಕುಡಿಸಿ ದೌರ್ಜನ್ಯ

ಮನುವಾದಿ ಚಿಂತನೆಯ ಅನಾಗರಿಕತೆ- ರಾಹುಲ್ ಗಾಂಧಿ

- Advertisement -
- Advertisement -

ದನ ಕಳ್ಳಸಾಗಣೆ ಆರೋಪಿಸಿ ದಲಿತ ಸಮುದಾಯದ ಇಬ್ಬರು ವ್ಯಕ್ತಿಗಳಿಗೆ ಚಿತ್ರಹಿಂಸೆ ಕೊಟ್ಟಿರುವ ಘಟನೆ ದಕ್ಷಿಣ ಒಡಿಶಾದ ಗಂಜಾಂ ಜಿಲ್ಲೆಯ ಖರಿಗುಮ್ಮ ಗ್ರಾಮದಲ್ಲಿ ಭಾನುವಾರ (ಜೂ.22) ನಡೆದಿದೆ.

ವರದಿಗಳ ಪ್ರಕಾರ, ಇಬ್ಬರು ವ್ಯಕ್ತಿಗಳಿಗೆ ಮೊದಲಿಗೆ ಹಲ್ಲೆ ನಡೆಸಲಾಗಿದೆ. ಬಳಿಕ, ಅವರ ಅರ್ಧ ತಲೆ ಬೋಳಿಸಿ, ಹುಲ್ಲು ತಿನ್ನಿಸಿ, ಚರಂಡಿ ನೀರು ಕುಡಿಸಿ ಚಿತ್ರಹಿಂಸೆ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಬೆತ್ತ ಹಿಡಿದು ನಿಂತಿರುವ ವ್ಯಕ್ತಿಗಳು, ಪ್ರಾಣಿಗಳಂತೆ ಇಬ್ಬರ ಬಾಯಲ್ಲಿ ಹುಲ್ಲು ಕಚ್ಚಿಸಿ ರಸ್ತೆಯಲ್ಲಿ ಮಂಡಿ ಮೇಲೆ ನಡೆಸಿರುವುದನ್ನು ನೋಡಬಹುದು.

ಧರಾಕೋಟೆ ಬ್ಲಾಕ್‌ನ ಸಿಂಗಿಪುರ ಗ್ರಾಮದ ನಿವಾಸಿಗಳಾದ ಬುಲು ನಾಯಕ್ ಮತ್ತು ಬಾಬುಲ ನಾಯಕ್ (ಇಬ್ಬರೂ 40ರ ಹರೆಯದವರು) ತಮ್ಮ ಪುತ್ರಿಯರ ಮದುವೆಗೆ ವರದಕ್ಷಿಣೆಯ ಭಾಗವಾಗಿ ಹರಿಪುರದಿಂದ ಒಂದು ಹಸು ಮತ್ತು ಎರಡು ಕರುಗಳನ್ನು ಖರೀದಿಸಿ, ಸರಕು ಸಾಗಣೆ ಆಟೋರಿಕ್ಷಾದಲ್ಲಿ ತಮ್ಮ ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದರು.

ಈ ವೇಳೆ ಖರಿಗುಮ್ಮ ಗ್ರಾಮದ ಬಳಿ ಸ್ಥಳೀಯರ ಗುಂಪೊಂದು ಅವರನ್ನು ತಡೆದು, ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿದೆ. ಗುಂಪು ಅವರ ಮೊಬೈಲ್ ಫೋನ್‌ಗಳು ಮತ್ತು ಹಣವನ್ನು ಕಸಿದುಕೊಂಡು ಜಾನುವಾರುಗಳನ್ನು ಬಿಟ್ಟು ಕಳಿಸಬೇಕಾದರೆ 30,000 ರೂಪಾಯಿ ಕೊಡುವಂತೆ ಒತ್ತಾಯಿಸಿದೆ. ಇಬ್ಬರೂ ನಿರಾಕರಿಸಿದಾಗ, ದುಷ್ಕರ್ಮಿಗಳು ಅವರ ಕೈಕಾಲುಗಳನ್ನು ಕಟ್ಟಿ, ಥಳಿಸಿದ್ದಾರೆ. ಸ್ಥಳೀಯ ಸಲೂನ್‌ನಲ್ಲಿ ಅರ್ಧ ತಲೆ ಬೋಳಿಸಿ, ಇಬ್ಬರನ್ನೂ ಖರಿಗುಮ್ಮದಿಂದ ಜಹಾಡ ಗ್ರಾಮಕ್ಕೆ ಸುಮಾರು ಎರಡು ಕಿ.ಮೀ ದೂರ ಮಂಡಿ ಮೇಲೆ ನಡೆಸಿದ್ದಾರೆ.

ನಂತರ ಜಹಾಡ ಗ್ರಾಮದ ಚೌಕ್‌ನಲ್ಲಿ ಇಬ್ಬರಿಗೂ ಹುಲ್ಲು ತಿನ್ನುವಂತೆ ಮತ್ತು ಚರಂಡಿ ನೀರು ಕುಡಿಯುವಂತೆ ಒತ್ತಾಯಿಸಿದ್ದಾರೆ. ಗ್ರಾಮಸ್ಥರೊಬ್ಬರು ಈ ವಿಷಯವನ್ನು ಸ್ಥಳೀಯ ನಾಯಕರಿಗೆ ತಿಳಿಸಿದ್ದಾರೆ. ಅವರು ಸ್ಥಳಕ್ಕಾಗಮಿಸಿ ಇಬ್ಬರನ್ನು ಬಿಡುಗಡೆ ಮಾಡುವಂತೆ ಕೋರಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಅವರಿಗೂ 30 ಸಾವಿರ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದಾರೆ.

ಹಲ್ಲೆಯಿಂದಾಗಿ ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿದ್ದರೂ, ಇಬ್ಬರು ಸಂತ್ರಸ್ತರು ಸ್ಥಳದಿಂದ ತಪ್ಪಿಸಿಕೊಂಡು ತಮ್ಮ ಗ್ರಾಮ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಧರಾಕೋಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದಾಗ್ಯೂ, ಪೊಲೀಸರು ಭಾನುವಾರ ವಿವಿಐಪಿ ಕರ್ತವ್ಯದಲ್ಲಿ ನಿರತರಾಗಿದ್ದರಿಂದ ತಡರಾತ್ರಿಯ ವೇಳೆಗೆ ದೂರು ಸ್ವೀಕರಿಸಿ ಎಫ್‌ಐಆರ್ ಮಾಡಿದ್ದಾರೆ.

ಈ ಅಮಾನವೀಯ ಕೃತ್ಯದ ಸುದ್ದಿ ತಿಳಿದ ದಲಿತ ಮಹಾಸಭಾದ ಗಂಜಾಂ ಘಟಕದ ನಾಯಕರು ಸಿಂಗಿಪುರ ಗ್ರಾಮದಲ್ಲಿ ಸೋಮವಾರ (ಜೂ.23) ಪ್ರತಿಭಟನಾ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಒಂದು ವರ್ಷದ ಬಿಜೆಪಿ ಆಡಳಿತದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಗಂಜಾಂನಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಮತ್ತು ಅವರ ವಶದಲ್ಲಿರುವ ದನಗಳನ್ನು ತಕ್ಷಣವೇ ರಕ್ಷಿಸುವಂತೆ ದಲಿತ ಮಹಾಸಭಾ ಒತ್ತಾಯಿಸಿದೆ.

ಈ ಘಟನೆ ಕುರಿತು ಮಾತನಾಡಿರುವ ಗಂಜಾಂ ಎಸ್ಪಿ ಸುಭೇಂದು ಪಾತ್ರ, “ಖರಿಗುಮ್ಮ ಮತ್ತು ಜಹಾಡದ ಕೆಲವು ಗ್ರಾಮಸ್ಥರು ದನಗಳ ಕಳ್ಳಸಾಗಣೆ ಶಂಕೆಯ ಮೇಲೆ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ಮುಖ್ಯ ಉದ್ದೇಶ ಹಣ ಸುಲಿಗೆಯಾಗಿತ್ತು. ಸಂತ್ರಸ್ತರು ಹಣ ಕೊಡದಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಇಲ್ಲಿಯವರೆಗೆ, ಒಂಬತ್ತು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲರನ್ನು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಮನುವಾದಿ ಚಿಂತನೆಯ ಅನಾಗರಿಕತೆ ರಾಹುಲ್ ಗಾಂಧಿ ಆಗ್ರಹ:

ಘಟನೆ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, “ಇದು ಅಮಾನವೀಯ ಘಟನೆ ಮಾತ್ರವಲ್ಲ, ಮನುವಾದಿ ಚಿಂತನೆಯ ಅನಾಗರಿಕತೆ. ಜಾತಿ ಇನ್ನು ಮುಂದೆ ಒಂದು ಸಮಸ್ಯೆ ಅಲ್ಲ ಎನ್ನುವವರಿಗೆ ಕೈಗನ್ನಡಿ” ಎಂದಿದ್ದಾರೆ.

ಸಾಮಾಜಿ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು “ದಲಿತರ ಘನತೆಯನ್ನು ತುಳಿಯುವ ಪ್ರತಿಯೊಂದು ಘಟನೆಯೂ ಬಾಬಾ ಸಾಹೇಬರ ಸಂವಿಧಾನದ ಮೇಲಿನ ದಾಳಿ ಮತ್ತು ಸಮಾನತೆ, ನ್ಯಾಯ ಮತ್ತು ಮಾನವೀಯತೆಯ ವಿರುದ್ಧದ ಪಿತೂರಿಯಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗುತ್ತಿವೆ. ವಿಶೇಷವಾಗಿ ಒಡಿಶಾದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚಿವೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ದೇಶವು ಮನುಸ್ಮೃತಿಯಿಂದಲ್ಲ, ಸಂವಿಧಾನದಿಂದ ನಡೆಸಲ್ಪಡುತ್ತಿದೆ” ಎಂದು ಹೇಳಿದ್ದಾರೆ.

ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...