Homeದಲಿತ್ ಫೈಲ್ಸ್ಒಡಿಶಾ| ಇಬ್ಬರು ದಲಿತರ ತಲೆ ಬೋಳಿಸಿ, ಚರಂಡಿ ನೀರು ಕುಡಿಸಿ ದೌರ್ಜನ್ಯ

ಒಡಿಶಾ| ಇಬ್ಬರು ದಲಿತರ ತಲೆ ಬೋಳಿಸಿ, ಚರಂಡಿ ನೀರು ಕುಡಿಸಿ ದೌರ್ಜನ್ಯ

ಮನುವಾದಿ ಚಿಂತನೆಯ ಅನಾಗರಿಕತೆ- ರಾಹುಲ್ ಗಾಂಧಿ

- Advertisement -
- Advertisement -

ದನ ಕಳ್ಳಸಾಗಣೆ ಆರೋಪಿಸಿ ದಲಿತ ಸಮುದಾಯದ ಇಬ್ಬರು ವ್ಯಕ್ತಿಗಳಿಗೆ ಚಿತ್ರಹಿಂಸೆ ಕೊಟ್ಟಿರುವ ಘಟನೆ ದಕ್ಷಿಣ ಒಡಿಶಾದ ಗಂಜಾಂ ಜಿಲ್ಲೆಯ ಖರಿಗುಮ್ಮ ಗ್ರಾಮದಲ್ಲಿ ಭಾನುವಾರ (ಜೂ.22) ನಡೆದಿದೆ.

ವರದಿಗಳ ಪ್ರಕಾರ, ಇಬ್ಬರು ವ್ಯಕ್ತಿಗಳಿಗೆ ಮೊದಲಿಗೆ ಹಲ್ಲೆ ನಡೆಸಲಾಗಿದೆ. ಬಳಿಕ, ಅವರ ಅರ್ಧ ತಲೆ ಬೋಳಿಸಿ, ಹುಲ್ಲು ತಿನ್ನಿಸಿ, ಚರಂಡಿ ನೀರು ಕುಡಿಸಿ ಚಿತ್ರಹಿಂಸೆ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಬೆತ್ತ ಹಿಡಿದು ನಿಂತಿರುವ ವ್ಯಕ್ತಿಗಳು, ಪ್ರಾಣಿಗಳಂತೆ ಇಬ್ಬರ ಬಾಯಲ್ಲಿ ಹುಲ್ಲು ಕಚ್ಚಿಸಿ ರಸ್ತೆಯಲ್ಲಿ ಮಂಡಿ ಮೇಲೆ ನಡೆಸಿರುವುದನ್ನು ನೋಡಬಹುದು.

ಧರಾಕೋಟೆ ಬ್ಲಾಕ್‌ನ ಸಿಂಗಿಪುರ ಗ್ರಾಮದ ನಿವಾಸಿಗಳಾದ ಬುಲು ನಾಯಕ್ ಮತ್ತು ಬಾಬುಲ ನಾಯಕ್ (ಇಬ್ಬರೂ 40ರ ಹರೆಯದವರು) ತಮ್ಮ ಪುತ್ರಿಯರ ಮದುವೆಗೆ ವರದಕ್ಷಿಣೆಯ ಭಾಗವಾಗಿ ಹರಿಪುರದಿಂದ ಒಂದು ಹಸು ಮತ್ತು ಎರಡು ಕರುಗಳನ್ನು ಖರೀದಿಸಿ, ಸರಕು ಸಾಗಣೆ ಆಟೋರಿಕ್ಷಾದಲ್ಲಿ ತಮ್ಮ ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದರು.

ಈ ವೇಳೆ ಖರಿಗುಮ್ಮ ಗ್ರಾಮದ ಬಳಿ ಸ್ಥಳೀಯರ ಗುಂಪೊಂದು ಅವರನ್ನು ತಡೆದು, ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿದೆ. ಗುಂಪು ಅವರ ಮೊಬೈಲ್ ಫೋನ್‌ಗಳು ಮತ್ತು ಹಣವನ್ನು ಕಸಿದುಕೊಂಡು ಜಾನುವಾರುಗಳನ್ನು ಬಿಟ್ಟು ಕಳಿಸಬೇಕಾದರೆ 30,000 ರೂಪಾಯಿ ಕೊಡುವಂತೆ ಒತ್ತಾಯಿಸಿದೆ. ಇಬ್ಬರೂ ನಿರಾಕರಿಸಿದಾಗ, ದುಷ್ಕರ್ಮಿಗಳು ಅವರ ಕೈಕಾಲುಗಳನ್ನು ಕಟ್ಟಿ, ಥಳಿಸಿದ್ದಾರೆ. ಸ್ಥಳೀಯ ಸಲೂನ್‌ನಲ್ಲಿ ಅರ್ಧ ತಲೆ ಬೋಳಿಸಿ, ಇಬ್ಬರನ್ನೂ ಖರಿಗುಮ್ಮದಿಂದ ಜಹಾಡ ಗ್ರಾಮಕ್ಕೆ ಸುಮಾರು ಎರಡು ಕಿ.ಮೀ ದೂರ ಮಂಡಿ ಮೇಲೆ ನಡೆಸಿದ್ದಾರೆ.

ನಂತರ ಜಹಾಡ ಗ್ರಾಮದ ಚೌಕ್‌ನಲ್ಲಿ ಇಬ್ಬರಿಗೂ ಹುಲ್ಲು ತಿನ್ನುವಂತೆ ಮತ್ತು ಚರಂಡಿ ನೀರು ಕುಡಿಯುವಂತೆ ಒತ್ತಾಯಿಸಿದ್ದಾರೆ. ಗ್ರಾಮಸ್ಥರೊಬ್ಬರು ಈ ವಿಷಯವನ್ನು ಸ್ಥಳೀಯ ನಾಯಕರಿಗೆ ತಿಳಿಸಿದ್ದಾರೆ. ಅವರು ಸ್ಥಳಕ್ಕಾಗಮಿಸಿ ಇಬ್ಬರನ್ನು ಬಿಡುಗಡೆ ಮಾಡುವಂತೆ ಕೋರಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಅವರಿಗೂ 30 ಸಾವಿರ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದಾರೆ.

ಹಲ್ಲೆಯಿಂದಾಗಿ ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿದ್ದರೂ, ಇಬ್ಬರು ಸಂತ್ರಸ್ತರು ಸ್ಥಳದಿಂದ ತಪ್ಪಿಸಿಕೊಂಡು ತಮ್ಮ ಗ್ರಾಮ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಧರಾಕೋಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದಾಗ್ಯೂ, ಪೊಲೀಸರು ಭಾನುವಾರ ವಿವಿಐಪಿ ಕರ್ತವ್ಯದಲ್ಲಿ ನಿರತರಾಗಿದ್ದರಿಂದ ತಡರಾತ್ರಿಯ ವೇಳೆಗೆ ದೂರು ಸ್ವೀಕರಿಸಿ ಎಫ್‌ಐಆರ್ ಮಾಡಿದ್ದಾರೆ.

ಈ ಅಮಾನವೀಯ ಕೃತ್ಯದ ಸುದ್ದಿ ತಿಳಿದ ದಲಿತ ಮಹಾಸಭಾದ ಗಂಜಾಂ ಘಟಕದ ನಾಯಕರು ಸಿಂಗಿಪುರ ಗ್ರಾಮದಲ್ಲಿ ಸೋಮವಾರ (ಜೂ.23) ಪ್ರತಿಭಟನಾ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಒಂದು ವರ್ಷದ ಬಿಜೆಪಿ ಆಡಳಿತದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಗಂಜಾಂನಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಮತ್ತು ಅವರ ವಶದಲ್ಲಿರುವ ದನಗಳನ್ನು ತಕ್ಷಣವೇ ರಕ್ಷಿಸುವಂತೆ ದಲಿತ ಮಹಾಸಭಾ ಒತ್ತಾಯಿಸಿದೆ.

ಈ ಘಟನೆ ಕುರಿತು ಮಾತನಾಡಿರುವ ಗಂಜಾಂ ಎಸ್ಪಿ ಸುಭೇಂದು ಪಾತ್ರ, “ಖರಿಗುಮ್ಮ ಮತ್ತು ಜಹಾಡದ ಕೆಲವು ಗ್ರಾಮಸ್ಥರು ದನಗಳ ಕಳ್ಳಸಾಗಣೆ ಶಂಕೆಯ ಮೇಲೆ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ಮುಖ್ಯ ಉದ್ದೇಶ ಹಣ ಸುಲಿಗೆಯಾಗಿತ್ತು. ಸಂತ್ರಸ್ತರು ಹಣ ಕೊಡದಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಇಲ್ಲಿಯವರೆಗೆ, ಒಂಬತ್ತು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲರನ್ನು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಮನುವಾದಿ ಚಿಂತನೆಯ ಅನಾಗರಿಕತೆ ರಾಹುಲ್ ಗಾಂಧಿ ಆಗ್ರಹ:

ಘಟನೆ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, “ಇದು ಅಮಾನವೀಯ ಘಟನೆ ಮಾತ್ರವಲ್ಲ, ಮನುವಾದಿ ಚಿಂತನೆಯ ಅನಾಗರಿಕತೆ. ಜಾತಿ ಇನ್ನು ಮುಂದೆ ಒಂದು ಸಮಸ್ಯೆ ಅಲ್ಲ ಎನ್ನುವವರಿಗೆ ಕೈಗನ್ನಡಿ” ಎಂದಿದ್ದಾರೆ.

ಸಾಮಾಜಿ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು “ದಲಿತರ ಘನತೆಯನ್ನು ತುಳಿಯುವ ಪ್ರತಿಯೊಂದು ಘಟನೆಯೂ ಬಾಬಾ ಸಾಹೇಬರ ಸಂವಿಧಾನದ ಮೇಲಿನ ದಾಳಿ ಮತ್ತು ಸಮಾನತೆ, ನ್ಯಾಯ ಮತ್ತು ಮಾನವೀಯತೆಯ ವಿರುದ್ಧದ ಪಿತೂರಿಯಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗುತ್ತಿವೆ. ವಿಶೇಷವಾಗಿ ಒಡಿಶಾದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚಿವೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ದೇಶವು ಮನುಸ್ಮೃತಿಯಿಂದಲ್ಲ, ಸಂವಿಧಾನದಿಂದ ನಡೆಸಲ್ಪಡುತ್ತಿದೆ” ಎಂದು ಹೇಳಿದ್ದಾರೆ.

ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...