Homeದಲಿತ್ ಫೈಲ್ಸ್ಒಡಿಶಾ| ಇಬ್ಬರು ದಲಿತರ ತಲೆ ಬೋಳಿಸಿ, ಚರಂಡಿ ನೀರು ಕುಡಿಸಿ ದೌರ್ಜನ್ಯ

ಒಡಿಶಾ| ಇಬ್ಬರು ದಲಿತರ ತಲೆ ಬೋಳಿಸಿ, ಚರಂಡಿ ನೀರು ಕುಡಿಸಿ ದೌರ್ಜನ್ಯ

ಮನುವಾದಿ ಚಿಂತನೆಯ ಅನಾಗರಿಕತೆ- ರಾಹುಲ್ ಗಾಂಧಿ

- Advertisement -
- Advertisement -

ದನ ಕಳ್ಳಸಾಗಣೆ ಆರೋಪಿಸಿ ದಲಿತ ಸಮುದಾಯದ ಇಬ್ಬರು ವ್ಯಕ್ತಿಗಳಿಗೆ ಚಿತ್ರಹಿಂಸೆ ಕೊಟ್ಟಿರುವ ಘಟನೆ ದಕ್ಷಿಣ ಒಡಿಶಾದ ಗಂಜಾಂ ಜಿಲ್ಲೆಯ ಖರಿಗುಮ್ಮ ಗ್ರಾಮದಲ್ಲಿ ಭಾನುವಾರ (ಜೂ.22) ನಡೆದಿದೆ.

ವರದಿಗಳ ಪ್ರಕಾರ, ಇಬ್ಬರು ವ್ಯಕ್ತಿಗಳಿಗೆ ಮೊದಲಿಗೆ ಹಲ್ಲೆ ನಡೆಸಲಾಗಿದೆ. ಬಳಿಕ, ಅವರ ಅರ್ಧ ತಲೆ ಬೋಳಿಸಿ, ಹುಲ್ಲು ತಿನ್ನಿಸಿ, ಚರಂಡಿ ನೀರು ಕುಡಿಸಿ ಚಿತ್ರಹಿಂಸೆ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಬೆತ್ತ ಹಿಡಿದು ನಿಂತಿರುವ ವ್ಯಕ್ತಿಗಳು, ಪ್ರಾಣಿಗಳಂತೆ ಇಬ್ಬರ ಬಾಯಲ್ಲಿ ಹುಲ್ಲು ಕಚ್ಚಿಸಿ ರಸ್ತೆಯಲ್ಲಿ ಮಂಡಿ ಮೇಲೆ ನಡೆಸಿರುವುದನ್ನು ನೋಡಬಹುದು.

ಧರಾಕೋಟೆ ಬ್ಲಾಕ್‌ನ ಸಿಂಗಿಪುರ ಗ್ರಾಮದ ನಿವಾಸಿಗಳಾದ ಬುಲು ನಾಯಕ್ ಮತ್ತು ಬಾಬುಲ ನಾಯಕ್ (ಇಬ್ಬರೂ 40ರ ಹರೆಯದವರು) ತಮ್ಮ ಪುತ್ರಿಯರ ಮದುವೆಗೆ ವರದಕ್ಷಿಣೆಯ ಭಾಗವಾಗಿ ಹರಿಪುರದಿಂದ ಒಂದು ಹಸು ಮತ್ತು ಎರಡು ಕರುಗಳನ್ನು ಖರೀದಿಸಿ, ಸರಕು ಸಾಗಣೆ ಆಟೋರಿಕ್ಷಾದಲ್ಲಿ ತಮ್ಮ ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದರು.

ಈ ವೇಳೆ ಖರಿಗುಮ್ಮ ಗ್ರಾಮದ ಬಳಿ ಸ್ಥಳೀಯರ ಗುಂಪೊಂದು ಅವರನ್ನು ತಡೆದು, ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿದೆ. ಗುಂಪು ಅವರ ಮೊಬೈಲ್ ಫೋನ್‌ಗಳು ಮತ್ತು ಹಣವನ್ನು ಕಸಿದುಕೊಂಡು ಜಾನುವಾರುಗಳನ್ನು ಬಿಟ್ಟು ಕಳಿಸಬೇಕಾದರೆ 30,000 ರೂಪಾಯಿ ಕೊಡುವಂತೆ ಒತ್ತಾಯಿಸಿದೆ. ಇಬ್ಬರೂ ನಿರಾಕರಿಸಿದಾಗ, ದುಷ್ಕರ್ಮಿಗಳು ಅವರ ಕೈಕಾಲುಗಳನ್ನು ಕಟ್ಟಿ, ಥಳಿಸಿದ್ದಾರೆ. ಸ್ಥಳೀಯ ಸಲೂನ್‌ನಲ್ಲಿ ಅರ್ಧ ತಲೆ ಬೋಳಿಸಿ, ಇಬ್ಬರನ್ನೂ ಖರಿಗುಮ್ಮದಿಂದ ಜಹಾಡ ಗ್ರಾಮಕ್ಕೆ ಸುಮಾರು ಎರಡು ಕಿ.ಮೀ ದೂರ ಮಂಡಿ ಮೇಲೆ ನಡೆಸಿದ್ದಾರೆ.

ನಂತರ ಜಹಾಡ ಗ್ರಾಮದ ಚೌಕ್‌ನಲ್ಲಿ ಇಬ್ಬರಿಗೂ ಹುಲ್ಲು ತಿನ್ನುವಂತೆ ಮತ್ತು ಚರಂಡಿ ನೀರು ಕುಡಿಯುವಂತೆ ಒತ್ತಾಯಿಸಿದ್ದಾರೆ. ಗ್ರಾಮಸ್ಥರೊಬ್ಬರು ಈ ವಿಷಯವನ್ನು ಸ್ಥಳೀಯ ನಾಯಕರಿಗೆ ತಿಳಿಸಿದ್ದಾರೆ. ಅವರು ಸ್ಥಳಕ್ಕಾಗಮಿಸಿ ಇಬ್ಬರನ್ನು ಬಿಡುಗಡೆ ಮಾಡುವಂತೆ ಕೋರಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಅವರಿಗೂ 30 ಸಾವಿರ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದಾರೆ.

ಹಲ್ಲೆಯಿಂದಾಗಿ ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿದ್ದರೂ, ಇಬ್ಬರು ಸಂತ್ರಸ್ತರು ಸ್ಥಳದಿಂದ ತಪ್ಪಿಸಿಕೊಂಡು ತಮ್ಮ ಗ್ರಾಮ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಧರಾಕೋಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದಾಗ್ಯೂ, ಪೊಲೀಸರು ಭಾನುವಾರ ವಿವಿಐಪಿ ಕರ್ತವ್ಯದಲ್ಲಿ ನಿರತರಾಗಿದ್ದರಿಂದ ತಡರಾತ್ರಿಯ ವೇಳೆಗೆ ದೂರು ಸ್ವೀಕರಿಸಿ ಎಫ್‌ಐಆರ್ ಮಾಡಿದ್ದಾರೆ.

ಈ ಅಮಾನವೀಯ ಕೃತ್ಯದ ಸುದ್ದಿ ತಿಳಿದ ದಲಿತ ಮಹಾಸಭಾದ ಗಂಜಾಂ ಘಟಕದ ನಾಯಕರು ಸಿಂಗಿಪುರ ಗ್ರಾಮದಲ್ಲಿ ಸೋಮವಾರ (ಜೂ.23) ಪ್ರತಿಭಟನಾ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಒಂದು ವರ್ಷದ ಬಿಜೆಪಿ ಆಡಳಿತದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಗಂಜಾಂನಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಮತ್ತು ಅವರ ವಶದಲ್ಲಿರುವ ದನಗಳನ್ನು ತಕ್ಷಣವೇ ರಕ್ಷಿಸುವಂತೆ ದಲಿತ ಮಹಾಸಭಾ ಒತ್ತಾಯಿಸಿದೆ.

ಈ ಘಟನೆ ಕುರಿತು ಮಾತನಾಡಿರುವ ಗಂಜಾಂ ಎಸ್ಪಿ ಸುಭೇಂದು ಪಾತ್ರ, “ಖರಿಗುಮ್ಮ ಮತ್ತು ಜಹಾಡದ ಕೆಲವು ಗ್ರಾಮಸ್ಥರು ದನಗಳ ಕಳ್ಳಸಾಗಣೆ ಶಂಕೆಯ ಮೇಲೆ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ಮುಖ್ಯ ಉದ್ದೇಶ ಹಣ ಸುಲಿಗೆಯಾಗಿತ್ತು. ಸಂತ್ರಸ್ತರು ಹಣ ಕೊಡದಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಇಲ್ಲಿಯವರೆಗೆ, ಒಂಬತ್ತು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲರನ್ನು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಮನುವಾದಿ ಚಿಂತನೆಯ ಅನಾಗರಿಕತೆ ರಾಹುಲ್ ಗಾಂಧಿ ಆಗ್ರಹ:

ಘಟನೆ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, “ಇದು ಅಮಾನವೀಯ ಘಟನೆ ಮಾತ್ರವಲ್ಲ, ಮನುವಾದಿ ಚಿಂತನೆಯ ಅನಾಗರಿಕತೆ. ಜಾತಿ ಇನ್ನು ಮುಂದೆ ಒಂದು ಸಮಸ್ಯೆ ಅಲ್ಲ ಎನ್ನುವವರಿಗೆ ಕೈಗನ್ನಡಿ” ಎಂದಿದ್ದಾರೆ.

ಸಾಮಾಜಿ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು “ದಲಿತರ ಘನತೆಯನ್ನು ತುಳಿಯುವ ಪ್ರತಿಯೊಂದು ಘಟನೆಯೂ ಬಾಬಾ ಸಾಹೇಬರ ಸಂವಿಧಾನದ ಮೇಲಿನ ದಾಳಿ ಮತ್ತು ಸಮಾನತೆ, ನ್ಯಾಯ ಮತ್ತು ಮಾನವೀಯತೆಯ ವಿರುದ್ಧದ ಪಿತೂರಿಯಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗುತ್ತಿವೆ. ವಿಶೇಷವಾಗಿ ಒಡಿಶಾದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚಿವೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ದೇಶವು ಮನುಸ್ಮೃತಿಯಿಂದಲ್ಲ, ಸಂವಿಧಾನದಿಂದ ನಡೆಸಲ್ಪಡುತ್ತಿದೆ” ಎಂದು ಹೇಳಿದ್ದಾರೆ.

ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...