Homeದಲಿತ್ ಫೈಲ್ಸ್ಒಡಿಶಾ| ಇಬ್ಬರು ದಲಿತರ ತಲೆ ಬೋಳಿಸಿ, ಚರಂಡಿ ನೀರು ಕುಡಿಸಿ ದೌರ್ಜನ್ಯ

ಒಡಿಶಾ| ಇಬ್ಬರು ದಲಿತರ ತಲೆ ಬೋಳಿಸಿ, ಚರಂಡಿ ನೀರು ಕುಡಿಸಿ ದೌರ್ಜನ್ಯ

ಮನುವಾದಿ ಚಿಂತನೆಯ ಅನಾಗರಿಕತೆ- ರಾಹುಲ್ ಗಾಂಧಿ

- Advertisement -
- Advertisement -

ದನ ಕಳ್ಳಸಾಗಣೆ ಆರೋಪಿಸಿ ದಲಿತ ಸಮುದಾಯದ ಇಬ್ಬರು ವ್ಯಕ್ತಿಗಳಿಗೆ ಚಿತ್ರಹಿಂಸೆ ಕೊಟ್ಟಿರುವ ಘಟನೆ ದಕ್ಷಿಣ ಒಡಿಶಾದ ಗಂಜಾಂ ಜಿಲ್ಲೆಯ ಖರಿಗುಮ್ಮ ಗ್ರಾಮದಲ್ಲಿ ಭಾನುವಾರ (ಜೂ.22) ನಡೆದಿದೆ.

ವರದಿಗಳ ಪ್ರಕಾರ, ಇಬ್ಬರು ವ್ಯಕ್ತಿಗಳಿಗೆ ಮೊದಲಿಗೆ ಹಲ್ಲೆ ನಡೆಸಲಾಗಿದೆ. ಬಳಿಕ, ಅವರ ಅರ್ಧ ತಲೆ ಬೋಳಿಸಿ, ಹುಲ್ಲು ತಿನ್ನಿಸಿ, ಚರಂಡಿ ನೀರು ಕುಡಿಸಿ ಚಿತ್ರಹಿಂಸೆ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಬೆತ್ತ ಹಿಡಿದು ನಿಂತಿರುವ ವ್ಯಕ್ತಿಗಳು, ಪ್ರಾಣಿಗಳಂತೆ ಇಬ್ಬರ ಬಾಯಲ್ಲಿ ಹುಲ್ಲು ಕಚ್ಚಿಸಿ ರಸ್ತೆಯಲ್ಲಿ ಮಂಡಿ ಮೇಲೆ ನಡೆಸಿರುವುದನ್ನು ನೋಡಬಹುದು.

ಧರಾಕೋಟೆ ಬ್ಲಾಕ್‌ನ ಸಿಂಗಿಪುರ ಗ್ರಾಮದ ನಿವಾಸಿಗಳಾದ ಬುಲು ನಾಯಕ್ ಮತ್ತು ಬಾಬುಲ ನಾಯಕ್ (ಇಬ್ಬರೂ 40ರ ಹರೆಯದವರು) ತಮ್ಮ ಪುತ್ರಿಯರ ಮದುವೆಗೆ ವರದಕ್ಷಿಣೆಯ ಭಾಗವಾಗಿ ಹರಿಪುರದಿಂದ ಒಂದು ಹಸು ಮತ್ತು ಎರಡು ಕರುಗಳನ್ನು ಖರೀದಿಸಿ, ಸರಕು ಸಾಗಣೆ ಆಟೋರಿಕ್ಷಾದಲ್ಲಿ ತಮ್ಮ ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದರು.

ಈ ವೇಳೆ ಖರಿಗುಮ್ಮ ಗ್ರಾಮದ ಬಳಿ ಸ್ಥಳೀಯರ ಗುಂಪೊಂದು ಅವರನ್ನು ತಡೆದು, ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿದೆ. ಗುಂಪು ಅವರ ಮೊಬೈಲ್ ಫೋನ್‌ಗಳು ಮತ್ತು ಹಣವನ್ನು ಕಸಿದುಕೊಂಡು ಜಾನುವಾರುಗಳನ್ನು ಬಿಟ್ಟು ಕಳಿಸಬೇಕಾದರೆ 30,000 ರೂಪಾಯಿ ಕೊಡುವಂತೆ ಒತ್ತಾಯಿಸಿದೆ. ಇಬ್ಬರೂ ನಿರಾಕರಿಸಿದಾಗ, ದುಷ್ಕರ್ಮಿಗಳು ಅವರ ಕೈಕಾಲುಗಳನ್ನು ಕಟ್ಟಿ, ಥಳಿಸಿದ್ದಾರೆ. ಸ್ಥಳೀಯ ಸಲೂನ್‌ನಲ್ಲಿ ಅರ್ಧ ತಲೆ ಬೋಳಿಸಿ, ಇಬ್ಬರನ್ನೂ ಖರಿಗುಮ್ಮದಿಂದ ಜಹಾಡ ಗ್ರಾಮಕ್ಕೆ ಸುಮಾರು ಎರಡು ಕಿ.ಮೀ ದೂರ ಮಂಡಿ ಮೇಲೆ ನಡೆಸಿದ್ದಾರೆ.

ನಂತರ ಜಹಾಡ ಗ್ರಾಮದ ಚೌಕ್‌ನಲ್ಲಿ ಇಬ್ಬರಿಗೂ ಹುಲ್ಲು ತಿನ್ನುವಂತೆ ಮತ್ತು ಚರಂಡಿ ನೀರು ಕುಡಿಯುವಂತೆ ಒತ್ತಾಯಿಸಿದ್ದಾರೆ. ಗ್ರಾಮಸ್ಥರೊಬ್ಬರು ಈ ವಿಷಯವನ್ನು ಸ್ಥಳೀಯ ನಾಯಕರಿಗೆ ತಿಳಿಸಿದ್ದಾರೆ. ಅವರು ಸ್ಥಳಕ್ಕಾಗಮಿಸಿ ಇಬ್ಬರನ್ನು ಬಿಡುಗಡೆ ಮಾಡುವಂತೆ ಕೋರಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಅವರಿಗೂ 30 ಸಾವಿರ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದಾರೆ.

ಹಲ್ಲೆಯಿಂದಾಗಿ ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿದ್ದರೂ, ಇಬ್ಬರು ಸಂತ್ರಸ್ತರು ಸ್ಥಳದಿಂದ ತಪ್ಪಿಸಿಕೊಂಡು ತಮ್ಮ ಗ್ರಾಮ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಧರಾಕೋಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದಾಗ್ಯೂ, ಪೊಲೀಸರು ಭಾನುವಾರ ವಿವಿಐಪಿ ಕರ್ತವ್ಯದಲ್ಲಿ ನಿರತರಾಗಿದ್ದರಿಂದ ತಡರಾತ್ರಿಯ ವೇಳೆಗೆ ದೂರು ಸ್ವೀಕರಿಸಿ ಎಫ್‌ಐಆರ್ ಮಾಡಿದ್ದಾರೆ.

ಈ ಅಮಾನವೀಯ ಕೃತ್ಯದ ಸುದ್ದಿ ತಿಳಿದ ದಲಿತ ಮಹಾಸಭಾದ ಗಂಜಾಂ ಘಟಕದ ನಾಯಕರು ಸಿಂಗಿಪುರ ಗ್ರಾಮದಲ್ಲಿ ಸೋಮವಾರ (ಜೂ.23) ಪ್ರತಿಭಟನಾ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಒಂದು ವರ್ಷದ ಬಿಜೆಪಿ ಆಡಳಿತದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಗಂಜಾಂನಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಮತ್ತು ಅವರ ವಶದಲ್ಲಿರುವ ದನಗಳನ್ನು ತಕ್ಷಣವೇ ರಕ್ಷಿಸುವಂತೆ ದಲಿತ ಮಹಾಸಭಾ ಒತ್ತಾಯಿಸಿದೆ.

ಈ ಘಟನೆ ಕುರಿತು ಮಾತನಾಡಿರುವ ಗಂಜಾಂ ಎಸ್ಪಿ ಸುಭೇಂದು ಪಾತ್ರ, “ಖರಿಗುಮ್ಮ ಮತ್ತು ಜಹಾಡದ ಕೆಲವು ಗ್ರಾಮಸ್ಥರು ದನಗಳ ಕಳ್ಳಸಾಗಣೆ ಶಂಕೆಯ ಮೇಲೆ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ಮುಖ್ಯ ಉದ್ದೇಶ ಹಣ ಸುಲಿಗೆಯಾಗಿತ್ತು. ಸಂತ್ರಸ್ತರು ಹಣ ಕೊಡದಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಇಲ್ಲಿಯವರೆಗೆ, ಒಂಬತ್ತು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲರನ್ನು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಮನುವಾದಿ ಚಿಂತನೆಯ ಅನಾಗರಿಕತೆ ರಾಹುಲ್ ಗಾಂಧಿ ಆಗ್ರಹ:

ಘಟನೆ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, “ಇದು ಅಮಾನವೀಯ ಘಟನೆ ಮಾತ್ರವಲ್ಲ, ಮನುವಾದಿ ಚಿಂತನೆಯ ಅನಾಗರಿಕತೆ. ಜಾತಿ ಇನ್ನು ಮುಂದೆ ಒಂದು ಸಮಸ್ಯೆ ಅಲ್ಲ ಎನ್ನುವವರಿಗೆ ಕೈಗನ್ನಡಿ” ಎಂದಿದ್ದಾರೆ.

ಸಾಮಾಜಿ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು “ದಲಿತರ ಘನತೆಯನ್ನು ತುಳಿಯುವ ಪ್ರತಿಯೊಂದು ಘಟನೆಯೂ ಬಾಬಾ ಸಾಹೇಬರ ಸಂವಿಧಾನದ ಮೇಲಿನ ದಾಳಿ ಮತ್ತು ಸಮಾನತೆ, ನ್ಯಾಯ ಮತ್ತು ಮಾನವೀಯತೆಯ ವಿರುದ್ಧದ ಪಿತೂರಿಯಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗುತ್ತಿವೆ. ವಿಶೇಷವಾಗಿ ಒಡಿಶಾದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚಿವೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ದೇಶವು ಮನುಸ್ಮೃತಿಯಿಂದಲ್ಲ, ಸಂವಿಧಾನದಿಂದ ನಡೆಸಲ್ಪಡುತ್ತಿದೆ” ಎಂದು ಹೇಳಿದ್ದಾರೆ.

ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...