Homeದಲಿತ್ ಫೈಲ್ಸ್ಒಡಿಶಾ| ಇಬ್ಬರು ದಲಿತರ ತಲೆ ಬೋಳಿಸಿ, ಚರಂಡಿ ನೀರು ಕುಡಿಸಿ ದೌರ್ಜನ್ಯ

ಒಡಿಶಾ| ಇಬ್ಬರು ದಲಿತರ ತಲೆ ಬೋಳಿಸಿ, ಚರಂಡಿ ನೀರು ಕುಡಿಸಿ ದೌರ್ಜನ್ಯ

ಮನುವಾದಿ ಚಿಂತನೆಯ ಅನಾಗರಿಕತೆ- ರಾಹುಲ್ ಗಾಂಧಿ

- Advertisement -
- Advertisement -

ದನ ಕಳ್ಳಸಾಗಣೆ ಆರೋಪಿಸಿ ದಲಿತ ಸಮುದಾಯದ ಇಬ್ಬರು ವ್ಯಕ್ತಿಗಳಿಗೆ ಚಿತ್ರಹಿಂಸೆ ಕೊಟ್ಟಿರುವ ಘಟನೆ ದಕ್ಷಿಣ ಒಡಿಶಾದ ಗಂಜಾಂ ಜಿಲ್ಲೆಯ ಖರಿಗುಮ್ಮ ಗ್ರಾಮದಲ್ಲಿ ಭಾನುವಾರ (ಜೂ.22) ನಡೆದಿದೆ.

ವರದಿಗಳ ಪ್ರಕಾರ, ಇಬ್ಬರು ವ್ಯಕ್ತಿಗಳಿಗೆ ಮೊದಲಿಗೆ ಹಲ್ಲೆ ನಡೆಸಲಾಗಿದೆ. ಬಳಿಕ, ಅವರ ಅರ್ಧ ತಲೆ ಬೋಳಿಸಿ, ಹುಲ್ಲು ತಿನ್ನಿಸಿ, ಚರಂಡಿ ನೀರು ಕುಡಿಸಿ ಚಿತ್ರಹಿಂಸೆ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಬೆತ್ತ ಹಿಡಿದು ನಿಂತಿರುವ ವ್ಯಕ್ತಿಗಳು, ಪ್ರಾಣಿಗಳಂತೆ ಇಬ್ಬರ ಬಾಯಲ್ಲಿ ಹುಲ್ಲು ಕಚ್ಚಿಸಿ ರಸ್ತೆಯಲ್ಲಿ ಮಂಡಿ ಮೇಲೆ ನಡೆಸಿರುವುದನ್ನು ನೋಡಬಹುದು.

ಧರಾಕೋಟೆ ಬ್ಲಾಕ್‌ನ ಸಿಂಗಿಪುರ ಗ್ರಾಮದ ನಿವಾಸಿಗಳಾದ ಬುಲು ನಾಯಕ್ ಮತ್ತು ಬಾಬುಲ ನಾಯಕ್ (ಇಬ್ಬರೂ 40ರ ಹರೆಯದವರು) ತಮ್ಮ ಪುತ್ರಿಯರ ಮದುವೆಗೆ ವರದಕ್ಷಿಣೆಯ ಭಾಗವಾಗಿ ಹರಿಪುರದಿಂದ ಒಂದು ಹಸು ಮತ್ತು ಎರಡು ಕರುಗಳನ್ನು ಖರೀದಿಸಿ, ಸರಕು ಸಾಗಣೆ ಆಟೋರಿಕ್ಷಾದಲ್ಲಿ ತಮ್ಮ ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದರು.

ಈ ವೇಳೆ ಖರಿಗುಮ್ಮ ಗ್ರಾಮದ ಬಳಿ ಸ್ಥಳೀಯರ ಗುಂಪೊಂದು ಅವರನ್ನು ತಡೆದು, ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿದೆ. ಗುಂಪು ಅವರ ಮೊಬೈಲ್ ಫೋನ್‌ಗಳು ಮತ್ತು ಹಣವನ್ನು ಕಸಿದುಕೊಂಡು ಜಾನುವಾರುಗಳನ್ನು ಬಿಟ್ಟು ಕಳಿಸಬೇಕಾದರೆ 30,000 ರೂಪಾಯಿ ಕೊಡುವಂತೆ ಒತ್ತಾಯಿಸಿದೆ. ಇಬ್ಬರೂ ನಿರಾಕರಿಸಿದಾಗ, ದುಷ್ಕರ್ಮಿಗಳು ಅವರ ಕೈಕಾಲುಗಳನ್ನು ಕಟ್ಟಿ, ಥಳಿಸಿದ್ದಾರೆ. ಸ್ಥಳೀಯ ಸಲೂನ್‌ನಲ್ಲಿ ಅರ್ಧ ತಲೆ ಬೋಳಿಸಿ, ಇಬ್ಬರನ್ನೂ ಖರಿಗುಮ್ಮದಿಂದ ಜಹಾಡ ಗ್ರಾಮಕ್ಕೆ ಸುಮಾರು ಎರಡು ಕಿ.ಮೀ ದೂರ ಮಂಡಿ ಮೇಲೆ ನಡೆಸಿದ್ದಾರೆ.

ನಂತರ ಜಹಾಡ ಗ್ರಾಮದ ಚೌಕ್‌ನಲ್ಲಿ ಇಬ್ಬರಿಗೂ ಹುಲ್ಲು ತಿನ್ನುವಂತೆ ಮತ್ತು ಚರಂಡಿ ನೀರು ಕುಡಿಯುವಂತೆ ಒತ್ತಾಯಿಸಿದ್ದಾರೆ. ಗ್ರಾಮಸ್ಥರೊಬ್ಬರು ಈ ವಿಷಯವನ್ನು ಸ್ಥಳೀಯ ನಾಯಕರಿಗೆ ತಿಳಿಸಿದ್ದಾರೆ. ಅವರು ಸ್ಥಳಕ್ಕಾಗಮಿಸಿ ಇಬ್ಬರನ್ನು ಬಿಡುಗಡೆ ಮಾಡುವಂತೆ ಕೋರಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಅವರಿಗೂ 30 ಸಾವಿರ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದಾರೆ.

ಹಲ್ಲೆಯಿಂದಾಗಿ ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿದ್ದರೂ, ಇಬ್ಬರು ಸಂತ್ರಸ್ತರು ಸ್ಥಳದಿಂದ ತಪ್ಪಿಸಿಕೊಂಡು ತಮ್ಮ ಗ್ರಾಮ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಧರಾಕೋಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದಾಗ್ಯೂ, ಪೊಲೀಸರು ಭಾನುವಾರ ವಿವಿಐಪಿ ಕರ್ತವ್ಯದಲ್ಲಿ ನಿರತರಾಗಿದ್ದರಿಂದ ತಡರಾತ್ರಿಯ ವೇಳೆಗೆ ದೂರು ಸ್ವೀಕರಿಸಿ ಎಫ್‌ಐಆರ್ ಮಾಡಿದ್ದಾರೆ.

ಈ ಅಮಾನವೀಯ ಕೃತ್ಯದ ಸುದ್ದಿ ತಿಳಿದ ದಲಿತ ಮಹಾಸಭಾದ ಗಂಜಾಂ ಘಟಕದ ನಾಯಕರು ಸಿಂಗಿಪುರ ಗ್ರಾಮದಲ್ಲಿ ಸೋಮವಾರ (ಜೂ.23) ಪ್ರತಿಭಟನಾ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಒಂದು ವರ್ಷದ ಬಿಜೆಪಿ ಆಡಳಿತದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಗಂಜಾಂನಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಮತ್ತು ಅವರ ವಶದಲ್ಲಿರುವ ದನಗಳನ್ನು ತಕ್ಷಣವೇ ರಕ್ಷಿಸುವಂತೆ ದಲಿತ ಮಹಾಸಭಾ ಒತ್ತಾಯಿಸಿದೆ.

ಈ ಘಟನೆ ಕುರಿತು ಮಾತನಾಡಿರುವ ಗಂಜಾಂ ಎಸ್ಪಿ ಸುಭೇಂದು ಪಾತ್ರ, “ಖರಿಗುಮ್ಮ ಮತ್ತು ಜಹಾಡದ ಕೆಲವು ಗ್ರಾಮಸ್ಥರು ದನಗಳ ಕಳ್ಳಸಾಗಣೆ ಶಂಕೆಯ ಮೇಲೆ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ಮುಖ್ಯ ಉದ್ದೇಶ ಹಣ ಸುಲಿಗೆಯಾಗಿತ್ತು. ಸಂತ್ರಸ್ತರು ಹಣ ಕೊಡದಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಇಲ್ಲಿಯವರೆಗೆ, ಒಂಬತ್ತು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲರನ್ನು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಮನುವಾದಿ ಚಿಂತನೆಯ ಅನಾಗರಿಕತೆ ರಾಹುಲ್ ಗಾಂಧಿ ಆಗ್ರಹ:

ಘಟನೆ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, “ಇದು ಅಮಾನವೀಯ ಘಟನೆ ಮಾತ್ರವಲ್ಲ, ಮನುವಾದಿ ಚಿಂತನೆಯ ಅನಾಗರಿಕತೆ. ಜಾತಿ ಇನ್ನು ಮುಂದೆ ಒಂದು ಸಮಸ್ಯೆ ಅಲ್ಲ ಎನ್ನುವವರಿಗೆ ಕೈಗನ್ನಡಿ” ಎಂದಿದ್ದಾರೆ.

ಸಾಮಾಜಿ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು “ದಲಿತರ ಘನತೆಯನ್ನು ತುಳಿಯುವ ಪ್ರತಿಯೊಂದು ಘಟನೆಯೂ ಬಾಬಾ ಸಾಹೇಬರ ಸಂವಿಧಾನದ ಮೇಲಿನ ದಾಳಿ ಮತ್ತು ಸಮಾನತೆ, ನ್ಯಾಯ ಮತ್ತು ಮಾನವೀಯತೆಯ ವಿರುದ್ಧದ ಪಿತೂರಿಯಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗುತ್ತಿವೆ. ವಿಶೇಷವಾಗಿ ಒಡಿಶಾದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚಿವೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ದೇಶವು ಮನುಸ್ಮೃತಿಯಿಂದಲ್ಲ, ಸಂವಿಧಾನದಿಂದ ನಡೆಸಲ್ಪಡುತ್ತಿದೆ” ಎಂದು ಹೇಳಿದ್ದಾರೆ.

ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...