Homeದಲಿತ್ ಫೈಲ್ಸ್ಒಡಿಶಾ| ಇಬ್ಬರು ದಲಿತರ ತಲೆ ಬೋಳಿಸಿ, ಚರಂಡಿ ನೀರು ಕುಡಿಸಿ ದೌರ್ಜನ್ಯ

ಒಡಿಶಾ| ಇಬ್ಬರು ದಲಿತರ ತಲೆ ಬೋಳಿಸಿ, ಚರಂಡಿ ನೀರು ಕುಡಿಸಿ ದೌರ್ಜನ್ಯ

ಮನುವಾದಿ ಚಿಂತನೆಯ ಅನಾಗರಿಕತೆ- ರಾಹುಲ್ ಗಾಂಧಿ

- Advertisement -
- Advertisement -

ದನ ಕಳ್ಳಸಾಗಣೆ ಆರೋಪಿಸಿ ದಲಿತ ಸಮುದಾಯದ ಇಬ್ಬರು ವ್ಯಕ್ತಿಗಳಿಗೆ ಚಿತ್ರಹಿಂಸೆ ಕೊಟ್ಟಿರುವ ಘಟನೆ ದಕ್ಷಿಣ ಒಡಿಶಾದ ಗಂಜಾಂ ಜಿಲ್ಲೆಯ ಖರಿಗುಮ್ಮ ಗ್ರಾಮದಲ್ಲಿ ಭಾನುವಾರ (ಜೂ.22) ನಡೆದಿದೆ.

ವರದಿಗಳ ಪ್ರಕಾರ, ಇಬ್ಬರು ವ್ಯಕ್ತಿಗಳಿಗೆ ಮೊದಲಿಗೆ ಹಲ್ಲೆ ನಡೆಸಲಾಗಿದೆ. ಬಳಿಕ, ಅವರ ಅರ್ಧ ತಲೆ ಬೋಳಿಸಿ, ಹುಲ್ಲು ತಿನ್ನಿಸಿ, ಚರಂಡಿ ನೀರು ಕುಡಿಸಿ ಚಿತ್ರಹಿಂಸೆ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಬೆತ್ತ ಹಿಡಿದು ನಿಂತಿರುವ ವ್ಯಕ್ತಿಗಳು, ಪ್ರಾಣಿಗಳಂತೆ ಇಬ್ಬರ ಬಾಯಲ್ಲಿ ಹುಲ್ಲು ಕಚ್ಚಿಸಿ ರಸ್ತೆಯಲ್ಲಿ ಮಂಡಿ ಮೇಲೆ ನಡೆಸಿರುವುದನ್ನು ನೋಡಬಹುದು.

ಧರಾಕೋಟೆ ಬ್ಲಾಕ್‌ನ ಸಿಂಗಿಪುರ ಗ್ರಾಮದ ನಿವಾಸಿಗಳಾದ ಬುಲು ನಾಯಕ್ ಮತ್ತು ಬಾಬುಲ ನಾಯಕ್ (ಇಬ್ಬರೂ 40ರ ಹರೆಯದವರು) ತಮ್ಮ ಪುತ್ರಿಯರ ಮದುವೆಗೆ ವರದಕ್ಷಿಣೆಯ ಭಾಗವಾಗಿ ಹರಿಪುರದಿಂದ ಒಂದು ಹಸು ಮತ್ತು ಎರಡು ಕರುಗಳನ್ನು ಖರೀದಿಸಿ, ಸರಕು ಸಾಗಣೆ ಆಟೋರಿಕ್ಷಾದಲ್ಲಿ ತಮ್ಮ ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದರು.

ಈ ವೇಳೆ ಖರಿಗುಮ್ಮ ಗ್ರಾಮದ ಬಳಿ ಸ್ಥಳೀಯರ ಗುಂಪೊಂದು ಅವರನ್ನು ತಡೆದು, ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿದೆ. ಗುಂಪು ಅವರ ಮೊಬೈಲ್ ಫೋನ್‌ಗಳು ಮತ್ತು ಹಣವನ್ನು ಕಸಿದುಕೊಂಡು ಜಾನುವಾರುಗಳನ್ನು ಬಿಟ್ಟು ಕಳಿಸಬೇಕಾದರೆ 30,000 ರೂಪಾಯಿ ಕೊಡುವಂತೆ ಒತ್ತಾಯಿಸಿದೆ. ಇಬ್ಬರೂ ನಿರಾಕರಿಸಿದಾಗ, ದುಷ್ಕರ್ಮಿಗಳು ಅವರ ಕೈಕಾಲುಗಳನ್ನು ಕಟ್ಟಿ, ಥಳಿಸಿದ್ದಾರೆ. ಸ್ಥಳೀಯ ಸಲೂನ್‌ನಲ್ಲಿ ಅರ್ಧ ತಲೆ ಬೋಳಿಸಿ, ಇಬ್ಬರನ್ನೂ ಖರಿಗುಮ್ಮದಿಂದ ಜಹಾಡ ಗ್ರಾಮಕ್ಕೆ ಸುಮಾರು ಎರಡು ಕಿ.ಮೀ ದೂರ ಮಂಡಿ ಮೇಲೆ ನಡೆಸಿದ್ದಾರೆ.

ನಂತರ ಜಹಾಡ ಗ್ರಾಮದ ಚೌಕ್‌ನಲ್ಲಿ ಇಬ್ಬರಿಗೂ ಹುಲ್ಲು ತಿನ್ನುವಂತೆ ಮತ್ತು ಚರಂಡಿ ನೀರು ಕುಡಿಯುವಂತೆ ಒತ್ತಾಯಿಸಿದ್ದಾರೆ. ಗ್ರಾಮಸ್ಥರೊಬ್ಬರು ಈ ವಿಷಯವನ್ನು ಸ್ಥಳೀಯ ನಾಯಕರಿಗೆ ತಿಳಿಸಿದ್ದಾರೆ. ಅವರು ಸ್ಥಳಕ್ಕಾಗಮಿಸಿ ಇಬ್ಬರನ್ನು ಬಿಡುಗಡೆ ಮಾಡುವಂತೆ ಕೋರಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಅವರಿಗೂ 30 ಸಾವಿರ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದಾರೆ.

ಹಲ್ಲೆಯಿಂದಾಗಿ ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿದ್ದರೂ, ಇಬ್ಬರು ಸಂತ್ರಸ್ತರು ಸ್ಥಳದಿಂದ ತಪ್ಪಿಸಿಕೊಂಡು ತಮ್ಮ ಗ್ರಾಮ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಧರಾಕೋಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದಾಗ್ಯೂ, ಪೊಲೀಸರು ಭಾನುವಾರ ವಿವಿಐಪಿ ಕರ್ತವ್ಯದಲ್ಲಿ ನಿರತರಾಗಿದ್ದರಿಂದ ತಡರಾತ್ರಿಯ ವೇಳೆಗೆ ದೂರು ಸ್ವೀಕರಿಸಿ ಎಫ್‌ಐಆರ್ ಮಾಡಿದ್ದಾರೆ.

ಈ ಅಮಾನವೀಯ ಕೃತ್ಯದ ಸುದ್ದಿ ತಿಳಿದ ದಲಿತ ಮಹಾಸಭಾದ ಗಂಜಾಂ ಘಟಕದ ನಾಯಕರು ಸಿಂಗಿಪುರ ಗ್ರಾಮದಲ್ಲಿ ಸೋಮವಾರ (ಜೂ.23) ಪ್ರತಿಭಟನಾ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಒಂದು ವರ್ಷದ ಬಿಜೆಪಿ ಆಡಳಿತದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಗಂಜಾಂನಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಮತ್ತು ಅವರ ವಶದಲ್ಲಿರುವ ದನಗಳನ್ನು ತಕ್ಷಣವೇ ರಕ್ಷಿಸುವಂತೆ ದಲಿತ ಮಹಾಸಭಾ ಒತ್ತಾಯಿಸಿದೆ.

ಈ ಘಟನೆ ಕುರಿತು ಮಾತನಾಡಿರುವ ಗಂಜಾಂ ಎಸ್ಪಿ ಸುಭೇಂದು ಪಾತ್ರ, “ಖರಿಗುಮ್ಮ ಮತ್ತು ಜಹಾಡದ ಕೆಲವು ಗ್ರಾಮಸ್ಥರು ದನಗಳ ಕಳ್ಳಸಾಗಣೆ ಶಂಕೆಯ ಮೇಲೆ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ಮುಖ್ಯ ಉದ್ದೇಶ ಹಣ ಸುಲಿಗೆಯಾಗಿತ್ತು. ಸಂತ್ರಸ್ತರು ಹಣ ಕೊಡದಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಇಲ್ಲಿಯವರೆಗೆ, ಒಂಬತ್ತು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲರನ್ನು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಮನುವಾದಿ ಚಿಂತನೆಯ ಅನಾಗರಿಕತೆ ರಾಹುಲ್ ಗಾಂಧಿ ಆಗ್ರಹ:

ಘಟನೆ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, “ಇದು ಅಮಾನವೀಯ ಘಟನೆ ಮಾತ್ರವಲ್ಲ, ಮನುವಾದಿ ಚಿಂತನೆಯ ಅನಾಗರಿಕತೆ. ಜಾತಿ ಇನ್ನು ಮುಂದೆ ಒಂದು ಸಮಸ್ಯೆ ಅಲ್ಲ ಎನ್ನುವವರಿಗೆ ಕೈಗನ್ನಡಿ” ಎಂದಿದ್ದಾರೆ.

ಸಾಮಾಜಿ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು “ದಲಿತರ ಘನತೆಯನ್ನು ತುಳಿಯುವ ಪ್ರತಿಯೊಂದು ಘಟನೆಯೂ ಬಾಬಾ ಸಾಹೇಬರ ಸಂವಿಧಾನದ ಮೇಲಿನ ದಾಳಿ ಮತ್ತು ಸಮಾನತೆ, ನ್ಯಾಯ ಮತ್ತು ಮಾನವೀಯತೆಯ ವಿರುದ್ಧದ ಪಿತೂರಿಯಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗುತ್ತಿವೆ. ವಿಶೇಷವಾಗಿ ಒಡಿಶಾದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚಿವೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ದೇಶವು ಮನುಸ್ಮೃತಿಯಿಂದಲ್ಲ, ಸಂವಿಧಾನದಿಂದ ನಡೆಸಲ್ಪಡುತ್ತಿದೆ” ಎಂದು ಹೇಳಿದ್ದಾರೆ.

ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...