Homeದಲಿತ್ ಫೈಲ್ಸ್ಒಡಿಶಾ| ಇಬ್ಬರು ದಲಿತರ ತಲೆ ಬೋಳಿಸಿ, ಚರಂಡಿ ನೀರು ಕುಡಿಸಿ ದೌರ್ಜನ್ಯ

ಒಡಿಶಾ| ಇಬ್ಬರು ದಲಿತರ ತಲೆ ಬೋಳಿಸಿ, ಚರಂಡಿ ನೀರು ಕುಡಿಸಿ ದೌರ್ಜನ್ಯ

ಮನುವಾದಿ ಚಿಂತನೆಯ ಅನಾಗರಿಕತೆ- ರಾಹುಲ್ ಗಾಂಧಿ

- Advertisement -
- Advertisement -

ದನ ಕಳ್ಳಸಾಗಣೆ ಆರೋಪಿಸಿ ದಲಿತ ಸಮುದಾಯದ ಇಬ್ಬರು ವ್ಯಕ್ತಿಗಳಿಗೆ ಚಿತ್ರಹಿಂಸೆ ಕೊಟ್ಟಿರುವ ಘಟನೆ ದಕ್ಷಿಣ ಒಡಿಶಾದ ಗಂಜಾಂ ಜಿಲ್ಲೆಯ ಖರಿಗುಮ್ಮ ಗ್ರಾಮದಲ್ಲಿ ಭಾನುವಾರ (ಜೂ.22) ನಡೆದಿದೆ.

ವರದಿಗಳ ಪ್ರಕಾರ, ಇಬ್ಬರು ವ್ಯಕ್ತಿಗಳಿಗೆ ಮೊದಲಿಗೆ ಹಲ್ಲೆ ನಡೆಸಲಾಗಿದೆ. ಬಳಿಕ, ಅವರ ಅರ್ಧ ತಲೆ ಬೋಳಿಸಿ, ಹುಲ್ಲು ತಿನ್ನಿಸಿ, ಚರಂಡಿ ನೀರು ಕುಡಿಸಿ ಚಿತ್ರಹಿಂಸೆ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಬೆತ್ತ ಹಿಡಿದು ನಿಂತಿರುವ ವ್ಯಕ್ತಿಗಳು, ಪ್ರಾಣಿಗಳಂತೆ ಇಬ್ಬರ ಬಾಯಲ್ಲಿ ಹುಲ್ಲು ಕಚ್ಚಿಸಿ ರಸ್ತೆಯಲ್ಲಿ ಮಂಡಿ ಮೇಲೆ ನಡೆಸಿರುವುದನ್ನು ನೋಡಬಹುದು.

ಧರಾಕೋಟೆ ಬ್ಲಾಕ್‌ನ ಸಿಂಗಿಪುರ ಗ್ರಾಮದ ನಿವಾಸಿಗಳಾದ ಬುಲು ನಾಯಕ್ ಮತ್ತು ಬಾಬುಲ ನಾಯಕ್ (ಇಬ್ಬರೂ 40ರ ಹರೆಯದವರು) ತಮ್ಮ ಪುತ್ರಿಯರ ಮದುವೆಗೆ ವರದಕ್ಷಿಣೆಯ ಭಾಗವಾಗಿ ಹರಿಪುರದಿಂದ ಒಂದು ಹಸು ಮತ್ತು ಎರಡು ಕರುಗಳನ್ನು ಖರೀದಿಸಿ, ಸರಕು ಸಾಗಣೆ ಆಟೋರಿಕ್ಷಾದಲ್ಲಿ ತಮ್ಮ ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದರು.

ಈ ವೇಳೆ ಖರಿಗುಮ್ಮ ಗ್ರಾಮದ ಬಳಿ ಸ್ಥಳೀಯರ ಗುಂಪೊಂದು ಅವರನ್ನು ತಡೆದು, ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿದೆ. ಗುಂಪು ಅವರ ಮೊಬೈಲ್ ಫೋನ್‌ಗಳು ಮತ್ತು ಹಣವನ್ನು ಕಸಿದುಕೊಂಡು ಜಾನುವಾರುಗಳನ್ನು ಬಿಟ್ಟು ಕಳಿಸಬೇಕಾದರೆ 30,000 ರೂಪಾಯಿ ಕೊಡುವಂತೆ ಒತ್ತಾಯಿಸಿದೆ. ಇಬ್ಬರೂ ನಿರಾಕರಿಸಿದಾಗ, ದುಷ್ಕರ್ಮಿಗಳು ಅವರ ಕೈಕಾಲುಗಳನ್ನು ಕಟ್ಟಿ, ಥಳಿಸಿದ್ದಾರೆ. ಸ್ಥಳೀಯ ಸಲೂನ್‌ನಲ್ಲಿ ಅರ್ಧ ತಲೆ ಬೋಳಿಸಿ, ಇಬ್ಬರನ್ನೂ ಖರಿಗುಮ್ಮದಿಂದ ಜಹಾಡ ಗ್ರಾಮಕ್ಕೆ ಸುಮಾರು ಎರಡು ಕಿ.ಮೀ ದೂರ ಮಂಡಿ ಮೇಲೆ ನಡೆಸಿದ್ದಾರೆ.

ನಂತರ ಜಹಾಡ ಗ್ರಾಮದ ಚೌಕ್‌ನಲ್ಲಿ ಇಬ್ಬರಿಗೂ ಹುಲ್ಲು ತಿನ್ನುವಂತೆ ಮತ್ತು ಚರಂಡಿ ನೀರು ಕುಡಿಯುವಂತೆ ಒತ್ತಾಯಿಸಿದ್ದಾರೆ. ಗ್ರಾಮಸ್ಥರೊಬ್ಬರು ಈ ವಿಷಯವನ್ನು ಸ್ಥಳೀಯ ನಾಯಕರಿಗೆ ತಿಳಿಸಿದ್ದಾರೆ. ಅವರು ಸ್ಥಳಕ್ಕಾಗಮಿಸಿ ಇಬ್ಬರನ್ನು ಬಿಡುಗಡೆ ಮಾಡುವಂತೆ ಕೋರಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಅವರಿಗೂ 30 ಸಾವಿರ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದಾರೆ.

ಹಲ್ಲೆಯಿಂದಾಗಿ ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿದ್ದರೂ, ಇಬ್ಬರು ಸಂತ್ರಸ್ತರು ಸ್ಥಳದಿಂದ ತಪ್ಪಿಸಿಕೊಂಡು ತಮ್ಮ ಗ್ರಾಮ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಧರಾಕೋಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದಾಗ್ಯೂ, ಪೊಲೀಸರು ಭಾನುವಾರ ವಿವಿಐಪಿ ಕರ್ತವ್ಯದಲ್ಲಿ ನಿರತರಾಗಿದ್ದರಿಂದ ತಡರಾತ್ರಿಯ ವೇಳೆಗೆ ದೂರು ಸ್ವೀಕರಿಸಿ ಎಫ್‌ಐಆರ್ ಮಾಡಿದ್ದಾರೆ.

ಈ ಅಮಾನವೀಯ ಕೃತ್ಯದ ಸುದ್ದಿ ತಿಳಿದ ದಲಿತ ಮಹಾಸಭಾದ ಗಂಜಾಂ ಘಟಕದ ನಾಯಕರು ಸಿಂಗಿಪುರ ಗ್ರಾಮದಲ್ಲಿ ಸೋಮವಾರ (ಜೂ.23) ಪ್ರತಿಭಟನಾ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಒಂದು ವರ್ಷದ ಬಿಜೆಪಿ ಆಡಳಿತದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಗಂಜಾಂನಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಮತ್ತು ಅವರ ವಶದಲ್ಲಿರುವ ದನಗಳನ್ನು ತಕ್ಷಣವೇ ರಕ್ಷಿಸುವಂತೆ ದಲಿತ ಮಹಾಸಭಾ ಒತ್ತಾಯಿಸಿದೆ.

ಈ ಘಟನೆ ಕುರಿತು ಮಾತನಾಡಿರುವ ಗಂಜಾಂ ಎಸ್ಪಿ ಸುಭೇಂದು ಪಾತ್ರ, “ಖರಿಗುಮ್ಮ ಮತ್ತು ಜಹಾಡದ ಕೆಲವು ಗ್ರಾಮಸ್ಥರು ದನಗಳ ಕಳ್ಳಸಾಗಣೆ ಶಂಕೆಯ ಮೇಲೆ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ಮುಖ್ಯ ಉದ್ದೇಶ ಹಣ ಸುಲಿಗೆಯಾಗಿತ್ತು. ಸಂತ್ರಸ್ತರು ಹಣ ಕೊಡದಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಇಲ್ಲಿಯವರೆಗೆ, ಒಂಬತ್ತು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲರನ್ನು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಮನುವಾದಿ ಚಿಂತನೆಯ ಅನಾಗರಿಕತೆ ರಾಹುಲ್ ಗಾಂಧಿ ಆಗ್ರಹ:

ಘಟನೆ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, “ಇದು ಅಮಾನವೀಯ ಘಟನೆ ಮಾತ್ರವಲ್ಲ, ಮನುವಾದಿ ಚಿಂತನೆಯ ಅನಾಗರಿಕತೆ. ಜಾತಿ ಇನ್ನು ಮುಂದೆ ಒಂದು ಸಮಸ್ಯೆ ಅಲ್ಲ ಎನ್ನುವವರಿಗೆ ಕೈಗನ್ನಡಿ” ಎಂದಿದ್ದಾರೆ.

ಸಾಮಾಜಿ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು “ದಲಿತರ ಘನತೆಯನ್ನು ತುಳಿಯುವ ಪ್ರತಿಯೊಂದು ಘಟನೆಯೂ ಬಾಬಾ ಸಾಹೇಬರ ಸಂವಿಧಾನದ ಮೇಲಿನ ದಾಳಿ ಮತ್ತು ಸಮಾನತೆ, ನ್ಯಾಯ ಮತ್ತು ಮಾನವೀಯತೆಯ ವಿರುದ್ಧದ ಪಿತೂರಿಯಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗುತ್ತಿವೆ. ವಿಶೇಷವಾಗಿ ಒಡಿಶಾದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚಿವೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ದೇಶವು ಮನುಸ್ಮೃತಿಯಿಂದಲ್ಲ, ಸಂವಿಧಾನದಿಂದ ನಡೆಸಲ್ಪಡುತ್ತಿದೆ” ಎಂದು ಹೇಳಿದ್ದಾರೆ.

ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...