Homeಮುಖಪುಟಗೋವಾ ಚಲನಚಿತ್ರೋತ್ಸವದಲ್ಲಿ 'ದಿ ಕೇರಳ ಸ್ಟೋರಿ' ಪ್ರದರ್ಶನ: ಪ್ರತಿಭಟಿಸಿದ ಇಬ್ಬರು ವಶಕ್ಕೆ

ಗೋವಾ ಚಲನಚಿತ್ರೋತ್ಸವದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಪ್ರತಿಭಟಿಸಿದ ಇಬ್ಬರು ವಶಕ್ಕೆ

- Advertisement -
- Advertisement -

ಗೋವಾದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಐ) ‘ದಿ ಕೇರಳ ಸ್ಟೋರಿ’ ವಿವಾದಿತ ಸಿನಿಮಾ ಪ್ರದರ್ಶನವನ್ನು ಮಾಡಿದ್ದು, ಈ ವೇಳೆ ಪ್ರತಿಭಟಿಸಿದ ಆರೋಪದಲ್ಲಿ ಕೇರಳದ ಇಬ್ಬರನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.

ಕಳೆದ ಭಾನುವಾರ ಅಂತರಾಷ್ಟ್ರೀಯ ಮಟ್ಟದ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಐ) ದಿವಂಗತ ಗೋವಾದ ಲೇಖಕ ಮತ್ತು ಮಾಜಿ ಶಾಸಕ ವಿಷ್ಣು ಸೂರ್ಯ ವಾಘ್ ಅವರ ಜಾತಿ ತಾರತಮ್ಯದ ಕುರಿತ ಸುಧೀರ್ ಸೂಕ್ತ ಕವನ ಸಂಕಲನದ ಕವಿತೆಯನ್ನು ಪ್ರಕಟಿಸಿರಲಿಲ್ಲ. ಸೃಜನಶೀಲ ಕಾರಣಗಳಿಗಾಗಿ ತೆಗೆದುಕೊಂಡ ಸಂಪಾದಕೀಯ ನಿರ್ಧಾರ ಎಂದು IFFI ಹೇಳಿತ್ತು. ಆದರೆ ಇದೀಗ ದಿ ಕೇರಳ ಸ್ಟೋರಿ ಚಲನ ಚಿತ್ರವನ್ನು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ವಿವಾದಕ್ಕೆ ಕಾರಣವಾಗಿದೆ.

ಕೇರಳದ ಶ್ರೀನಾಥ್ ಮತ್ತು ಅರ್ಚನಾ ರವಿ ಎಂಬ ಇಬ್ಬರು ಕಳೆದ ಒಂದು ವಾರದಿಂದ ಚಲನಚಿತ್ರೋತ್ಸವಕ್ಕೆ ಹಾಜರಾಗಿದ್ದರು. ಸೋಮವಾರ ಸಂಜೆ ಪಣಜಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಅಧಿಕಾರಿಗಳು ಅವರಲ್ಲಿದ್ದ ಕಾರ್ಯಕ್ರಮದ ಪಾಸ್‌ಗಳನ್ನು ಮುಟ್ಟುಗೋಲು ಹಾಕಿಕೊಂಡು ಉತ್ಸವದಲ್ಲಿ ಭಾಗಿಯಾಗದಂತೆ ನಿರ್ಬಂಧ ವಿಧಿಸಿದ್ದಾರೆ.

ಗೋವಾದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿರುವ ಕೇರಳ ಸ್ಟೋರಿ ಸುಳ್ಳು ಪ್ರಚಾರದ ಚಲನಚಿತ್ರವಾಗಿದ್ದು, ಅದರ ವಿರುದ್ಧ ನಮ್ಮ ವಿರೋಧವನ್ನು ವ್ಯಕ್ತಪಡಿಸುತ್ತಿದ್ದೇವೆ. ಅಲ್ಲಿ ನಾವು ಯಾವುದೇ ಘೋಷಣೆಗಳನ್ನು ಕೂಗಲಿಲ್ಲ. ಅದು ಪ್ರತಿಭಟನೆಯೂ ಆಗಿರಲಿಲ್ಲ. ನಾವು ಆ ಚಿತ್ರದ ಕುರಿತು ಎ4 ಅಳತೆಯೆ ಮೀಮ್‌ವೊಂದನ್ನು ಮುದ್ರಿಸಿ, ಅದನ್ನು ನಮ್ಮ ಟಿ-ಶರ್ಟ್‌ಗಳಿಗೆ ಅಂಟಿಸಿಕೊಂಡಿದ್ದೆವು  ಎಂದು ಅರ್ಚನಾ ಅವರು ಹೇಳಿದ್ದಾರೆ.

ಅರ್ಚನಾ ಟಿ-ಶರ್ಟ್‌ ಧರಿಸಿ ಸ್ನೇಹಿತೆಯೊಬ್ಬರ ಜೊತೆ ಪೋಟೋ ಕ್ಲಿಕ್ಕಿಸುವಾಗ ಪೊಲೀಸರು ಅವರನ್ನು ವಶಕ್ಕೆ ಪಡೆದು ಕರೆದುಕೊಂಡು ಹೋಗಿದ್ದಾರೆ. ಇದು ಪ್ರತಿಭಟನೆಯ ಸ್ಥಳವಲ್ಲ ಎಂದು ಪೊಲೀಸರು ಅವರಿಗೆ ಹೇಳಿದ್ದಾರೆ.

ಪಣಜಿ ಪೊಲೀಸ್ ಠಾಣೆಗೆ ನಮ್ಮನ್ನು ಕರೆದೊಯ್ದು ಅಧಿಕಾರಿಗಳು ಫೋನ್‌ಗಳು, ಐಡಿಗಳು ಮತ್ತು  ಉತ್ಸವದ ಪಾಸ್‌ಗಳನ್ನು ತೆಗೆದುಕೊಂಡರು. ಉತ್ಸವಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಿದ್ದಾರೆ. ಅವರು ನಮ್ಮ ಕರೆ ದಾಖಲೆಗಳನ್ನು ಪರಿಶೀಲಿಸಿದರು ಮತ್ತು ನನ್ನ ಟೀ ಶರ್ಟ್‌ ಕಿತ್ತುಕೊಂಡರು. 45 ನಿಮಿಷಗಳ ನಂತರ ನಮ್ಮನ್ನು ಬಿಡುಗಡೆ ಮಾಡಲಾಯಿತು ಎಂದು ಸಾಕ್ಷ್ಯಚಿತ್ರ ನಿರ್ಮಾಪಕ ಶ್ರೀನಾಥ್ ಹೇಳಿದ್ದಾರೆ.

ಐಎಫ್‌ಎಫ್‌ಐನಂತಹ ಪ್ರತಿಷ್ಠಿತ ಉತ್ಸವದಲ್ಲಿ ಕೇರಳ ಸ್ಟೋರಿಯಂತಹ ವಿವಾದಾತ್ಮಕ ಚಲನಚಿತ್ರವನ್ನು ಪ್ರದರ್ಶಿಸಿರುವುದು ನಿರಾಶಾದಾಯಕವಾಗಿದೆ. ಇದೊಂದು ಪ್ರಚಾರದ ಸಿನಿಮಾವಾಗಿದ್ದು, ಇದು ಜನರನ್ನು ಕೆಣಕುತ್ತದೆ ಮತ್ತು ಅಲ್ಪಸಂಖ್ಯಾತ ಸಮುದಾಯದ ಮೇಲೆ ಪ್ರಭಾವ ಬೀರುತ್ತದೆ ಎಂದು ಶ್ರೀನಾಥ್ ಹೇಳಿದ್ದಾರೆ.

ದಿ ಕೇರಳ ಸ್ಟೋರಿ ನಿರ್ದೇಶಕ ಸುದೀಪ್ತೋ ಸೇನ್ ಕಾರ್ಯಕ್ರಮದ ಸಂದರ್ಭದಲ್ಲಿ ಅರ್ಚನಾ ರವಿಯೊಂದಿಗೆ ಮಾತನಾಡುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್‌ ಆಗಿದೆ.  ನೀವು ಚಲನಚಿತ್ರವನ್ನು ನೋಡಿದ್ದೀರಾ? ಸಿನಿಮಾ ನೋಡದ ಹೊರತು ಅದರ ಬಗ್ಗೆ ಮಾತನಾಡುವ ಹಕ್ಕು ನಿಮಗಿಲ್ಲ. ನೀವು ಚಿತ್ರ ನೋಡಿದರೆ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ನಾನು ಉತ್ತರಿಸುತ್ತೇನೆ ಎಂದು ವೀಡಿಯೊದಲ್ಲಿ ಸೇನ್ ಹೇಳುವುದು ಸೆರೆಯಾಗಿದೆ.

ದಿ ಕೇರಳ ಸ್ಟೋರಿ ಚಲನ ಚಿತ್ರವನ್ನು ಸುದೀಪ್ತೋ ಸೇನ್​ ನಿರ್ದೇಶನ ಮಾಡಿದ್ದು, ವಿಪುಲ್​ ಅಮೃತ್​ಲಾಲ್​ ಶಾ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಹಿಂದಿ ಮಾತ್ರವಲ್ಲದೇ ತೆಲುಗು, ಮಲಯಾಳಂ ಮತ್ತು ತಮಿಳಿನಲ್ಲೂ ಈ ಚಿತ್ರ ತೆರೆಕಂಡಿದೆ. ಅದರಲ್ಲಿ ಕೇರಳದಲ್ಲಿ32 ಸಾವಿರ ಮಹಿಳೆಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿ ನಂತರ ಈ ಮಹಿಳೆಯರನ್ನು ಭಯೋತ್ಪಾದಕರು ಐಸಿಸ್ ಆಳ್ವಿಕೆಯ ಸಿರಿಯಾಗೆ ಕರೆದುಕೊಂಡು ಹೋಗಿದ್ದಾರೆ ಎಂದು ಕಾಲ್ಪನಿಕವಾಗಿ ಹೇಳಲಾಗಿತ್ತು. ಈ ಚಲನ ಚಿತ್ರ ಬಿಡಗಡೆಗೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು.

ದಿ ಕೇರಳ ಸ್ಟೋರಿ ಸಿನಿಮಾ ವಿವಾದ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಸಿನಿಮಾದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ನಿಕೃಷ್ಟವಾಗಿ ತೋರಿಸಲಾಗಿದೆ. ಈ ಚಿತ್ರಕ್ಕೆ ನಿಷೇಧ ಹೇರಬೇಕು ಎನ್ನುವ ಆಗ್ರಹ ಕೇಳಿ ಬಂದಿತ್ತು. ಆದರೆ ದಿ ಕೇರಳ ಸ್ಟೋರಿ ಸಿನಿಮಾಗೆ ಈಗಾಗಲೇ ಸೆನ್ಸಾರ್ ಮಂಡಳಿಯ ಗ್ರೀನ್ ಸಿಗ್ನಲ್ ನೀಡಿತ್ತು. ಚಿತ್ರಕ್ಕೆ ಎ ಸರ್ಟಿಫಿಕೇಟ್ ಕೊಟ್ಟಿರುವ ಕೇಂದ್ರ ಸೆನ್ಸಾರ್ ಮಂಡಳಿ, 10 ದೃಶ್ಯಗಳಿಗೆ ಕತ್ತರಿ ಹಾಕಲು ಹೇಳಿ ಚಿತ್ರ ಪ್ರದರ್ಶನಕ್ಕೆ ಅನುಮತಿಯನ್ನೂ ಕೊಟ್ಟಿದೆ. ಹೀಗಾಗಿ ಈ ವಿಚಾರದಲ್ಲಿ ತಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿತ್ತು.

ಇದನ್ನು ಓದಿ: ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...