Homeಮುಖಪುಟಗೋವಾ ಚಲನಚಿತ್ರೋತ್ಸವದಲ್ಲಿ 'ದಿ ಕೇರಳ ಸ್ಟೋರಿ' ಪ್ರದರ್ಶನ: ಪ್ರತಿಭಟಿಸಿದ ಇಬ್ಬರು ವಶಕ್ಕೆ

ಗೋವಾ ಚಲನಚಿತ್ರೋತ್ಸವದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಪ್ರತಿಭಟಿಸಿದ ಇಬ್ಬರು ವಶಕ್ಕೆ

- Advertisement -
- Advertisement -

ಗೋವಾದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಐ) ‘ದಿ ಕೇರಳ ಸ್ಟೋರಿ’ ವಿವಾದಿತ ಸಿನಿಮಾ ಪ್ರದರ್ಶನವನ್ನು ಮಾಡಿದ್ದು, ಈ ವೇಳೆ ಪ್ರತಿಭಟಿಸಿದ ಆರೋಪದಲ್ಲಿ ಕೇರಳದ ಇಬ್ಬರನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.

ಕಳೆದ ಭಾನುವಾರ ಅಂತರಾಷ್ಟ್ರೀಯ ಮಟ್ಟದ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಐ) ದಿವಂಗತ ಗೋವಾದ ಲೇಖಕ ಮತ್ತು ಮಾಜಿ ಶಾಸಕ ವಿಷ್ಣು ಸೂರ್ಯ ವಾಘ್ ಅವರ ಜಾತಿ ತಾರತಮ್ಯದ ಕುರಿತ ಸುಧೀರ್ ಸೂಕ್ತ ಕವನ ಸಂಕಲನದ ಕವಿತೆಯನ್ನು ಪ್ರಕಟಿಸಿರಲಿಲ್ಲ. ಸೃಜನಶೀಲ ಕಾರಣಗಳಿಗಾಗಿ ತೆಗೆದುಕೊಂಡ ಸಂಪಾದಕೀಯ ನಿರ್ಧಾರ ಎಂದು IFFI ಹೇಳಿತ್ತು. ಆದರೆ ಇದೀಗ ದಿ ಕೇರಳ ಸ್ಟೋರಿ ಚಲನ ಚಿತ್ರವನ್ನು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ವಿವಾದಕ್ಕೆ ಕಾರಣವಾಗಿದೆ.

ಕೇರಳದ ಶ್ರೀನಾಥ್ ಮತ್ತು ಅರ್ಚನಾ ರವಿ ಎಂಬ ಇಬ್ಬರು ಕಳೆದ ಒಂದು ವಾರದಿಂದ ಚಲನಚಿತ್ರೋತ್ಸವಕ್ಕೆ ಹಾಜರಾಗಿದ್ದರು. ಸೋಮವಾರ ಸಂಜೆ ಪಣಜಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಅಧಿಕಾರಿಗಳು ಅವರಲ್ಲಿದ್ದ ಕಾರ್ಯಕ್ರಮದ ಪಾಸ್‌ಗಳನ್ನು ಮುಟ್ಟುಗೋಲು ಹಾಕಿಕೊಂಡು ಉತ್ಸವದಲ್ಲಿ ಭಾಗಿಯಾಗದಂತೆ ನಿರ್ಬಂಧ ವಿಧಿಸಿದ್ದಾರೆ.

ಗೋವಾದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿರುವ ಕೇರಳ ಸ್ಟೋರಿ ಸುಳ್ಳು ಪ್ರಚಾರದ ಚಲನಚಿತ್ರವಾಗಿದ್ದು, ಅದರ ವಿರುದ್ಧ ನಮ್ಮ ವಿರೋಧವನ್ನು ವ್ಯಕ್ತಪಡಿಸುತ್ತಿದ್ದೇವೆ. ಅಲ್ಲಿ ನಾವು ಯಾವುದೇ ಘೋಷಣೆಗಳನ್ನು ಕೂಗಲಿಲ್ಲ. ಅದು ಪ್ರತಿಭಟನೆಯೂ ಆಗಿರಲಿಲ್ಲ. ನಾವು ಆ ಚಿತ್ರದ ಕುರಿತು ಎ4 ಅಳತೆಯೆ ಮೀಮ್‌ವೊಂದನ್ನು ಮುದ್ರಿಸಿ, ಅದನ್ನು ನಮ್ಮ ಟಿ-ಶರ್ಟ್‌ಗಳಿಗೆ ಅಂಟಿಸಿಕೊಂಡಿದ್ದೆವು  ಎಂದು ಅರ್ಚನಾ ಅವರು ಹೇಳಿದ್ದಾರೆ.

ಅರ್ಚನಾ ಟಿ-ಶರ್ಟ್‌ ಧರಿಸಿ ಸ್ನೇಹಿತೆಯೊಬ್ಬರ ಜೊತೆ ಪೋಟೋ ಕ್ಲಿಕ್ಕಿಸುವಾಗ ಪೊಲೀಸರು ಅವರನ್ನು ವಶಕ್ಕೆ ಪಡೆದು ಕರೆದುಕೊಂಡು ಹೋಗಿದ್ದಾರೆ. ಇದು ಪ್ರತಿಭಟನೆಯ ಸ್ಥಳವಲ್ಲ ಎಂದು ಪೊಲೀಸರು ಅವರಿಗೆ ಹೇಳಿದ್ದಾರೆ.

ಪಣಜಿ ಪೊಲೀಸ್ ಠಾಣೆಗೆ ನಮ್ಮನ್ನು ಕರೆದೊಯ್ದು ಅಧಿಕಾರಿಗಳು ಫೋನ್‌ಗಳು, ಐಡಿಗಳು ಮತ್ತು  ಉತ್ಸವದ ಪಾಸ್‌ಗಳನ್ನು ತೆಗೆದುಕೊಂಡರು. ಉತ್ಸವಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಿದ್ದಾರೆ. ಅವರು ನಮ್ಮ ಕರೆ ದಾಖಲೆಗಳನ್ನು ಪರಿಶೀಲಿಸಿದರು ಮತ್ತು ನನ್ನ ಟೀ ಶರ್ಟ್‌ ಕಿತ್ತುಕೊಂಡರು. 45 ನಿಮಿಷಗಳ ನಂತರ ನಮ್ಮನ್ನು ಬಿಡುಗಡೆ ಮಾಡಲಾಯಿತು ಎಂದು ಸಾಕ್ಷ್ಯಚಿತ್ರ ನಿರ್ಮಾಪಕ ಶ್ರೀನಾಥ್ ಹೇಳಿದ್ದಾರೆ.

ಐಎಫ್‌ಎಫ್‌ಐನಂತಹ ಪ್ರತಿಷ್ಠಿತ ಉತ್ಸವದಲ್ಲಿ ಕೇರಳ ಸ್ಟೋರಿಯಂತಹ ವಿವಾದಾತ್ಮಕ ಚಲನಚಿತ್ರವನ್ನು ಪ್ರದರ್ಶಿಸಿರುವುದು ನಿರಾಶಾದಾಯಕವಾಗಿದೆ. ಇದೊಂದು ಪ್ರಚಾರದ ಸಿನಿಮಾವಾಗಿದ್ದು, ಇದು ಜನರನ್ನು ಕೆಣಕುತ್ತದೆ ಮತ್ತು ಅಲ್ಪಸಂಖ್ಯಾತ ಸಮುದಾಯದ ಮೇಲೆ ಪ್ರಭಾವ ಬೀರುತ್ತದೆ ಎಂದು ಶ್ರೀನಾಥ್ ಹೇಳಿದ್ದಾರೆ.

ದಿ ಕೇರಳ ಸ್ಟೋರಿ ನಿರ್ದೇಶಕ ಸುದೀಪ್ತೋ ಸೇನ್ ಕಾರ್ಯಕ್ರಮದ ಸಂದರ್ಭದಲ್ಲಿ ಅರ್ಚನಾ ರವಿಯೊಂದಿಗೆ ಮಾತನಾಡುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್‌ ಆಗಿದೆ.  ನೀವು ಚಲನಚಿತ್ರವನ್ನು ನೋಡಿದ್ದೀರಾ? ಸಿನಿಮಾ ನೋಡದ ಹೊರತು ಅದರ ಬಗ್ಗೆ ಮಾತನಾಡುವ ಹಕ್ಕು ನಿಮಗಿಲ್ಲ. ನೀವು ಚಿತ್ರ ನೋಡಿದರೆ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ನಾನು ಉತ್ತರಿಸುತ್ತೇನೆ ಎಂದು ವೀಡಿಯೊದಲ್ಲಿ ಸೇನ್ ಹೇಳುವುದು ಸೆರೆಯಾಗಿದೆ.

ದಿ ಕೇರಳ ಸ್ಟೋರಿ ಚಲನ ಚಿತ್ರವನ್ನು ಸುದೀಪ್ತೋ ಸೇನ್​ ನಿರ್ದೇಶನ ಮಾಡಿದ್ದು, ವಿಪುಲ್​ ಅಮೃತ್​ಲಾಲ್​ ಶಾ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಹಿಂದಿ ಮಾತ್ರವಲ್ಲದೇ ತೆಲುಗು, ಮಲಯಾಳಂ ಮತ್ತು ತಮಿಳಿನಲ್ಲೂ ಈ ಚಿತ್ರ ತೆರೆಕಂಡಿದೆ. ಅದರಲ್ಲಿ ಕೇರಳದಲ್ಲಿ32 ಸಾವಿರ ಮಹಿಳೆಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿ ನಂತರ ಈ ಮಹಿಳೆಯರನ್ನು ಭಯೋತ್ಪಾದಕರು ಐಸಿಸ್ ಆಳ್ವಿಕೆಯ ಸಿರಿಯಾಗೆ ಕರೆದುಕೊಂಡು ಹೋಗಿದ್ದಾರೆ ಎಂದು ಕಾಲ್ಪನಿಕವಾಗಿ ಹೇಳಲಾಗಿತ್ತು. ಈ ಚಲನ ಚಿತ್ರ ಬಿಡಗಡೆಗೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು.

ದಿ ಕೇರಳ ಸ್ಟೋರಿ ಸಿನಿಮಾ ವಿವಾದ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಸಿನಿಮಾದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ನಿಕೃಷ್ಟವಾಗಿ ತೋರಿಸಲಾಗಿದೆ. ಈ ಚಿತ್ರಕ್ಕೆ ನಿಷೇಧ ಹೇರಬೇಕು ಎನ್ನುವ ಆಗ್ರಹ ಕೇಳಿ ಬಂದಿತ್ತು. ಆದರೆ ದಿ ಕೇರಳ ಸ್ಟೋರಿ ಸಿನಿಮಾಗೆ ಈಗಾಗಲೇ ಸೆನ್ಸಾರ್ ಮಂಡಳಿಯ ಗ್ರೀನ್ ಸಿಗ್ನಲ್ ನೀಡಿತ್ತು. ಚಿತ್ರಕ್ಕೆ ಎ ಸರ್ಟಿಫಿಕೇಟ್ ಕೊಟ್ಟಿರುವ ಕೇಂದ್ರ ಸೆನ್ಸಾರ್ ಮಂಡಳಿ, 10 ದೃಶ್ಯಗಳಿಗೆ ಕತ್ತರಿ ಹಾಕಲು ಹೇಳಿ ಚಿತ್ರ ಪ್ರದರ್ಶನಕ್ಕೆ ಅನುಮತಿಯನ್ನೂ ಕೊಟ್ಟಿದೆ. ಹೀಗಾಗಿ ಈ ವಿಚಾರದಲ್ಲಿ ತಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿತ್ತು.

ಇದನ್ನು ಓದಿ: ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...