Homeಮುಖಪುಟಕೇರಳದಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು: ಕೇಂದ್ರದ ತಂಡ ರವಾನೆ

ಕೇರಳದಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು: ಕೇಂದ್ರದ ತಂಡ ರವಾನೆ

- Advertisement -
- Advertisement -

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಇಬ್ಬರು ನಿಫಾ ವೈರಸ್‌ನಿಂದ ಮೃತಪಟ್ಟಿರುವುದು ದೃಡಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವೀಯ ದೃಢಪಡಿಸಿದ್ದಾರೆ. ನಿನ್ನೆ ಸೋಮವಾರ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರ ಅಸಹಜ ಸಾವಿನ ನಂತರ ಜಿಲ್ಲೆಯಾದ್ಯಂತ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ndtv ವರದಿ ಮಾಡಿದೆ.

ಕೇಂದ್ರದಿಂದ ಕೇರಳಕ್ಕೆ ತಂಡವನ್ನು ಕಳುಹಿಸಲಾಗಿದೆ. ನಿಫಾ ಕುರಿತು ರಾಜ್ಯಕ್ಕೆ ತಂಡ ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ಆಗಸ್ಟ್ 30 ರಂದು ಮೊದಲ ಪ್ರಕರಣ ದಾಖಲಾಗಿತ್ತು. ಎರಡನೇ ಪ್ರಕರಣ ನಿನ್ನೆ ವರದಿಯಾಗಿದೆ. ಕೋಝಿಕ್ಕೋಡ್ನಲ್ಲಿ ಈಗಾಗಲೇ ಕೇರಳ ಸರ್ಕಾರ ಕಂಟ್ರೋಲ್ ರೂಂ ಸ್ಥಾಪಿಸಿದೆ. ಜನರು ಮಾಸ್ಕ್ ಬಳಸುವಂತೆ ಸೂಚನೆ ನೀಡಿದೆ.

ನಿಫಾ ವೈರಸ್ ಕುರಿತು ಈಗಾಗಲೇ ಹೇಳಿಕೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜನರು ಗಾಬರಿ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ಅಗತ್ಯ. ಮೃತ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಲಾಗಿದೆ. ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕು ಎಂದಿದ್ದಾರೆ.

ನಿಫಾ ವೈರಸ್ ಮೊದಲ ಬಾರಿಗೆ ಕೇರಳದ ಮಲ್ಲಪುರಂ ಜಿಲ್ಲೆಯಲ್ಲಿ 2018 ರಲ್ಲಿ ಪತ್ತೆಯಾಗಿತ್ತು. ಬಳಿಕ 2021ರಲ್ಲಿ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಕಂಡು ಬಂದಿತ್ತು.

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ನಿಪಾಹ್ ವೈರಸ್ ಹಣ್ಣುಗಳನ್ನು ಕಚ್ಚುವ ಬಾವಲಿಗಳಿಂದ ಉಂಟಾಗುತ್ತದೆ. ಅದನ್ನು ಸೇವಿಸುವ ಮನುಷ್ಯರಿಗೆ ಮತ್ತು ಪ್ರಾಣಿಗಳಿಗೆ ಮಾರಕವಾಗಿದೆ. ಉಸಿರಾಟದ ತೊಂದರೆಯ ಜೊತೆಗೆ, ಇದು ಜ್ವರ, ಸ್ನಾಯು ನೋವು, ತಲೆನೋವು, ಜ್ವರ, ತಲೆತಿರುಗುವಿಕೆ ಮತ್ತು ವಾಕರಿಕೆ ನಿಫಾದ ಪ್ರಮುಖ ಲಕ್ಷಣವಾಗಿದೆ.

ಮೃತಪಟ್ಟ ಇಬ್ಬರಿಗೆ ನಿಫಾ ಲಕ್ಷಣಗಳಿದ್ದವು ಎಂದು ತಿಳಿದುಬಂದಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ಕುರಿತು ಮಾತನಾಡಿದ ವೀಣಾ ಜಾರ್ಜ್, ಮೃತಪಟ್ಟ ಇಬ್ಬರಿಗೂ ನಿಫಾ ಲಕ್ಷಣಗಳಿದ್ದವು. ಇದರಲ್ಲಿ ಒಬ್ಬರು ಆಗಸ್ಟ್ 30ರಂದು ಸಾವನ್ನಪ್ಪಿದ್ದಾರೆ. ಅವರು ಸ್ಯಾಂಪಲ್ ಕಳುಹಿಸಿರಲಿಲ್ಲ. ಇನ್ನೊಬ್ಬರು ಸೋಮವಾರ ಮೃತಪಟ್ಟಿದ್ದು, ಅವರ ಸ್ಯಾಂಪಲ್ ಅನ್ನು ಪುಣೆಗೆ ಕಳುಹಿಸಿರುವ ಬಗ್ಗೆ ತಿಳಿಸಿದ್ದರು.

ಮೃತಪಟ್ಟವರಲ್ಲಿ ಒಬ್ಬರ ಕುಟುಂಬದ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 9 ವರ್ಷದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. 10 ತಿಂಗಳ ಮಗುವಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ 75 ಜನರ ಸಂಪರ್ಕ ಪಟ್ಟಿ ಸಿದ್ಧಪಡಿಸಲಾಗಿದೆ.

ಕ್ವಾರಂಟೈನ್‌ಗೆ ಸಿದ್ಧತೆಗಳನ್ನು ನಡೆಸಿದ್ದು, ಕೋಯಿಕೋಡ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ಮಾಸ್ಕ್, ಪಿಪಿಇ ಬಳಸಲು ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು. ಅಲ್ಲದೇ ಅನಿವಾರ್ಯತೆ ಇದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ. ಅನಗತ್ಯವಾಗಿ ಆಸ್ಪತ್ರೆಗೆ ಭೇಟಿ ನೀಡುವುದು ಬೇಡ ಎಂದು ಜನರಿಗೆ ಮನವಿ ಮಾಡಿದರು.

ನಿಫಾ ವೈರಸ್ ಎಂದರೇನು?: 1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

ವೈರಸ್ ಹೇಗೆ ಹರಡುತ್ತದೆ?

* ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನೋದ್ರಿಂದ ಹರಡುತ್ತೆ.
* ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತೆ.
* ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.

ನಿಫಾ ವೈರಸ್ ಲಕ್ಷಣಗಳೇನು?

* ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ
* ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ
* ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ
* ಬಳಿಕ ಪ್ರಜ್ಞಾಹೀನರಾಗುತ್ತಾರೆ
* ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ
* ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...