Homeಮುಖಪುಟಕೇರಳದಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು: ಕೇಂದ್ರದ ತಂಡ ರವಾನೆ

ಕೇರಳದಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು: ಕೇಂದ್ರದ ತಂಡ ರವಾನೆ

- Advertisement -
- Advertisement -

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಇಬ್ಬರು ನಿಫಾ ವೈರಸ್‌ನಿಂದ ಮೃತಪಟ್ಟಿರುವುದು ದೃಡಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವೀಯ ದೃಢಪಡಿಸಿದ್ದಾರೆ. ನಿನ್ನೆ ಸೋಮವಾರ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರ ಅಸಹಜ ಸಾವಿನ ನಂತರ ಜಿಲ್ಲೆಯಾದ್ಯಂತ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ndtv ವರದಿ ಮಾಡಿದೆ.

ಕೇಂದ್ರದಿಂದ ಕೇರಳಕ್ಕೆ ತಂಡವನ್ನು ಕಳುಹಿಸಲಾಗಿದೆ. ನಿಫಾ ಕುರಿತು ರಾಜ್ಯಕ್ಕೆ ತಂಡ ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ಆಗಸ್ಟ್ 30 ರಂದು ಮೊದಲ ಪ್ರಕರಣ ದಾಖಲಾಗಿತ್ತು. ಎರಡನೇ ಪ್ರಕರಣ ನಿನ್ನೆ ವರದಿಯಾಗಿದೆ. ಕೋಝಿಕ್ಕೋಡ್ನಲ್ಲಿ ಈಗಾಗಲೇ ಕೇರಳ ಸರ್ಕಾರ ಕಂಟ್ರೋಲ್ ರೂಂ ಸ್ಥಾಪಿಸಿದೆ. ಜನರು ಮಾಸ್ಕ್ ಬಳಸುವಂತೆ ಸೂಚನೆ ನೀಡಿದೆ.

ನಿಫಾ ವೈರಸ್ ಕುರಿತು ಈಗಾಗಲೇ ಹೇಳಿಕೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜನರು ಗಾಬರಿ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ಅಗತ್ಯ. ಮೃತ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಲಾಗಿದೆ. ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕು ಎಂದಿದ್ದಾರೆ.

ನಿಫಾ ವೈರಸ್ ಮೊದಲ ಬಾರಿಗೆ ಕೇರಳದ ಮಲ್ಲಪುರಂ ಜಿಲ್ಲೆಯಲ್ಲಿ 2018 ರಲ್ಲಿ ಪತ್ತೆಯಾಗಿತ್ತು. ಬಳಿಕ 2021ರಲ್ಲಿ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಕಂಡು ಬಂದಿತ್ತು.

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ನಿಪಾಹ್ ವೈರಸ್ ಹಣ್ಣುಗಳನ್ನು ಕಚ್ಚುವ ಬಾವಲಿಗಳಿಂದ ಉಂಟಾಗುತ್ತದೆ. ಅದನ್ನು ಸೇವಿಸುವ ಮನುಷ್ಯರಿಗೆ ಮತ್ತು ಪ್ರಾಣಿಗಳಿಗೆ ಮಾರಕವಾಗಿದೆ. ಉಸಿರಾಟದ ತೊಂದರೆಯ ಜೊತೆಗೆ, ಇದು ಜ್ವರ, ಸ್ನಾಯು ನೋವು, ತಲೆನೋವು, ಜ್ವರ, ತಲೆತಿರುಗುವಿಕೆ ಮತ್ತು ವಾಕರಿಕೆ ನಿಫಾದ ಪ್ರಮುಖ ಲಕ್ಷಣವಾಗಿದೆ.

ಮೃತಪಟ್ಟ ಇಬ್ಬರಿಗೆ ನಿಫಾ ಲಕ್ಷಣಗಳಿದ್ದವು ಎಂದು ತಿಳಿದುಬಂದಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ಕುರಿತು ಮಾತನಾಡಿದ ವೀಣಾ ಜಾರ್ಜ್, ಮೃತಪಟ್ಟ ಇಬ್ಬರಿಗೂ ನಿಫಾ ಲಕ್ಷಣಗಳಿದ್ದವು. ಇದರಲ್ಲಿ ಒಬ್ಬರು ಆಗಸ್ಟ್ 30ರಂದು ಸಾವನ್ನಪ್ಪಿದ್ದಾರೆ. ಅವರು ಸ್ಯಾಂಪಲ್ ಕಳುಹಿಸಿರಲಿಲ್ಲ. ಇನ್ನೊಬ್ಬರು ಸೋಮವಾರ ಮೃತಪಟ್ಟಿದ್ದು, ಅವರ ಸ್ಯಾಂಪಲ್ ಅನ್ನು ಪುಣೆಗೆ ಕಳುಹಿಸಿರುವ ಬಗ್ಗೆ ತಿಳಿಸಿದ್ದರು.

ಮೃತಪಟ್ಟವರಲ್ಲಿ ಒಬ್ಬರ ಕುಟುಂಬದ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 9 ವರ್ಷದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. 10 ತಿಂಗಳ ಮಗುವಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ 75 ಜನರ ಸಂಪರ್ಕ ಪಟ್ಟಿ ಸಿದ್ಧಪಡಿಸಲಾಗಿದೆ.

ಕ್ವಾರಂಟೈನ್‌ಗೆ ಸಿದ್ಧತೆಗಳನ್ನು ನಡೆಸಿದ್ದು, ಕೋಯಿಕೋಡ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ಮಾಸ್ಕ್, ಪಿಪಿಇ ಬಳಸಲು ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು. ಅಲ್ಲದೇ ಅನಿವಾರ್ಯತೆ ಇದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ. ಅನಗತ್ಯವಾಗಿ ಆಸ್ಪತ್ರೆಗೆ ಭೇಟಿ ನೀಡುವುದು ಬೇಡ ಎಂದು ಜನರಿಗೆ ಮನವಿ ಮಾಡಿದರು.

ನಿಫಾ ವೈರಸ್ ಎಂದರೇನು?: 1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

ವೈರಸ್ ಹೇಗೆ ಹರಡುತ್ತದೆ?

* ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನೋದ್ರಿಂದ ಹರಡುತ್ತೆ.
* ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತೆ.
* ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.

ನಿಫಾ ವೈರಸ್ ಲಕ್ಷಣಗಳೇನು?

* ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ
* ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ
* ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ
* ಬಳಿಕ ಪ್ರಜ್ಞಾಹೀನರಾಗುತ್ತಾರೆ
* ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ
* ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...