Homeಮುಖಪುಟಕೇರಳದಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು: ಕೇಂದ್ರದ ತಂಡ ರವಾನೆ

ಕೇರಳದಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು: ಕೇಂದ್ರದ ತಂಡ ರವಾನೆ

- Advertisement -
- Advertisement -

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಇಬ್ಬರು ನಿಫಾ ವೈರಸ್‌ನಿಂದ ಮೃತಪಟ್ಟಿರುವುದು ದೃಡಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವೀಯ ದೃಢಪಡಿಸಿದ್ದಾರೆ. ನಿನ್ನೆ ಸೋಮವಾರ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರ ಅಸಹಜ ಸಾವಿನ ನಂತರ ಜಿಲ್ಲೆಯಾದ್ಯಂತ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ndtv ವರದಿ ಮಾಡಿದೆ.

ಕೇಂದ್ರದಿಂದ ಕೇರಳಕ್ಕೆ ತಂಡವನ್ನು ಕಳುಹಿಸಲಾಗಿದೆ. ನಿಫಾ ಕುರಿತು ರಾಜ್ಯಕ್ಕೆ ತಂಡ ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ಆಗಸ್ಟ್ 30 ರಂದು ಮೊದಲ ಪ್ರಕರಣ ದಾಖಲಾಗಿತ್ತು. ಎರಡನೇ ಪ್ರಕರಣ ನಿನ್ನೆ ವರದಿಯಾಗಿದೆ. ಕೋಝಿಕ್ಕೋಡ್ನಲ್ಲಿ ಈಗಾಗಲೇ ಕೇರಳ ಸರ್ಕಾರ ಕಂಟ್ರೋಲ್ ರೂಂ ಸ್ಥಾಪಿಸಿದೆ. ಜನರು ಮಾಸ್ಕ್ ಬಳಸುವಂತೆ ಸೂಚನೆ ನೀಡಿದೆ.

ನಿಫಾ ವೈರಸ್ ಕುರಿತು ಈಗಾಗಲೇ ಹೇಳಿಕೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜನರು ಗಾಬರಿ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ಅಗತ್ಯ. ಮೃತ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಲಾಗಿದೆ. ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕು ಎಂದಿದ್ದಾರೆ.

ನಿಫಾ ವೈರಸ್ ಮೊದಲ ಬಾರಿಗೆ ಕೇರಳದ ಮಲ್ಲಪುರಂ ಜಿಲ್ಲೆಯಲ್ಲಿ 2018 ರಲ್ಲಿ ಪತ್ತೆಯಾಗಿತ್ತು. ಬಳಿಕ 2021ರಲ್ಲಿ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಕಂಡು ಬಂದಿತ್ತು.

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ನಿಪಾಹ್ ವೈರಸ್ ಹಣ್ಣುಗಳನ್ನು ಕಚ್ಚುವ ಬಾವಲಿಗಳಿಂದ ಉಂಟಾಗುತ್ತದೆ. ಅದನ್ನು ಸೇವಿಸುವ ಮನುಷ್ಯರಿಗೆ ಮತ್ತು ಪ್ರಾಣಿಗಳಿಗೆ ಮಾರಕವಾಗಿದೆ. ಉಸಿರಾಟದ ತೊಂದರೆಯ ಜೊತೆಗೆ, ಇದು ಜ್ವರ, ಸ್ನಾಯು ನೋವು, ತಲೆನೋವು, ಜ್ವರ, ತಲೆತಿರುಗುವಿಕೆ ಮತ್ತು ವಾಕರಿಕೆ ನಿಫಾದ ಪ್ರಮುಖ ಲಕ್ಷಣವಾಗಿದೆ.

ಮೃತಪಟ್ಟ ಇಬ್ಬರಿಗೆ ನಿಫಾ ಲಕ್ಷಣಗಳಿದ್ದವು ಎಂದು ತಿಳಿದುಬಂದಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ಕುರಿತು ಮಾತನಾಡಿದ ವೀಣಾ ಜಾರ್ಜ್, ಮೃತಪಟ್ಟ ಇಬ್ಬರಿಗೂ ನಿಫಾ ಲಕ್ಷಣಗಳಿದ್ದವು. ಇದರಲ್ಲಿ ಒಬ್ಬರು ಆಗಸ್ಟ್ 30ರಂದು ಸಾವನ್ನಪ್ಪಿದ್ದಾರೆ. ಅವರು ಸ್ಯಾಂಪಲ್ ಕಳುಹಿಸಿರಲಿಲ್ಲ. ಇನ್ನೊಬ್ಬರು ಸೋಮವಾರ ಮೃತಪಟ್ಟಿದ್ದು, ಅವರ ಸ್ಯಾಂಪಲ್ ಅನ್ನು ಪುಣೆಗೆ ಕಳುಹಿಸಿರುವ ಬಗ್ಗೆ ತಿಳಿಸಿದ್ದರು.

ಮೃತಪಟ್ಟವರಲ್ಲಿ ಒಬ್ಬರ ಕುಟುಂಬದ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 9 ವರ್ಷದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. 10 ತಿಂಗಳ ಮಗುವಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ 75 ಜನರ ಸಂಪರ್ಕ ಪಟ್ಟಿ ಸಿದ್ಧಪಡಿಸಲಾಗಿದೆ.

ಕ್ವಾರಂಟೈನ್‌ಗೆ ಸಿದ್ಧತೆಗಳನ್ನು ನಡೆಸಿದ್ದು, ಕೋಯಿಕೋಡ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ಮಾಸ್ಕ್, ಪಿಪಿಇ ಬಳಸಲು ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು. ಅಲ್ಲದೇ ಅನಿವಾರ್ಯತೆ ಇದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ. ಅನಗತ್ಯವಾಗಿ ಆಸ್ಪತ್ರೆಗೆ ಭೇಟಿ ನೀಡುವುದು ಬೇಡ ಎಂದು ಜನರಿಗೆ ಮನವಿ ಮಾಡಿದರು.

ನಿಫಾ ವೈರಸ್ ಎಂದರೇನು?: 1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

ವೈರಸ್ ಹೇಗೆ ಹರಡುತ್ತದೆ?

* ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನೋದ್ರಿಂದ ಹರಡುತ್ತೆ.
* ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತೆ.
* ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.

ನಿಫಾ ವೈರಸ್ ಲಕ್ಷಣಗಳೇನು?

* ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ
* ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ
* ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ
* ಬಳಿಕ ಪ್ರಜ್ಞಾಹೀನರಾಗುತ್ತಾರೆ
* ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ
* ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...