Homeಮುಖಪುಟಕೇರಳದಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು: ಕೇಂದ್ರದ ತಂಡ ರವಾನೆ

ಕೇರಳದಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು: ಕೇಂದ್ರದ ತಂಡ ರವಾನೆ

- Advertisement -
- Advertisement -

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಇಬ್ಬರು ನಿಫಾ ವೈರಸ್‌ನಿಂದ ಮೃತಪಟ್ಟಿರುವುದು ದೃಡಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವೀಯ ದೃಢಪಡಿಸಿದ್ದಾರೆ. ನಿನ್ನೆ ಸೋಮವಾರ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರ ಅಸಹಜ ಸಾವಿನ ನಂತರ ಜಿಲ್ಲೆಯಾದ್ಯಂತ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ndtv ವರದಿ ಮಾಡಿದೆ.

ಕೇಂದ್ರದಿಂದ ಕೇರಳಕ್ಕೆ ತಂಡವನ್ನು ಕಳುಹಿಸಲಾಗಿದೆ. ನಿಫಾ ಕುರಿತು ರಾಜ್ಯಕ್ಕೆ ತಂಡ ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ಆಗಸ್ಟ್ 30 ರಂದು ಮೊದಲ ಪ್ರಕರಣ ದಾಖಲಾಗಿತ್ತು. ಎರಡನೇ ಪ್ರಕರಣ ನಿನ್ನೆ ವರದಿಯಾಗಿದೆ. ಕೋಝಿಕ್ಕೋಡ್ನಲ್ಲಿ ಈಗಾಗಲೇ ಕೇರಳ ಸರ್ಕಾರ ಕಂಟ್ರೋಲ್ ರೂಂ ಸ್ಥಾಪಿಸಿದೆ. ಜನರು ಮಾಸ್ಕ್ ಬಳಸುವಂತೆ ಸೂಚನೆ ನೀಡಿದೆ.

ನಿಫಾ ವೈರಸ್ ಕುರಿತು ಈಗಾಗಲೇ ಹೇಳಿಕೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜನರು ಗಾಬರಿ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ಅಗತ್ಯ. ಮೃತ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಲಾಗಿದೆ. ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕು ಎಂದಿದ್ದಾರೆ.

ನಿಫಾ ವೈರಸ್ ಮೊದಲ ಬಾರಿಗೆ ಕೇರಳದ ಮಲ್ಲಪುರಂ ಜಿಲ್ಲೆಯಲ್ಲಿ 2018 ರಲ್ಲಿ ಪತ್ತೆಯಾಗಿತ್ತು. ಬಳಿಕ 2021ರಲ್ಲಿ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಕಂಡು ಬಂದಿತ್ತು.

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ನಿಪಾಹ್ ವೈರಸ್ ಹಣ್ಣುಗಳನ್ನು ಕಚ್ಚುವ ಬಾವಲಿಗಳಿಂದ ಉಂಟಾಗುತ್ತದೆ. ಅದನ್ನು ಸೇವಿಸುವ ಮನುಷ್ಯರಿಗೆ ಮತ್ತು ಪ್ರಾಣಿಗಳಿಗೆ ಮಾರಕವಾಗಿದೆ. ಉಸಿರಾಟದ ತೊಂದರೆಯ ಜೊತೆಗೆ, ಇದು ಜ್ವರ, ಸ್ನಾಯು ನೋವು, ತಲೆನೋವು, ಜ್ವರ, ತಲೆತಿರುಗುವಿಕೆ ಮತ್ತು ವಾಕರಿಕೆ ನಿಫಾದ ಪ್ರಮುಖ ಲಕ್ಷಣವಾಗಿದೆ.

ಮೃತಪಟ್ಟ ಇಬ್ಬರಿಗೆ ನಿಫಾ ಲಕ್ಷಣಗಳಿದ್ದವು ಎಂದು ತಿಳಿದುಬಂದಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ಕುರಿತು ಮಾತನಾಡಿದ ವೀಣಾ ಜಾರ್ಜ್, ಮೃತಪಟ್ಟ ಇಬ್ಬರಿಗೂ ನಿಫಾ ಲಕ್ಷಣಗಳಿದ್ದವು. ಇದರಲ್ಲಿ ಒಬ್ಬರು ಆಗಸ್ಟ್ 30ರಂದು ಸಾವನ್ನಪ್ಪಿದ್ದಾರೆ. ಅವರು ಸ್ಯಾಂಪಲ್ ಕಳುಹಿಸಿರಲಿಲ್ಲ. ಇನ್ನೊಬ್ಬರು ಸೋಮವಾರ ಮೃತಪಟ್ಟಿದ್ದು, ಅವರ ಸ್ಯಾಂಪಲ್ ಅನ್ನು ಪುಣೆಗೆ ಕಳುಹಿಸಿರುವ ಬಗ್ಗೆ ತಿಳಿಸಿದ್ದರು.

ಮೃತಪಟ್ಟವರಲ್ಲಿ ಒಬ್ಬರ ಕುಟುಂಬದ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 9 ವರ್ಷದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. 10 ತಿಂಗಳ ಮಗುವಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ 75 ಜನರ ಸಂಪರ್ಕ ಪಟ್ಟಿ ಸಿದ್ಧಪಡಿಸಲಾಗಿದೆ.

ಕ್ವಾರಂಟೈನ್‌ಗೆ ಸಿದ್ಧತೆಗಳನ್ನು ನಡೆಸಿದ್ದು, ಕೋಯಿಕೋಡ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ಮಾಸ್ಕ್, ಪಿಪಿಇ ಬಳಸಲು ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು. ಅಲ್ಲದೇ ಅನಿವಾರ್ಯತೆ ಇದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ. ಅನಗತ್ಯವಾಗಿ ಆಸ್ಪತ್ರೆಗೆ ಭೇಟಿ ನೀಡುವುದು ಬೇಡ ಎಂದು ಜನರಿಗೆ ಮನವಿ ಮಾಡಿದರು.

ನಿಫಾ ವೈರಸ್ ಎಂದರೇನು?: 1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

ವೈರಸ್ ಹೇಗೆ ಹರಡುತ್ತದೆ?

* ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನೋದ್ರಿಂದ ಹರಡುತ್ತೆ.
* ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತೆ.
* ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.

ನಿಫಾ ವೈರಸ್ ಲಕ್ಷಣಗಳೇನು?

* ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ
* ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ
* ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ
* ಬಳಿಕ ಪ್ರಜ್ಞಾಹೀನರಾಗುತ್ತಾರೆ
* ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ
* ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...