Homeಕರ್ನಾಟಕಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

- Advertisement -
- Advertisement -

ಗನ್‌ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಹೇಳಿಕೆಯನ್ನು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನೀಡಿದ್ದು, ಮಡಿಕೇರಿಯಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಜಾಗರಣಾ ವೇದಿಕೆ ಶಸ್ತ್ರಾಸ್ತ್ರ ತರಬೇತಿ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ.

ಪೊನ್ನಂಪೇಟೆಯಲ್ಲಿ ಶಾಲಾ ಆವರಣದಲ್ಲಿ ತ್ರಿಶೂಲ ದೀಕ್ಷೆ ಹಾಗೂ ಶಸ್ತ್ರಾಸ್ತ್ರ ತರಬೇತಿ ನೀಡಿರುವ ಫೋಟೋಗಳು ವೈರಲ್‌ ಆದ ಬಳಿಕ ಚರ್ಚೆ ಮುನ್ನೆಲೆಗೆ ಬಂದಿದೆ. ಆದರೆ, ವಿಶ್ವ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪಿ.ಕೃಷ್ಣಮೂರ್ತಿ ನೀಡಿರುವ ಹೇಳಿಕೆಗೂ ಸಿ.ಟಿ.ರವಿಯವರ ಪ್ರತಿಕ್ರಿಯೆಗೂ ವಿರೋಧಾಭಾಸ ಕಂಡು ಬರುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


“ವಿಚಾರ ತಿಳಿಯದೆ ಆಕ್ಷೇಪಿಸುತ್ತಿರುವರಿಗೆ ತಲೆ ಸರಿಯಿಲ್ಲ. ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಶಸ್ತ್ರಾಸ್ತ್ರ ತರಬೇತಿ ಕೊಡುವುದಿಲ್ಲ. ಯೋಗ ಕಲಿಸುವ, ಆತ್ಮಸ್ಥೈರ್ಯ ತುಂಬುವ ಕೆಲಸ ನಡೆಯಲಿದೆ”
ಎಂದು ವಿಶ್ವ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪಿ.ಕೃಷ್ಣಮೂರ್ತಿ ಹೇಳಿದ್ದಾರೆ (ಪ್ರಜಾವಾಣಿ ವರದಿ). ಆದರೆ ಸಿ.ಟಿ.ರವಿಯವರ ಹೇಳಿಕೆ ಇದಕ್ಕೆ ತದ್ವಿರುದ್ಧವಾಗಿದ್ದು, ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಕನ್ನಡದ ವಿಶ್ವಾಸಾರ್ಹ ಮಾಧ್ಯಮ ‘ಪ್ರಜಾವಾಣಿ’ಯಲ್ಲಿ ಆಗಿರುವ ವರದಿ

ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿ.ಟಿ.ರವಿ, “ಅದರಲ್ಲೇನಿದೆ ವಿಶೇಷ. ಪ್ರತಿ ವರ್ಷ ರಾಜ್ಯ ಮತ್ತು ಜಿಲ್ಲೆಗಳಿಂದ ಸ್ವರಕ್ಷಣೆಗಾಗಿ ತರಬೇತಿ ನೀಡಲಾಗುತ್ತದೆ. ಪೊಲೀಸ್ ಇಲಾಖೆಯಿಂದಲೂ ಕೊಡುತ್ತಾರೆ. ಅದರಲ್ಲೇನಿದೆ? ಏರ್‌ಗನ್‌ ಟ್ರೈನಿಂಗ್‌ ಕೊಟ್ಟಿದ್ದಾರೆಯೇ ಹೊರತು ಎ.ಕೆ. 47 ಗನ್‌ ಟ್ರೈನಿಂಗ್ ಕೊಟ್ಟಿಲ್ಲ. ಬಾಂಬ್‌ ಹಾಕುವ ಟ್ರೈನಿಂಗ್ ಕೊಟ್ಟಿಲ್ಲ. ಆತ್ಮರಕ್ಷಣೆಯ ತರಬೇತಿಯನ್ನು ಪೊಲೀಸ್ ಇಲಾಖೆಯೂ ಆಯೋಜನೆ ಮಾಡುತ್ತದೆ, ಬಜರಂಗದಳವೂ ಮಾಡುತ್ತದೆ. ಅದರಲ್ಲೇನಿದೆ ವಿಶೇಷ?” ಎಂದು ಪ್ರಶ್ನಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್‌ಗನ್‌ ತರಬೇತಿ ನೀಡಿರುವ ಕುರಿತು ವರದಿಯಾಗಿದ್ದು, ಈ ಘಟನೆಗೆ ವ್ಯಾಪಕವಾದ ಟೀಕೆಗಳು ವ್ಯಕ್ತವಾಗಿವೆ. ಸಾಮಾಜಿಕ ಮಾಧ್ಯಮದಲ್ಲಿ ಫೋಟೋಗಳು ಹರಿದಾಡಿವೆ.

ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯಲ್ಲಿ ನಡೆದ ‘ಶೌರ್ಯ ಪ್ರಶಿಕ್ಷಣ ವರ್ಗ’ದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ, ತ್ರಿಶೂಲ ದೀಕ್ಷೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನೆ ಎತ್ತಿರುವ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆಯವರು, “ಶಾಲೆಯ ವಿರುದ್ಧ ಕ್ರಮ ಜರುಗಿಸಿ” ಎಂದು ಶಿಕ್ಷಣ ಸಂಸ್ಥೆಯನ್ನು ಆಗ್ರಹಿಸಿದ್ದಾರೆ.

ಸುಮಾರು ಹತ್ತು ದಿನಗಳ ಕಾಲ ನಡೆದ ತರಬೇತಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್‌ ಸದಸ್ಯ ಸುಜಾ ಕುಶಾಲಪ್ಪ ಅವರೂ ಪಾಲ್ಗೊಂಡಿದ್ದರೆಂದು ಮೂಲಗಳು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ವಿವಿಧ ಜಿಲ್ಲೆಯಿಂದ ಆಗಮಿಸಿದ ಬಜರಂಗದಳ, ವಿಶ್ವ ಹಿಂದೂ ಪರಿಷತ್‌ನ 119 ಶಿಕ್ಷಣಾರ್ಥಿಗಳು ಸೇರಿ 140 ಮಂದಿ ತರಬೇತಿಯಲ್ಲಿ ಹಾಜರಿದ್ದರೆಂದು ತಿಳಿದುಬಂದಿದೆ.

ಇದನ್ನೂ ಓದಿರಿ: ಕೊಡಗು: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ?

ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಜರು ಗಣಪತಿ ಮಾತನಾಡಿದ್ದು, “ಬಂದೂಕು ತರಬೇತಿ ನೀಡಿರುವ ಕುರಿತು ಮಾಹಿತಿ ಇಲ್ಲ. ಆಯೋಜಕರೇ ಊಟ, ಮತ್ತಿತರ ವ್ಯವಸ್ಥೆ ಮಾಡಿಕೊಂಡಿದ್ದರು. ಇದಕ್ಕೂ ವಿದ್ಯಾಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ರಜೆಯಿದ್ದ ಕಾರಣ ಶಿಕ್ಷಕರೂ ಇರಲಿಲ್ಲ. ಈ ಹಿಂದೆ ರಾಷ್ಟ್ರಮಟ್ಟದ ತರಬೇತಿಯೂ ನಡೆದಿತ್ತು. ಹೊರ ರಾಜ್ಯದಿಂದ ಶಿಕ್ಷಣಾರ್ಥಿಗಳುಬಂದಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಶಸ್ತ್ರಾಸ್ತ್ರ ತರಬೇತಿಯಲ್ಲಿ ಎಷ್ಟು ಮಂದಿ ರಾಜಕಾರಣಿಗಳ ಮಕ್ಕಳು, ಸಂಘ ಪರಿವಾರದ ನಾಯಕರ ಮಕ್ಕಳು ಭಾಗವಹಿಸಿದ್ದರೆಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಹೆಚ್ಚಿನ ವಿವರ ಸಂಗ್ರಹಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದೆ.

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ ಅವರನ್ನು ಸಂಪರ್ಕಿಸಲು ನಾಲ್ಕಾರು ಬಾರಿ ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ಕರೆ ಸ್ವೀಕರಿಸುತ್ತಿಲ್ಲ. ಘಟನೆಯ ಕುರಿತು ಎದ್ದಿರುವ ಹಲವು ಪ್ರಶ್ನೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯೆ ನೀಡಿದ ತಕ್ಷಣ ಅಪ್‌ಡೇಟ್ ಮಾಡಲಾಗುವುದು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...